ದಕ್ಷಿಣ ಕನ್ನಡ

ನದಿಯಲ್ಲಿ ಮುಳುಗಿ ಓರ್ವ ಮೃತ್ಯು !

ಸುಳ್ಯ: ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಡೆಕೋಲು ಗ್ರಾಮ ಮುರೂರು ಸಮೀಪ ಪರಪ್ಪ ನದಿಯಲ್ಲಿ ನಡೆದಿದೆ. ಈಶ್ವರಮಂಗಲ ಪ್ರವೀಣ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈಶ್ವರಮಂಗಲದ ನಾಲ್ಕು ಜನ ಮುರೂರು ಸಮೀಪ ಪರಪ್ಪ ಹೊಳೆಗೆ ಮೀನು ಹಿಡಿಯಲು ಬಂದಿದ್ದರೆನ್ನಲಾಗಿದೆ. ಈ ಸಂದರ್ಭದಲ್ಲಿ ನಾಲ್ವರಲ್ಲಿ ಒಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.  ಮೃತಪಟ್ಟ ವ್ಯಕ್ತಿ ಮೃತದೇಹವನ್ನು ಪೈಚಾರ್ ಮುಳುಗು ತಜ್ಞರ ತಂಡದವರು ನದಿಯಿಂದ ಮೇಲೆತ್ತಿ ಸುಳ್ಯ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಸುಳ್ಯ ಪೋಲಿಸ್ ಸ್ಥಳ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

ನದಿಯಲ್ಲಿ ಮುಳುಗಿ ಓರ್ವ ಮೃತ್ಯು ! Read More »

ಯುವಜನತೆ ಪ್ರಜಾಪ್ರಭುತ್ವದಲ್ಲಿ ಹೆಚ್ಚು ತೊಡಗಿಸಿಕೊಂಡರೆ ಪ್ರಜಾತಂತ್ರ ಉತ್ತಮಗೊಳ್ಳಲು ಸಾಧ್ಯ | ಸುಳ್ಯ ಕೆವಿಜಿ ಕ್ಯಾಂಪಸ್‍ ನಲ್ಲಿ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು : ದೇಶದಲ್ಲಿ 18ರಿಂದ 40 ವರ್ಷದ ಒಳಗಿನ ಯುವಜನರು 65 ಶೇಕಡಾದಷ್ಟಿದ್ದು ಅವರನ್ನು ಹೆಚ್ಚೆಚ್ಚು ಪ್ರಜಾಪ್ರಭುತ್ವದಲ್ಲಿ ತೊಡಗಿಸಿಕೊಂಡರೆ ಪ್ರಜಾತಂತ್ರ ಉತ್ತಮಗೊಳ್ಳುತ್ತದೆ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಸುಳ್ಯದ ಕೆವಿಜಿ ಕ್ಯಾಂಪಸ್ ನಲ್ಲಿ ಅವರು ಮಾತನಾಡಿದರು. ದೇಶದ ಬೇರೆ ಬೇರೆ ಕಡೆ ಓಡಾಡಿದ್ದೇನೆ. ಎಲ್ಲ ಕಡೆಯ ಸಂಸ್ಕೃತಿ, ನಂಪನ್ಮೂಲ ನೋಡಿದ್ದೇನೆ. ಆದರೆ ನಮ್ಮಲ್ಲಿ ದೇಶದ ಎಲ್ಲ ಕಡೆ ಇರುವ ಸಂಸ್ಕೃತಿ ಮತ್ತು ನಂಪನ್ಮೂಲ ಇದೆ. ನಮ್ಮ ಜನರಲ್ಲಿ

ಯುವಜನತೆ ಪ್ರಜಾಪ್ರಭುತ್ವದಲ್ಲಿ ಹೆಚ್ಚು ತೊಡಗಿಸಿಕೊಂಡರೆ ಪ್ರಜಾತಂತ್ರ ಉತ್ತಮಗೊಳ್ಳಲು ಸಾಧ್ಯ | ಸುಳ್ಯ ಕೆವಿಜಿ ಕ್ಯಾಂಪಸ್‍ ನಲ್ಲಿ ಕ್ಯಾ.ಬ್ರಿಜೇಶ್ ಚೌಟ Read More »

ಹಿಮ್ಮುಖವಾಗಿ ಚಲಿಸಿದ ಪಿಕಪ್ ವಾಹನ : ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಮೃತ್ಯು

ಬೆಳ್ತಂಗಡಿ: ಚಾಲಕನ ಅಜಾಗರೂಕತೆಯಿಂದ ಪಿಕಪ್ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿಬಾಜೆ ಗ್ರಾಮದ ತಂದ್ಲಾಜೆಯಲ್ಲಿ ನಡೆದಿದೆ. ರುಕ್ಕ ಮುಗೇರ ಮೃತಪಟ್ಟರು ಎಂದು ಗುರುತಿಸಲಾಗಿದೆ. ಪಿಕಪ್ ಚಾಲಕ ಜಯೇಶ್ ಹಿಮ್ಮುಖವಾಗಿ ಚಲಾಯಿಸಿ ರಸ್ತೆ ಬದಿ ನಿಂತಿದ್ದ ರುಕ್ಷ್ಯ ಮುಗೇರ ಅವರಿಗೆ ಢಿಕ್ಕಿ ಹೊಡೆದಿದ್ದಾರೆ. ಅವಘಾತದ ಪರಿಣಾಮ, ರುಕ್ಷ್ಯ ಮುಗೇರ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರಿಗೆ ಉಜಿರೆಯ ಎಸ್‌ಡಿಎಂ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ,

ಹಿಮ್ಮುಖವಾಗಿ ಚಲಿಸಿದ ಪಿಕಪ್ ವಾಹನ : ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಮೃತ್ಯು Read More »

ಕಾರು ಅಪಘಾತ : ನಾಲ್ವರಿಗೆ ಗಾಯ

ಸುಳ್ಯ: ಕಾರೊಂದು ಅಪಘಾತ ಸಂಭವಿಸಿ ನಾಲ್ವರಿಗೆ ಗಾಯವಾಗಿರುವ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಹೇಮಂತ್, ಜೀತೇಶ್ ಕೆರ್ಪಳ, ಗಿರೀಶ್  ಹಾಗೂ ಧನುಷ್ ಗಾಯಗೊಂಡವರು. ಆನೆಗುಂಡಿ ತಿರುವಿನ ಬಳಿ ಈ ಅಪಘಾತ ಸಂಭವಿಸಿದ್ದು, ಚಾಲಕನ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿವುದಾಗಿ ತಿಳಿದುಬಂದಿದೆ. ಗಾಯಾ:ಳು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರು ಅಪಘಾತ : ನಾಲ್ವರಿಗೆ ಗಾಯ Read More »

ಏಕಾಏಕಿ ಬ್ರೇಕ್ ಹಾಕಿದ ಆಟೋ ಚಾಲಕ | ನಾಲ್ಕು ವರ್ಷದ ಮಗು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯ

ಕಡಬ:  ಆಟೋ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಆಟೋದಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕು ವರ್ಷ ಮಗುವೊಂದು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ರಾಮಕುಂಜದಲ್ಲಿ ಇಂದು ನಡೆದಿದೆ. ಸಾತ್ವಿಕ್ (4) ರಸ್ತೆಗೆಸೆಯಲ್ಪಟ್ಟು  ಗಾಯಗೊಂಡ ಮಗು. ಆಟೋರಿಕ್ಷಾ ಚಾಲಕ ಶಿವಪ್ರಸಾದ್ ಎಂಬವರು ಆಟೋವನ್ನು ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ವೇಗವಾಗಿ ಚಲಾಯಿಸಿಕೊಂಡು ಇಳಿಜಾರು ರಸ್ತೆಯಲ್ಲಿ ಬ್ರೇಕ್ ಹಾಕಿದಾಗ ಆಟೋರಿಕ್ಷಾದಲ್ಲಿದ್ದ ಮಗು ಡಾಮಾರು ರಸ್ತೆಗೆ ಬಿದ್ದು ಗಾಯಗೊಂಡಿದೆ ಎನ್ನಲಾಗಿದೆ. ಮಗುವನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.

ಏಕಾಏಕಿ ಬ್ರೇಕ್ ಹಾಕಿದ ಆಟೋ ಚಾಲಕ | ನಾಲ್ಕು ವರ್ಷದ ಮಗು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯ Read More »

ಏ. 22 : ತಮಿಳುನಾಡು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಅಣ್ಣಾಮಲೈ ಸುಳ್ಯಕ್ಕೆ

ಸುಳ್ಯ: ತಮಿಳುನಾಡಿನ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಅಣ್ಣಾಮಲೈ ಏ 22 ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ . ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬೃಜೇಶ್ ಚೌಟ ಪರ ಪ್ರಚಾರ ಸಭೆ ನಡೆಸಲಿದ್ದಾರೆ. ಈ ಕುರಿತು ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.

ಏ. 22 : ತಮಿಳುನಾಡು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಅಣ್ಣಾಮಲೈ ಸುಳ್ಯಕ್ಕೆ Read More »

ಪಾಂಡೇಶ್ವರ ಪಿಜಿಯಲ್ಲಿ ಮೃತಪಟ್ಟ ಯುವ ವೈದ್ಯೆ

ಮಂಗಳೂರು : ದಂತ ವೈದ್ಯಕೀಯ ಪದವೀಧರೆ ಯುವತಿಯೋರ್ವರು ನಗರದ ಪಾಂಡೇಶ್ವರದ ಪಿಜಿಯಲ್ಲಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.ಉಳ್ಳಾಲ ತಾಲೂಕಿನ ನರಿಂಗಾನ ನಿವಾಸಿ ಸ್ವಾತಿ ಶೆಟ್ಟಿ (24) ಮೃತ ವೈದ್ಯೆ. ಬಿಡಿಎಸ್‌ ಪದವಿ ಪೂರೈಸಿದ್ದ ಸ್ವಾತಿ ಪಾಂಡೇಶ್ವರದ ಕ್ಲಿನಿಕ್‌ವೊಂದರಲ್ಲಿ ಮಂಗಳವಾರದಿಂದ ಕೆಲಸಕ್ಕೆ ಹಾಜರಾಗಬೇಕಿತ್ತು. ಸೋಮವಾರ ತಾಯಿ ಜೊತೆಗೆ ಪಾಂಡೇಶ್ವರ ಕ್ಲಿನಿಕ್‌ಗೆ ಬಂದು ಕೆಲಸದ ಬಗ್ಗೆ ಮಾತನಾಡಿ, ಪಾಂಡೇಶ್ವರ ಪೊಲೀಸ್ ಠಾಣೆ ಹಿಂಭಾಗದ ಪಿಜಿಯಲ್ಲಿ ಸೋಮವಾರ ಸಂಜೆಯಿಂದ ಉಳಿದಿದ್ದರು. ರಾತ್ರಿ ತಾಯಿ ಜೊತೆಗೆ ಮೊಬೈಲ್‌ನಲ್ಲಿ ಮಾತನಾಡಿ ವಿಪರೀತ ತಲೆನೋವು ಎಂಬುದಾಗಿ ಹೇಳಿದ್ದರು

ಪಾಂಡೇಶ್ವರ ಪಿಜಿಯಲ್ಲಿ ಮೃತಪಟ್ಟ ಯುವ ವೈದ್ಯೆ Read More »

ಕಾರು ಡಿಕ್ಕಿ ಹೊಡೆದು ಪಾದಾಚಾರಿ ಮೃತ್ಯು

ಸುಳ್ಯ : ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ಸುಳ್ಯ ಜಟ್ಟಿಪಳ್ಳ ನಿವಾಸಿ ಗೋಪಾಲ ಎಂಬವರಿಗೆ ಕಾರೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬುಧವಾರ ಮುಂಜಾನೆ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ಸಂದರ್ಭದಲ್ಲಿ ಕಾರು ಗುದ್ದಿದರೆನ್ನಲಾಗಿದೆ.ಸ್ಥಳಕ್ಕೆ ಆಗಮಿಸಿದ ಪ್ರಗತಿ ಅಂಬ್ಯುಲೆನ್ಸ್ ಚಾಲಕ ಅಚ್ಚು ಅವರು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿದರು. ಗೋಪಾಲ ಅವರು ಜಟ್ಟಿಪಳ್ಳ ನಿವಾಸಿಯಾಗಿದ್ದು ಹಲವಾರು ವರ್ಷಗಳಿಂದ ಮೇಸ್ತ್ರಿ ವೃತಿಯನ್ನು ಮಾಡುತ್ತಿದ್ದರು.

ಕಾರು ಡಿಕ್ಕಿ ಹೊಡೆದು ಪಾದಾಚಾರಿ ಮೃತ್ಯು Read More »

ಮನೆ ಮನೆಮತದಾನ ಪ್ರಕ್ರಿಯೆಗೆ  ಚಾಲನೆ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡುವ ಪ್ರಕ್ರಿಯೆಗೆ ಚಾಲನೆ ದೊರಕಿದೆ. ಏ. 17ರ ವರೆಗೆ ಅಂಚೆ ಮತಪತ್ರದ ಮೂಲಕ ಮತದಾನ ನಡೆಯಲಿದೆ. ದ.ಕ.ದಲ್ಲಿ 85 ವರ್ಷ ಮೇಲ್ಪಟ್ಟ 6,053 ಮತದಾರರಿಗೆ ಹಾಗೂ ಶೇ. 40ಕ್ಕಿಂತ ಮೇಲ್ಪಟ್ಟು ಅಂಗವೈಕಲ್ಯ ಹೊಂದಿರುವ 1,957 ಮತದಾರರು ಸಹಿತ 8,010 ಮಂದಿಯ ಮನೆಮನೆ ಭೇಟಿ ಮಾಡಿ ಅಂಚೆ ಮತಪತ್ರದ ಮೂಲಕ ಮತದಾನ ಸೌಲಭ್ಯ ಒದಗಿಸಲಾಗಿದೆ. ಈ ಪೈಕಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ

ಮನೆ ಮನೆಮತದಾನ ಪ್ರಕ್ರಿಯೆಗೆ  ಚಾಲನೆ Read More »

ಕಾರಿಗೆ ಕಂಟೈನರ್‌ ಡಿಕ್ಕಿ : ಕಾರು ಜಖಂ

ಸುಳ್ಯ: ಗಾಂಧಿನಗರ ಮಸೀದಿಯ ಮುಂಭಾಗ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡಿರುವುದಾಗಿ ವರದಿಯಾಗಿದೆ. ಏ.16ರಂದು ಮುಂಜಾನೆ ಈ ಘಟನೆ ನಡೆದಿದೆ. ಗಾಂಧಿನಗರ ಪೆಟ್ರೋಲ್ ಬಂಕ್ ಮಾಲಕ ಮುಜೀಬ್‌ ರವರು ಬೆಳಗ್ಗೆ 5ರ ಸುಮಾರಿಗೆ ಮಸೀದಿಗೆ ಕಾರಿನಲ್ಲಿ ಬಂದಿದ್ದರು. ಕಾರನ್ನು ಮಸೀದಿಯ ಎದುರಿನ ರಸ್ತೆಯ ಇನ್ನೊಂದು ಬದಿಯಲ್ಲಿ ಗಾಂಧಿನಗರ ಕಡೆಗೆ ಮುಖ ಮಾಡಿ ನಿಲ್ಲಿಸಿದ್ದರು. ಸುಮಾರು 5.30ರ ವೇಳೆಗೆ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತಿದ್ದ ಕಂಟೈನರ್ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ

ಕಾರಿಗೆ ಕಂಟೈನರ್‌ ಡಿಕ್ಕಿ : ಕಾರು ಜಖಂ Read More »

error: Content is protected !!
Scroll to Top