ದಕ್ಷಿಣ ಕನ್ನಡ

ರಸ್ತೆ ಬದಿ ನಿಲ್ಲಿಸಿದ್ದ ‌ಟ್ಯಾಂಕರ್‌ನ ಬ್ಯಾಟರಿ ಕಳವು

ಕಡಬ: ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು ನಡೆದಿರುವ ಘಟನೆ ಗೋಳಿತೊಟ್ಟು ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸರಿಗೆ ಕಳೆಂಜ ಗ್ರಾಮದ ನಿವಾಸಿ ರಕ್ಷಿತ್ ಕೆ. ಎನ್ನುವವರು ದೂರು ನೀಡಿದ್ದಾರೆ. ದೂರಿನಲ್ಲಿ, ಕೆಎ 21, ಬಿ 3160 ನೋಂದಣಿ ಸಂಖ್ಯೆಯ ಅಶೋಕ್ ಲೈಲ್ಯಾಂಡ್ ‌ಕಂಪನಿಯ ಟ್ಯಾಂಕರ್ ಅನ್ನು ಎ. 18 ರ ರಾತ್ರಿ 11 ಗಂಟೆಯ ಸುಮಾರಿಗೆ ಗೋಳಿತೊಟ್ಟು ಗ್ರಾಮದಲ್ಲಿ ರಸ್ತೆಯ ಬದಿ ನಿಲ್ಲಿಸಿ ಮನೆಗೆ ತೆರಳಲಾಗಿತ್ತು. ಎ. 21 ರಂದು ಟ್ಯಾಂಕರ್ ಅನ್ನು ಚಲಾಯಿಸಲು ಪ್ರಯತ್ನಿಸಿದಾಗ […]

ರಸ್ತೆ ಬದಿ ನಿಲ್ಲಿಸಿದ್ದ ‌ಟ್ಯಾಂಕರ್‌ನ ಬ್ಯಾಟರಿ ಕಳವು Read More »

ಮಂಗಳೂರು: ಮುಂಜಾನೆ ಸುರಿದ ಭಾರಿ ಗಾಳಿ-ಮಳೆಯಿಂದ ವ್ಯಾಪಕ ಹಾನಿ

ಕೊಂಬೆ ಬಿದ್ದು ವಾಹನಗಳು ಜಖಂ, ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು ಮಂಗಳೂರು : ಬುಧವಾರ ಮುಂಜಾನೆ ಸುಮಾರು 3.30ರ ವೇಳೆಗೆ ಮಂಗಳೂರು ನಗರಾದ್ಯಂತ ಗುಡುಗು ಸಿಡಿಲಿನ ಜೊತೆಗೆ ಭಾರಿ ಮಳೆಯಾಗಿ ಸುಡುತ್ತಿರುವ ಇಳೆಗೆ ತಂಪೆರೆದಿದೆ. ಆದರೆ ಈ ಅಕಾಲಿಕ ಮಳೆಯಿಂದ ವಿವಿಧೆಡೆ ಹಲವು ಹಾನಿಗಳು ಸಂಭವಿಸಿವೆ. ಭಾರಿ ಮಳೆ ಹಾಗೂ ಬೀಸಿದ ಬಿರುಗಾಳಿಯಿಂದ ನಗರದ ಚಮ್ಮಾರ ಗಲ್ಲಿಯ ಬಸವನಗುಡಿಯ ಅಶ್ವತ್ಥ ಕಟ್ಟೆಯಲ್ಲಿದ್ದ ಬೃಹತ್ ಅಶ್ವತ್ಥ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ಎರಡು ಮನೆಗಳು ಹಾಗೂ ಮೂರು

ಮಂಗಳೂರು: ಮುಂಜಾನೆ ಸುರಿದ ಭಾರಿ ಗಾಳಿ-ಮಳೆಯಿಂದ ವ್ಯಾಪಕ ಹಾನಿ Read More »

ಚಾರ್ಮಾಡಿ ಘಾಟ್‌ನಲ್ಲಿ ಪಿಕಪ್‌ ಪಲ್ಟಿ : ಹಲವರಿಗೆ ಗಾಯ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟ್ ರಸ್ತೆಯ ಆರನೇ ತಿರುವಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. 25ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಆಂಧ್ರಪ್ರದೇಶ ಮತ್ತು ಬಳ್ಳಾರಿ ಮೂಲದ ಪ್ರಯಾಣಿಕರು ಸೇರಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. SKSSF ಕಕ್ಕಿಂಜೆ ಅಂಬುಲೆನ್ಸ್, ಚಾರ್ಮಾಡಿ ಹಸನಬ್ಬ ಅವರ ತಂಡ ಹಾಗೂ ರಾಜ್ಯೋತ್ಸವ

ಚಾರ್ಮಾಡಿ ಘಾಟ್‌ನಲ್ಲಿ ಪಿಕಪ್‌ ಪಲ್ಟಿ : ಹಲವರಿಗೆ ಗಾಯ Read More »

ಹೆಲ್ಪಿಂಗ್ ಫ್ರೆಂಡ್ಸ್ ಪೊಳಲಿ ವತಿಯಿಂದ ಭವತಿ ಭಿಕ್ಷಾಂದೇಹಿ ಮೂಲಕ ಸಹಾಯಧನ ವಿತರಣೆ

ಪೊಳಲಿ: ಹೆಲ್ಪಿಂಗ್ ಫ್ರೆಂಡ್ಸ್ ಪೊಳಲಿ (ರಿ.) ಇದರ 8ನೇ ಸೇವಾ ಯೋಜನೆ ಅಡಿಯಲ್ಲಿ ಭವತಿ ಭಿಕ್ಷಾಂದೇಹಿ ಮೂಲಕ ಪೊಳಲಿ ರಾಜರಾಜೇಶ್ವರಿ ಅಮ್ಮನವರ ಜಾತ್ರಾ ಸಂದರ್ಭದಲ್ಲಿ ನಿಧಿ ಸಂಗ್ರಹಣಾ ಅಭಿಯಾನ ನಡೆಸಲಾಗಿದ್ದು, ಒಟ್ಟುಗೂಡಿದ ಒಟ್ಟು ಮೊತ್ತ 1,98,088 ಅನ್ನು ಪೊಳಲಿ ದೇವಸ್ಥಾನದಲ್ಲಿ ಅತಿಥಿಗಳ ಮೂಲಕ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಸಿದಬಿರುವೆರ್ ಕುಡ್ಲ ಸ್ಥಾಪಕ ಅಧ್ಯಕ್ಷರು ಉದಯ್ ಪೂಜಾರಿ, ಉದ್ಯಮಿ ಪ್ರಸಾದ್ ಗರೋಡಿ, ಖ್ಯಾತ ಯೂಟ್ಯೂಬರ್ ವಿಶ್ವನಾಥ್ ಪೂಜಾರಿ ಮತ್ತು ವಿವಿನ್ ಪೂಜಾರಿ, ಲೈಫ್ ಆಫ್

ಹೆಲ್ಪಿಂಗ್ ಫ್ರೆಂಡ್ಸ್ ಪೊಳಲಿ ವತಿಯಿಂದ ಭವತಿ ಭಿಕ್ಷಾಂದೇಹಿ ಮೂಲಕ ಸಹಾಯಧನ ವಿತರಣೆ Read More »

ಭಾರಿ ಗಾಳಿ ಮಳೆ : ಕಾರಿನ ಮೇಲೆ ಬಿದ್ದ ಮರ

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಅಪಾರ ಹಾನಿ ಬೆಳ್ತಂಗಡಿ: ಬೆಳ್ತಂಗಡಿಯ ಎಲ್ಲೆಡೆ ಸೋಮವಾರ ಸಂಜೆ, ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಉಜಿರೆಯ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಬೃಹತ್ ಗಾತ್ರದ ರೆಂಬೆಯೊಂದು ಮುರಿದುಬಿದ್ದು ಕಾರಿಗೆ ಹಾನಿಯಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪತ್ರಕರ್ತರೊಬ್ಬರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಮುಂಡಾಜೆ ಗ್ರಾ.ಪಂ. ವ್ಯಾಪ್ತಿಯ ಚಾಮುಂಡಿ ನಗರ ಪರಿಸರದಲ್ಲಿ ರಾಮಕ್ಕ ಎಂಬವರ ಮನೆಗೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದೆ. ಈ ಪ್ರದೇಶದ ಇನ್ನೂ ನಾಲ್ಕು

ಭಾರಿ ಗಾಳಿ ಮಳೆ : ಕಾರಿನ ಮೇಲೆ ಬಿದ್ದ ಮರ Read More »

46.50 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ : ಇಬ್ಬರ ಬಂಧನ

ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಆರೋಪಿಗಳು ಮಂಗಳೂರು: ನಗರ ಜಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಬೃಹತ್ ಪ್ರಮಾಣದ ಎಂಡಿಎಂಎ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಭಾನುವಾರ ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಪೆರ್ಮಾನ್ನೂರು ಪಿಲಾರು ಹೊಸಗದ್ದೆ ಮನೆ ನಿವಾಸಿ ಪರ್ವೇಜ್ ಅಲಿಯಾಸ್ ದಾವೂದ್ ಪರ್ವೇಜ್ (40) ಮತ್ತು ನಜರತ್ ಅಲಿ (37) ಬಂಧಿತ ಆರೋಪಿಗಳು. ಬೈಕ್‌ನಲ್ಲಿ ಎಂಡಿಎಂಎ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಕಂಕನಾಡಿ ನಗರ ಠಾಣಾ ಪೊಲೀಸರು ಆರೋಪಿಗಳನ್ನು

46.50 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ : ಇಬ್ಬರ ಬಂಧನ Read More »

ಬೆಳ್ತಂಗಡಿ : ರೈಲಿನಿಂದ ಬಿದ್ದು ಶಬರಿಮಲೆ ಯಾತ್ರಿಕ ಸಾವು

ಬೆಳ್ತಂಗಡಿ: ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ವಸಂತ ಪೂಜಾರಿ (60) ಎಂದು ಗುರುತಿಸಲಾಗಿದೆ. ಶಬರಿಮಲೆ ಯಾತ್ರೆಗಾಗಿ ಮಂಗಳೂರಿನಿಂದ ಕೇರಳಕ್ಕೆ ರೈಲು ಮೂಲಕ ಅವರು ಏ.17ರಂದು ಪ್ರಯಾಣಿಸಿದ್ದರು. ಅದೇ ದಿನ ರಾತ್ರಿ ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೇರಳದ ತ್ರಿಶೂರ್ ಆಸ್ಪತ್ರೆಗೆ ಅವರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶನಿವಾರ ತಡರಾತ್ರಿ ಸಾವನ್ನಪ್ಪಿದ್ದರು. ಭಾನುವಾರ ಮೃತದೇಹವನ್ನು ಸ್ವಗ್ರಾಮಕ್ಕೆ ರವಾನಿಸಲಾಗಿದೆ.

ಬೆಳ್ತಂಗಡಿ : ರೈಲಿನಿಂದ ಬಿದ್ದು ಶಬರಿಮಲೆ ಯಾತ್ರಿಕ ಸಾವು Read More »

ಫಾಲ್ಸ್‌ಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ : ಇಬ್ಬರು ಯುವಕರು ಸೆರೆ

ಮೇ 10ರಂದು ವಿವಾಹವಾಗಲಿದ್ದ ಓರ್ವ ಆರೋಪಿ ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರಗೈದ ಆರೋಪದಲ್ಲಿ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಸುಮಂತ್(28) ಮತ್ತು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನವನೀತ್(26) ಬಂಧಿತ ಆರೋಪಿಗಳು. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ 15 ವರ್ಷದ ಬಾಲಕಿಯನ್ನು ಆರೋಪಿಗಳು ಪುಸಲಾಯಿಸಿ ಏ.16ರಂದು ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಕರೆದೊಯ್ದು ಅತ್ಯಾಚಾರ ಮಾಡಿರುವ ಬಗ್ಗೆ ಸಂತ್ರಸ್ತೆ ಮನೆಯವರಿಗೆ ತಿಳಿಸಿದ್ದಾಳೆ. ಈ

ಫಾಲ್ಸ್‌ಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ : ಇಬ್ಬರು ಯುವಕರು ಸೆರೆ Read More »

ಕೊಣಾಜೆ : ಜಾತ್ರೆಗೆಂದು ಹೋದ ಬಾಲಕಿ ನಾಪತ್ತೆ

ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು ಅಡ್ಕದ 16 ವರ್ಷದ ಬಾಲಕಿಯೊಬ್ಬಳು ಏಪ್ರಿಲ್ 12 =ರಿಂದ ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಾಗಿದೆ. ನಾಪತ್ತೆಯಾದ ಬಾಲಕಿಯನ್ನು ಜಗದೀಶ್ ಪೂಜಾರಿ ಮತ್ತು ಗುಲಾಬಿ ದಂಪತಿಯ ಪುತ್ರಿ ಚೈತನ್ಯ ಎಂದು ಗುರುತಿಸಲಾಗಿದೆ. ಹರೇಕಳದ ರಾಮಕೃಷ್ಣ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಈಕೆ, ಇತ್ತೀಚೆಗಷ್ಟೇ ಪರೀಕ್ಷೆ ಮುಗಿಸಿ ಮನೆಯಲ್ಲಿದ್ದಳು. ಬಾಲಕಿಯ ತಾಯಿ ಗುಲಾಬಿ ನೀಡಿದ ದೂರಿನ ಪ್ರಕಾರ, ಏಪ್ರಿಲ್ 12ರಂದು ಬೆಳಗ್ಗೆ ಸುಮಾರು 7.30ಕ್ಕೆ ಸ್ನೇಹಿತರೊಂದಿಗೆ ಪೊಳಲಿ ದೇವಸ್ಥಾನಕ್ಕೆ ಹೋಗುವುದಾಗಿ ತಂದೆಗೆ

ಕೊಣಾಜೆ : ಜಾತ್ರೆಗೆಂದು ಹೋದ ಬಾಲಕಿ ನಾಪತ್ತೆ Read More »

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸಿದ ಅಪರಾಧಿಗೆ 5 ವರ್ಷ ಜೈಲು

ಮಂಗಳೂರು : ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪಿ ಟಿ.ಇ. ಜೋಸೆಫ್ ಎಂಬಾತನಿಗೆ ಮಂಗಳೂರು ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. 2009ರ ಮಾರ್ಚ್ 8ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿಯಲ್ಲಿ ಅಂದಾಜು 50,000 ರೂ.ಮೌಲ್ಯದ 1.500 ಕೆಜಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/09ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c) ಜೊತೆಗೆ 20(b) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸಿದ ಅಪರಾಧಿಗೆ 5 ವರ್ಷ ಜೈಲು Read More »

error: Content is protected !!
Scroll to Top