ದಕ್ಷಿಣ ಕನ್ನಡ

ಮಡಿಕೇರಿ ಉಪತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಹೊಂದಿ ಮಡಿಕೇರಿಗೆ ತೆರಳಿದ್ದ ಸುನಿಲ್ (42) ಹೃದಯಾಘಾತದಿಂದ ಭಾನುವಾರ ನಿಧನರಾದರು. ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ ಅವರು ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಹಖರಾಗಿ ಸೇವೆ ಸಲ್ಲಿಸಿದ್ದರು.

ಮಡಿಕೇರಿ ಉಪತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ Read More »

ಉಜಿರೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆ !

ಬೆಳ್ತಂಗಡಿ: ಉಜಿರೆಯ ಎಸ್.ಡಿ ಎಂ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಬಗ್ಗೆ ವರದಿಯಾಗಿದೆ. ಕ್ರೀಡಾ ವಸತಿ ಶಾಲೆಯ ಪ್ರಥಮ ಪಿ.ಯು.ಸಿ ವಿಧ್ಯಾರ್ಥಿ ಬೇಲೂರಿನ ದಿವ್ಯಾ ನಾಪತ್ತೆಯಾದವಳು. ಮೇ 29ರಂದು ಬೆಳಿಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುವುದಾಗಿ ಹೇಳಿ ನಿಲಯ ಪಾಲಕರಲ್ಲಿ ತಿಳಿಸಿ ಹೋದವಳು ಹಾಸ್ಟೆಲ್ ಗೂ ಹಿಂತಿರುಗದ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ. ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದ ಸಹಾಯಕ ನಿಲಯ ಪಾಲಕಿ ನೀಡಿರುವ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಉಜಿರೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆ ! Read More »

ಬೈಕ್-ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಮೃತ್ಯು

ಬೆಳ್ತಂಗಡಿ : ಬೈಕ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿ ಹಳೆಕೋಟೆ ಪೆಟ್ರೋಲ್ ಪಂಪ್ ಬಳಿ ಇಂದು ನಡೆದಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಬೈಕ್‍ ಸವಾರನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಈ ವೇಳೆ ಮೃತಪಟ್ಟರೆನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಬೈಕ್-ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಮೃತ್ಯು Read More »

ಸಿಆರ್ ಪಿಎಫ್‍ ಇನ್‍ ಸ್ಪೆಕ್ಟರ್ ಜ.ಖಾಸಿಂ ಇಂದು ಸೇವಾ ನಿವೃತ್ತಿ

ಕಡಬ: 36 ವರ್ಷಗಳ ಸುದೀರ್ಘ ಕಾಲ ಸಿಆರ್‍ ಪಿಎಫ್‍ ಇನ್‍ ಸ್ಪೆಕ್ಟರ್ ಹುದ್ದೆಯಲ್ಲಿದ್ದುಕೊಂಡು ಸೇವೆ ಸಲ್ಲಿಸಿದ ಜ.ಖಾಸಿಂ ಅವರು ಇಂದು ಸೇವಾ ನಿವೃತ್ತಿಯಾಗಿದ್ದಾರೆ. ಹಳೆನೇರೆಂಕಿ ನಿವಾಸಿಯಾಗಿರುವ ಖಾಸಿಂ ಅವರು ಹಳೆನೇರೆಂಕಿ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ರಾಮಕುಂಜದ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಶಾಲೆಯಲ್ಲಿ ಪ್ರೌಢಶಿಕ್ಷಣ ಹಾಗೂ ಪುತ್ತೂರು ಸಂತ ಫಿಲೋಮಿನ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಪೂರೈಸಿರುತ್ತಾರೆ. ಬಳಿಕ ಸಿಆರ್‍ ಪಿಎಫ್‍ ಪೊಲೀಸ್ ಇನ್‍ ಸ್ಪೆಕ್ಟರ್ ಆಗಿ ಸುದೀರ್ಘ 36 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ

ಸಿಆರ್ ಪಿಎಫ್‍ ಇನ್‍ ಸ್ಪೆಕ್ಟರ್ ಜ.ಖಾಸಿಂ ಇಂದು ಸೇವಾ ನಿವೃತ್ತಿ Read More »

ಗ್ಯಾಸ್ ಟ್ಯಾಂಕರ್ ಪಲ್ಟಿ : ಸಂಚಾರಕ್ಕೆ ಅಡೆತಡೆ

ಬಂಟ್ವಾಳ : ಗ್ಯಾಸ್‌ ಟ್ಯಾಂಕ‌ರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ. ಮಂಗಳೂರಿನಿಂದ ಗ್ಯಾಸ್‌ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕ್‌ಗಳು ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಉಂಟಾಗಿಲ್ಲ. ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಸ್ಥಳೀಯರು ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.

ಗ್ಯಾಸ್ ಟ್ಯಾಂಕರ್ ಪಲ್ಟಿ : ಸಂಚಾರಕ್ಕೆ ಅಡೆತಡೆ Read More »

ಲೋಕಸಭೆ ಚುನಾವಣೆ ಮತ ಎಣಿಕೆ l 144 ಸೆಕ್ಷನ್ ಜಾರಿ

ಮಂಗಳೂರು: ಎರಡು ಹಂತಗಳಲ್ಲಿ ನಡೆದ ಸಾರ್ವತ್ರಿಕ ಲೋಕಸಭೆ ಚುನಾವಣೆ-2024 ರ ಹಿನ್ನಲೆಯಲ್ಲಿ ಮತ ಎಣಿಕೆಯು ಜೂನ್.4ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಜೂನ್.04 ರಂದು ಬೆಳಗ್ಗೆ ಗಂಟೆ 6 ರಿಂದ ಜೂನ್.05 ರ ಬೆಳಗ್ಗೆ ಗಂಟೆ 6.00 ರವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲು ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಸಂದರ್ಭ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಅದರಲ್ಲಿ ನಿಷೇದಾಜ್ಞೆ ಜಾರಿ

ಲೋಕಸಭೆ ಚುನಾವಣೆ ಮತ ಎಣಿಕೆ l 144 ಸೆಕ್ಷನ್ ಜಾರಿ Read More »

ಡಾ. ಎಂ. ಮೋಹನ  ಆಳ್ವ -72 | ಇಂದು ಕಾರ್ಕಳ ಜ್ಞಾನಸುಧಾದಲ್ಲಿ “ಸವ್ಯಸಾಚಿ” ಸಂಭ್ರಮ

ಮೂಡಬಿದ್ರೆ: ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ, ಆರೋಗ್ಯ, ದೇಶಸೇವೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ಸಮರ್ಪಿಸಿಕೊಂಡು ಅದ್ವಿತೀಯ ಸಾಧನೆ ಮಾಡಿರುವ ಆಧುನಿಕ ಮೂಡುಬಿದಿರೆಯ ನಿರ್ಮಾತೃ ಡಾ. ಎಂ. ಮೋಹನ ಆಳ್ವರಿಗೆ ಕಾರ್ಕಳ ಗಣಿತ ನಗರದ ಜ್ಞಾನಸುಧಾ ಆವರಣದಲ್ಲಿ ಮೇ 31ರ ಶುಕ್ರವಾರ ಸಂಜೆ 5:30ಕ್ಕೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಆಶೀರ್ವಚನ ನೀಡಲಿದ್ದಾರೆ. ನಿಟ್ಟೆ ಎಜ್ಯುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಎನ್.  ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಪುಸ್ತಕ ಅನಾವರಣ ಆಳ್ವರಿಗೆ

ಡಾ. ಎಂ. ಮೋಹನ  ಆಳ್ವ -72 | ಇಂದು ಕಾರ್ಕಳ ಜ್ಞಾನಸುಧಾದಲ್ಲಿ “ಸವ್ಯಸಾಚಿ” ಸಂಭ್ರಮ Read More »

ಲಾರಿ-ಬೈಕ್ ಅಪಘಾತ : ಬೈಕ್ ಸವಾರ ನೆಲ್ಯಾಡಿಯ ಯುವಕ ಮೃತ್ಯು

ನೆಲ್ಯಾಡಿ : ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನೆಲ್ಯಾಡಿಯ ಯುವಕ ಬೈಕ್ ಸವಾರ ಮೃತಪಟ್ಟ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ನೆಲ್ಯಾಡಿ ಎಂಜಿರ ಪರಕ್ಕಳ ನಿವಾಸಿ ಸ್ನೇರಿಯಾ ಎಂಬವರ ಪುತ್ರ ಥೋಮಸ್ ಮೃತಪಟ್ಟ ಯುವಕ. ಥೋಮಸ್ ನರ್ಸಿಂಗ್ ವಿದ್ಯಾರ್ಥಿಯಾಗಿದ್ದು, ಮನೆಯಿಂದ ಬೆಂಗಳೂರಿಗೆ ಬೈಕ್‍ ನಲ್ಲಿ ತೆರಳಿದ್ದು, ನೆಲಮಂಗಲ ಸಮೀಪಿಸುತ್ತಿದ್ದಂತೆ ಅಪಘಾತ ಸಂಭವಿಸಿದೆ. ಲಾರಿಯಡಿಗೆ ಬಿದ್ದ ಥೋಮಸ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಲಾರಿ-ಬೈಕ್ ಅಪಘಾತ : ಬೈಕ್ ಸವಾರ ನೆಲ್ಯಾಡಿಯ ಯುವಕ ಮೃತ್ಯು Read More »

ವಿದ್ಯುತ್ ಲೈನ್ ದುರಸ್ತಿ ವೇಳೆ ಕಿಡಿಗೇಡಿಯಿಂದ ಲೈನ್ ಆನ್ ಮಾಡಲು ಯತ್ನ | ಮುಚ್ಚಳಿಕೆ ಬರೆಸಿದ ಪೊಲೀಸರು.

ಪಂಜ: ವಿದ್ಯುತ್ ಲೈನ್ ದುರಸ್ತಿ ನಡೆಸುತ್ತಿದ್ದ ವೇಳೆ ಯುವಕನೊಬ್ಬ ಲೈನ್ ಆನ್ ಮಾಡಲು ಯತ್ನಿಸಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದ ಘಟನೆ ಕರಿಕ್ಕಳದಲ್ಲಿ ನಡೆದಿದೆ. ಪಂಜದ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಕರಿಕ್ಕಳ ಸಮೀಪ ವಿದ್ಯುತ್ ಲೈನ್ ಗೆ ತಾಗುತ್ತಿದ್ದ ಮರದ ಗೆಲ್ಲನ್ನು ತೆಗೆಯಲೆಂದು ಜೆ.ಒ.ಸಿ ಆನ್ ಮಾಡಿ ಯಾರು ಆಫ್ ಮಾಡದಂತೆ ಅದನ್ನು ತಂತಿಯಲ್ಲಿ ಕಟ್ಟಿ ಕೆಲವು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದರು. ಇದೇ ವೇಳೆ ಅಲ್ಲಿಯೇ ಸಮೀಪದಲ್ಲಿ ರೂಮ್ ನಲ್ಲಿರುವ ರಬ್ಬರ್ ಟ್ಯಾಪರ್ ಆಗಿರುವ ರಾಜೇಶ್ ಎಂಬತ

ವಿದ್ಯುತ್ ಲೈನ್ ದುರಸ್ತಿ ವೇಳೆ ಕಿಡಿಗೇಡಿಯಿಂದ ಲೈನ್ ಆನ್ ಮಾಡಲು ಯತ್ನ | ಮುಚ್ಚಳಿಕೆ ಬರೆಸಿದ ಪೊಲೀಸರು. Read More »

ಮನೆಯಿಂದ ಹೊರ ಹೋದ ತಾಯಿ-ಮಗಳು ನಾಪತ್ತೆ

ಮಂಗಳೂರು : ಮನೆಯಿಂದ ಹೊರಗೆ ತೆರಳಿದ ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕಂಪಾಡಿ ಮೀನಕಳಿ ನಿವಾಸಿ ಶ್ವೇತಾ (31) ಹಾಗೂ ಮಗಳು ಇಶಿಕಾ(6) ನಾಪತ್ತೆಯಾದವರು. ನಿನ್ನೆ ಮಧ್ಯಾಹ್ನ 3 ಗಂಟೆ ಹೊತ್ತಿಗೆ ತಾಯಿ ಮನೆಯಿಂದ ಗಂಡನ ಮನೆ ಕೂಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ತಾಯಿ ಮಗಳು ನಾಪತ್ತೆಯಾಗಿದ್ದಾರೆ. ಈ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾರಿಗಾದರೂ ತಾಯಿ ಮಗಳ ಬಗ್ಗೆ ಮಾಹಿತಿ ಸಿಕ್ಕಿದರೆ

ಮನೆಯಿಂದ ಹೊರ ಹೋದ ತಾಯಿ-ಮಗಳು ನಾಪತ್ತೆ Read More »

error: Content is protected !!
Scroll to Top