ದಕ್ಷಿಣ ಕನ್ನಡ

ಭಾರೀ ಮಳೆ ಹಿನ್ನಲೆ | ನಾಳೆ (ಜು.26) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಪುತ್ತೂರು: ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಂಜಾಗ್ರತಾ ಕ್ರಮವಾಗಿ ತಾಲೂಕು ನೋಡೆಲ್ ಅಧಿಕಾರಿಗಳು ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ.

ಭಾರೀ ಮಳೆ ಹಿನ್ನಲೆ | ನಾಳೆ (ಜು.26) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಸೌಜನ್ಯ ಕೊಲೆ ಮರು ತನಿಖೆಗೆ ಆಗ್ರಹ | ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘದ ವತಿಯಿಂದ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಧರ್ಮಸ್ಥಳ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ನಡೆದು 11 ವರ್ಷಗಳಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್ ರಾವ್ ಬಿಡುಗಡೆಯಾಗಿದೆ. ಇಂತಹಾ ಹೀನ ಬರ್ಬರ ಕೃತ್ಯವನ್ನು ಸರಿಯಾಗಿ ತನಿಖೆ ಮಾಡಿ ನಿಜವಾದ ಆರೋಪಿಗೆ ಶಿಕ್ಷೆ ಕೊಡಿಸುವಲ್ಲಿ ವಿಫಲವಾಗಿದ್ದು, ಇದು ಇಡೀ ಸಮಾಜಕ್ಕೆ ಆಘಾತ ಉಂಟು ಮಾಡಿದೆ ಎಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಎಚ್. ಪದ್ಮಗೌಡ, ಅಧ್ಯಕ್ಷ ಕುಶಾಲಪ್ಪ ಗೌಡ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅವರು ಮಂಗಳವಾರ ಗೌಡರ ಯಾನೆ ಒಕ್ಕಲಿಗರ

ಸೌಜನ್ಯ ಕೊಲೆ ಮರು ತನಿಖೆಗೆ ಆಗ್ರಹ | ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘದ ವತಿಯಿಂದ ಪತ್ರಿಕಾಗೋಷ್ಠಿ Read More »

ಮಳೆಯ ಅವಾಂತರ | ರಸ್ತೆಗೆ ಬಿದ್ದ ಮರ ತೆರವು ಮಾಡಿ ಜವಾಬ್ದಾರಿ ಮೆರೆದ ಪತ್ರಕರ್ತರು

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಡಬ, ಸುಬ್ರಹ್ಮಣ್ಯ ಭಾಗದಲ್ಲಿ ಅತೀ ಹೆಚ್ಚಿನ ಅನಾಹುತಗಳು ನಡೆದಿದೆ. ಮಂಜೇಶ್ವರ ಸುಬ್ರಹ್ಮಣ್ಯ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಹಲವೆಡೆ ನದಿ ನೀರು ರಸ್ತೆಗೆ ಬಂದು ಸಂಚಾರ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿಯಿಂದ ಯಾವುದೇ ವಾಹನಗಳು ಮುಂದಕ್ಕೆ ಸಾಗುವಂತಿಲ್ಲ. ಕಳೆದ ಎರಡು ದಿನಗಳಿಂದ ಇದೇ ಪರಿಸ್ಥಿತಿ ಇದ್ದು ಈ ರಸ್ತೆಯಲ್ಲಿ ಸಾಗುವವರು ಬಳ್ಪ ಗ್ರಾಮದಿಂದ ಗುತ್ತಿಗಾರು ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಬೇಕಾಗಿದೆ. ಮಳೆಯ ಈ ಅವಾಂತರದ ವರದಿ ಮಾಡಲು ತೆರಳಿದ್ದ ಟಿವಿ ಮಾದ್ಯಮದವರೂ

ಮಳೆಯ ಅವಾಂತರ | ರಸ್ತೆಗೆ ಬಿದ್ದ ಮರ ತೆರವು ಮಾಡಿ ಜವಾಬ್ದಾರಿ ಮೆರೆದ ಪತ್ರಕರ್ತರು Read More »

ಮುಡಿಪಿನಲ್ಲಿ ಬಸ್-ಕಾರು ಅಪಘಾತ

ಮುಡಿಪು : ಮುಡಿಪು ಜಂಕ್ಷನ್ ನಲ್ಲಿ ಸೋಮವಾರ ರಾತ್ರಿ  ಬಸ್‌ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್‌ ಕಾರು ಚಾಲಕ ಯಾವುದೇ ಗಂಭೀರ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಎನ್‌ ಎಸ್‌ ಟ್ರಾವೆಲ್ಸ್‌ ಎಂಬ ಬಸ್ಸು ಮಂಗಳೂರಿನಿಂದ ಬಿ ಸಿ ರೋಡಿನತ್ತ ಸಂಚರಿಸುತ್ತಿದ್ದಾಗ, ಮುಡಿಪು ಜಂಕ್ಷನ್ನಿನಲ್ಲಿ ತಿರುಗುವ ಸಂದರ್ಭದಲ್ಲಿ ಭಾರತಿ ಶಾಲೆ ಕಡೆಯಿಂದ ಬಂದ ಝೆನ್‌ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಸೀದಾ ಬಸ್ಸಿನ ಮುಂಭಾಗಕ್ಕೆ ನುಗ್ಗಿದ್ದು, ಕಾರು ಚಾಲಕ ಪಾರಾಗಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ

ಮುಡಿಪಿನಲ್ಲಿ ಬಸ್-ಕಾರು ಅಪಘಾತ Read More »

ಚಾರ್ಮಾಡಿ ಘಾಟಿ ಬಿದಿರುತಳ ಸಮೀಪ ಗುಡ್ಡ ಕುಸಿತ | ವಾಹನ ಸಂಚಾರಕ್ಕೆ ಸಮಸ್ಯೆ

ಚಾರ್ಮಾಡಿ : ಸುರಿಯುತ್ತಿರುವ ಭಾರೀ ಮಳೆಗೆ ಚಾರ್ಮಾಡಿ ಘಾಟಿಯ ಚಿಕ್ಕಮಗಳೂರು ವಿಭಾಗದ ಬಿದಿರುತಳ ಆಲೇಖಾನ್ ನಡುವಿನ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಯಿತು. ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಗುಡ್ಡದ ಮಣ್ಣು ಕುಸಿತಗೊಂಡು ರಸ್ತೆಗೂ ಬಂದು ಬಿದ್ದು ವಾಹನಗಳು ಸಂಚರಿಸಲು ಅನಾನುಕೂಲವಾಯಿತು. ಇದರಿಂದ ಘಾಟಿ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಮುಂದುವರಿಯಿತು. ಗುಡ್ಡ ಕುಸಿದ್ದ ಉಂಟಾದ ಸ್ಥಳದ ಪಕ್ಕದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಯಾಗುತ್ತಿದ್ದು, ಈ ರಸ್ತೆ ಇಲ್ಲಿ ತೀವ್ರ

ಚಾರ್ಮಾಡಿ ಘಾಟಿ ಬಿದಿರುತಳ ಸಮೀಪ ಗುಡ್ಡ ಕುಸಿತ | ವಾಹನ ಸಂಚಾರಕ್ಕೆ ಸಮಸ್ಯೆ Read More »

ವಿವಿ ಸೆಮಿಸ್ಟರ್ ಪರೀಕ್ಷೆ ಮುಂದೂಡದ ಜಿಲ್ಲಾಡಳಿತ | ಅಪಾಯಕಾರಿ ಸ್ಥಿತಿಯಲ್ಲಿ ತೆರಳಬೇಕಾದ ವಿದ್ಯಾರ್ಥಿಗಳು

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿಯ ಹೆದ್ದಾರಿ ಜಲಾವೃತಗೊಂಡಿದ್ದು, ಪರೀಕ್ಷೆಗೆ ಹಾಜರಾದ ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಪರಿಸ್ಥಿತಿಯಲ್ಲಿ ಪರೀಕ್ಷೆಗೆ ಹಾಜರಾಗಬೇಕಾಗಿ ಬಂತು. ಮಂಗಳೂರು ಯುನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಭಾರೀ ಮಳೆ ಇದ್ದರೂ ಮುಂದೂಡಿಕೆ ಆಗಿರಲಿಲ್ಲ. ಪರಿಣಾಮ ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್‍ ಎಸ್‍ ಕಾಲೇಜಿಗೆ ಪರೀಕ್ಷೆ ಕೇಂದ್ರಗಳತ್ತ ಬಂದಿದ್ದಾರೆ. ವಿವಿ ಸೆಮಿಸ್ಟರ್ ಪರೀಕ್ಷೆ ಮುಂದೂಡಲಿ ಎಂಬ ಆಗ್ರಹ ವ್ಯಕ್ತವಾಗಿತ್ತು.

ವಿವಿ ಸೆಮಿಸ್ಟರ್ ಪರೀಕ್ಷೆ ಮುಂದೂಡದ ಜಿಲ್ಲಾಡಳಿತ | ಅಪಾಯಕಾರಿ ಸ್ಥಿತಿಯಲ್ಲಿ ತೆರಳಬೇಕಾದ ವಿದ್ಯಾರ್ಥಿಗಳು Read More »

ಬಂಟ್ವಾಳ ನೇತ್ರಾವತಿ ನದಿ ನೀರಿನ ಮಟ್ಟ 6.7 ಕ್ಕೆ ತಲುಪಿದೆ

ಬಂಟ್ವಾಳ : ಭಾರೀ ಮಳೆಯಿಂದಾಗಿ ಬಂಟ್ವಾಳ ನೇತ್ರಾವತಿ ನೀರಿನ ಮಟ್ಟ ಏರಿಕೆ  ಇಂದು 6.7 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ. ಬಂಟ್ವಾಳ ನೇತ್ರಾವತಿ ನದಿಯ ಅಪಾಯದ ಮಟ್ಟ 8.5 ಮೀಟರ್ ಆಗಿದೆ. ಮಳೆಯ ಪ್ರಮಾಣ ಜಾಸ್ತಿಯಾದಲ್ಲಿ ಅಪಾಯದ ಮಟ್ಟವನ್ನು ತಲುಪುವ ಸಾಧ್ಯತೆಯಿದೆ.

ಬಂಟ್ವಾಳ ನೇತ್ರಾವತಿ ನದಿ ನೀರಿನ ಮಟ್ಟ 6.7 ಕ್ಕೆ ತಲುಪಿದೆ Read More »

ಬೆಳ್ತಂಗಡಿ ತಾಲೂಕಿನಾದ್ಯಂತ ಭಾರಿ ಮಳೆ : ಕೊಪ್ಪದ ಗಂಡಿ ಸೇತುವೆ ಮುಳುಗಡೆ

ಬೆಳ್ತಂಗಡಿ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನಾದ್ಯಂತ ನದಿ, ಕೊಳ್ಳಗಳು ತುಂಬಿ ಹರಿಯುತ್ತಿದೆ. ಮಿತ್ತಬಾಗಿಲು-ಬಂಗಾಡಿ ಸಂಪರ್ಕ ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆಯಾಗಿದೆ. ನೇತ್ರಾವತಿ ನದಿಗಳಲ್ಲೂ ನೀರಿನ ಪ್ರಮಾಣ ಹೆಚ್ಚಳವಾಗಿದೆ.

ಬೆಳ್ತಂಗಡಿ ತಾಲೂಕಿನಾದ್ಯಂತ ಭಾರಿ ಮಳೆ : ಕೊಪ್ಪದ ಗಂಡಿ ಸೇತುವೆ ಮುಳುಗಡೆ Read More »

ಕುಕ್ಕೆ ಕ್ಷೇತ್ರದಲ್ಲಿ ಭಾರೀ ಮಳೆ : ಜಲ ದಿಗ್ಭಂಧನದಿಂದ ಸಂಪರ್ಕ ಕಡಿತ

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಮತ್ತು ಮಲೆನಾಡಿನಲ್ಲಿ ನಿರಂತರ ಭಾರೀ  ಮಳೆ ಸುರಿಯುತ್ತಿದ್ದು, ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದೆ. ಘಟ್ಟ ಪ್ರದೇಶದಲ್ಲಿ ಕೂಡಾ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ  ಸ್ನಾನಘಟ್ಟ ಸಂಪೂರ್ಣ  ಮುಳುಗಡೆಯಾಗಿದೆ. ಈ ಭಾಗದಲ್ಲಿ ಶನಿವಾರದಿಂದ ನಿರಂತರ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದ್ದು, ನದಿ ಸಮೀಪ ಹೋಗದಂತೆ ದೇವಸ್ಥಾನಕ್ಕೆ ಆಗಮಿಸುವ

ಕುಕ್ಕೆ ಕ್ಷೇತ್ರದಲ್ಲಿ ಭಾರೀ ಮಳೆ : ಜಲ ದಿಗ್ಭಂಧನದಿಂದ ಸಂಪರ್ಕ ಕಡಿತ Read More »

ಸೌಜನ್ಯ ಪ್ರಕರಣ ಮರು ತನಿಖೆಗೆ ಒಳಪಡಿಸಿ | ಶಾಸಕ ಹರೀಶ್ ಪೂಂಜಾರಿಂದ ಮುಖ್ಯಮಂತ್ರಿಗೆ ಮನವಿ

ಬೆಂಗಳೂರು: ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಇಂದು ಭೇಟಿಯಾಗಿ ಸೌಜನ್ಯ  ಪ್ರಕರಣ ಮರು ತನಿಖೆಗೆ ಒಳಪಡಿಸಿ ತನಿಖೆ ನಡೆಸಲು ಆಗ್ರಹಿಸಿದರು  ಮೃತ ಸಹೋದರಿ, ಸೌಜನ್ಯನಿಗೆ ಮತ್ತು ಮೃತಳ ಕುಟುಂಬಕ್ಕೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕಾಗಿ ಮಾನ್ಯ ಮುಖ್ಯಮಂತ್ರಿ ಅವರಿಗೆ ಮನವಿಯನ್ನು ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

ಸೌಜನ್ಯ ಪ್ರಕರಣ ಮರು ತನಿಖೆಗೆ ಒಳಪಡಿಸಿ | ಶಾಸಕ ಹರೀಶ್ ಪೂಂಜಾರಿಂದ ಮುಖ್ಯಮಂತ್ರಿಗೆ ಮನವಿ Read More »

error: Content is protected !!
Scroll to Top