ದಕ್ಷಿಣ ಕನ್ನಡ

ತೀವ್ರ ಮಳೆ ಹಿನ್ನಲೆಯಲ್ಲಿ ಸುರಕ್ಷಾ ಕ್ರಮ ಕೈಗೊಳ್ಳುವಂತೆ ಸಂಸದರ ಸೂಚನೆ | ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಂಸದರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ತೀವ್ರ ಮಳೆ ಬೀಳುತ್ತಿದ್ದು,  ಮುನ್ನೆಚ್ಚರಿಕೆ ಕ್ರಮಗಳ ಕುರಿತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಅವರು ಇಂದು ತಮ್ಮ ಕಛೇರಿಯಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾನ್ಯ ಸಂಸದರು ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಅಡೆ ತಡೆಯನ್ನು ನಿವಾರಣೆ ಸೇರಿದಂತೆ ಅಗತ್ಯ ಸುರಕ್ಷ ಕ್ರಮಗಳನ್ನು ಕೈಗೊಳ್ಳವ ನಿಟ್ಟಿನಲ್ಲಿ ಪಾಲಿಕೆಯ ಆಯುಕ್ತರು ಹಾಗೂ ಇಂಜಿನಿಯರೊಂದಿಗೆ ಚರ್ಚಿಸಿ ಅಗತ್ಯ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು. […]

ತೀವ್ರ ಮಳೆ ಹಿನ್ನಲೆಯಲ್ಲಿ ಸುರಕ್ಷಾ ಕ್ರಮ ಕೈಗೊಳ್ಳುವಂತೆ ಸಂಸದರ ಸೂಚನೆ | ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಂಸದರು Read More »

ಮನೆಗೆ ಗುಡ್ಡ ಜರಿದು ಮಹಿಳೆ ಮೃತ್ಯು | ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಬಂಟ್ವಾಳ : ಮನೆಗೆ ಗುಡ್ಡ ಜರಿದು ಮಹಿಳೆಯೋರ್ವಳು ಮೃತಪಟ್ಟ ಸಜಿಪ ಮುನ್ನೂರು ಗ್ರಾಮದ ನಂದಾವರದ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಭೇಟಿ ನೀಡಿದ್ದಾರೆ . ಅವಘಡ ಸಂಭವಿಸಿದ ಕುಟುಂಬಕ್ಕೆ ರೂ. ಐದು ಲಕ್ಷ ಪರಿಹಾರ ಮತ್ತು ಮನೆ ರಿಪೇರಿಗೆ 1.20 ಲಕ್ಷಪರಿಹಾರವನ್ನು ಸರಕಾರದಿಂದ ನೀಡುವ ಭರವಸೆ ನೀಡಿದರು. ಜೊತೆಗೆ ತಾಲೂಕಿನಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ತಾಲುಕಿನ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಹಶಿಲ್ದಾರ್ ಎಸ್.ವಿ.ಕೂಡಲಗಿ, ತಾ.ಪಂ. ಕಾರ್ಯ ನಿರ್ವಹಣಾ ಧಿಕಾರಿ

ಮನೆಗೆ ಗುಡ್ಡ ಜರಿದು ಮಹಿಳೆ ಮೃತ್ಯು | ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ Read More »

ಮನೆ ಮೇಲೆ ಜರಿದು ಬಿದ್ದ ಗುಡ್ಡ : ಮಹಿಳೆ ಮೃತ್ಯು , ಓರ್ವ ಮಹಿಳೆಯ ರಕ್ಷಣೆ

ಬಂಟ್ವಾಳ: ಇಂದು ಮಂಜಾನೆ ನಡೆದ ಘಟನೆಯೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಗುಡ್ಡ ಕುಸಿದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ಇಬ್ಬರು ಸಿಲುಕಿಕೊಂಡಿ, ಓರ್ವ ಮಹಿಳೆಯ ರಕ್ಷಣೆ ಮಾಡಿದರೂ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ಝರೀನಾ (49) ಮೃತಪಟ್ಟವರು.  ಸಫಾ ಅವರನ್ನು ರಕ್ಷಿಸಲಾಗಿದೆ. ಸ್ಥಳಕ್ಕೆ ಎನ್.ಡಿ.ಆರ್.ಎಫ್, ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸುರಿಯುವ ಮಳೆಯಲ್ಲೂ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಬೆಳಗ್ಗೆ 6 ಗಂಟೆಗೆ ಈ ಘಟನೆ ನಡೆದಿದೆ. ಸ್ಥಳದಲ್ಲಿ ಅಗ್ನಶಾಮಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಗಳು

ಮನೆ ಮೇಲೆ ಜರಿದು ಬಿದ್ದ ಗುಡ್ಡ : ಮಹಿಳೆ ಮೃತ್ಯು , ಓರ್ವ ಮಹಿಳೆಯ ರಕ್ಷಣೆ Read More »

ನಾಳೆಯೂ (ಜು.7) ದ.ಕ.ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ

ಮಂಗಳೂರು : ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಜು.7 ಶುಕ್ರವಾರವೂ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರಜೆ ಘೊಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೆಲವೊಂದು ತುರ್ತು ಕ್ರಮಗಳನ್ನು ಕೈಗೊಂಡಿದೆ.

ನಾಳೆಯೂ (ಜು.7) ದ.ಕ.ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ Read More »

ಕರಾವಳಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ | ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಆದೇಶ

ಮಂಗಳೂರು: ದ.ಕ., ಉಡುಪಿ ಹಾಗೂ ಉತ್ತರಕನ್ನಡ ಕರಾವಳಿ ಜಿಲ್ಲೆಗಳಲ್ಲಿ ಮಳೆಯಿಂದಾಗಿ ನಷ್ಟ ಸಂಭವಿಸಿದ್ದು, ತಕ್ಷಣ ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಉಸ್ತುವಾರಿ ಸಚಿವರು್ಗಳಾದ ದಿನೇಶ್ ಗುಂಡೂರಾವ್, ಮಂಕಾಳ ವೈದ್ಯ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್‍ ಗೆ ಸೂಚನೆ ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದು ಪರಿಹಾರ ಕಾರ್ಯಗಳಿಗೆ ಅಧಿಕಾರಿಗಳನ್ನು ಸಜ್ಜಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ | ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಆದೇಶ Read More »

ಕೆರೆಗೆ ಬಿದ್ದು ವ್ಯಕ್ತಿ ಸಾವು

ಮೂಡಬಿದ್ರೆ : ಮೂಡುಬಿದಿರೆ: ನೆಲ್ಲಿಕಾರು ಎಂಬಲ್ಲಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ಮಾಂಟ್ರಾಡಿ ನಿವಾಸಿ ನಿರಂಜನ್ (42) ಮೃತಪಟ್ಡವರು. ಮೃತರು ವಿಕಲಚೇತನರಾಗಿದ್ದು, ಅವಿವಾಹಿತರಾಗಿದ್ದಾರೆ.

ಕೆರೆಗೆ ಬಿದ್ದು ವ್ಯಕ್ತಿ ಸಾವು Read More »

ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ

ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ಜು.7 ರಿಂದ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಭಾರೀ ಮಳೆ ಸುರಿಯುತ್ತಿದ್ದು, ಕಲ್ಲುಗಳಿಂದ ಆವೃತವಾಗಿರುವ ಈ ಸ್ಥಳ ಜಾರುವ ಪ್ರದೇಶವಾಗಿದ್ದು, ಚಾರಣಿಗರಿಗೆ ಸಮಸ್ಯೆ ಉಂಟಾಗುವ ಮೊದಲೇ ಈ ಆದೇಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ ಗಡಾಯಿಕಲ್ಲಿಗೆ ಜು.7ರಿಂದ ಮುಂದಿನ ಆದೇಶದ ತನಕ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ವನ್ಯ ಜೀವಿ ವಿಭಾಗದ ಬೆಳ್ತಂಗಡಿ ಆರ್ ಎಫ್ ಒ ಸ್ವಾತಿ ತಿಳಿಸಿದ್ದಾರೆ.

ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ Read More »

ದ.ಕ.-ಉಡುಪಿಯಲ್ಲಿ ಮುಂದುವರಿದ ಮಳೆ | ಮಳೆಗೆ ಸಂಬಂಧಿಸಿ ಎರಡು ಸಾವು ಪ್ರಕರಣ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ಗುರುವಾರ ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿಯಲ್ಲಿ ಬುಧವಾರವೂ ಮುಂದುವರೆದ ಮಹಾ ಮಳೆಗೆ ಸಂಬಂಧಿಸಿದ ಎರಡು ಸಾವುಗಳು ದಾಖಲಾಗಿವೆ. ಈ ಮೂಲಕ ಕರಾವಳಿ ಕರ್ನಾಟಕದಲ್ಲಿ ಮಹಾ ಮಳೆಗೆ ಒಟ್ಟು ನಾಲ್ಕು ಬಲಿಯಾಗಿವೆ. ಮಳೆ ಕೊರತೆ ಅನುಭವಿಸುತ್ತಿದ್ದ ಬಾಕಿ ತೀರಿಸಲೋ ಏನೊ ಎಂಬಂತೆ ಭಾರೀ ಮಳೆಯಾಗುತ್ತಿದೆ. ನಿನ್ನೆ ಪೇಂಟಿಂಗ್ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿಯವರು ತೋಡು ದಾಟುತ್ತಿರುವಾಗ ಕಾಲು ಜಾರಿ

ದ.ಕ.-ಉಡುಪಿಯಲ್ಲಿ ಮುಂದುವರಿದ ಮಳೆ | ಮಳೆಗೆ ಸಂಬಂಧಿಸಿ ಎರಡು ಸಾವು ಪ್ರಕರಣ ದಾಖಲು Read More »

ಜು.6 : ದ.ಕ.ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ

ಮಂಗಳೂರು : ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಜು.6 ಗುರುವಾರವೂ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೆಲವೊಂದು ತುರ್ತು ಕ್ರಮಗಳನ್ನು ಕೈಗೊಂಡಿದೆ. ಪ್ರಾಕೃತಿಕ ವಿಕೋಪದಿಂದ ಉಂಟಾಗುವ ಯಾವುದೇ ಸಮಸ್ಯೆಗಳಿಗೆ ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ತುರ್ತು ಸೇವೆಗೆ ಟೋಲ್ ಫ್ರೀ ನಂ 24+7 ಕಂಟ್ರೋಲ್

ಜು.6 : ದ.ಕ.ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ Read More »

ಭಾರೀ ಗಾಳಿ ಮಳೆಗೆ ಮುರಿದು ಬಿದ್ದ ಬೃಹತ್ ಗಾತ್ರದ ಜಾಹೀರಾತು ಫಲಕ |ಜಖಂಗೊಂಡ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಪರಿಣಾಮ ಭಾರಿ ಗಾಳಿ-ಮಳೆಗೆ ಬೃಹದಾದ ಜಾಹಿರಾತು ಫಲಕ ಬಿದ್ದು ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಜಖಂ ಆಗಿರುವ ಘಟನೆ ಮಂಗಳೂರು ಬಿಕರ್ನಕಟ್ಟೆಯಲ್ಲಿ ನಡೆದಿದೆ. ಕಮರ್ಷಿಯಲ್ ಬಿಲ್ಡಿಂಗ್ ಮೇಲೆ ಜಾಹಿರಾತು ಫಲಕ ಹಾಕಲಾಗಿತ್ತು. ಜೋರಾಗಿ ಬೀಸಿದ ಗಾಳಿಗೆ ಫಲಕ ಕಟ್ಟಡದ ಕೆಳಭಾಗಕ್ಕೆ ಬಿದ್ದಿದೆ. ಕಬ್ಬಿಣದ ಸರಳು ಹೊಂದಿರುವ ಫಲಕ ಕೆಳಗೆ ಹಾದು ಹೋದ ವಿದ್ಯುತ್ ತಂತಿ ಮೇಲೆ ಬಿದ್ದಿದ್ದು, ಭಾರ ತಾಳಲಾಗದೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಕಂಬದ

ಭಾರೀ ಗಾಳಿ ಮಳೆಗೆ ಮುರಿದು ಬಿದ್ದ ಬೃಹತ್ ಗಾತ್ರದ ಜಾಹೀರಾತು ಫಲಕ |ಜಖಂಗೊಂಡ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು Read More »

error: Content is protected !!
Scroll to Top