ಅಪಘಾತದಲ್ಲಿ ಯುವ ಉದ್ಯಮಿ ಸಾವು
ನಸುಕಿನ ವೇಳೆ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತ ಮಂಗಳೂರು: ಮಂಗಳೂರಿನ ಹೆಸರಾಂತ ಗೌಜಿ ಇವೆಂಟ್ನ ಮಾಲಕ ಅಭಿಷೇಕ್ ಎಂಬವರು ಪಡುಬಿದ್ರಿ ಹೆದ್ದಾರಿಯಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ನಸುಕಿನ ಜಾವ 2.20ರ ಸುಮಾರಿಗೆ ಪಡುಬಿದ್ರಿ ಹೆದ್ದಾರಿಯ ಬಳಿ ಅಪಘಾತ ಸಂಭವಿಸಿದೆ. ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ಅಭಿಷೇಕ್ ಅವರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಅಭಿಷೇಕ್ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಯುವ ಉದ್ಯಮಿ ಸಾವು Read More »










