ದಕ್ಷಿಣ ಕನ್ನಡ

ಮನುಶ್ರೀ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿ ಆಯ್ಕೆ

ಬೆಳ್ತಂಗಡಿ: 2024ರ ಮನುಶ್ರೀ ಕನ್ನಡ ಸಾಹಿತ್ಯ ಪರಿಷತ್ತಿನ  ಮನೋಹರಿ ಪಾರ್ಥಸಾರಥಿ ‘ಮನುಶ್ರೀ ’ ದತ್ತಿ ಪ್ರಶಸ್ತಿಗೆ  ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿಯವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮನೋಹರಿ ಪಾರ್ಥಸಾರಥಿಯವರು ಈ ದತ್ತಿಯನ್ನು ಸ್ಥಾಪಿಸಿದ್ದು ಕನ್ನಡ ಸಾಹಿತ್ಯದಲ್ಲಿ  ಮಹತ್ವದ ಸೇವೆ ಸಲ್ಲಿಸಿದ ಬರಹಗಾರರಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ. ಬೆಳ್ತಂಗಡಿಯ ತೆಂಕಕಾರಂದೂರಿನವರಾದ ಪ.ರಾಮಕೃಷ್ಣ ಶಾಸ್ತ್ರಿಗಳು ಕನ್ನಡ ಸಾಹಿತ್ಯ ಕಂಡ ವಿಶಿಷ್ಟ ಲೇಖಕರು. ವೃತ್ತಿಯಲ್ಲಿ ಕೃಷಿಕರಾದ ಇವರು ಪ್ರವೃತ್ತಿಯಲ್ಲಿ ಸಾಹಿತ್ಯ ಕೃಷಿಕರು. 1964ರಿಂದ ಹಿಡಿದು ಇಂದಿನವರೆಗೂ ದಣಿವರಿಯದೆ  ನಿರಂತರವಾಗಿ […]

ಮನುಶ್ರೀ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿ ಆಯ್ಕೆ Read More »

ಮೊಬೈಲ್ ರಿಚಾರ್ಚ್‍ ಗೆ ಬಂದ ಯುವತಿಯ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕ | ಪೊಲೀಸರಿಂದ ವಿಚಾರಣೆ | ಜಮಾಯಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

ಸುಳ್ಯ: ಏರ್ ಟೆಲ್ ಶೋ ರೋಂ ಗೆ ಕರೆನ್ಸಿ ರಿಚಾರ್ಚ್ ಗೆಂದು ಬಂದ ಯುವತಿಯೊಬ್ಬಳ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕನ ಮೇಲೆ ವಿರುದ್ಧ ಯುವತಿಯ ಮನೆಯವರು ಪೋಲಿಸರಿಗೆ ದೂರು ನೀಡಿದ ಘಟನೆ ಇಂದು ನಡೆದಿದೆ. ಗಾಂಧಿನಗರದಲ್ಲಿರುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಹಿಂದೂ ಯುವತಿಯೊಬ್ಬಳು ಮೊಬೈಲ್ ರಿಚಾರ್ಜ್ ಗೆ ಬಂದಾಗ ಯುವತಿಯನ್ನು ಕುಳಿತುಕೊಳ್ಳುವಂತೆ ಹೇಳಿದ್ದಾನೆ. ಈ ಸಂದರ್ಭ ಯುವಕ ಯುವತಿಗೆ ಅರಿವಿಗೆ ಬಾರದಂತೆ ಫೋಟೋ ಕ್ಲಿಕ್ಕಿಸಿರುತ್ತಾನೆ. ಗಮನಿಸಿದ ಯುವತಿ ಆಕ್ಷೇಪಿಸಿ ಆತನ ಕೈಯಿಂದ ಮೊಬೈಲ್ ಕಸಿದುಕೊಂಡು ಫೋಟೋ ಕ್ಲಿಕ್ಕಿಸಿದ್ದನ್ನು

ಮೊಬೈಲ್ ರಿಚಾರ್ಚ್‍ ಗೆ ಬಂದ ಯುವತಿಯ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕ | ಪೊಲೀಸರಿಂದ ವಿಚಾರಣೆ | ಜಮಾಯಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು Read More »

ರಾಜಕಾರಣವನ್ನು ಪರಶುರಾಮನ ಮೇಲೆ ತೋರಿಸಬೇಡಿ l ಹಿಂದೂ ಹಿತರಕ್ಷಣೆ ಸಮಿತಿ ಸಂಚಾಲಕ ರತ್ನಾಕರ‌ ಅಮೀನ್ ಎಚ್ಚರಿಕೆ

ಕಾರ್ಕಳ : ಕರಾವಳಿಯು ಪರಶುರಾಮನ ಸೃಷ್ಟಿ, ಆದರೂ ಇಲ್ಲಿಯವರೆಗೆ ಕರಾವಳಿಯ ಯಾವುದೇ ಭಾಗದಲ್ಲೂ ಪರಶುರಾಮನ ಬಗೆಗಿನ ಇತಿಹಾಸವನ್ನು ಸಾರ್ವಜನಿಕರಿಗೆ ತೋರಿಸುವ ಯಾವುದೇ ಕಾರ್ಯಗಳು ಆಗಿರುವುದಿಲ್ಲ. ಈ ನಿಟ್ಟಿನಲ್ಲಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾ‌ರ್ ಅವರ ವಿಶಿಷ್ಟ ಕಲ್ಪನೆಯೇ ಬೈಲೂರಿನಲ್ಲಿ ನಿರ್ಮಾಣಗೊಂಡಿರುವ ಪರಶುರಾಮ ಥೀಮ್ ಪಾರ್ಕ್. ಪ್ರವಾಸೋದ್ಯಮ ದೃಷ್ಟಿಕೋನದಲ್ಲಿ ಅಭಿವೃದ್ಧಿಪಡಿಸಿದ ಥೀಮ್ ಪಾರ್ಕ್‌ಗೆ ಕಾಂಗ್ರೆಸ್ ನಾಯಕ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅಡ್ಡಿಪಡಿಸುತ್ತಿರುವುದನ್ನು ಹಿಂದೂ ಹಿತರಕ್ಷಣಾ ಸಮಿತಿ ಖಡಾಖಂಡಿತವಾಗಿ ಖಂಡಿಸುತ್ತದೆ ಎಂದು ಸಮಿತಿಯ ಸಂಚಾಲಕ ರತ್ನಾಕ‌ರ್ ಅಮೀನ್

ರಾಜಕಾರಣವನ್ನು ಪರಶುರಾಮನ ಮೇಲೆ ತೋರಿಸಬೇಡಿ l ಹಿಂದೂ ಹಿತರಕ್ಷಣೆ ಸಮಿತಿ ಸಂಚಾಲಕ ರತ್ನಾಕರ‌ ಅಮೀನ್ ಎಚ್ಚರಿಕೆ Read More »

ವಿದ್ಯುತ್ ತಂತಿಗೆ ತಗುಲಿ ನವಿಲು ಸಾವು

ವಿಟ್ಲ: ವಿದ್ಯುತ್‌ ತಂತಿಗೆ ಸಿಲುಕಿ ನವಿಲೊಂದು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಅಲ್ಲಿನ ಆಟೋ ರಿಕ್ಷಾ ಚಾಲಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಮೃತ ನವಿಲನ್ನು ಸ್ಥಳದಿಂದ ಅನಂತಾಡಿ ಆರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಹಸ್ತಾಂತರ ಮಾಡಿದ್ದಾರೆ.

ವಿದ್ಯುತ್ ತಂತಿಗೆ ತಗುಲಿ ನವಿಲು ಸಾವು Read More »

ಕೆದಿಲ ಶೌರ್ಯ ಸದಸ್ಯರಿಂದ ಚೆಯರ್ ಹಸ್ತಾಂತರ

ಕೆದಿಲ: ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಶ್ರೀ ಕ್ಷೇತ್ರ  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆದಿಲ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸೇವಾ ಕೇಂದ್ರಕ್ಕೆ ಚೆಯರ್ ಕೊಡುಗೆಯಾಗಿ ನೀಡಿದರು. ಸೇವಾ ಕೇಂದ್ರಕ್ಕೆ 16 ಚೆಯರ್ ಗಳನ್ನು ಹಸ್ತಾಂತರಿಸಲಾಯಿತು. ಘಟಕದ ಸದಸ್ಯರಾದ ಗಿರೀಶ, ಜಗದೀಶ, ಶೀನಪ್ಪ, ವೆಂಕಪ್ಪ, ಪುರಂದರ ಸೇರಿ ತಮ್ಮ ಸ್ವಂತ ಖರ್ಚಿನಲ್ಲಿ ಖರೀದಿ ಮಾಡಿ ಸಿಎಸ್‍ ಸಿ ಸೇವಾದಾರೆ ಶ್ರೇಯಾ, ಸೇವಾಪ್ರತಿನಿಧಿ ಜಯಂತಿ ಅವರಿಗೆ ಹಸ್ತಾಂತರಿಸಿದರು

ಕೆದಿಲ ಶೌರ್ಯ ಸದಸ್ಯರಿಂದ ಚೆಯರ್ ಹಸ್ತಾಂತರ Read More »

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ | ಅಗಲಿದ ಕಲಾವಿದರಿಗೆ ನುಡಿನಮನ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷಾಚರಣೆಯ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ದ್ಯೂತ  ಪ್ರಕರಣ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಬಿ. ಸುರೇಶ್ ರಾವ್, ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ, ಅರ್ಥಧಾರಿಗಳಾಗಿ ಜಯರಾಮ ಬಲ್ಯ ( ಕೌರವ) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಕರ್ಣ )ಸತೀಶ್ ಆಚಾರ್ಯ ಮಾಣಿ (ಶಕುನಿ) ಶ್ರೀಮತಿ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ | ಅಗಲಿದ ಕಲಾವಿದರಿಗೆ ನುಡಿನಮನ Read More »

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ದುರಂತ ಘಟನೆ ಭಾನುವಾರ ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾನ್ ಅವರ ಪುತ್ರಿ ಮರಿಯಂ ನಾಶಿಯಾ (14) ಮೃತ ಬಾಲಕಿಯರು. ಬಂಟ್ವಾಳ ತಾಲೂಕಿನ ನಾವೂರು ಸಮೀಪದ ಮೈಂದಾಳದಲ್ಲಿ ಸಂಬಂಧಿಕರ ಮನೆಗೆ ಬಂದಿದ್ದರು. ಮನೆಯವರೊಂದಿಗೆ ಸಂಜೆ ಮಕ್ಕಳು ಸ್ಥಳೀಯ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತರಳಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ಮಕ್ಕಳು ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು Read More »

ಆತ್ಮಹತ್ಯೆಗೆ ಶರಣಾದ ಅರ್ಚಕ

ಬೆಳ್ತಂಗಡಿ : ಬೆಳ್ತಂಗಡಿ ದೇವಸ್ಥಾನದ ಅರ್ಚಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸವಣಾಲು ಗ್ರಾಮದಲ್ಲಿ ಮೇ 4 ರಂದು ನಡೆದಿದೆ. ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ಶಿರಸಿ ಮೂಲದ ವಿಜಯ್‌ ಹೆಗಡೆ (33) ಆತ್ಮಹತ್ಯೆಗೆ ಶರಣಾದವರು. ವಿಜಯ್‌ ಹೆಗಡೆ ಅವರು ದೇವಸ್ಥಾನದ ಹಿಂಭಾಗದಲ್ಲಿ ತಾನು ವಾಸವಿಗಿದ್ದ ಮನೆಯ ಹಿಂಬದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸುಮಾರು 10 ವರ್ಷಗಳಿಂದ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಶನಿವಾರ ಮುಂಜಾನೆ ಭಕ್ತರು

ಆತ್ಮಹತ್ಯೆಗೆ ಶರಣಾದ ಅರ್ಚಕ Read More »

ಕುಸಿದು ಬಿದ್ದು ವ್ಯಕ್ತಿ ಮೃತ್ಯು !

ಧರ್ಮಸ್ಥಳ: ಕುಳಿತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೇ.04ರಂದು ಧರ್ಮಸ್ಥಳದಲ್ಲಿ ಸಂಭವಿಸಿದೆ. ಸುಮಾರು 38 ವರ್ಷದ ವ್ಯಕ್ತಿ ಮಧ್ಯಾಹ್ನ ಧರ್ಮಸ್ಥಳ ಸಮೀಪ, ನೀರಿನ ಬಾಟಲ್ ಹಿಡಿದು ಕುಳಿತ್ತಿದ್ದು, ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ವೇಣೂರು ಹಾಗೂ ಧರ್ಮಸ್ಥಳ ಶೌರ್ಯ ತಂಡದ ಸಹಕಾರದಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕುಸಿದು ಬಿದ್ದು ವ್ಯಕ್ತಿ ಮೃತ್ಯು ! Read More »

ಹೃದಯಾಘಾತದಿಂತ ಆಟೋ ಚಾಲಕ ಅಶ್ರಫ್ ನಿಧನ

ವಿಟ್ಲ: ಉರಿಮಜಲು ನಿವಾಸಿ, ಆಟೋ ಚಾಲಕ ಅಶ್ರಫ್ (38) ಮೇ 3ರಂದು ಹೃದಯಾಘಾತದಿಂದ ನಿಧನರಾದರು. ಹಲವು ವರ್ಷಗಳಿಂದ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರು, ಶುಕ್ರವಾರ ಮಧ್ಯಾಹ್ನ ನಮಾಜ್ ಮುಗಿಸಿ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ಬಾಗಿಲು ಹಾಕಿ ಮಲಗಿದ್ದರು. ಸಂಜೆ ವೇಳೆಗೆ ಅಶ್ರಫ್‌ ಅವರ ಪತ್ನಿ ಮನೆಗೆ ಬ೦ದಾಗ, ಬಾಗಿಲು ಹಾಕಿರುವುದು ಕ೦ಡುಬ೦ದಿದೆ. ಬಳಿಕ ಘಟನೆ ಬೆಳಕಿಗೆ ಬಂದಿದೆ ಮೃತರು ಪತ್ನಿ, ಮಗ, ಮಗಳನ್ನು ಅಗಲಿದ್ದಾರೆ.

ಹೃದಯಾಘಾತದಿಂತ ಆಟೋ ಚಾಲಕ ಅಶ್ರಫ್ ನಿಧನ Read More »

error: Content is protected !!
Scroll to Top