ದಕ್ಷಿಣ ಕನ್ನಡ

ಜಿಲ್ಲಾಧಿಕಾರಿಯಿಂದ ರೈತರಿಗೆ ಸಿಹಿಸುದ್ದಿ : ಕೋವಿ ಠೇವಣಿಯಿಂದ ವಿನಾಯಿತಿ

ಮಂಗಳೂರು : ಚುನಾವಣೆ ಸಮಯದಲ್ಲಿ ರೈತರು ಸೇರಿದಂತೆ ಎಲ್ಲರೂ ತಮ್ಮ ಪರವಾನಗಿಯುಳ್ಳ ಕೋವಿ/ಆಯುಧಗಳನ್ನು ಸಮೀಪದ ಠಾಣೆಯಲ್ಲಿ ಠೇವಣಿ ಇಡಬೇಕಾಗುತ್ತದೆ. ಇದೀಗ ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದೆಲ್ಲೆಡೆ ಈ ಆದೇಶ ಜಾರಿಯಲ್ಲಿದೆ. ಆದರೆ, ದಕ್ಷಿಣಕನ್ನಡ ಜಿಲ್ಲೆಯ ರೈತರಿಗೆ ಮಾತ್ರ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಏ.3 ರಂದು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ರೈತರು ಠೇವಣಿ ಇಡುವ ವಿಚಾರದಲ್ಲಿ ಕೆಲ ಸಡಿಲಿಕೆಗಳನ್ನು ಮಾಡಿದ್ದಾರೆ. ಚುನಾವಣೆ ಬಂದಾಗ ಸಾರ್ವಜನಿಕ ಶಾಂತಿ ಮತ್ತು ಶಿಸ್ತುಪಾಲಾನ ಮುಂಜಾಗ್ರತ ಕ್ರಮವಾಗಿ ಶಸ್ತ್ರಾಸ್ತ್ರ ಠೇವಣಿಗೆ ಆದೇಶಿಸಲಾಗುತ್ತದೆ. ರಾಜ್ಯದಲ್ಲಿ […]

ಜಿಲ್ಲಾಧಿಕಾರಿಯಿಂದ ರೈತರಿಗೆ ಸಿಹಿಸುದ್ದಿ : ಕೋವಿ ಠೇವಣಿಯಿಂದ ವಿನಾಯಿತಿ Read More »

ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚಿಸಿದ ಆರೋಪಿಯ ಬಂಧನ

ಮಂಗಳೂರು : ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ಹೆಸರಿನಲ್ಲಿ ಮೆಡಿಕಲ್‌ ಸೀಟು ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಪ್ರಕರಣದಲ್ಲಿ ನೋಯ್ಡಾ ಮೂಲದ ಆರೋಪಿಯನ್ನು ಮಹಾರಾಷ್ಟ್ರದ ಪೊಲೀಸರು ಮುಂಬೈನ ನೆರೋಲ್ ನಲ್ಲಿ ಏ. 2 ರಂದು ಬಂಧಿಸಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.ಬಂಧಿತನನ್ನು ಇಫ್ತಿಕರ್ ಅಹ್ಮದ್ (31) ಉತ್ತರ ಪ್ರದೇಶದ ನೋಯ್ಡಾ ನಿವಾಸಿಯೆಂದು ಗುರುತಿಸಲಾಗಿದೆ. ಬೀದರ್‌ ಮೂಲದ ವ್ಯಕ್ತಿಯೋರ್ವರು, ತಮ್ಮಿಂದ 22.5 ಲಕ್ಷ ರೂ. ಪಡೆದು ಖಾಸಗಿ ಮೆಡಿಕಲ್‌ ಕಾಲೇಜಿನಲ್ಲಿ ಸೀಟು ದೊರಕಿಸುವುದಾಗಿ ನಂಬಿಸಿ ಇಫ್ತಿಕರ್ ಅಹ್ಮದ್ ಹಾಗೂ ಮತ್ತಿತರರು

ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚಿಸಿದ ಆರೋಪಿಯ ಬಂಧನ Read More »

ಮನೆ ಯಜಮಾನನಿಗೆ ಹಲ್ಲೆ : ಗೂಗಲ್ ಪೇ ಮೂಲಕ ಹಣ ವರ್ಗಾವಣೆ

ಬೆಳ್ತಂಗಡಿ : ಪಡಂಗಡಿಯಲ್ಲಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕದ್ದು ಪರಾರಿಯಾದ ಘಟನೆ ಮಾ. 30 ರಂದು ಸಂಭವಿಸಿದೆ.ಪಡಂಗಡಿ ಗ್ರಾಮದ ಜಾನೆಬೈಲು ಪುತ್ಯೆ ಮನೆ ಎಂಬಲ್ಲಿ ಮನೆ ಯಜಮಾನ ಜುವಾಮ್‌ ಗೋವಿಯಸ್‌ (64) ಅವರಿಗೆ ಹಲ್ಲೆ ನಡೆಸಿದ್ದಾರೆ. ಪರಿಚಿತರಾದ ರಿಯಾಜ್‌ ಮತ್ತು ಫೈಝಲ್‌ ಎಂಬವರೇ ಹಣ ಎಗರಿಸಿದ ಆರೋಪಿಗಳು. ಜುವಾಮ್‌ ಗೋವಿಯಸ್‌ ಅವರು ತನ್ನ ಮಗನೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಮನೆಯಲ್ಲಿ ಈ ಹಿಂದೆ ರಬ್ಬರ್‌ ಟ್ಯಾಪಿಂಗ್‌ ಮಾಡುತ್ತಿದ್ದ

ಮನೆ ಯಜಮಾನನಿಗೆ ಹಲ್ಲೆ : ಗೂಗಲ್ ಪೇ ಮೂಲಕ ಹಣ ವರ್ಗಾವಣೆ Read More »

ಯಕ್ಷಧ್ರುವ ಪಟ್ಲ ಟ್ರಸ್ಟ್ ವತಿಯಿಂದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ನೆರವು

ಮಂಗಳೂರು : ಕಾಣಿಯೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಮಾ. 30 ರಂದು ದೈವಾರಾಧ‌ನೆ ನಡೆಯುತ್ತಿದ್ದ ಸಂದರ್ಭ, ದೈವ ನರ್ತಕರಾದ ಕಾಂತು ಅಜಿಲ ಸ್ಥಳದಲ್ಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದರು. ಅವರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಒಂದು ಲಕ್ಷ ರೂ. ಆರ್ಥಿಕ ನೆರವನ್ನು ಏ. 2 ರಂದು ಘೋಷಣೆ ಮಾಡಿದೆ.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ

ಯಕ್ಷಧ್ರುವ ಪಟ್ಲ ಟ್ರಸ್ಟ್ ವತಿಯಿಂದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ನೆರವು Read More »

ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ

ಬೀಡಿ, ಸಿಗರೇಟ್, ಪಾನ್ ಮಸಾಲ ಪತ್ತೆ ಮಂಗಳೂರು : ಅಕ್ರಮ ಚಟುವಟಿಕೆ ಮಾಹಿತಿ ಹಿನ್ನೆಲೆ ಮಂಗಳೂರು ನಗರದ ಕೊಡಿಯಾಲಬೈಲ್​​ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ಎ. 2 ರಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ವೇಳೆ ಬೀಡಿ, ಸಿಗರೇಟ್​​, ಪಾನ್​​ ಮಸಾಲ, ಗುಟ್ಕಾ ಪತ್ತೆಯಾಗಿದೆ. ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ದಾಳಿ ನಡೆಸಿದ ಸುಮಾರು 300 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸತತ 1 ಗಂಟೆ 15 ನಿಮಿಷಗಳ ಕಾಲ ಕಾರಾಗೃಹ ತಪಾಸಣೆ ನಡೆಸಿದ್ದಾರೆ.

ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ Read More »

ಆಯಿಲ್‌ ಫಿಲ್ಲಿಂಗ್ ವೇಳೆ ಪೈಪ್ ಸ್ಪೋಟ : ನಾಲ್ವರಿಗೆ ಗಾಯ

ಮಂಗಳೂರು : ಬಿಟುಮೆನ್ ಆಯಿಲ್ ಫಿಲ್ಲಿಂಗ್ ವೇಳೆ ಪೈಪ್‌ ಸ್ಪೋಟಗೊಂಡು ನಾಲ್ವರು ಕಾರ್ಮಿಕರು ಗಾಯಗೊಂಡ ಘಟನೆ ಮಂಗಳೂರಿನಿಂದ ವರದಿಯಾಗಿದೆ. ಮಂಗಳೂರಿನ ನವಬಂದರಿನಲ್ಲಿ ನಡೆದ ಈ ದುರಂತ ಹಡಗಿನಿಂದ ನೇರವಾಗಿ ಟ್ಯಾಂಕರ್‌ಗೆ ಬಿಟುಮೆನ್ ಆಯಿಲ್ ವರ್ಗಾಯಿಸುವಾಗ ಸಂಭವಿಸಿದೆ. ಆದರೆ ಶಿಪ್‌ನಲ್ಲಿ ಬಂದ ಬಿಟುಮೆನ್ ಆಯಿಲ್ ಅನ್ನು ಟ್ಯಾಂಕಿಗೆ ಮೊದಲು ವರ್ಗಾಯಿಸುವುದು ನಿಯಮ. ಆಯಿಲ್‌ ಅನ್ನು ಟ್ಯಾಂಕರ್‌ಗೆ ವರ್ಗಾಯಿಸುವ ವೇಳೆ ಪೈಪ್ ಸ್ಪೋಟಗೊಂಡು ಆಯಿಲ್ ಕಾರ್ಮಿಕರ ಮೈ ಮೇಲೆ ಬಿದ್ದಿದ್ದು ತಕ್ಷಣವೇ ಅವರನ್ನು ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಲ್ಲಿ

ಆಯಿಲ್‌ ಫಿಲ್ಲಿಂಗ್ ವೇಳೆ ಪೈಪ್ ಸ್ಪೋಟ : ನಾಲ್ವರಿಗೆ ಗಾಯ Read More »

ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ಚುನಾವಣಾ ಗೆಲುವಿಗಾಗಿ ಸ್ಪರ್ಧೆ

ಗಾದಿ ತೋರಿಸಿ ಆಸೆ ಜೀವಂತವಾಗಿರಿಸಿ ಗೆಲ್ಲುವ ತಂತ್ರ ಪುತ್ತೂರು : ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ರಾಜಕೀಯ ಚಟುವಟಿಕೆಗಳು ಇನ್ನಷ್ಟು ಬಿರುಸು ಪಡೆದುಕೊಂಡಿವೆ. ಮೂರು ಪ್ರಮುಖ ಪಕ್ಷಗಳು ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಆದರೆ ಚುನಾವಣಾ ಪ್ರಕ್ರಿಯೆ ನಿರ್ಣಾಯಕ ಹಂತಕ್ಕೆ ಬಂದು ತಲುಪಿದ್ದರೂ ಮತದಾರರಿಗೆ ಈ ಸಲ ಮುಖ್ಯಮಂತ್ರಿ ಯಾರಾಗಬಹುದು ಎಂಬ ಒಂದು ಸಣ್ಣ ಅಂದಾಜು ಕೂಡ ಸಿಗುತ್ತಿಲ್ಲ. ಪಕ್ಷಗಳಲ್ಲೇ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂಬ ನಿರ್ಧಾರ ಇನ್ನೂ ಆಗಿಲ್ಲ. ಜೆಡಿಎಸ್‌ನಲ್ಲಿ ಮಾತ್ರ ಈ ಗೊಂದಲ ಇಲ್ಲ. ಏಕೆಂದರೆ

ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ಚುನಾವಣಾ ಗೆಲುವಿಗಾಗಿ ಸ್ಪರ್ಧೆ Read More »

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಏ. 1 ರಂದು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ವಿಟ್ಲದ ಕನ್ಯಾನ ಗ್ರಾಮದ ಬೈರಿಕಟ್ಟೆ ಆಂಗ್ರಿ ನಿವಾಸಿ ಮಹಮ್ಮದ್ ತೌಪೀರ್ ಎಂಬಾತನೇ ಬಂಧಿತ ಆರೋಪಿ. ಆರೋಪಿಯನ್ನು ಬೆಂಗಳೂರಿನ ಅತ್ತಿಬೆಲೆ ಎಂಬಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡ್ನೂರು ಗ್ರಾಮದ ಎಲ್ಕಾಜೆ ಎಂಬಲ್ಲಿ ಮಾ.31 ರಂದು ಸಂಭವಿಸಿದೆ. ಯಮುನಾ(72) ಎಂಬುವವರೇ ಆತ್ಮಹತ್ಯೆಗೆ ಶರಣಾದವರು. ಇವರು ರಕ್ತದ ಒತ್ತಡ ಮತ್ತು ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಪುತ್ತೂರಿನ ವೈದ್ಯರಲ್ಲಿ ಔಷಧಿ ಮಾಡಿಸಿದರೂ ಗುಣಮುಖವಾಗದೇ ಇದ್ದಾಗ ಜೀವನದಲ್ಲಿ ಜಿಗುಪ್ಸೆಗೊಂಡು ಶುಕ್ರವಾರದಂದು ಮನೆಯ ಅಡುಗೆ ಕೋಣೆಯ ಛಾವಣಿಗೆ ಸೀರೆಯನ್ನು ಕುಣಿಕೆ ಮಾಡಿ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಎ. 2 ರಂದು ಲೋಕಾರ್ಪಣೆ

ಪುತ್ತೂರು : ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ನಗರದ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ಜಿ.ಎಲ್‌. ಪ್ರಾಪರ್ಟಿಸ್‌ ಪ್ರವರ್ತಿತ ಜಿ.ಎಲ್‌. ಒನ್‌ ಶಾಪಿಂಗ್‌ ಮಾಲ್‌ ಎ. 2ರಂದು ಲೋರ್ಕಾಪಣೆಗೊಳ್ಳಲಿದ್ದು, ಜಿಲ್ಲಾ ಕೇಂದ್ರದ ನಿರೀಕ್ಷೆಯಲ್ಲಿರುವ ಪುತ್ತೂರಿಗೆ ಇದು ಮಹತ್ವದ ಕೊಡುಗೆಯಾಗಿದೆ. ಏನಿದು ಜಿ.ಎಲ್‌. ಒನ್‌ ಮಾಲ್‌?ಆಭರಣ ಸೇರಿದಂತೆ ವ್ಯವಹಾರ ಕ್ಷೇತ್ರದಲ್ಲಿ ಗುಣಮಟ್ಟ, ವಿಶ್ವಾರ್ಹತೆಯೊಂದಿಗೆ ಜಿ.ಎಲ್‌. ತನ್ನದೇ ಆದ ಬ್ರ್ಯಾಂಡ್‌ ಸೃಷ್ಟಿಸಿದೆ. ಈ ಸಂಸ್ಥೆಯ ಹೊಸ ಕೊಡುಗೆ ವಿನೂತನ ಸೌಲಭ್ಯಗಳೊಂದಿಗೆ ಗಮನ ಸೆಳೆಯುತ್ತಿದೆ. ಈ ಮಾಲ್‌ನಲ್ಲಿ 5 ಅಂತಸ್ತುಗಳಿವೆ. ಬೇಸ್‌ಮೆಂಟ್‌ನಲ್ಲಿ ವಿಶಾಲ ಪಾರ್ಕಿಂಗ್‌, ನೆಲ

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಎ. 2 ರಂದು ಲೋಕಾರ್ಪಣೆ Read More »

error: Content is protected !!
Scroll to Top