ಅಂಗನವಾಡಿಗೆ ವಿತರಿಸಲಾದ ಮೊಟ್ಟೆಯಲ್ಲಿ ಕೋಳಿ ಮರಿ | ಚರ್ಚೆಗೆ ಕಾರಣವಾದ ಘಟನೆ | ಪಂಚಾಯಿತಿ ಸಭೆಯಲ್ಲಿ ಚರ್ಚಿಸಲು ಗ್ರಾಮಸ್ಥರ ನಿರ್ಧಾರ
ಮಂಗಳೂರು: ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರ ಸಿಗಬೇಕೆಂದು ಸರ್ಕಾರ ಆರಂಭಿಸಿರುವ ಈ ಯೋಜನೆ ಆಘಾತಕಾರಿಯಾಗಿ ಪರಿಣಮಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅರಸಿನಮಕ್ಕಿ ಎಂಬಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದ್ದು, ರೆಖ್ಯ ಗ್ರಾಮದ ಎಂಜಿರ ಕಟ್ಟೆ ಎಂಬಲ್ಲಿ ಅಂಗನವಾಡಿ ಕೇಂದ್ರದಿಂದ ವಿತರಣೆ ಮಾಡಲಾಗಿದ್ದ ಮೊಟ್ಟೆಯನ್ನು ಬೇಯಿಸಿದಾಗ ಅದರ ಒಳಗೆ ರಕ್ತ ಹಾಗೂ ಕೋಳಿ ಮರಿ ಪತ್ತೆಯಾಗಿತ್ತು. ಕೋಳಿ ಮರಿ ಕೂಡ ಬೆಂದು ಹೋಗಿದ್ದು ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ. ಈ ವಿಚಾರ ಗ್ರಾಮಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದು ಅಂಗನವಾಡಿ ಕೇಂದ್ರದಿಂದ […]