ದಕ್ಷಿಣ ಕನ್ನಡ

ಪ್ರಚೋದನಕಾರಿ ಪೋಸ್ಟ್‌ : ಬಂಟ್ವಾಳ, ಕಡಬದ ಇಬ್ಬರು ಯುವಕರು ಸೆರೆ

ಕಳೆದ ವರ್ಷ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ಪೋಸ್ಟ್‌ ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಮಣಿಪಾಲ ಪೊಲೀಸರು ಬಂಟ್ವಾಳ ಮತ್ತು ಕಡಬದ ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಪುತ್ತೂರು ರಸ್ತೆ ನಿವಾಸಿ ನಿತೇಶ್ ಕೆ. (20) ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ನಿವಾಸಿ ಹಿತೇಶ್ ಎ. (19) ಬಂಧಿತ ಆರೋಪಿಗಳು. ಆರೋಪಿ ನಿತೇಶ್‌ನನ್ನು ಜನವರಿ 30ರಂದು ಪುತ್ತೂರು ತಾಲೂಕಿನ ಕಲಾಬ […]

ಪ್ರಚೋದನಕಾರಿ ಪೋಸ್ಟ್‌ : ಬಂಟ್ವಾಳ, ಕಡಬದ ಇಬ್ಬರು ಯುವಕರು ಸೆರೆ Read More »

ಫೆ.21ರಂದು ಪುತ್ತೂರಿನಲ್ಲಿ ಬೃಹತ್‌ ಉದ್ಯೋಗ ಮೇಳ

ಫೆ.21ರಂದು ಪುತ್ತೂರಿನಲ್ಲಿ ಬೃಹತ್‌ ಉದ್ಯೋಗ ಮೇಳ ನಿರುದ್ಯೋಗಿ ಯುವಕರಿಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಳ್ಳಲು ಅವಕಾಶ ಮಂಗಳೂರು: ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ವತಿಯಿಂದ ಫೆ.21ರಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿ ಪುತ್ತೂರು ಇಲ್ಲಿ ಆಯೋಜಿಸಲಾಗಿದೆ ಎಂದು ದ.ಕ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕೆ.ಇ.ಜಯರಾಮ್ ತಿಳಿಸಿದ್ದಾರೆ. ಪ್ರಧಾನಮಂತ್ರಿಗಳ ಮಹತ್ವಾಕಾಂಕ್ಷೆಯ ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆಯಡಿ ಗ್ರಾಮೀಣ ಪ್ರದೇಶದ ಬಡ ಯುವಜನರಿಗೆ ಕೌಶಲಾಭಿವೃದ್ಧಿ ತರಬೇತಿ ನೀಡಿ ಉದ್ಯೋಗ ಕಲ್ಪಿಸಲು

ಫೆ.21ರಂದು ಪುತ್ತೂರಿನಲ್ಲಿ ಬೃಹತ್‌ ಉದ್ಯೋಗ ಮೇಳ Read More »

ಬೃಹತ್‌ ಆನ್‌ಲೈನ್‌ ವಂಚನೆ ಜಾಲ ಬಯಲು : 11 ಮಂದಿ ಸೆರೆ

ದೇಶ-ವಿದೇಶಗಳಲ್ಲಿ ಹರಡಿದ ಜಾಲ, ನೂರಾರು ಬ್ಯಾಂಕ್‌ ಖಾತೆಗಳು, ಸಾವಿರಾರು ಕೋಟಿ ರೂ. ವ್ಯವಹಾರ ಮಂಗಳೂರು: ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚಿಸಿದ ಆನ್‌ಲೈನ್‌ ವಂಚನೆ ಜಾಲವೊಂದನ್ನು ಭೇದಿಸಿರುವ ಮಂಗಳೂರು ಸೆನ್‌ ಪೊಲೀಸರು ಈ ಸಂಬಂಧ 11 ಆರೋಪಿಗಳನ್ನು ಬಂಧಿಸಿದ್ದಾರೆ. ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೀನಾದ ವಂಚಕರಿದ್ದು, ನೇಪಾಳ ಪೊಲೀಸರು ಚೀನಾದ ವಂಚಕರನ್ನು ಈಗಾಗಲೇ ಬಂಧಿಸಿದ್ದಾರೆ. 5 ಭಾರತೀಯ ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ. ಗುಜರಾತ್‌ನ ಬಾವಾ ನಗರ್ ಜಿಲ್ಲೆಯ

ಬೃಹತ್‌ ಆನ್‌ಲೈನ್‌ ವಂಚನೆ ಜಾಲ ಬಯಲು : 11 ಮಂದಿ ಸೆರೆ Read More »

ಮಂಗಳೂರು : ರೈಲ್ವೆ ಹಳಿಯಲ್ಲಿ ಯುವಕ ಸಂಶಯಾಸ್ಪದವಾಗಿ ಸಾವು

ಮಂಗಳೂರು : ನಗರದ ಪಚ್ಚನಾಡಿ ಪ್ರದೇಶದ ರೈಲ್ವೆ ಹಳಿಯ ಬಳಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣ ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಬ್ಯಾಗ್ ಸೇರಿದಂತೆ ಮೃತನಿಗೆ ಸೇರಿದ್ದ ಇತರ ವಸ್ತುಗಳು ಪತ್ತೆಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣ ತನಿಖೆಯ ನಂತರವೇ ತಿಳಿದುಬರಲಿದೆ.

ಮಂಗಳೂರು : ರೈಲ್ವೆ ಹಳಿಯಲ್ಲಿ ಯುವಕ ಸಂಶಯಾಸ್ಪದವಾಗಿ ಸಾವು Read More »

ಯುವತಿ ನಾಪತ್ತೆ: ದೂರು ದಾಖಲು

ಉಪ್ಪಿನಂಗಡಿ: ಯುವತಿಯೊಬ್ಬಳು ಮಂಗಳವಾರ ಬೆಳಗ್ಗಿನ ಜಾವದಿಂದ ‌ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ಉರುವಾಲು ಗ್ರಾಮದ ಮಜಿಕುಡೇಲುವಿನಿಂದ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಸುಪ್ರಿತಾ(20) ಎಂದು ಗುರುತಿಸಲಾಗಿದೆ. ಸೋ‌ಮವಾರ ರಾತ್ರಿ ಎಂದಿನಂತೆ ಮಲಗಿದ್ದು, ಮಂಗಳವಾರ ಮುಂಜಾನೆ ಮನೆಯಲ್ಲಿರಲಿಲ್ಲ. ಮೊಬೈಲ್‌ಗೆ ಕರೆ ಮಾಡಿದಾಗ ಕರೆ ಸ್ವೀಕರಿಸಿಲ್ಲ. ಆ ಬಳಿಕ ಮೊಬೈಲ್ ಸ್ವಿಚ್‌ಆಫ್ ಆಗಿದೆ ಎಂದು ಅವರ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ‌ತಿಳಿಸಿದ್ದಾರೆ. ಕನ್ನಡ ಮತ್ತು ತುಳು ಭಾಷೆ ಬಲ್ಲವರಾಗಿದ್ದು, 10 ನೇ ತರಗತಿ ವರೆಗೆ ಶಿಕ್ಷಣ ಪಡೆದಿದ್ದಾರೆ. 4 ಅಡಿ 6

ಯುವತಿ ನಾಪತ್ತೆ: ದೂರು ದಾಖಲು Read More »

ನಾಯಿ ಅಡ್ಡ ಬಂದು ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು

ಕಡಬ: ನಾಯಿ ಅಡ್ಡ ಬಂದ ಪರಿಣಾಮ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಪಂಜ ರಸ್ತೆಯ ಕೊಡಿಂಬಾಳ ಮಧುರ ಚೆಡವು ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯ ಠಾಣಾ ಎ.ಎಸ್. ಐ. ಸೀತಾರಾಮ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅವರ ಕಾರಿಗೆ ನಾಯಿ ಅಡ್ಡ ಬಂದಿದ್ದು, ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನಲ್ಲಿದ್ದ ‌ಸೀತಾರಾಮ್ ಅವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾಗಿ ತಿಳಿದು ಬಂದಿದೆ.

ನಾಯಿ ಅಡ್ಡ ಬಂದು ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು Read More »

ಸುಮಂತ್‌ ನಿಗೂಢ ಸಾವಿನ ಪ್ರಕರಣ : ವದಂತಿ ಹರಡಿದರೆ ಕಠಿಣ ಕ್ರಮ

ಆರೋಪಿಗಳ ಕುರಿತು ಊಹಾಪೋಹ ಹರಡದಂತೆ ಎಚ್ಚರಿಕೆ ನೀಡಿದ ಎಸ್‌ಪಿ ಬೆಳ್ತಂಗಡಿ: ಇಲ್ಲಿನ ಕಳಿಯದಲ್ಲಿ ನಡೆದ ಶಾಲಾ ಬಾಲಕ ಸುಮಂತ್ ಕೊಲೆ ಪ್ರಕರಣದ ಬಗ್ಗೆ ನಡೆದ ತನಿಖೆಯಲ್ಲಿ ಈವರೆಗೆ ವಿಧಿವಿಜ್ಞಾನ ಪ್ರಯೋಗಾಲಯಗಳ ವರದಿ ಬಂದಿಲ್ಲ, ಈ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಕೆಲವರು ಆರೋಪಿಗಳ ಬಗ್ಗೆ ಊಹಾಪೋಹಗಳನ್ನು ಹರಡುವ ಕಾರ್ಯವನ್ನು ಮಾಡುತ್ತಿದ್ದಾರೆ ಇಂತಹ ವದಂತಿಗಳಿಗೆ ಸಾರ್ವಜನಿಕರು ಕಿವಿಕೊಡಬಾರದು ಹಾಗೂ ವದಂತಿಗಳನ್ನು ಹರಡುವವರ ವಿರುದ್ಧ ಸೂಕ್ತ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜ.14ರಂದು ಬೆಳ್ತಂಗಡಿ ಪೊಲೀಸ್

ಸುಮಂತ್‌ ನಿಗೂಢ ಸಾವಿನ ಪ್ರಕರಣ : ವದಂತಿ ಹರಡಿದರೆ ಕಠಿಣ ಕ್ರಮ Read More »

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 8 ವರ್ಷ ಜೈಲು

ಕಳೆದ ವರ್ಷ ಬೆಳ್ತಂಗಡಿಯಲ್ಲಿ ಸಂಭವಿಸಿದ ಪ್ರಕರಣ ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಬೆಳ್ತಂಗಡಿಯ ಶಂಕರ ಗೌಡ (60) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೊ ನ್ಯಾಯಾಲಯ 8 ವರ್ಷದ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕಳೆದ ವರ್ಷ ಮಾರ್ಚ್‌ನಲ್ಲಿ ಶಂಕರ ಗೌಡ ತನಗೆ ಪರಿಚಯವಿದ್ದ ಬಾಲಕಿಯ ಮನೆಗೆ ತೆರಳಿ ಅಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 8 ವರ್ಷ ಜೈಲು Read More »

ಸ್ಕೂಟಿಗೆ ಬಸ್‌ ಡಿಕ್ಕಿ : ಸಹಸವಾರೆ ಸ್ಥಳದಲ್ಲೇ ಸಾವು

ಯುವತಿಯ ಮೇಲೆ ಹರಿದು ಹೋದ ಬಸ್ಸಿನ ಚಕ್ರ ಮಂಗಳೂರು : ನಗರದ ನಂತೂರಿನಲ್ಲಿಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸಹಸವಾರೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಲ್ಲಾಳ್‌ಬಾಗ್ ನಿವಾಸಿ ದೀಪ್ತಿ (26) ಮೃತ ದುರ್ದೈವಿ. ದ್ವಿಚಕ್ರ ವಾಹನ ಸವಾರ ಕಿಶೋರ್ (32) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟಿ ಬಲ್ಲಾಳ್‌ಬಾಗ್ ಕಡೆಯಿಂದ ವಾಮಂಜೂರು ಕಡೆಗೆ ತೆರಳುತ್ತಿದ್ದ ವೇಳೆ ನಂತೂರು ಬಸ್ ನಿಲ್ದಾಣದ ಸಮೀಪ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸಹಸವಾರೆ ದೀಪ್ತಿ

ಸ್ಕೂಟಿಗೆ ಬಸ್‌ ಡಿಕ್ಕಿ : ಸಹಸವಾರೆ ಸ್ಥಳದಲ್ಲೇ ಸಾವು Read More »

ಹೆಜಮಾಡಿ ಟೋಲ್‌ಗೇಟ್‌ನಲ್ಲಿ ರಸ್ತೆ ಮಧ್ಯೆ ಪಾನಮತ್ತ ವಿದ್ಯಾರ್ಥಿಗಳ ಡಾನ್ಸ್‌

ಪಟಾಕಿ ಸಿಡಿಸಿ ಹುಚ್ಚಾಟ ನಡೆಸಿದ ಕೇರಳದ ವಿದ್ಯಾರ್ಥಿಗಳು ಮಂಗಳೂರು: ಕೇರಳದಿಂದ ಉಡುಪಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಗುಂಪೊಂದು ಹೆಜಮಾಡಿ ಟೋಲ್ ಬಳಿ ಪುಂಡಾಟ ನಡೆಸಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಎರಡು ಬಸ್ಸುಗಳಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ಟೋಲ್‌ಗೇಟ್ ಬಳಿ ಬಸ್ ನಿಲ್ಲಿಸಿ ಮದ್ಯ ಸೇವಿಸಿ, ರಸ್ತೆಯ ಮಧ್ಯದಲ್ಲಿ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದಿದ್ದಾರೆ. ಇವರ ಈ ಕಿರಿಕ್ ಮತ್ತು ಪುಂಡಾಟದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ. ಪ್ರವಾಸಕ್ಕೆ ಬಂದಿದ್ದ

ಹೆಜಮಾಡಿ ಟೋಲ್‌ಗೇಟ್‌ನಲ್ಲಿ ರಸ್ತೆ ಮಧ್ಯೆ ಪಾನಮತ್ತ ವಿದ್ಯಾರ್ಥಿಗಳ ಡಾನ್ಸ್‌ Read More »

error: Content is protected !!
Scroll to Top