ದ.ಕ. ಜಿಲ್ಲೆಯಲ್ಲಿ ಸಂಪೂರ್ಣ ಗಾಂಜಾ ನಿಷೇಧಿಸಲು ಇಲಾಖೆಗಳು ಕಾರ್ಯನಿರ್ವಹಿಸಬೇಕು | ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಧಿಕಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಗಾಂಜಾ ದಂಧೆಯನ್ನು ನಿಷೇಧಿಸಲು ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಸಂಪೂರ್ಣವಾಗಿ ಡ್ರಗ್ಸ್ ಜಾಲವನ್ನು ನಿಷೇಧಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್ಸ್ ಚಟದಲ್ಲಿ ಭಾಗಿಯಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ವಿದ್ಯಾರ್ಥಿಗಳ ಚಲನವಲನಗಳನ್ನು ಆಪ್ತ ಸಮಾಲೋಚಕರನ್ನಿಟ್ಟುಕೊಂಡು ಗಮನಿಸಿ, ವಿದ್ಯಾರ್ಥಿಗಳ ಮನಃಪರಿವರ್ತನೆ […]