ದಕ್ಷಿಣ ಕನ್ನಡ

ಉದ್ಯೋಗ ನೆಪದಲ್ಲಿ ವಂಚನೆ : ಖಾಸಗಿ ಸಂಸ್ಥೆ ವಿರುದ್ಧ ದೂರು ದಾಖಲಿಸಿದ ಕಾಲೇಜು ವಿದ್ಯಾರ್ಥಿಗಳು

ಮೂರು ದಿನದ ತರಬೇತಿಗೆ 2 ಸಾವಿರ ರೂ. ಪಡೆದು ಬ್ರೈನ್‌ವಾಶ್‌ ಮಾಡಿದ ಆರೋಪ ಮಂಗಳೂರು : ನಗರದಲ್ಲಿ ಕಾರ್ಯಾಚರಿಸುತ್ತಿರುವ Vexon ಎಂಬ ಖಾಸಗಿ ಸಂಸ್ಥೆ ತರಬೇತಿ ಮತ್ತು ಉದ್ಯೋಗದ ಆಮಿಷವೊಡ್ಡಿ ಕಾಲೇಜು ವಿದ್ಯಾರ್ಥಿಗಳನ್ನು ವಂಚಿಸುತ್ತಿದೆ ಎಂದು ಆರೋಪಿಸಿ ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನ ವಿದ್ಯಾರ್ಥಿಗಳು ದೂರು ದಾಖಲಿಸಿದ್ದಾರೆ. ಕುದ್ರೋಳಿಯ ಶ್ರೇಯಸ್ ಸ್ವೀಟ್ಸ್ ಎದುರು ಕಾರ್ಯಾಚರಿಸುತ್ತಿರುವ ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ವಂಚಿಸುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಂಸ್ಥೆಯು ತರಬೇತಿಯ ಹೆಸರಿನಲ್ಲಿ ಪ್ರತಿ ವಿದ್ಯಾರ್ಥಿಯಿಂದ 2,000 ರೂಪಾಯಿ ಸಂಗ್ರಹಿಸುತ್ತದೆ ಮತ್ತು […]

ಉದ್ಯೋಗ ನೆಪದಲ್ಲಿ ವಂಚನೆ : ಖಾಸಗಿ ಸಂಸ್ಥೆ ವಿರುದ್ಧ ದೂರು ದಾಖಲಿಸಿದ ಕಾಲೇಜು ವಿದ್ಯಾರ್ಥಿಗಳು Read More »

ಅಪಘಾತದಲ್ಲಿ ಬೋಳಿಯಾರ್‌ನ ಚಾಲಕ ಸಾವು

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಅಪಘಾತ ಕೊಣಾಜೆ: ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮುಡಿಪು ಸಮೀಪದ ಬೋಳಿಯಾರ್ ನಿವಾಸಿ ವಿವಾಹಿತ ಯುವಕ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೋಳಿಯಾರ್ ನಿವಾಸಿ ಬಿ.ಎಚ್ ಕರೀಂ ಎಂಬವರ ಪುತ್ರ ಮುಹಮ್ಮದ್ ರಿಝ್ವಾನ್ (28) ಮೃತರು ಎಂದು ಪೊಲೀಸರು ತಿಳಿಸಿದ್ದಾರೆ. ಹಲವಾರು ವರ್ಷಗಳಿಂದ ಕಂಪನಿಯೊಂದರ ಮೀನಿನ ಲಾರಿಯಲ್ಲಿ ಚಾಲಕನಾಗಿ ದುಡಿಯುತ್ತಿದ್ದ ರಿಝ್ವಾನ್ ಮಹಾರಾಷ್ಟ್ರಕ್ಕೆ ಮೀನಿನ ಲೋಡ್‌ ಕೊಂಡೊಯ್ಯುತ್ತಿದ್ದಾಗ ಮಹಾರಾಷ್ಟ್ರದ ರತ್ನಗಿರಿ ಎಂಬಲ್ಲಿ ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು

ಅಪಘಾತದಲ್ಲಿ ಬೋಳಿಯಾರ್‌ನ ಚಾಲಕ ಸಾವು Read More »

ಬೃಹತ್ ಮರ ಮುರಿದು ಬಿದ್ದು ಕಾರು ಜಖಂ

ಸುಳ್ಯ: ಚಲಿಸುತ್ತಿದ್ದ ಕಾರೊಂದರ ಮೇಲೆ ಮರ ಮುರಿದು ಬಿದ್ದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಪವಾಡ ಸದೃಶ ಎಂಬಂತೆ ಪಾರಾದ ಘಟನೆ ಬೇಂಗಮಲೆ ಎಂಬಲ್ಲಿ ನಡೆದಿದೆ. ಬೆಳ್ಳಾರೆಯ ಪಂಜದ ಕಡೆಗೆ ಉಮ್ಮರ್ ಎಂಬವರ ಬಾಡಿಗೆ ಕಾರಿನಲ್ಲಿ ಸಾಲ ವಸೂಲಾತಿ ಕೆಲಸಕ್ಕೆ ಬ್ಯಾಂಕ್ ಮೆನೇಜರ್ ಉತ್ಸವ್ ಚಕ್ರವರ್ತಿ ಅವರು ಪ್ರಯಾಣಿಸುತ್ತಿದ್ದರು. ಕೆಲಸ ಮುಗಿಸಿ ಮರಳುವ ವೇಳೆ ಬೃಹತ್ ಮರ ಕಾರಿನ ಮೇಲೆ ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ದೊಡ್ಡ ಮಟ್ಟದ

ಬೃಹತ್ ಮರ ಮುರಿದು ಬಿದ್ದು ಕಾರು ಜಖಂ Read More »

ಹೂಡಿಕೆ ಲಾಭ ನಂಬಿ 19 ಲಕ್ಷ ರೂ. ಕಳೆದುಕೊಂಡ ಮಹಿಳೆ

ಮಂಗಳೂರು: ಹೂಡಿಕೆ ಮಾಡಿ ಹೆಚ್ಚಿನ ಲಾಭಗಳಿಸುವ ಆಸೆಗೆ ಬಿದ್ದ ಮಹಿಳೆಯೊಬ್ಬರು ಬರೋಬ್ಬರಿ 19 ಲಕ್ಷ ರೂ. ಕಳೆದುಕೊಂಡಿದ್ದಾರೆ. ಮಹಿಳೆಯೇ ಸ್ವತಹ ಮೊಬೈಲ್‌ನಲ್ಲಿ ಗೂಗಲ್ ಮೂಲಕ ಸಾಫ್ಟೋನಿಕ್ ವೆಬ್‌ಸೈಟ್ ಹುಡುಕಾಡಿ ಎಪಿಕೆ ಫೈಲ್ ಡೌನ್‌ಲೋಡ್‌ ಮಾಡಿಕೊಂಡಿದ್ದರು. ಬಳಿಕ ಸಾಫ್ಟೋನಿಕ್ ಆ್ಯಪ್ ಬಳಸಿ ಬ್ಯಾಂಕ್ ಖಾತೆಯ ವಿವರ ನೀಡಿದ್ದರು. ಹೆಚ್ಚಿನ ಲಾಭದ ಆಶೆಯಿಂದ ಈ ಆ್ಯಪ್‌ನಲ್ಲಿರುವ ನಾನಾ ಕಂಪನಿಗಳಿಗೆ ಒಟ್ಟು 19,06,166 ಲಕ್ಷ ರೂ. ಹೂಡಿಕೆ ಮಾಡಿದ್ದರು. ಜನವರಿಯಲ್ಲಿ 1 ಲಕ್ಷ ರೂ. ಲಾಭ ಅವರಿಗೆ ಸಿಕ್ಕಿತ್ತು. ಬಳಿಕ ಅವರನ್ನು

ಹೂಡಿಕೆ ಲಾಭ ನಂಬಿ 19 ಲಕ್ಷ ರೂ. ಕಳೆದುಕೊಂಡ ಮಹಿಳೆ Read More »

ಮನೆಗೆ ಬಂದು ಕಾರಿನ ಗಾಜು ಒಡೆದ ಮೆಸ್ಕಾಂ ಸಿಬ್ಬಂದಿ

ಸುಳ್ಯ: ಮನೆಯಲ್ಲಿ ತಂದೆ ಮತ್ತು ತಾಯಿ ಮಾತ್ರವೇ ಇದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಬಂದು‌‌ ಕಾರಿನ ಗಾಜನ್ನು ಹೆಲ್ಮೆಟಿನಿಂದ ಹೊಡೆದು ಹಾನಿ ಮಾಡಿರುವುದಾಗಿ ಬಾಲಚಂದ್ರ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಅಪರಿಚಿತ ವ್ಯಕ್ತಿಯೊಬ್ಬ ಬೈಕಿನಲ್ಲಿ ಬಂದು ಗೇಟಿನೊಳಕ್ಕೆ ಪ್ರವೇಶಿಸಿ ಈ ಕೃತ್ಯ ಎಸಗಿದ್ದಾನೆ. ಆತನನ್ನು ಮನೆಯಲ್ಲಿ ಇದ್ದವರು ಪ್ರಶ್ನೆ ಮಾಡಿದ್ದು, ಆತ ಉತ್ತರಿಸದೇ ಜಾಗ ಖಾಲಿ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಹಾನಿಯಾದ ಗಾಜಿನ ಮೌಲ್ಯ ಐದು ಸಾವಿರ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ

ಮನೆಗೆ ಬಂದು ಕಾರಿನ ಗಾಜು ಒಡೆದ ಮೆಸ್ಕಾಂ ಸಿಬ್ಬಂದಿ Read More »

ಹತ್ತನೇ ತರಗತಿ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆ

ವಿಟ್ಲ: ನಗರದ ಕೊಡಂಗಾಯಿ ಬಳಿಯ ಮೂರುಕಜೆಯ ವಿದ್ಯಾ ಸಂಸ್ಥೆಯೊಂದರ ಹತ್ತನೇ ತರಗತಿಯ ವಿದ್ಯಾರ್ಥಿನಿಯ ಶವ ಕೆರೆಯಲ್ಲಿ ಪತ್ತೆಯಾಗಿದೆ. ಬೆಂಗಳೂರು ಮೂಲದ ವೈಗಲಕ್ಷ್ಮೀ ಎಂಬಾಕೆಯೇ ಮೃತ ವಿದ್ಯಾರ್ಥಿನಿ. ಆಕೆ ನಿನ್ನೆಯಿಂದ ನಾಪತ್ತೆಯಾಗಿದ್ದು, ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ‌ಮರಣೋತ್ತರ ಪರೀಕ್ಷಾ ಹಿನ್ನೆಲೆಯಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ಹತ್ತನೇ ತರಗತಿ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆ Read More »

ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ ಮತ್ತು ಉಚಿತ ಓದುವ ಕನ್ನಡಕ ವಿತರಣೆ

ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ (ರಿ), ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ), ಮಂಗಳೂರು ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ, ಮಂಗಳೂರು ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇವುಗಳ ಸಹಯೋಗದೊಂದಿಗೆ ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ ಮತ್ತು ಉಚಿತ ಓದುವ ಕನ್ನಡಕ ವಿತರಣೆ ಕಾರ್ಯಕ್ರಮ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ

ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ ಮತ್ತು ಉಚಿತ ಓದುವ ಕನ್ನಡಕ ವಿತರಣೆ Read More »

ಅಕ್ರಮವಾಗಿ ಸಾಗಿಸುತ್ತಿದ್ದ 35 ಜಾನುವಾರುಗಳ ರಕ್ಷಣೆ

ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕದ್ರಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದಾರೆ. ಮಂಗಳೂರು ಪಡವು ಹೈವೇ ಬಳಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಂಟೈನರ್ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ ವೇಳೆ 35 ಜಾನುವಾರುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಬಜರಂಗದಳ ಕಾರ್ಯಕರ್ತರು ನೀಡಿದ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಾಹನವನ್ನು ತಡೆದರು. ಪರಿಶೀಲನೆಯ ವೇಳೆ ಯಾವುದೇ ಸಮರ್ಪಕ ದಾಖಲೆಗಳಿಲ್ಲದೆ ಜಾನುವಾರುಗಳನ್ನು ಸಾಗಿಸಲಾಗುತ್ತಿದ್ದುದಾಗಿ ತಿಳಿದುಬಂದಿದೆ. ಜಾನುವಾರುಗಳನ್ನು ರಕ್ಷಿಸಿ ಸಂಬಂಧಿತ ಇಲಾಖೆಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ

ಅಕ್ರಮವಾಗಿ ಸಾಗಿಸುತ್ತಿದ್ದ 35 ಜಾನುವಾರುಗಳ ರಕ್ಷಣೆ Read More »

ಉಪ್ಪಿನಂಗಡಿ : ರೈಲಿನಡಿಗೆ ತಲೆಯಿಟ್ಟು ಯುವಕ ಆತ್ಮಹತ್ಯೆ

ರೈಲಿನಡಿಗೆ ಬಿದ್ದು ಯುವಕ ಮೃತ್ಯು ಎಂದು ವರದಿಯಾಗಿದ್ದ ಪ್ರಕರಣ ಉಪ್ಪಿನಂಗಡಿ : ಕಬಕ ಪುತ್ತೂರು ರೈಲ್ವೆ ನಿಲ್ದಾಣದ ಹಾರಾಡಿ ಸೇತುವೆಯ ಸಮೀಪ ಶುಕ್ರವಾರ ರೈಲು ಢಿಕ್ಕಿಯಾಗಿ ಯುವಕ ಮೃತಪಟ್ಟ ಘಟನೆ ಸಂಭವಿಸಿದ್ದು, ಇದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಎನ್ನುವುದು ತನಿಖೆಯಿಂದ ಗೊತ್ತಾಗಿದೆ. ಉಪ್ಪಿನಂಗಡಿ ಗ್ರಾಮದ ಪುಳಿತ್ತಡಿ ಬಳಿಯ ಗೌಂಡತ್ತಿಗೆ ನಿವಾಸಿ ಪವನ್ ಕುಮಾರ್ (26) ಮೃತ ಯುವಕ. ಸರಕು ಸಾಗಿಸುವ ಹಡಗಿನಲ್ಲಿ ಉದ್ಯೋಗಿಯಾಗಿದ್ದ ಪವನ್ ಕೆಲವು ತಿಂಗಳಿನಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಇದ್ದರು. ಶುಕ್ರವಾರ

ಉಪ್ಪಿನಂಗಡಿ : ರೈಲಿನಡಿಗೆ ತಲೆಯಿಟ್ಟು ಯುವಕ ಆತ್ಮಹತ್ಯೆ Read More »

ಕುರ್ಚಿಯಿಂದ ಕುಸಿದು ಬಿದ್ದು ಯುವಕ ಸಾವು

ಕಾರ್ಕಳ: ಮನೆಯಲ್ಲಿ ಕುರ್ಚಿಯಲ್ಲಿ ಕುಳಿತುಕೊಂಡಿದ್ದ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಯರ್ಲಪ್ಪಾಡಿಯಲ್ಲಿ ನಡೆದಿದೆ. ಸುಹೇಶ್ (22) ಎಂಬವರೇ ‌ಮೃತ ದುರ್ದೈವಿ. ಮಧ್ಯಾಹ್ನ ವೇಳೆ ಮನೆಯ ಊಟದ ಕೋಣೆಯಲ್ಲಿ ಕುಳಿತಿದ್ದ ಅವರು ಏಕಾಏಕಿ ಬೊಬ್ಬೆ ಹೊಡೆಯುತ್ತಾ ಕೆಳಕ್ಕೆ ಬಿದ್ದಿದ್ದಾಗಿ ತಿಳಿದು ಬಂದಿದೆ. ಆ ಬಳಿಕ ಅಸ್ವಸ್ಥರಾಗಿ ನರಳಾಡುತ್ತಿದ್ದ ಅವರನ್ನು ಕಾರ್ಕಳದ ‌ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಸುಹೇಶ್ ಅವರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಕಾರ್ಕಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕುರ್ಚಿಯಿಂದ ಕುಸಿದು ಬಿದ್ದು ಯುವಕ ಸಾವು Read More »

error: Content is protected !!
Scroll to Top