ದಕ್ಷಿಣ ಕನ್ನಡ

ಆ್ಯಕ್ಟೀವಾಗೆ ಕಾರು ಡಿಕ್ಕಿ‌ : ಆ್ಯಕ್ಟೀವ ಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಆ್ಯಕ್ಟೀವಾಗೆ ಕಾರೊಂದು ಡಿಕ್ಕಿ‌ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ ನಿವಾಸಿ, ನಿವೃತ್ತ ಸೈನಿಕ ಚಿದಾನಂದ್ ಕಾಮತ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಡಿಪು ಇನ್ಫೋಸಿಸ್ ಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಅವಿವಾಹಿತರಾಗಿದ್ದು, ತನ್ನ ತಾಯಿ ಜೊತೆ ವಾಸವಾಗಿದ್ದಾರೆ. ಮೃತರು ತಾಯಿ, ಐವರು ಸಹೋದರರನ್ನು ಅಗಲಿದ್ದಾರೆ.

ಆ್ಯಕ್ಟೀವಾಗೆ ಕಾರು ಡಿಕ್ಕಿ‌ : ಆ್ಯಕ್ಟೀವ ಸವಾರ ಸ್ಥಳದಲ್ಲೇ ಮೃತ್ಯು Read More »

ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷರ ಬಂಧನ | ಬಿಜೆಪಿಯಿಂದ ಪ್ರತಿಭಟನೆ

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆಗೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ವತಿಯಿಂದ  ಬೆಳ್ತಂಗಡಿಯಲ್ಲಿ ಪ್ರತಿಭಟನೆ ಬೆಳ್ತಂಗಡಿಯಲ್ಲಿ ನಡೆಯಿತು. ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿಗರು ಪೊಲೀಸ್ ಇಲಾಖೆಯ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಲೋಕಸಭಾ ಅಭ್ಯರ್ಥಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ ಸಹಿತ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷರ ಬಂಧನ | ಬಿಜೆಪಿಯಿಂದ ಪ್ರತಿಭಟನೆ Read More »

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಕಚೇರಿ ಕಟ್ಟಡ ಹಾಗೂ ಗೋದಾಮು ನಿರ್ಮಾಣ | ರೂಪುರೇಷೆಗಳ ಕುರಿತು ಅಂತಿಮ ಹಂತದ ಸಮಾಲೋಚನಾ ಸಭೆ

ಕಾಣಿಯೂರು : ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಕಚೇರಿ ಕಟ್ಟಡ ಹಾಗೂ ಗೋದಾಮು ನಿರ್ಮಾಣದ ಆರಂಭದ ಅಂತಿಮ ರೂಪುರೇಷೆಗಳ ಕುರಿತು ಚರ್ಚಿಸಲು ಅಂತಿಮ ಹಂತದ ಸಮಾಲೋಚನಾ ಸಭೆ ಕಾಣಿಯೂರು ಪ್ರಧಾನ ಕಚೇರಿಯ ಸಭಾಭವನದಲ್ಲಿ ನಡೆಯಿತು. ಈಗಾಗಲೇ ನೂತನ ಕಚೇರಿ ಕಟ್ಟಡ ಹಾಗೂ ಗೋದಾಮು ಲೋಕಾರ್ಪಣೆ ಮಾಡಲು ನೀಲನಕಾಶೆ ಹಾಗೂ ಅಂದಾಜುಪಟ್ಟಿ ಮಾಡಲಾಗಿದ್ದು, ಸರಕಾರದಿಂದ ಅನುಮತಿ ಪಡೆಯಲಾಗಿದೆ. 2 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಪಂಚಾಯತ್ ವ್ಯಾಪ್ತಿಗೆ ಒಳಪಡುವ ಪ್ರಮುಖರ

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಕಚೇರಿ ಕಟ್ಟಡ ಹಾಗೂ ಗೋದಾಮು ನಿರ್ಮಾಣ | ರೂಪುರೇಷೆಗಳ ಕುರಿತು ಅಂತಿಮ ಹಂತದ ಸಮಾಲೋಚನಾ ಸಭೆ Read More »

ನಾಲ್ಕಂಬ ಷಣ್ಮುಖ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಸಿ.ಪಿಜಯರಾಮ ಗೌಡ ಸ್ಮರಣಾರ್ಥ ‘ವಿಶ್ವಾಸ್ ಟ್ರೋಫಿ-2024’

ಚಾರ್ವಾಕ: ಗ್ರಾಮದ ನಾಲ್ಕಂಬ ಷಣ್ಮುಖ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಸಿ.ಪಿಜಯರಾಮ ಗೌಡ ಸ್ಮರಣಾರ್ಥ ‘ವಿಶ್ವಾಸ್ ಟ್ರೋಫಿ-2024’ ಭಾನುವಾರ ಚಾರ್ವಾಕ ನಾಲ್ಕಂಬ ಶ್ರೀ ಉಳ್ಳಾಲ್ತಿ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ ಗೌಡ ಪಿ. ನೆರವೇರಿಸಿದರು. ಸಮಾರಂಭದಲ್ಲಿ ವಚನ ಪ್ರದೀಪ್ ಆರ್. ಗೌಡ ದೀಪ ಪ್ರಜ್ವಲನೆ ಮಾಡಿದರು. ನಾಲ್ಕಂಬ ಶ್ರೀ ಷಣ್ಮುಖ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಸುಜಿತ್ ಅರುವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕುಂಬ್ಲಾಡಿ ಶ್ರೀ ಕುಕ್ಕೇನಾಥ

ನಾಲ್ಕಂಬ ಷಣ್ಮುಖ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಸಿ.ಪಿಜಯರಾಮ ಗೌಡ ಸ್ಮರಣಾರ್ಥ ‘ವಿಶ್ವಾಸ್ ಟ್ರೋಫಿ-2024’ Read More »

ಟವರ್ ಮೇಲೆ ಬಿದ್ದ ಮರ : ವ್ಯಕ್ತಿಗೆ ಗಾಯ

ಬೆಳ್ತಂಗಡಿ: ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ನಡೆದಿದೆ. ಕನ್ಯಾಡಿಯ ರಮೇಶ್ ಗಾಯಗೊಂಡವರು. ಮರ ಉರುಳಿದ ಸಂದರ್ಭ ಸ್ಕೂಟರ್ ನಲ್ಲಿ ಇಂದಬೆಟ್ಟುಗೆ ಪ್ರಯಾಣಿಸುತ್ತಿದ್ದ ರಮೇಶ್ ಈ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಮರದ ಭಾಗ ತಲೆಗೆ ಬಡಿದಿದೆ. ಸ್ವಲ್ಪದರಲ್ಲೇ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಒಂದು ಗಂಟೆಗಿಂತ ಅಧಿಕಕಾಲ ಇಂದಬೆಟ್ಟು

ಟವರ್ ಮೇಲೆ ಬಿದ್ದ ಮರ : ವ್ಯಕ್ತಿಗೆ ಗಾಯ Read More »

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ  ಪರಿಣಾಮ ಲಾರಿ ಪಲ್ಟಿಯಾದ ಘಟನೆ ಕನಕಮಜಲು ಗ್ರಾಮದ ಆನೆಗುಂಡಿ ತಿರುವಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಪಲ್ಟಿಯಾದ ಪರಿಣಾಮ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಮೈಸೂರಿನಿಂದ ಮಂಗಳೂರಿಗೆ ಟೊಮ್ಯಾಟೊ ಹೊತ್ತೊಯ್ಯತ್ತಿದ್ದ ಲಾರಿ ಆನೆಗುಂಡಿಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡ ಚಾಲಕನನ್ನು ಸ್ಥಳೀಯರು ಸೇರಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ ಎಂದು ತಿಳಿದುಬಂದಿದೆ. ಲಾರಿಯನ್ನು ಕ್ರೈನ್ ಮೂಲಕ ಮೇಲೆತ್ತಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ಅಕ್ರಮ ಕಲ್ಲು ಕೋರೆಗೆ ದಾಳಿ : ಬಿಜೆಪಿ ಕಾರ್ಯಕರ್ತನ ಬಂಧನ | ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ

ಬೆಳ್ತಂಗಡಿ: ಶನಿವಾರ ಮಧ್ಯರಾತ್ರಿ ವೇಳೆ ಅಕ್ರಮ ಕಲ್ಲಿನ ಕೋರೆಗೆ ದಾಳಿ ನಡೆಸಿದ ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನೆಪದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷರೊಬ್ಬರನ್ನು ಬಂಧಿಸಿದ ಘಟನೆ ಮೇಲಂತ ಬೆಟ್ಟು ಗ್ರಾಮದಲ್ಲಿ ನಡೆದಿದ್ದು, ಈ ಕುರಿತು ಶಾಸಕ ಹರೀಶ್ ಪೂಂಜ ಆಕ್ರೋಶ ವ್ಯಕ್ತಪಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಘಟನೆಯೂ ನಡೆಯಿತು. ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಶಾಸಕ ಹರೀಶ್ ಪೂಂಜಾ, ಬೆಳ್ತಂಗಡಿ ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತಿದ್ದು, ದಾಳಿ ನೆಪದಲ್ಲಿ ಯಾರದೋ ಒತ್ತಡಕ್ಕೆ ಮಧ್ಯರಾತ್ರಿ ಮನೆಗೆ

ಅಕ್ರಮ ಕಲ್ಲು ಕೋರೆಗೆ ದಾಳಿ : ಬಿಜೆಪಿ ಕಾರ್ಯಕರ್ತನ ಬಂಧನ | ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ Read More »

ಮಾರ್ಗದ ಬದಿ ಜೂಜಾಡುತ್ತಿದ್ದ 9 ಮಂದಿಯ ಬಂಧನ

ಮಂಗಳೂರು: ಮಾರ್ಗದ ಬದಿಯಲ್ಲೇ ಜೂಜಾಡುತ್ತಿದ್ದ 9 ಮಂದಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಝಾಕೀರ್ ಅಹಮ್ಮದ್, ವಿಲ್ಫ್ರೇಡ್ ಡಿಸೋಜಾ, ಹನೀಫ್, ಅನಿಲ್ ಕುಮಾರ್, ಮುರ್ತೋಝ ಸಾಬ್‍, ಶಶಿ ದೇವಾಡಿಗ, ಮೈಲಾರಪ್ಪ, ರಾಯ್ ಡಾಯಸ್, ಜೋಸ್ ರಾಬರ್ಟ್‍ ಬಂಧಿತರು. ಬೈಕಂಪಾಡಿ ರೈಲು ರಸ್ತೆಯ ಬಳಿ ಮಾರ್ಗದ ಬದಿಯಲ್ಲಿ ಜೂಜಾಡುತ್ತಿದ್ದರು ಎನ್ನಲಾಗಿದ್ದು, ಪೊಲೀಸರು ಬಂಧಿತರಿಂದ ಆಟಕ್ಕೆ ಬಳಸಿದ 11,265 ರೂ. ಹಾಗೂ ಇನ್ನಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮಾರ್ಗದ ಬದಿ ಜೂಜಾಡುತ್ತಿದ್ದ 9 ಮಂದಿಯ ಬಂಧನ Read More »

ಯೋಗಾಸನಾ ಪರಿವೃತ್ತ ಪದ್ಮಾಸನದಲ್ಲಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಗುತ್ತಿಗಾರಿನ ನಿಹಾನಿ ವಾಲ್ತಾಜೆ ಹೆಸರು ದಾಖಲೆ

ಸುಳ್ಯ: ಗುತ್ತಿಗಾರು ಅಮರ ಯೋಗ ತರಬೇತಿ ಕೇಂದ್ರದ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ ಪರಿವೃತ್ತ ಪದ್ಮಾಸನದಲ್ಲಿ 01 ಗಂಟೆ 08 ನಿಮಿಷ 10 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ. ನಿಹಾನಿ ವಾಲ್ತಾಜೆ ಗುತ್ತಿಗಾರು ಬೆಸ್ಟ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಪ್ರಶಾಂತ್ ವಾಲ್ತಾಜೆ ಮತ್ತು ಚೈತ್ರ ದಂಪತಿ ಪುತ್ರಿ. ಅವರು ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್

ಯೋಗಾಸನಾ ಪರಿವೃತ್ತ ಪದ್ಮಾಸನದಲ್ಲಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಗುತ್ತಿಗಾರಿನ ನಿಹಾನಿ ವಾಲ್ತಾಜೆ ಹೆಸರು ದಾಖಲೆ Read More »

ಮೇ19 (ನಾಳೆ) : ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, ಸಭಾ, ಸಾಂಸ್ಕೃತಿಕ ಕಾರ್ಯಕ್ರಮ

ಕಡಬ: ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ ಮೇ 19 ಭಾನುವಾರ ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಬೆಳಗ್ಗೆ 7 ಕ್ಕೆ ಪೂಜೆ ಆರಂಭ, 10 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. 10.30 ರಿಂದ ಸಭಾ ಕಾರ್ಯಕ್ರಮ, ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಶಿವಣ್ಣ ಗೌಡ ಕಕ್ವೆ

ಮೇ19 (ನಾಳೆ) : ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, ಸಭಾ, ಸಾಂಸ್ಕೃತಿಕ ಕಾರ್ಯಕ್ರಮ Read More »

error: Content is protected !!
Scroll to Top