ದಕ್ಷಿಣ ಕನ್ನಡ

ಅಕ್ರಮವಾಗಿ ಸಂಗ್ರಹವಾಗಿದ್ದ 500 ಕ್ವಿಂಟಾಲ್ ಅಕ್ಕಿ ವಶ

ಮಂಗಳೂರು: ನಗರದ ಖಾಸಗಿ ಕಾಲೇಜಿನ ಹಿಂಭಾಗದಲ್ಲಿರುವ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು 500 ಕ್ವಿಂಟಾಲ್ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ, ಇಲಾಖೆಯ ಉಪ ನಿರ್ದೇಶಕಿ ಅನಿತಾ ವಿ. ಮತ್ತೂರು ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. “ಬಾಡಿಗೆ ಗೋದಾಮಿನಲ್ಲಿ ಬಾಸುಮತಿ, ಸೋನಾ ಮಸೂರಿ, ಜೀರಾ ರೈಸ್ ಮತ್ತು ತೌಡು ಅಕ್ಕಿ ಸೇರಿದಂತೆ ವಿವಿಧ ಬ್ರಾಂಡ್‌ಗಳ ಅಕ್ಕಿ ಚೀಲಗಳಿದ್ದವು. ಇದರ ಜೊತೆಗೆ, ಯಾವುದೇ ಬ್ರಾಂಡಿಂಗ್ ಇಲ್ಲದ ಬಿಳಿ […]

ಅಕ್ರಮವಾಗಿ ಸಂಗ್ರಹವಾಗಿದ್ದ 500 ಕ್ವಿಂಟಾಲ್ ಅಕ್ಕಿ ವಶ Read More »

ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳ ಸಮಗ್ರ ಸಮೀಕ್ಷೆ

ಮಂಗಳೂರು: ಆಂತರಿಕ ಮೀಸಲಾತಿ ಮ್ಯಾಟ್ರಿಕ್ಸ್ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಮೇ 5ರಿಂದ 17ರವರೆಗೆ ಎಲ್ಲ ಪರಿಶಿಷ್ಟ ಜಾತಿ ಸಮುದಾಯಗಳ ಸಮಗ್ರ ಸಮೀಕ್ಷೆಯನ್ನು ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ. ಎಸ್‌ಸಿ ವರ್ಗದ ಅಡಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಸಮೀಕ್ಷೆಯು ವಿವರವಾದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಸಮೀಕ್ಷೆಯ ಸುಗಮ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು, 2,047 ಶಿಕ್ಷಕರಿಗೆ ತರಬೇತಿ ನೀಡಲಾಗಿದೆ ಮತ್ತು ಗೊತ್ತುಪಡಿಸಿದ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ನಿರ್ದಿಷ್ಟ ಪ್ರದೇಶಗಳಿಗೆ ನಿಯೋಜಿಸಲಾಗಿದೆ. ಇದಲ್ಲದೆ ಸಮೀಕ್ಷೆಯ ಪ್ರಕ್ರಿಯೆಯನ್ನು

ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳ ಸಮಗ್ರ ಸಮೀಕ್ಷೆ Read More »

ಹೊಳೆಗೆ ಬಿದ್ದು ಮಹಿಳೆ ಮೃತ್ಯು

ಸುಳ್ಯ : ಸುಳ್ಯದ ಸಂಪಾಜೆ ಗ್ರಾಮದ ಕೊಯನಾಡಿನಲ್ಲಿ ಹೊಳೆಗೆ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಏ.29 ರಂದು ಮಧ್ಯಾಹ್ನ ನಡೆದಿದೆ. ಮೃತ ಮಹಿಳೆಯನ್ನು ದಿ. ಅಣ್ಣು ದಾಸ್ ಅವರ ಧರ್ಮ ಪತ್ನಿ ಯಶೋದ ದಾಸ್ (60) ಎಂದು ಗುರುತಿಸಲಾಗಿದೆ. ಯಶೋದ ಅವರು ಕೆಲವು ವರ್ಷಗಳ ಹಿಂದೆ ಸ್ಪೋಕ್ ಮತ್ತು ಹೃದಯ ಖಾಯಿಲೆಯಿಂದ  ಬಳಲುತ್ತಿದ್ದು,  ಮಂಗಳೂರಿನ ಯೂನಿಟಿ ಆಸ್ಪತ್ರೆಯಲ್ಲಿ ಅಪರೇಶನ್ ಮಾಡಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮನೆಗೆ ಕರೆದುಕೊಂಡು ಬರಲಾಗಿತ್ತು. ಪುತ್ರನಲ್ಲಿ ಅಡುಗೆ ಮಾಡಲು ಕೋಳಿ ತರಲು ಹೇಳಿದ್ದರೆನ್ನಲಾಗಿದ್ದು,

ಹೊಳೆಗೆ ಬಿದ್ದು ಮಹಿಳೆ ಮೃತ್ಯು Read More »

ಮಂಗಳೂರು: ಅಕ್ರಮ ದಾಸ್ತಾನು ಇಟ್ಟಿದ್ದ 500 ಕ್ವಿಂಟಾಲ್‌ ಅಕ್ಕಿಪತ್ತೆ

ಅನ್ನಭಾಗ್ಯದ ಅಕ್ಕಿಯನ್ನು ಪಾಲಿಷ್‌ ಮಾಡಿ ಮಾರಾಟ ಮಾಡುತ್ತಿರುವ ಶಂಕೆ ಮಂಗಳೂರು: ಮಂಗಳೂರಿನ ಖಾಸಗಿ ಗೋಡೌನ್ ಒಂದರಲ್ಲಿ ನೂರಾರು ಮೂಟೆ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿರುವುದು ಪತ್ತೆಯಾಗಿದೆ. ಮಂಗಳೂರು ನಗರದ ಬಂದರು ಸಮೀಪದ ಅಕ್ಕಿ ದಾಸ್ತಾನು ಗೋಡೌನ್​​ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿನಲ್ ಸೂಚನೆಯಂತೆ ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಆಹಾರ ಇಲಾಖೆಯ ಉಪನಿರ್ದೇಶಕರು ದಾಳಿ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ. ಸುಮಾರು 500 ಕ್ವಿಂಟಾಲ್‌ ಅಕ್ಕಿ ಅಕ್ರಮ ದಾಸ್ತಾನು ಇಟ್ಟಿರುವುದು ಪತ್ತೆಯಾಗಿದೆ. ಇದು ಅನ್ನಭಾಗ್ಯದ ಅಕ್ಕಿಯಾಗಿರಬಹುದು ಎಂಬ ಶಂಕೆ

ಮಂಗಳೂರು: ಅಕ್ರಮ ದಾಸ್ತಾನು ಇಟ್ಟಿದ್ದ 500 ಕ್ವಿಂಟಾಲ್‌ ಅಕ್ಕಿಪತ್ತೆ Read More »

ಕುಡುಪು ಕೊಲೆ ಪ್ರಕರಣ : ಯುವಕನ ಶವ ಹಸ್ತಾಂತರ

ಇನ್‌ಸ್ಪೆಕ್ಟರ್‌ ವಿರುದ್ಧ ಕರ್ತವ್ಯ ಲೋಪ ಆರೋಪ – ಉನ್ನತ ತನಿಖೆಗೆ ಒತ್ತಾಯ ಮಂಗಳೂರು: ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾಣದ ಸಮೀಪ ಕೊಲೆಯಾದ ಕೇರಳದ ಯುವಕನ ಶವವನ್ನು ಆತನ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲಪಳ್ಳಿ ನಿವಾಸಿಯಾಗಿದ್ದ ಯುವಕ ಅಶ್ರಫ್‌ ಎಂಬಾತ ಏ.27ರಂದು ಯುವಕರ ಗುಂಪಿನ ಹೊಡೆತಕ್ಕೆ ಸಿಕ್ಕಿ ಸಾವಿಗೀಡಾಗಿದ್ದಾನೆ. ಮಂಗಳೂರಿನ ವೆನ್‌ಲಾಕ್ ಶವಾಗಾರದಲ್ಲಿದ್ದ ಅಶ್ರಫ್‌ನ ಮೃತದೇಹವನ್ನು ಅವನ ಕುಟುಂಬಸ್ಥರು ಗುರುತಿಸಿ ಪೊಲೀಸರಿಂದ ಪಡೆದುಕೊಂಡಿದ್ದಾರೆ. ಮಧ್ಯರಾತ್ರಿ ಕೇರಳದಿಂದ

ಕುಡುಪು ಕೊಲೆ ಪ್ರಕರಣ : ಯುವಕನ ಶವ ಹಸ್ತಾಂತರ Read More »

ಕ್ರಿಕೆಟ್‌ ಪಂದ್ಯಾಟದ ವೇಳೆ ಯುವಕನ ಹತ್ಯೆ : 20 ಮಂದಿ ಬಂಧನ

ಕೊನೆಗೂ ಕುಡುಪು ಕೊಲೆ ರಹಸ್ಯ ಬೇಧಿಸಿದ ಪೊಲೀಸರು ಮಂಗಳೂರು : ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನ ಸಮೀಪ ಅಪರಿಚಿತ ಯುವಕನ್ನು ಹೊಡೆದು ಸಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ 20 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಕೆಟ್‌ ಪಂದ್ಯಾಟ ನಡೆಯುತ್ತಿರುವಾಗ ಈ ವ್ಯಕ್ತಿ ಮಧ್ಯೆ ಬಂದು ಕಿರಿಕ್‌ ಮಾಡಿದಾಗ ಯುವಕರ ಗುಂಪು ಕೆರಳಿ ಅವನನ್ನು ಹಿಗ್ಗಾಮುಗ್ಗಾ ಥಳಿಸಿದೆ. ಈ ಹೊಡೆತಗಳಿಂದ ಸಾವು ಸಂಭವಿಸಿದೆ ಎಂದು ವಿಧಿವಿಜ್ಞಾನ ವರದಿ ದೃಢಪಡಿಸಿದೆ. ಏ.27ರಂದು ಸಂಜೆ ನಿರ್ಜನ ಸ್ಥಳದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಯುವಕನ ಮೃತದೇಹ

ಕ್ರಿಕೆಟ್‌ ಪಂದ್ಯಾಟದ ವೇಳೆ ಯುವಕನ ಹತ್ಯೆ : 20 ಮಂದಿ ಬಂಧನ Read More »

ಪತಿಯ ತಿಥಿಯ ದಿನವೇ ಪತ್ನಿ ಅಸ್ವಸ್ಥಗೊಂಡು ನಿಧನ

ಸುಳ್ಯ; ಪತಿಯ ತಿಥಿಯ ದಿನವೇ ಪತ್ನಿ ಅಸ್ವಸ್ಥಗೊಂಡು ನಿಧನ ಹೊಂದಿರುವ ಘಟನೆ ಕನಕಮಜಲಿನಲ್ಲಿ ನಡೆದಿದೆ. ಕನಕಮಜಲು ಗ್ರಾಮದ ನೆಡಿಲು ಸೋಮಪ್ಪ ಗೌಡರು ಏ.17 ರಂದು ನಿಧನ ಹೊಂದಿದ್ದರು. ಹನ್ನೊಂದನೇ ದಿನದ ಕಾರ್ಯಕ್ರಮ ಏ. 28 ರಂದು ನಡೆಯುತ್ತಿತ್ತು. ಕಾರ್ಯಕ್ರಮ ನಡೆಯುತ್ತಿರುವಾಗಲೇ ಮಧ್ಯಾಹ್ನದ ವೇಳೆಗೆ ಪತ್ನಿ ಸುಬ್ಬಕ್ಕೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ, ಕೂಡಲೇ ಸುಳ್ಯ ಆಸ್ಪತ್ರೆಗೆ ಕರೆತಂದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಮೃತರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಪತಿಯ ತಿಥಿಯ ದಿನವೇ ಪತ್ನಿ ಅಸ್ವಸ್ಥಗೊಂಡು ನಿಧನ Read More »

ಚಲಿಸುತ್ತಿದ್ದ ಕಾರಿನಲ್ಲಿ ಯುವಕರಿಂದ ಅಪಾಯಕಾರಿ ಸ್ಟಂಟ್ : ಪ್ರಕರಣ ದಾಖಲು..!!

ಕಡಬ : ಚಲಿಸುತ್ತಿದ್ದ ಕಾರಿನಲ್ಲಿ ಬಾಗಿಲು ಹಾಗೂ  ಕಾರಿನ ಮೇಲ್ಬಾಗದಲ್ಲಿ ಕುಳಿತು ಹರಸಾಹಸವನ್ನು ಮಾಡುತ್ತಾ ಚಲಿಸುತ್ತಿದ್ದ ಇತರ ವಾಹನಗಳ ಸಂಚಾರಕ್ಕೆ ತೊಂದರೆಯನ್ನುಂಟು ಮಾಡಿ ಹುಚ್ಚಾಟ ಮೆರೆದ ಘಟನೆ ಎ. 27 ಭಾನುವಾರದಂದು ರಾತ್ರಿ ಕಡಬದಲ್ಲಿ ನಡೆದಿದೆ. ಕಡಬ-ಉಪ್ಪಿನಂಗಡಿ ರಾಜ್ಯ ರಸ್ತೆಯಲ್ಲಿ ಕಡಬದಿಂದ ಅಲಂಕಾರು ತನಕ 15 ಕಿ.ಮೀ. ದೂರ ಹಲವು ಕಾರು ಮತ್ತು ದ್ವಿಚಕ್ರ ವಾಹನಗಳಲ್ಲಿ ಕರ್ಕಶವಾಗಿ ನಿರಂತರ ಹಾರ್ನ್ ಹಾಕುತ್ತಾ ಸಂಚಾರ ನಿಯಮವನ್ನು  ಉಲ್ಲಂಘಿಸಿ ವಾಹನ ಚಲಾಯಿಸಿರುವಂತಹ ಆರೋಪಗಳು ಸಾರ್ವಜನಿಕರಿಂದ ಕೇಳಿ ಬಂದಿದೆ. ಇದಕ್ಕೆ ಪೂರಕ

ಚಲಿಸುತ್ತಿದ್ದ ಕಾರಿನಲ್ಲಿ ಯುವಕರಿಂದ ಅಪಾಯಕಾರಿ ಸ್ಟಂಟ್ : ಪ್ರಕರಣ ದಾಖಲು..!! Read More »

ಮಂಗಳೂರು : ಹೊತ್ತಿ ಉರಿದ ಲಾರಿ | ಚಾಲಕ  ಪ್ರಾಣಪಾಯದಿಂದ ಪಾರು

ಮಂಗಳೂರು: ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಗೆ ಆಕಸ್ಮಿಕವಾಗಿ ಅಗ್ನಿ ಸ್ಪರ್ಶಗೊಂಡು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಮಡ್ ಬ್ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ವೇಳೆ ಕೊಯನಾಡು ಸಮೀಪ ಲಾರಿಯಲ್ಲಿ ದಿಡೀ‌ರ್ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಚಾಲಕ ಲಾರಿಯನ್ನು ನಿಲ್ಲಿಸಿ ಇಳಿದಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಸ್ಥಳೀಯರು, ಅಗ್ನಿಶಾಮಕ ದಳದವರು, ಪೊಲೀಸರು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಮಂಗಳೂರು : ಹೊತ್ತಿ ಉರಿದ ಲಾರಿ | ಚಾಲಕ  ಪ್ರಾಣಪಾಯದಿಂದ ಪಾರು Read More »

ಯಕ್ಷದ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಕಲಾವಿದರ ಘಟಕ: ನೂತನ ಪದಾಧಿಕಾರಿಗಳ ಆಯ್ಕೆ

ಮಂಗಳೂರಿನ ಬಳ್ಳಾಲ್ ಬಾಗ್ ಹೋಟೆಲ್ ಪತ್ತುಮುಡಿ ಸಭಾಭವನದಲ್ಲಿ  ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ನೇತೃತ್ವದಲ್ಲಿ ಜರಗಿದ ಸಭೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ಹವ್ಯಾಸಿ ಕಲಾವಿದರ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಮಧುಕರ ಭಾಗವತ ಕುಳಾಯಿ, ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ, ಕಾರ್ಯದರ್ಶಿಯಾಗಿ ವಿನಯ ಆಚಾರ್ ಹೊಸಬೆಟ್ಟು ಸಂಚಾಲಕರಾಗಿ ಸದಾಶಿವ ಆಳ್ವ ತಲಪಾಡಿ, ಕೋಶಾಧಿಕಾರಿಯಾಗಿ ವಿಜಯ ಶಂಕರ ಆಳ್ವ ಮಿತ್ತಳಿಕೆ, ಉಪಾಧ್ಯಕ್ಷರಾಗಿ ತೋನ್ಸೇ ಪುಷ್ಕಳ ಕುಮಾರ್ ಮತ್ತು ದಿವಾಕರ ಆಚಾರ್ಯ ಗೇರುಕಟ್ಟೆ, ಸಹ ಕಾರ್ಯದರ್ಶಿಗಳಾಗಿ

ಯಕ್ಷದ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಕಲಾವಿದರ ಘಟಕ: ನೂತನ ಪದಾಧಿಕಾರಿಗಳ ಆಯ್ಕೆ Read More »

error: Content is protected !!
Scroll to Top