ದಕ್ಷಿಣ ಕನ್ನಡ

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧದ ವರದಿಗೆ ತಡೆ | ಸೆಷನ್ಸ್ ನ್ಯಾಯಾಲಯ ಆದೇಶ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ಮಾಧ್ಯಮದ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ. ಜತೆಗೆ ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ಈ ಸಂಬಂಧ ವಾದಿಗಳಾದ ಶೀನಪ್ಪ ಮತ್ತಿತರರು ಸಲ್ಲಿಸಿರುವ ಅಸಲು ದಾವೆಯನ್ನು ಸಿಸಿಎಚ್‌-11ನೇ ನ್ಯಾಯಾಲಯ ವಿಚಾರಣೆ ನಡೆಸಿ ಇದೇ ಜು.19ರಂದು ಈ ಕುರಿತಂತೆ ಆದೇಶಿಸಿದೆ. ಅರ್ಜಿ ವಿಚಾರಣೆ […]

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧದ ವರದಿಗೆ ತಡೆ | ಸೆಷನ್ಸ್ ನ್ಯಾಯಾಲಯ ಆದೇಶ Read More »

ಆಯುಷ್ ಇಲಾಖೆಯಿಂದ ದ.ಕ.ಜಿಲ್ಲೆಗೆ ಮೂರು ಸಂಚಾರಿ ಕ್ಲಿನಿಕ್

ಪುತ್ತೂರು: ದ.ಕ.ಜಿಲ್ಲಾ ಆಯುಷ್ ಇಲಾಖೆ ಮೂರು ಸಂಚಾರಿ ಕ್ಲಿನಿಕ್‍ ಗಳನ್ನು ಆರಂಭಿಸಲು 2023-24ನೇ ಹಣಕಾಸು ವರ್ಷದಲ್ಲಿ ಸರಕಾರ ಮಂಜೂರು ಮಾಡಿದ್ದು, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕುಗಳ ಒಳಭಾಗಗಳಲ್ಲಿ ಸಂಚರಿಸಲಿದೆ. ಇದರ ಕಾರ್ಯ ಯೋಜನೆಯೊಂದೇ ಬಾಕಿಯಿದ್ದು, ಆಯುಷ್ ಸಂಚಾರಿ ವೈದ್ಯಕೀಯ ಘಟಕದ ವಾಹನಗಳಲ್ಲಿ ವೈದ್ಯರು, ವಿವಿಧೋದ್ದೇಶ ಕಾರ್ಯಕರ್ತೆಯರು ಸಂಚರಿಸಲಿದ್ದಾರೆ. ಕಡಿಮೆ ಸೇವೆಯಲ್ಲಿರುವ ನಿವಾಸಿಗಳ ಹಾಗೂ ಕಾಯ್ದಿರಿಸದ ಮನೆ ಬಾಗಿಲಿಗೆ ಆಯುಷ್ ಆರೋಗ್ಯ ಸೇವೆಯನ್ನು ಒದಗಿಸುವುದು ಸಂಚಾರಿ ವೈದ್ಯಕೀಯ ಘಟಕದ ಉದ್ದೇಶವಾಗಿದೆ. ಸಾಮಾನ್ಯ ಸಾಂಕ್ರಾಮಿಕ ರೋಗಗಳು, ಸಾಂಕ್ರಾಮಿಕವಲ್ಲದ ರೋಗಗಳ

ಆಯುಷ್ ಇಲಾಖೆಯಿಂದ ದ.ಕ.ಜಿಲ್ಲೆಗೆ ಮೂರು ಸಂಚಾರಿ ಕ್ಲಿನಿಕ್ Read More »

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಂಸದ  ನಳಿನ್ ಕುಮಾರ್ ಕಟೀಲ್ ಅವರು ಇಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆಯನ್ನು ನಡೆಸಿದರು. ಸಭೆಯಲ್ಲಿ ಇತ್ತೀಚೆಗಿನ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ  ಉಂಟಾಗಿರುವ ಪಾಟ್ ಹೋಲ್ ಗಳನ್ನು ಮುಚ್ಚಲು ಕೂಡಲೇ  ಕ್ರಮ ಕೈಗೊಳ್ಳುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಸ್ಥಳಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಶೀಘ್ರದಲ್ಲಿ  ನಡೆಸುವುದಾಗಿ ಸಂಸದರು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ  ತಿಳಿಸಿದರು. ಈ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ Read More »

ಗ್ರಾಪಂ ಉಪಚುನಾವಣೆ | ಶಸ್ತ್ರಾಸ್ತ್ರ ಠೇವಣಿ ಇಡುವಂತೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಇದೀಗ ಚುನಾವಣೆ ಘೋಷಣೆಯಾಗಿರುವ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಇಡುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿಡ್ಪಳ್ಳಿ ಮತ್ತು ಆರ್ಯಾಪು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮತ್ತು ಉಜಿರೆ ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಚುನಾವಣೆಗಳು ನಡೆಯಲಿವೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಬೆಳೆ ರಕ್ಷಣೆ ಮತ್ತು

ಗ್ರಾಪಂ ಉಪಚುನಾವಣೆ | ಶಸ್ತ್ರಾಸ್ತ್ರ ಠೇವಣಿ ಇಡುವಂತೆ ಜಿಲ್ಲಾಧಿಕಾರಿ ಸೂಚನೆ Read More »

ಸೌಜನ್ಯ ಕೊಲೆ ಪ್ರಕರಣ | ಧರ್ಮಸ್ಥಳ ಧರ್ಮಾಧಿಕಾರಿ ಡಾ.ಹೆಗ್ಗಡೆ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಸಿವಿಲ್ ಕೋರ್ಟ್ ಆದೇಶ

ಪುತ್ತೂರು: ಸೌಜನ್ಯರವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕುರಿತಾಗಿ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಮತ್ತಿತರರಿಗೆ ಆದೇಶ ನೀಡಿದೆ. ಉಜಿರೆಯ ಎಸ್‌ಡಿಎಂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಸೌಜನ್ಯರವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ನಡೆದು ಇತ್ತೀಚೆಗೆ ಆರೋಪಿ ಕಾರ್ಕಳದ ಸಂತೋಷ್ ರಾವ್

ಸೌಜನ್ಯ ಕೊಲೆ ಪ್ರಕರಣ | ಧರ್ಮಸ್ಥಳ ಧರ್ಮಾಧಿಕಾರಿ ಡಾ.ಹೆಗ್ಗಡೆ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಸಿವಿಲ್ ಕೋರ್ಟ್ ಆದೇಶ Read More »

ಇನ್ನು ಮುಂದೆ ದೇವಾಲಯಗಳಲ್ಲಿ ಫೋಟೊ ಕ್ಲಿಕ್ಕಿಸುವುದಕ್ಕೆ ನಿಷೇಧ | ಸರಕಾರದಿಂದ ಆದೇಶ

ಪುತ್ತೂರು: ದೇವಾಲಯಗಳಿಗೆ ತೆರಳಿ ಪೋಟೋ ಕ್ಲಿಕ್ಕಿಸಲೆಂದೇ ತೆರಳುವವರಿಗೆ ರಾಜ್ಯ ಸರ್ಕಾರ ಶಾಕಿಂಗ್​ ನ್ಯೂಸ್​ ನೀಡಿದೆ. ಕರ್ನಾಟಕದ ದೇಗುಲಗಳಲ್ಲಿ ಮೊಬೈಲ್​ ಬಳಕೆಗೆ ನಿಷೇಧ ಹೇರಿ ನೂತನ ಆದೇಶ ಹೊರಡಿಸಿದೆ. ಇಂದು ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಈ ಆದೇಶವನ್ನು ಹೊರಡಿಸಿದ್ದು ದತ್ತಿ ಇಲಾಖೆಗಳ ಅಡಿಯಲ್ಲಿ ಬರುವ ಯಾವುದೇ ದೇಗುಲಗಳಲ್ಲಿ ಇನ್ಮೇಲೆ ಮೊಬೈಲ್​ ಬಳಕೆ ಮಾಡುವಂತಿಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರ 30 ಸಾವಿರಕ್ಕೂ ಅಧಿಕ ದೇವಾಲಯಗಳು ಇರುತ್ತದೆ.

ಇನ್ನು ಮುಂದೆ ದೇವಾಲಯಗಳಲ್ಲಿ ಫೋಟೊ ಕ್ಲಿಕ್ಕಿಸುವುದಕ್ಕೆ ನಿಷೇಧ | ಸರಕಾರದಿಂದ ಆದೇಶ Read More »

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಡಬ ತಾಲೂಕಿನಾದ್ಯಂತ ಭೇಟಿ | ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಸುಳ್ಯ: ಸುಳ್ಯ ವಿಧಾನ ಸಭಾಕ್ಷೇತ್ರದ ಕಡಬ ತಾಲೂಕಿನಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆಲಂಕಾರು ಗ್ರಾಮ ವನ್ ಕಛೇರಿಗೆ ಭೇಟಿ ನೀಡಿ ಶುಭಾಹಾರೈಸಿದರು. ನಂತರ ಆಲಂಕಾರು ಕಮ್ಮಿತ್ತಿಲು ಕೊರಗಜ್ಜ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸಿ ಪ್ರಸಾದ ಸ್ವೀಕರಿಸಿದರು. ಪೆರಾಬೆ ಗ್ರಾಮದ ಪೂಂಜಾ ಎಂಬಲ್ಲಿ ಸಾರ್ವಜನಿಕ ರಸ್ತೆಯ ಬದಿಯ ಭೂ ಕುಸಿತದ ವೀಕ್ಷಣೆ ನಡೆಸಿ ಸಾರ್ವಜನಿಕ ಕುಂದು ಕೊರತೆಯನ್ನು ಆಲಿಸಿದರು. ಹಳೆನೇರೆಂಕಿ ದ.ಕ.ಜಿ.ಪ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಶಾಲಾ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಡಬ ತಾಲೂಕಿನಾದ್ಯಂತ ಭೇಟಿ | ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ Read More »

ಚಾರ್ಮಾಡಿ ಅಕ್ರಮ ಮರಳು ಸಾಗಾಟ ಪ್ರಕರಣ | ಲಾರಿ ವಶಕ್ಕೆ

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಚಾರ್ಮಾಡಿಯಲ್ಲಿ ಪತ್ತೆಹಚ್ಚಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಧರ್ಮಸ್ಥಳ ಎಸ್.ಐ. ಅನಿಲ್ ಕುಮಾರ್ ನೇತೃತ್ವದ ತಂಡ ವಾಹನ ಚಾರ್ಮಾಡಿಯಲ್ಲಿ ತಪಾಸಣೆ ನಡೆಸಿದಾಗ ಈ ಅಕ್ರಮ ಮರಳು ಸಾಗಾಟ ಪತ್ತೆಯಾಗಿದೆ. ಲಾರಿ ಚಾಲಕ ಅನ್ವರ್ ಎಂಬಾತನನ್ನು ಈ ಕುರಿತು ವಿಚಾರಿಸಿದಾಗ ಆತನ ಬಳಿ ಯಾವುದೇ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದೆ. ಸರಕಾರಕ್ಕೆ ಯಾವುದೇ ರಾಜಸ್ವವನ್ನು ಪಾವತಿಸದೆ ಮರಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದ ಹಿನ್ನಲೆಯಲ್ಲಿ ಲಾರಿಯನ್ನು ವಶಕ್ಕೆ ಪಡೆತಲಾಯಿತು. ಮುಂದಿನ ಕ್ರಮಕ್ಕಾಗಿ

ಚಾರ್ಮಾಡಿ ಅಕ್ರಮ ಮರಳು ಸಾಗಾಟ ಪ್ರಕರಣ | ಲಾರಿ ವಶಕ್ಕೆ Read More »

ಉಯ್ಯಾಲೆಯಿಂದ ಬಿದ್ದು ಬಾಲಕ ಮೃತ್ಯು

ಬೆಳ್ತಂಗಡಿ: ಬಾಲಕನೋರ್ವ ಸೀರೆ ಅಳವಡಿಸಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ಭಾನುವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ, ಶ್ರೀಶ (13) ಮೃತಪಟ್ಟ ಬಾಲಕ. ಮುಂಡಾಜೆ ಶಾಲೆಯೊಂದರ 8 ನೇ ತರಗತಿ ವಿದ್ಯಾರ್ಥಿಯಾಗಿರುವ ಶ್ರೀಶ ಉಯ್ಯಾಲೆಯಿಂದ ಬಿದ್ದಿದ್ದನ್ನು ಗಮನಿಸಿದ ಆತನ ತಾಯಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯದರೂ ಅಲ್ಲಿ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತ ಬಾಲಕನಿಗೆ ತಂದೆ, ತಾಯಿ ಹಾಗೂ ಸಹೋದರಿ

ಉಯ್ಯಾಲೆಯಿಂದ ಬಿದ್ದು ಬಾಲಕ ಮೃತ್ಯು Read More »

ಮಂಗಳೂರು ಚಿಲಿಂಬಿ ಒಕ್ಕಲಿಗರ ಗೌಡ ಸೇವಾ ಸಂಘದ ಯುವ ಘಟಕದ ಅಧ್ಯಕ್ಷರಾಗಿ ಎಂ.ಬಿ.ಕಿರಣ್ ಬುಡ್ಲೆಗುತ್ತು ಆಯ್ಕೆ

ಮಂಗಳೂರು: ಒಕ್ಕಲಿಗರ ಗೌಡ ಸೇವಾ ಸಂಘದ ಚಿಲಿಂಬಿ ಮಂಗಳೂರು ಯುವ ಘಟಕದ ಅಧ್ಯಕ್ಷರಾಗಿ ಎಂ.ಬಿ.ಕಿರಣ್ ಬುಡ್ಲೆಗುತ್ತು ಚುನಾಯಿತರಾದರು. ಮಂಗಳೂರಿನಲ್ಲಿ ಶನಿವಾರ ಮಂಗಳೂರು ಯುವ ಘಟಕ ಹಾಗೂ ಮಹಿಳಾ ಘಟಕದ ಆಯ್ಕೆ ಚುನಾವಣಾ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಕಾರ್ಯದರ್ಶಿ ಸ್ಥಾನಕ್ಕೆ ಇಬ್ಬರನ್ನು ಸೂಚಿಸಿರುವುದರಿಂದ ಯುವ ನಿರ್ದೇಶಕರು ಕೈ ಎತ್ತಿ ಮತದಾನ ಪ್ರಕ್ರಿಯೆ ನಡೆಸಿದರು. ಕಿರಣ್ ಬುಡ್ಡೆಗುತ್ತುರವರ ಆಪ್ತ ಕಿರಣ್ ಹೊಸೊಳಿಕೆ 16 ಮತ ಪಡೆದರು. ರಾಘವೇಂದ್ರ ಅವರು 1 ಮತ ಪಡೆದು ಪರಾಜಿತಾರಾದರು. ಉಪಾಧ್ಯಕ್ಷರಾಗಿ ಮಹೇಶ್ ನಡುತೋಟ,

ಮಂಗಳೂರು ಚಿಲಿಂಬಿ ಒಕ್ಕಲಿಗರ ಗೌಡ ಸೇವಾ ಸಂಘದ ಯುವ ಘಟಕದ ಅಧ್ಯಕ್ಷರಾಗಿ ಎಂ.ಬಿ.ಕಿರಣ್ ಬುಡ್ಲೆಗುತ್ತು ಆಯ್ಕೆ Read More »

error: Content is protected !!
Scroll to Top