ದಕ್ಷಿಣ ಕನ್ನಡ

ನಾಳೆ (ಮೇ26) : ಪುತ್ತಿಲ ಪರಿವಾರ ನೇತೃತ್ವದಲ್ಲಿ ನೂತನವಾಗಿ ನಿರ್ಮಿಸಿದ ಮನೆ ಹಸ್ತಾಂತರ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ ನೇತೃತ್ವದಲ್ಲಿ ಸುಳ್ಯ ನಗರ ಪಂಚಾಯಿತಿ ಸಹಕಾರದೊಂದಿಗೆ ಸುಳ್ಯ ಪೈಚಾರಿನಲ್ಲಿ ಸುಮತಿ ಎಂಬವರಿಗೆ ನೂತನವಾಗಿ ನಿರ್ಮಿಸಿದ ಮನೆ ಸೇವಾಶ್ರಯದ ಹಸ್ತಾಂತರ ಕಾರ್ಯಕ್ರಮ ಮೇ.26ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಹಲವು ವರ್ಷಗಳಿಂದ ವಾಸಯೋಗ್ಯವಾದ ಮನೆಯಿರದೆ ಪ್ಲಾಸ್ಟಿಕ್ ಜೋಪಡಿಯಲ್ಲಿದ್ದ ಕುಟುಂಬಕ್ಕೆ ಮನೆ ನಿರ್ಮಿಸಿಕೊಂಡುವಂತೆ ಮಹಿಳೆಯೋರ್ವರು ಫೋನ್ ಮಾಡಿ ಅರುಣ್ ಕುಮಾರ್ ಪುತ್ತಿಲರಿಗೆ 2023ರಲ್ಲಿ ತಿಳಿಸಿದರು. ಆ ಕುಟುಂಬಕ್ಕೆ ಸರಕಾರದ ಯಾವೂದೇ ಸೌಲಭ್ಯ ಪಡೆಯಲು ಕೆಲವೊಂದು ತೊಡಕುಗಳಿದ್ದವು. ನಗರ ಪಂಚಾಯಿತಿ ಅಧಿಕಾರಿಗಳ ಸಹಕಾರದೊಂದಿಗೆ ಪುತ್ತಿಲ […]

ನಾಳೆ (ಮೇ26) : ಪುತ್ತಿಲ ಪರಿವಾರ ನೇತೃತ್ವದಲ್ಲಿ ನೂತನವಾಗಿ ನಿರ್ಮಿಸಿದ ಮನೆ ಹಸ್ತಾಂತರ Read More »

ಮಹಿಳೆಯ ಬ್ಯಾಗ್‍ ನಿಂದ ಲಕ್ಷಾಂತರ ಮೌಲ್ಯದ ಚಿನ್ನ ಕಳವು : ದೂರು ದಾಖಲು | ಕಳ್ಳರ ತಾಣವಾಗುತ್ತಿರುವ ಬಿ.ಸಿ.ರೋಡು ಬಸ್ ನಿಲ್ದಾಣ

ಬಂಟ್ವಾಳ: ಬಿಸಿರೋಡಿನ ಬಸ್ ನಿಲ್ದಾಣ ಪಿಕ್ ಪಾಕೆಟ್ ತಾಣವಾಗಿ, ಕಳ್ಳರ ಕೇಂದ್ರವಾಗಿ ಮಾರ್ಪಾಡು ಹೊಂದಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಬಸ್ ಗೆ ಹತ್ತುವ ಮಹಿಳೆಯರ ನಗನಗದು ಕಳವು ನಡೆಯುತ್ತಿದ್ದು, ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಕಳ್ಳರು ಹಿಡಿಯುವಲ್ಲಿ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ಮತ್ತೆ ನಿನ್ನೆ ಬೆಳಿಗ್ಗೆ ಗಂಡ ಮತ್ತು ಮಗುವಿನ ಜೊತೆ ಬಸ್ ಹತ್ತುವ ವೇಳೆ ಬ್ಯಾಗಿನೊಳಗಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವಾದ

ಮಹಿಳೆಯ ಬ್ಯಾಗ್‍ ನಿಂದ ಲಕ್ಷಾಂತರ ಮೌಲ್ಯದ ಚಿನ್ನ ಕಳವು : ದೂರು ದಾಖಲು | ಕಳ್ಳರ ತಾಣವಾಗುತ್ತಿರುವ ಬಿ.ಸಿ.ರೋಡು ಬಸ್ ನಿಲ್ದಾಣ Read More »

ಸಿಡಿಲು ಬಡಿದು ಯುವಕ ಮೃತ್ಯು

ಉಡುಪಿ: ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಮಾಣಿಬೆಟ್ಟು ಬಳಿ ಗುರುವಾರ ರಾತ್ರಿ ನಡೆದಿದೆ. ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಮೃತಪಟ್ಟವರು. ಸ್ನಾನ ಮಾಡಲೆಂದು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಕೊನೆಯುಸಿರೆಳೆದಿದ್ದಾರೆ.

ಸಿಡಿಲು ಬಡಿದು ಯುವಕ ಮೃತ್ಯು Read More »

ವಿದ್ಯುತ್ ತಗುಲಿ ವ್ಯಕ್ತಿ ಮೃತ್ಯು

ಬಂಟ್ವಾಳ: ವಿದ್ಯುತ್‌ ಪರಿವರ್ತಕದ ಬಳಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್‌ ಠಾಣಾ ವ್ಯಾಪ್ತಿಯ ಇರಾದಲ್ಲಿ ಗುರುವಾರ ನಡೆದಿದೆ. ಇರಾ ಗ್ರಾಮದ ಮುರ್ಕಾಜೆ ನಿವಾಸಿ ಸತೀಶ್‌ ಚೌಟ (43) ಮೃತಪಟ್ಟ ವ್ಯಕ್ತಿ. ಸತೀಶ್ ಅವರು ಬಾಕ್ರಬೈಲಿನಲ್ಲಿ ಮರದ ಮಿಲ್ ನಲ್ಲಿ ಕೆಲಸಗಾರನಾಗಿದ್ದು, ಗುರುವಾರ ರಸ್ತೆಯ ಬದಿಯಲ್ಲಿ ಟ್ರಾನ್ಸ್ ಫಾರ್ಮರ್ ಪಕ್ಕದಲ್ಲಿ ನಿಂತುಕೊಂಡಿರುವ ಸಮಯದಲ್ಲಿ ಆಕಸ್ಮಿಕವಾಗಿ ಸಿಡಿಲು ಬಡಿದು, ಒಮ್ಮೆಲೇ ವಿದ್ಯುತ್‌ ಪ್ರವೇಶಿಸಿ ಮೃತಪಟ್ಟ ಬಗ್ಗೆ ಬ೦ಟ್ವಾಳ ಗ್ರಾಮಾಂತರ

ವಿದ್ಯುತ್ ತಗುಲಿ ವ್ಯಕ್ತಿ ಮೃತ್ಯು Read More »

ಕಳ್ಳತನ : ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

ಮಂಗಳೂರು : ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಂಕನಾಡಿ ನಗರ ಠಾಣಾ ಪೊಲೀಸರ ತಂಡ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದೆ. ಕೊಡಗು ಜಿಲ್ಲೆ ವೀರಾಜಪೇಟೆ ಬೆಳ್ಳುರು ಗ್ರಾಮ ನಿವಾಸಿ ಸಚಿನ್ ಮತ್ತು ಕೊಡಗು ಜಿಲ್ಲೆ ಬಾಡಗಾ ಗ್ರಾಮ ನಿವಾಸಿ ನಿಶಾಂತ್ ಬಂಧಿತ ಆರೋಪಿಗಳು. ಮಂಗಳೂರು ನಗರದ ಕುಲಶೇಖರ ದ.ಕ ಸಹಕಾರಿ ಹಾಲು ಒಕ್ಕೂಟದ ಬಳಿಯ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ 87.5 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ

ಕಳ್ಳತನ : ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ Read More »

ಪಯಸ್ವಿನಿಯಲ್ಲಿ ನೀರಿನ ಹರಿವು ಹೆಚ್ಚಳ :ಡ್ಯಾಂನ  ಗೇಟ್‌ ತೆರವು

ಸುಳ್ಯ: ಕಳೆದ ಒಂದು ವಾರದಿಂದ ನಿರಂತರ ಮಳೆ ಸುರಿಯುತ್ತಿರುವ ಕಾರಣ ಜೀವನದಿ ಪಯಸ್ವಿನಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದೆ. ಈ ಹಿನ್ನಲೆಯಲ್ಲಿ ಸುಳ್ಯಕ್ಕೆ ನೀರು ಸರಬರಾಜು ಮಾಡುವ ಕಲ್ಲುಮುಟ್ಲುವಿನ ಪಂಪ್‌ ಹೌಸ್ ಸಮೀಪದ ಡ್ಯಾಂನ ಎಲ್ಲಾ ಗೇಟ್‌ಗಳು ತೆರವು ಮಾಡಲಾಗಿದೆ. ನದಿಯಲ್ಲಿ ಮತ್ತೆ ನೀರಿನ ಹರಿವು ಹೆಚ್ಚಳಗೊಂಡಿದ್ದು ಜೀವನದಿಗೆ ಮತ್ತೆ ಜೀವಕಳೆ ಬಂದಿದೆ. ಬರಡಾಗಿದ್ದ ನದಿಯ ಒಡಲು ಮತ್ತೆ ನೀರು ತುಂಬಿಕೊಂಡಿದೆ. ಕಳೆದ ಹಲವಾರು ದಿನಗಳಿಂದ ಬತ್ತಿ ಬರಡಾಗಿ ಕಲ್ಲುಗಳೇ ಪ್ರತ್ಯಕ್ಷವಾಗುತ್ತಿದ್ದ ಮೈದಾನದಂತೆ ಭಾಸವಾಗಿದ್ದ ನದಿಯ ಒಡಲಿನಲ್ಲಿ ಜೀವಜಲ

ಪಯಸ್ವಿನಿಯಲ್ಲಿ ನೀರಿನ ಹರಿವು ಹೆಚ್ಚಳ :ಡ್ಯಾಂನ  ಗೇಟ್‌ ತೆರವು Read More »

ಸ್ಕೂಟರ್ ಗೆ ಬೋರ್ ವೆಲ್ ಲಾರಿ ಡಿಕ್ಕಿ‌ : ತಂದೆ ಮೃತ್ಯು, ಮಗ ಗಂಭೀರ

ಬಂಟ್ವಾಳ : ಬೋರ್‌ವೆಲ್‌ ಕೊರೆಯುವ ಯಂತ್ರವಿರುವ ಘನಗಾತ್ರದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅಲ್ಲಿಪಾದೆ ಎಂಬಲ್ಲಿ ಬುಧವಾರ ರಾತ್ರಿ ವೇಳೆ ನಡೆದಿದೆ. ಮೃತರು ನಾವೂರ ಸಮೀಪದ ಪರಾರಿ ಜಯಪೂಜಾರಿ (55) ಎಂದು ಗುರುತಿಸಲಾಗಿದ್ದು, ಇವರ ಮಗ ರಕ್ಷಿತ್ ಸಹ ಸವಾರನಾಗಿದ್ದು, ಈತನಿಗೆ ಗಂಭೀರ ಗಾಯವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟರ್ ನಲ್ಲಿ ತಂದೆ ಮಗ ಸಂಚಾರ ಮಾಡುತ್ತಿರುವ ವೇಳೆ ಲಾರಿ ಢಿಕ್ಕಿಯಾಗಿದೆ ಎಂದು

ಸ್ಕೂಟರ್ ಗೆ ಬೋರ್ ವೆಲ್ ಲಾರಿ ಡಿಕ್ಕಿ‌ : ತಂದೆ ಮೃತ್ಯು, ಮಗ ಗಂಭೀರ Read More »

ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ | ಜಾಮೀನಿನ ಮೇಲೆ ಬಿಡುಗಡೆ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ, ಹರೀಶ್ ಪೂಂಜಾರಿಗೆ ಜಾಮೀನು ದೊರೆತಿದೆ. ಪೂಂಜಾ ಅವರನ್ನು ವಿಚಾರಣೆಗಾಗಿ ಠಾಣೆಗೆ ಕರೆತರಲು ಬುಧವಾರ ಬೆಳ್ತಂಗಡಿ ಠಾಣಾ ಪೊಲೀಸರು ಪೂಂಜಾರವರ ಮನೆಗೆ ತೆರಳಿದ್ದರು. ಈ ವೇಳೆ ಸ್ಥಳದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳೀನ್ ಕುಮಾರ್ ಕಟೀಲ್ ತಾನೇ ಖುದ್ದಾಗಿ ಹರೀಶ್ ಪೂಂಜಾರನ್ನು ವಿಚಾರಣೆಗೆ ಠಾಣೆಗೆ ಕಳುಹಿಸುವುದಾಗಿ ಪೊಲೀಸರಲ್ಲಿ ವಿನಂತಿಸಿಕೊಂಡಿದ್ದಾರೆ. ಸಂಜೆ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಹಾಗೂ ತನಿಖಾಧಿಕಾರಿಯಾದ ಬಿ.

ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ | ಜಾಮೀನಿನ ಮೇಲೆ ಬಿಡುಗಡೆ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬಂಧನ ನಿರ್ಧಾರ ಕೈ ಬಿಟ್ಟ ಪೊಲೀಸರು | ಸರಕಾರಕ್ಕೆ ನಡುಕ ಹುಟ್ಟಿಸಿದ ಕಾರ್ಯಕರ್ತರ ದಂಡು

ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸುವ ನಿಟ್ಟಿನಲ್ಲಿ ಪೊಲೀಸರು ಇಂದು ಪೂಂಜಾ ಅವರ ಮನೆಗೆ ತೆರಳಿದ್ದು, ಇದೀಗ ಹರೀಶ್ ಪೂಂಜಾ ಅವರ ಬಂಧನದ ನಿರ್ಧಾರವನ್ನು ಕೈಬಿಟ್ಟಿದ್ದಾರೆ. ಹರೀಶ್ ಪೂಂಜ ಬಂಧನ ಸಾಧ್ಯತೆಯ ಹಿನ್ನಲೆಯಲ್ಲಿ ಅವರ ನಿವಾಸಕ್ಕೆ ವಕೀಲರ ತಂಡ ಇಂದು ಭೇಟಿ ನೀಡಿದೆ. ಈ ಸಂದರ್ಭದಲ್ಲಿ ವಕೀಲರ ತಂಡ ಪೊಲೀಸರ ಜೊತೆ ಮಾತುಕತೆ ನೆಡೆಸಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಅವರ ನಿವಾಸ ಎದುರು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬಂಧನ ನಿರ್ಧಾರ ಕೈ ಬಿಟ್ಟ ಪೊಲೀಸರು | ಸರಕಾರಕ್ಕೆ ನಡುಕ ಹುಟ್ಟಿಸಿದ ಕಾರ್ಯಕರ್ತರ ದಂಡು Read More »

ನಾಳೆ (ಮೇ 23):  ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಶಿಲಾನ್ಯಾಸ

ಕಡಬ: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಶಿಲಾನ್ಯಾಸ ಕಾರ್ಯಕ್ರಮ ಮೇ 23 ಗುರುವಾರ ಬೆಳಿಗ್ಗೆ 10.30 ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್‍.ಅಂಗಾರ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಪಾಲ್ಗೊಳ್ಳುವರು. ಅಲ್ಲದೆ ಸೀಮೆಗೆ ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ದೇವಸ್ಥಾನಗಳ ಆಡಳಿತ ಮಂಡಳಿ ಅಧ್ಯಕ್ಷರು, ದೈವಸ್ಥಾನಗಳ ಆಡಳಿತ ಮಂಡಳಿ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಚ್ಚಿನ

ನಾಳೆ (ಮೇ 23):  ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಶಿಲಾನ್ಯಾಸ Read More »

error: Content is protected !!
Scroll to Top