ದಕ್ಷಿಣ ಕನ್ನಡ

ಅಪಘಾತದಲ್ಲಿ ಯುವ ಉದ್ಯಮಿ ಸಾವು

ನಸುಕಿನ ವೇಳೆ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತ ಮಂಗಳೂರು: ಮಂಗಳೂರಿನ ಹೆಸರಾಂತ ಗೌಜಿ ಇವೆಂಟ್‌ನ ಮಾಲಕ ಅಭಿಷೇಕ್ ಎಂಬವರು ಪಡುಬಿದ್ರಿ ಹೆದ್ದಾರಿಯಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ನಸುಕಿನ ಜಾವ 2.20ರ ಸುಮಾರಿಗೆ ಪಡುಬಿದ್ರಿ ಹೆದ್ದಾರಿಯ ಬಳಿ ಅಪಘಾತ ಸಂಭವಿಸಿದೆ. ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ಅಭಿಷೇಕ್ ಅವರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಅಭಿಷೇಕ್‌ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಯುವ ಉದ್ಯಮಿ ಸಾವು Read More »

ದ.ಕ. ಜಿಲ್ಲೆಯ ಕಾಡಂಚು ಪ್ರದೇಶಗಳಲ್ಲಿ ಕಾಡಾನೆ ದಾಳಿ: ಅರಣ್ಯ ಸಚಿವರನ್ನು ತರಾಟೆಗೆ ತೆಗೆದುಕೊಂಡ ಕಿಶೋರ್ ಕುಮಾರ್

ಪುತ್ತೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಜಿಲ್ಲೆಯ ಕಾಡಂಚಿನ ಜನರನ್ನು ದಿನದಿಂದ ದಿನಕ್ಕೆ ಸಂಕಷ್ಟಕ್ಕೆ ಒಳಪಡಿಸುತ್ತಿರುವ ಕಾಡಾನೆ ದಾಳಿಯ ಗಂಭೀರ ಸಮಸ್ಯೆ ಕುರಿತು ಅರಣ್ಯ ಸಚಿವರನ್ನು ಪ್ರಶ್ನಿಸಿದರು. ಕಳೆದ ಅಧಿವೇಶನದಲ್ಲಿ ಸಚಿವರು ದಕ್ಷಿಣ ಕನ್ನಡದಲ್ಲಿ ಎಲಿಫಂಟ್ ಟಾಸ್ಕ್ ಫೋರ್ಸ್ (ETF) ಸ್ಥಾಪಿಸುವುದಾಗಿ ಹಾಗೂ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸುವುದಾಗಿ ಘೋಷಣೆ ಮಾಡಿದ್ದರೂ ಕೂಡ, ಇವತ್ತು ತನಕ ಯಾವುದೇ ಭೇಟಿ ನಡೆದಿಲ್ಲ

ದ.ಕ. ಜಿಲ್ಲೆಯ ಕಾಡಂಚು ಪ್ರದೇಶಗಳಲ್ಲಿ ಕಾಡಾನೆ ದಾಳಿ: ಅರಣ್ಯ ಸಚಿವರನ್ನು ತರಾಟೆಗೆ ತೆಗೆದುಕೊಂಡ ಕಿಶೋರ್ ಕುಮಾರ್ Read More »

ಗೂಗಲ್‌ ಮ್ಯಾಪ್‌ ನಂಬಿ ಬಂದ ಲಾರಿ ಅಪಘಾತ

ಮಂಗಳೂರು : ಗೂಗಲ್‌ ಮ್ಯಾಪ್‌ ನಂಬಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಇಳಿಜಾರಿನ ತಿರುವಿನಲ್ಲಿ ರಸ್ತೆ ಪಕ್ಕದ ದರೆಗೆ ಡಿಕ್ಕಿ ಹೊಡೆದು ಘಟನೆ ಮಂಗಳವಾರ ತಡರಾತ್ರಿ ಮೂಡುಬಿದಿರೆಯ ಪಾಲಡ್ಕ ಪಂಚಾಯಿತಿ ವ್ಯಾಪ್ತಿಯ ಕಡಂದಲೆಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಚಾಲಕ ಪಾರಾಗಿದ್ದಾನೆ. ರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಚಾಲಕ ಗೂಗಲ್‌ ಮ್ಯಾಪ್‌ ಹಾಕಿಕೊಂಡು ಮೂಡುಬಿದಿರೆ ಕಡೆಗೆ ಲಾರಿ ಚಲಾಯಿಸಿಕೊಂಡು ಬರುತ್ತಿದ್ದ. ಆದರೆ ಗೂಗಲ್‌ ಮ್ಯಾಪ್‌ ಮುಖ್ಯರಸ್ತೆ ಬಿಟ್ಟು ಒಳರಸ್ತೆಯ ದಾರಿ ತೋರಿಸಿದ್ದು, ಅದನ್ನು ನಂಬಿ

ಗೂಗಲ್‌ ಮ್ಯಾಪ್‌ ನಂಬಿ ಬಂದ ಲಾರಿ ಅಪಘಾತ Read More »

ವಾಟ್ಸ್‌ಆ್ಯಪ್‌ ಸಂದೇಶ ಕಳುಹಿಸಿ ವಿದ್ಯಾರ್ಥಿಗೆ 31.99 ಲ.ರೂ. ವಂಚನೆ

ಮಂಗಳೂರು: ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶವನ್ನು ನಂಬಿ ವಿದ್ಯಾರ್ಥಿಯೊಬ್ಬ ಬರೋಬ್ಬರಿ 31.99 ಲ.ರೂ. ಕಳೆದುಕೊಂಡಿರುವ ಕುರಿತು ದೂರು ದಾಖಾಲಾಗಿದೆ. ಹೋಮಿಯೋಪತಿ ಕಲಿಯುತ್ತಿರುವ ಯುವಕನಿಗೆ ಆನ್‌ಲೈನ್ ಮೂಲಕ 31.99 ಲಕ್ಷ ರೂ. ವಂಚಿಸಲಾಗಿದೆ. ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶವನ್ನು ಗಮನಿಸಿದ ತಾನು ಹಣ ಹೂಡಿಕೆ ಮಾಡಿ ಹೆಚ್ಚು ಲಾಭ ಗಳಿಸಬಹುದು ಎಂಬ ಆಸೆಯಿಂದ ಆರೋಪಿಗಳು ನೀಡಿದ ಬೇರೆ ಬೇರೆ ಖಾತೆಗಳಿಗೆ ನ.5ರಿಂದ 26ರ ವರೆಗೆ ತನ್ನಲ್ಲಿದ್ದ ಹಣ ಹಾಗೂ ಮನೆಯಲ್ಲಿದ್ದ ಬಂಗಾರನ್ನು ಅಡವಿಟ್ಟು

ವಾಟ್ಸ್‌ಆ್ಯಪ್‌ ಸಂದೇಶ ಕಳುಹಿಸಿ ವಿದ್ಯಾರ್ಥಿಗೆ 31.99 ಲ.ರೂ. ವಂಚನೆ Read More »

ವಿದೇಶದಲ್ಲಿರುವಾಗ ಭಗವದ್ಗೀತೆ ಅವಮಾನಿಸಿ ಪೋಸ್ಟ್‌ : ಆರೋಪಿ ಸೆರೆ

ಸೌದಿಯಲ್ಲಿ ಕುಳಿತು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದ ಆರೋಪಿ ಮಂಗಳೂರು: ವಿದೇಶದಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಭಾವ ಉಂಟಾಗುವ ಪೋಸ್ಟ್ ಹಾಕಿದ ಆರೋಪಿ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಫೆಬ್ರವರಿಯಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಫೆಲಿಕ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟಿದ್ದ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯು ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದಾಗ ಪೋಸ್ಟ್ ಹಾಕಿದ್ದ. ಮೂಲತಃ ಮುಂಬೈಯ ಚಾರ್ಕೋಪ್ ನಿವಾಸಿಯಾಗಿದ್ದ ಈತನ ಬಗ್ಗೆ ಮಾಹಿತಿ

ವಿದೇಶದಲ್ಲಿರುವಾಗ ಭಗವದ್ಗೀತೆ ಅವಮಾನಿಸಿ ಪೋಸ್ಟ್‌ : ಆರೋಪಿ ಸೆರೆ Read More »

ಮದುವೆಗೆ ಎರಡು ದಿನ ಬಾಕಿಯಿರುವಾಗ ವರ ಪರಾರಿ

ಮದುವೆ ಇಷ್ಟ ಇಲ್ಲ ಎಂದು ಹೇಳದೆ ಕೇಳದೆ ಚೆನ್ನೈಗೆ ಹೋದ ಯುವಕ ಮಂಗಳೂರು: ಮದುವೆಗೆ ಎರಡು ದಿನಗಳು ಬಾಕಿಯಿರುವಂತೆಯೇ ಯುವಕನೊಬ್ಬ ಕಾರಿನ ಜತೆ ನಾಪತ್ತೆಯಾಗಿದ್ದು, ಆತ ಚೆನ್ನೈಗೆ ತೆರಳಿರುವ ಬಗ್ಗೆ ಮಾಹಿತಿ ಲಭಿಸಿದೆ. ಜಪ್ಪು ಮಾರ್ಕೆಟ್‌ ಅರಕೆರೆಬೈಲುವಿನ ನಿವಾಸಿ ರಕ್ಷಣ್‌ ಜೆ.ಕೆ. (32) ನಾಪತ್ತೆಯಾಗಿ ಚೆನ್ನೈಗೆ ತೆರಳಿದವರು. ರಕ್ಷಣ್‌ ತನ್ನ ಮನೆಯಿಂದ ಡಿ.6ರಂದು ಬೆಳಗ್ಗೆ 11.30ಕ್ಕೆ ತನ್ನ ತಾಯಿಯ ಕಾರಿನಲ್ಲಿ ಮದುವೆಯ ಆಮಂತ್ರಣ ಪತ್ರಿಕೆಯನ್ನು ಸಂಬಂಧಿಕರು ಹಾಗೂ ಗೆಳೆಯರಿಗೆ ನೀಡಲೆಂದು ಹೋಗಿದ್ದರು. ಆ ಬಳಿಕ ಮನೆಗೂ ಬಾರದೆ,

ಮದುವೆಗೆ ಎರಡು ದಿನ ಬಾಕಿಯಿರುವಾಗ ವರ ಪರಾರಿ Read More »

ನೇಣು ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದಾಗ ಹಗ್ಗ ತುಂಡಾಗಿ ಗಾಯಗೊಂಡಿದ್ದ ಕಾರ್ಮಿಕ ಸುಳ್ಯ: ಆತ್ಮಹತ್ಯೆಗೆ ಪ್ರಯತ್ನಿಸಿದಾಗ ನೇಣು ಬಿಗಿದು ಜಿಗಿದ ವೇಳೆ ಹಗ್ಗ ತುಂಡಾಗಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದ ಕಲ್ಲುಗುಂಡಿಯಲ್ಲಿ ನಡೆದಿದೆ. ಕಲ್ಲುಗುಂಡಿ ಕೂಲಿಶೆಡ್ ಬಳಿ ಕಳೆದ ಹಲವು ವರ್ಷಗಳಿಂದ ಹೋಟೆಲ್ ಕಾರ್ಮಿಕರಾಗಿ ದುಡಿಯುತ್ತಿದ್ದ ಐವರ್ನಾಡು ಗ್ರಾಮದ ಮಾಧವ (60) ಎಂಬವರು ತನ್ನ ಬಾಡಿಗೆ ರೂಮಿನಲ್ಲಿ ಡಿ.5ರಂದು ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಬಿಗಿದು ಕೆಳಕ್ಕೆ ಜಿಗಿದ ಸಂದರ್ಭ

ನೇಣು ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು Read More »

ನ್ಯಾಷನಲ್‌ ಹೆರಾಲ್ಡ್‌ ಭ್ರಷ್ಟಾಚಾರ : ಇನಾಯತ್‌ ಅಲಿಗೆ ನೋಟಿಸ್‌

ಡಿಕೆಶಿ ಆಪ್ತರಾಗಿರುವ ಇನಾಯತ್‌ ಅಲಿಗೆ ತನಿಖೆಗೆ ಹಾಜರಾಗಲು ಸೂಚನೆ ಮಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಭ್ರಷ್ಟಾಚಾರ ಪ್ರಕರಣದಲ್ಲಿ ಮಂಗಳೂರು ಮೂಲದ ಉದ್ಯಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಪ್ತರಾಗಿರುವ ಇನಾಯತ್‌ ಅಲಿ ಅವರಿಗೂ ನೋಟಿಸ್‌ ನೀಡಲಾಗಿದೆ ಎಂದು ತಿಳಿದುಬಂದಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇನಾಯತ್‌ ಅಲಿ ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಇ.ಡಿ ನೀಡಿರುವ ದೂರಿನ ಮೇರೆಗೆ ದಿಲ್ಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಅ.3ರಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ

ನ್ಯಾಷನಲ್‌ ಹೆರಾಲ್ಡ್‌ ಭ್ರಷ್ಟಾಚಾರ : ಇನಾಯತ್‌ ಅಲಿಗೆ ನೋಟಿಸ್‌ Read More »

ವ್ಯಕ್ತಿ ನಾಪತ್ತೆ: ದೂರು ದಾಖಲು

ಪುತ್ತೂರು: ವ್ಯಕ್ತಿಯೊಬ್ಬರು ನಾಪತ್ತೆಯಾದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ‌ವ್ಯಕ್ತಿಯನ್ನು ಕೈಯ್ಯೂರಿನ ಮಾಡಾವು ಉದ್ದೋಲೆ ನಿವಾಸಿ ದೀಕ್ಷಿತ್ ಕೆ. ಜೆ. (36) ಎಂದು ಗುರುತಿಸಲಾಗಿದೆ. ನ. 30 ರಿಂದ ಅವರು ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ನೀಡಿರುವ ದೂರಿನಲ್ಲಿ ‌ತಿಳಿಸಿದ್ದಾರೆ. ದೀಕ್ಷಿತ್ ಗ್ರಾಫಿಕ್ ಡಿಸೈನರ್ ಆಗಿದ್ದು, ಕಳೆದೊಂದು ತಿಂಗಳಿನಿಂದ ತಮ್ಮ ಪತ್ನಿಯ ಮನೆಯಲ್ಲಿ ವಾಸವಿದ್ದರು. ನ. 30 ರಂದು ಮೈಸೂರಿನ ಮೂಲಕ ಬೆಂಗಳೂರಿಗೆ ಬೈಕ್‌ನಲ್ಲಿ ಪ್ರಯಾಣ ಆರಂಭಿಸಿದ್ದರು. ಡಿ. 2 ರಂದು ರಾಮನಗರಕ್ಕೆ

ವ್ಯಕ್ತಿ ನಾಪತ್ತೆ: ದೂರು ದಾಖಲು Read More »

ಕರ್ನಾಟಕದಲ್ಲಿ ಎಸ್‌ಡಿಪಿಐ ಮೂಲಕ ಪಿಎಫ್‌ಐ ಸಕ್ರಿಯ : ಸಂಸತ್ತಿನಲ್ಲಿ ಕ್ಯಾ.ಚೌಟ ಕಳವಳ

ಕಾಂಗ್ರೆಸ್‌ನಿಂದ ಎಸ್‌ಡಿಪಿಐಗೆ ನಿರಂತರ ಪೋಷಣೆ ಎಂದು ತಿಳಿಸಿದೆ ಸಂಸದ ಮಂಗಳೂರು : ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ (ಇ.ಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಕ್ಯಾ.ಚೌಟ, ಎಸ್‌ಡಿಪಿಐಯು ನಿಷೇಧಿತ

ಕರ್ನಾಟಕದಲ್ಲಿ ಎಸ್‌ಡಿಪಿಐ ಮೂಲಕ ಪಿಎಫ್‌ಐ ಸಕ್ರಿಯ : ಸಂಸತ್ತಿನಲ್ಲಿ ಕ್ಯಾ.ಚೌಟ ಕಳವಳ Read More »

error: Content is protected !!
Scroll to Top