ದಕ್ಷಿಣ ಕನ್ನಡ

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ಲೀಡ್ ಬ್ಯಾಂಕ್‍ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ( ಎಸ್ ಸಿಡಿಸಿಸಿ) ಬ್ಯಾಂಕ್ 2023-24 ನೇ ಸಾಲಿನಲ್ಲಿ ಸಾಧಿಸಿದ ಸಮಗ್ರ ಸಾಧನೆಗೆ ಲೀಡ್ ಬ್ಯಾಂಕ್ ಪ್ರಶಸ್ತಿಗೆ ಪಾತ್ರವಾಗಿದೆ. 2023-24 ನೇ ಸಾಲಿನಲ್ಲಿ ಠೇವಣಿ ಸಂಗ್ರಹ ಸಾಲ ನೀಡಿಕೆಯಲ್ಲಿ ಗಮನಾರ್ಹ ಸಾಧನೆಗೈದಿರುವ ಬ್ಯಾಂಕ್, ಮುಖ್ಯವಾಗಿ ಕೃಷಿ ಸಾಲ ಮತ್ತು ಆದ್ಯತಾ ವಲಯ ಸಾಲ ನೀಡಿಕೆಯಲ್ಲೂ ಮಹತ್ತರ ಪ್ರಗತಿಯನ್ನು ಸಾಧಿಸಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳ ಪೈಪೋಟಿಯ ನಡುವೆಯೂ ಬ್ಯಾಂಕಿನ ಈ ಮಹತ್ತರ ಸಾಧನೆಯನ್ನು ದಕ್ಷಿಣ […]

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ಲೀಡ್ ಬ್ಯಾಂಕ್‍ ಪ್ರಶಸ್ತಿಗೆ ಆಯ್ಕೆ Read More »

ವಾಹನ ಓಡಾಟದ ನಡುವೆಯೇ ರಸ್ತೆಯಲ್ಲಿ ನಮಾಜ್‍ | ಎಲ್ಲೆಡೆ ವ್ಯಾಪಕ ಆಕ್ರೋಶ

ಮಂಗಳೂರು: ವಾಹನ ಓಡಾಟದ ನಡುವೆಯೇ ರಸ್ತೆಯಲ್ಲಿ ಕುಳಿತು ನಮಾಜ್‍ ಮಾಡಿದ ಘಟನೆ ಮಂಗಳೂರಿನ ಕಂಕನಾಡಿ ಮಸೀದಿ ಎದುರು ನಡೆದಿದ್ದು, ಈ ಕುರಿತು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಮುಸ್ಲಿಮರು ನಡುರಸ್ತೆಯಲ್ಲಿ ಕೂತು ನಮಾಜ್ ಮಾಡುತ್ತಿದ್ದ ಭಾವಚಿತ್ರ ಎಲ್ಲಡೆ ಹರದಾಡಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಾರೆ. ಕಳೆದ ಶುಕ್ರವಾರ ಘಟನೆ ನಡೆದಿದ್ದು, ನಮಾಜ್ ಮಾಡಿದ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ. ಯುವಕರು ನಡುರಸ್ತೆಯಲ್ಲೇ

ವಾಹನ ಓಡಾಟದ ನಡುವೆಯೇ ರಸ್ತೆಯಲ್ಲಿ ನಮಾಜ್‍ | ಎಲ್ಲೆಡೆ ವ್ಯಾಪಕ ಆಕ್ರೋಶ Read More »

ರಸ್ತೆ ಡಾಮರೀಕರಣ ಕಾಮಗಾರಿ : ಬದಲಿ ರಸ್ತೆಯಲ್ಲಿ ಚಲಿಸುವಂತೆ ಪ್ರಕಟಣೆ

ಉಪ್ಪಿನಂಗಡಿ: ಉಪ್ಪಿನಂಗಡಿ – ಹಿರೇಬಂಡಾಡಿ – ಕೊಯಿಲ ರಸ್ತೆಯ ಉಪ್ಪಿನಂಗಡಿಯಿಂದ ರಾಮನಗರದವರೆಗೆ ಡಾಮರೀಕರಣ ಕಾಮಗಾರಿ ಇರುವುದರಿಂದ ಮೇ 29 ರಿಂದ ಜೂ.2 ರ ವರೆಗೆ ವಾಹನ ಸಂಚಾರ ನಿರ್ಭಂಧಿಸಲಾಗಿದೆ. ಈ ನಿಟ್ಟಿನಲ್ಲಿ ಸಾವ೯ಜನಿಕರು ಈ ಸಮಯದಲ್ಲಿ ಕೆಳಕಂಡ ಪರ್ಯಾಯ ರಸ್ತೆಗಳ ಬಳಕೆ ಮಾಡುವಂತೆ ವಿನಂತಿಸಲಾಗಿದೆ: ಉಪ್ಪಿನಂಗಡಿ – ನಟ್ಟಿಬೈಲು – ಶ್ರೀ ರಾಮ ಶಾಲೆ ರಸ್ತೆಯಲ್ಲಿ ಸಾರ್ವಜನಿಕರು ಪ್ರಯಾಣಿಸುವಂತೆ ಲೋಕೋಪಯೋಗಿ ಇಲಾಖೆ ಪ್ರಕಟಣೆ ನೀಡಿದೆ.

ರಸ್ತೆ ಡಾಮರೀಕರಣ ಕಾಮಗಾರಿ : ಬದಲಿ ರಸ್ತೆಯಲ್ಲಿ ಚಲಿಸುವಂತೆ ಪ್ರಕಟಣೆ Read More »

ಕಷ್ಟದಲ್ಲಿರುವ ಯುವಕ: ನೆರವಿಗಾಗಿ ಮನವಿ

ಪಂಜ: ಪಂಜದ ಯುವ ತೇಜಸ್ಸ್ ನ ಆ್ಯಂಬುಲೆನ್ಸ್ ಚಾಲಕರಾಗಿ ದುಡಿಯುತ್ತಿದ್ದ ಪ್ರದೀಪ್ ಅಡ್ಕ ರವರು ಬೈಕಿನಿಂದ ಬಿದ್ದು ತಲೆಯ ಭಾಗಕ್ಕೆ ತಾಗಿ ಮೆದುಳಿಗೆ ಸಂಬಂಧಿಸಿದ ನರಕ್ಕೆ ಪೆಟ್ಟಾಗಿದ್ದು ಪ್ರಸ್ತುತ ಮಂಗಳೂರಿನ ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವ ತೇಜಸ್ಸು ಆ್ಯಂಬುಲೆನ್ಸ್’ನಲ್ಲಿ ಬಹಳಷ್ಟು ಬಾರಿ ಬಡವರಿಗೆ, ಕಷ್ಟದಲ್ಲಿರುವ ಜನರಿಗೆ ಉಚಿತ ಸೇವೆಯನ್ನು ಒದಗಿಸಲೂ ಕಾರಣಕರ್ತರಾದ ಬಡ ಕುಟುಂಬದ ಪ್ರದೀಪರು ಯುವ ತೇಜಸ್ಸ್ ನ ಸೇವಾರ್ಥಿಯಾಗಿದ್ದಾರೆ. ಸದ್ಯ ಮೊದಲ ದಿನವೇ ಒಂದೂವರೆ ಲಕ್ಷದಷ್ಟು ಆಸ್ಪತ್ರೆ ಬಿಲ್ಲಾಗಿದ್ದು, ಇವರ ತಂದೆ ಕೃಷಿಕಾರ್ಮಿಕರಾಗಿದ್ದು,

ಕಷ್ಟದಲ್ಲಿರುವ ಯುವಕ: ನೆರವಿಗಾಗಿ ಮನವಿ Read More »

ಜೂ.3 : ಉಡುಪಿಯಲ್ಲಿ ವಿಧಾನಪರಿಷತ್ ಚುನಾವಣಾ ನಾಯಕರ ಸಮಾವೇಶ

ಉಡುಪಿ: ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ಮೇ 27 ಸೋಮವಾರ ಮಧ್ಯಾಹ್ನ ಗಂಟೆ 2.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರು ಇದರ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭಾಗವಹಿಸಿ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಈ ಸಮಾವೇಶದಲ್ಲಿ ನೈರುತ್ಯ

ಜೂ.3 : ಉಡುಪಿಯಲ್ಲಿ ವಿಧಾನಪರಿಷತ್ ಚುನಾವಣಾ ನಾಯಕರ ಸಮಾವೇಶ Read More »

ವಿದ್ಯಾರ್ಥಿಯ ಖಾತೆಯಿಂದ ನಗದು ಅಪಹರಿಸಿ ವಂಚನೆ : ಪ್ರಕರಣ ದಾಖಲು

ಉಜಿರೆ: ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆಯಿಂದ ನಗದು ಅಪಹರಿಸಿದ ಘಟನೆ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರ ಬಿ.ಎನ್.ವೈ ಎಸ್ ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಪ್ರದೀಪ್ ಸುರೇಶ್ ರೂಗಿ ಎಂಬವರ ಖಾತೆಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ್ದಾರೆ. ಗುಲ್ಬರ್ಗ ಜಿಲ್ಲೆಯ ಅಫಲ್ ಪುರದ ಯೂನಿಯನ್ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದು ಈ ಖಾತೆಯಿಂದ ಹಣ ಎಗರಿಸಲಾಗಿದೆ. ಮೇ 23ರವರೆಗೆ ಅವರ ಖಾತೆಯಲ್ಲಿ ಹಣವಿತ್ತು. ರಾತ್ರಿ 8.30ರ ಹೊತ್ತಿಗೆ ಇವರ ಮೊಬೈಲ್ ಗೆ

ವಿದ್ಯಾರ್ಥಿಯ ಖಾತೆಯಿಂದ ನಗದು ಅಪಹರಿಸಿ ವಂಚನೆ : ಪ್ರಕರಣ ದಾಖಲು Read More »

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ ಸುವರ್ಣ ಮಹೋತ್ಸವ : ಅಕ್ಷಯಾಂಬರ ತಾಳ ಮದ್ದಳೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿ ಕಾರ್ಯಕ್ರಮದ ಅಂಗವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಅಕ್ಷಯಾಂಬರ ತಾಳಮದ್ದಳೆ ಜರಗಿತು. ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ನಿತೀಶ್ ಕುಮಾರ್ ವೈ, ಹಿಮ್ಮೇಳದಲ್ಲಿ ಪ್ರಚೇತ್ ಆಳ್ವ, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಥಧಾರಿಗಳಾಗಿ ಅಂಬಾ ಪ್ರಸಾದ ಪಾತಾಳ (ದ್ರೌಪದಿ), ಸತೀಶ ಶಿರ್ಲಾಲು(ಕೌರವ), ಸಂಜೀವ ಪಾರೆಂಕಿ (ವಿದುರ ಮತ್ತು ವಿಕರ್ಣ), ದಿವಾಕರ ಆಚಾರ್ಯ ಗೇರುಕಟ್ಟೆ (ಪ್ರಾತಿಕಾಮಿ, ಭೀಷ್ಮ ಮತ್ತು ಶ್ರೀಕೃಷ್ಣ), ಶ್ರೀಧರ ಎಸ್.

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ ಸುವರ್ಣ ಮಹೋತ್ಸವ : ಅಕ್ಷಯಾಂಬರ ತಾಳ ಮದ್ದಳೆ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ನಿರ್ಮಿಸಿದ ಮನೆ ‘ಸೇವಾಶ್ರಯ’ದ ಹಸ್ತಾಂತರ

ಸುಳ್ಯ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಸುಳ್ಯ ನಗರ ಪಂಚಾಯಿತಿ ಸಹಕಾರದಲ್ಲಿ ಸುಳ್ಯದ ಪೈಚಾರಿನಲ್ಲಿ ಸುಮತಿ ಎಂಬವರಿಗೆ ನೂತನವಾಗಿ ನಿರ್ಮಿಸಿದ ಮನೆ ‘ಸೇವಾಶ್ರಯ’ದ ಹಸ್ತಾಂತರ ಕಾರ್ಯಕ್ರಮ ಇಂದು ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ,  ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಲ್ಪನೆಯಂತೆ ಸೇವೆ ಎಂಬ ಯಜ್ಞದಲ್ಲಿ ಸವಿದೆಯಂತೆ ಉರಿದು ಸಮಾಜದಲ್ಲಿ  ಮತ್ತೊಬ್ಬರಿಗೆ ಸಹಾಯ ಮಾಡುವುದೇ  ನಮ್ಮ ಜೀವನದ ಭಾಗವಾಗಿರಬೇಕು. ಈ ಮೂಲಕ ನಮ್ಮ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ನಿರ್ಮಿಸಿದ ಮನೆ ‘ಸೇವಾಶ್ರಯ’ದ ಹಸ್ತಾಂತರ Read More »

ಮನೆಯ ಕೆರೆಗೆ ಬಿದ್ದು ಯುವಕ ಮೃತ್ಯು

ಬೆಳ್ತಂಗಡಿ: ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಮೃತಪಟ್ಟ ಘಟನೆ ಶನಿವಾರ ರಾತ್ರಿ ಬೆಳ್ತಂಗಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊತ್ತು ನಿವಾಸಿ ಸದಾಶಿವ ಶೆಟ್ಟಿಯ ಎಂಬವರ ಪುತ್ರ ಶೈಲೇಶ್ ಶೆಟ್ಟಿ(38) ಮೃತಪಟ್ಟವರು. ಒಬ್ಬನೇ ಮಗನಾಗಿರುವ ಶೈಲೇಶ್ ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದು, ಕೃಷಿ ಕೆಲಸ ಮಾಡಿಕೊಂಡಿರುವಾಗ ಮನೆಯ ಕೆರೆಗೆ ರಾತ್ರಿ ಬಿದ್ದು ಕೆಸರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.. ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳದ

ಮನೆಯ ಕೆರೆಗೆ ಬಿದ್ದು ಯುವಕ ಮೃತ್ಯು Read More »

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಮಾಡಿದ ಸಿಎಂ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶನಿವಾರ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ದೇವರ ಆಶೀರ್ವಾದ ಪಡೆದ ನಂತರ ಮಾತಾನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯಕ್ಕೆ ಒಳ್ಳೆಯ ಮಳೆಯಾಗಲಿ ರಾಜ್ಯ ಶಾಂತಿ ನೆಮ್ಮದಿಯಿಂದಿರಲಿ ಎಂದು ದೇವರಲ್ಲಿ ರಾಜ್ಯದ ಜನತೆ ಪರವಾಗಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯರು ಆಗಿರುವ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಮಾಡಿದ ಸಿಎಂ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ Read More »

error: Content is protected !!
Scroll to Top