ದಕ್ಷಿಣ ಕನ್ನಡ

ಸೇತುವೆ ಕಾಮಗಾರಿ ವೇಳೆ ಕುಸಿತ : ಇಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರು

ಪುಣಚ: ಸೇತುವೆ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆ ಕುಸಿದು ಇಬ್ಬರು ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾದ ಘಟನೆ ವಿಟ್ಲ ಪುಣಚದ ಬರೆಂಜ ಎಂಬಲ್ಲಿ ಇಂದು ನಡೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಕರೊದೊಯ್ದು ಚಿಕಿತ್ಸೆ ನೀಡಲಾಗಿದೆ. ಬರೆಂಜ-ಕುರುಡುಕಟ್ಟೆ ಸಂಪರ್ಕ ರಸ್ತೆಗೆ ನೂತನ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಸೇತುವೆ ಕುಸಿದಿದೆ. ಈ ಸಂದರ್ಭ ಇಬ್ಬರು ಸೇತುವೆ ಕೆಳಗೆ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಇಬ್ಬರು ಗಾಯಗೊಂಡರೆನ್ನಲಾಗಿದೆ.

ಸೇತುವೆ ಕಾಮಗಾರಿ ವೇಳೆ ಕುಸಿತ : ಇಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರು Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸುಳ್ಯ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಇಂದು ಮುಂಜಾನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಬೆಂಗಳೂರಿನಿಂದ ತೊಡಿಕಾನಕ್ಕೆ ಬರುತ್ತಿದ್ದ ಕಾರು ಚಾಲಕ ನಿದ್ರೆಯ ಮಂಪರಿನಲ್ಲಿದ್ದರು ಎನ್ನಲಾಗಿದ್ದು, ನಿಯಂತ್ರಣ ತಪ್ಪಿ ರಸ್ತೆ ಬದಿ ಉರುಳಿ ಬಿದ್ದಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಹಿಂದೂ ಮುಖಂಡನಿಗೆ ಚೂರಿ ಇರಿತ !

ಬಂಟ್ವಾಳ : ಹಿಂದೂ ಯುವಸೇನೆಯ ಮುಖಂಡ, ಉದ್ಯಮಿಯೊಬ್ಬರಿಗೆ ಚೂರಿಯಿಂದ ಇರಿದ ಘಟನೆ ಭಾನುವಾರ ರಾತ್ರಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿ ರವಿ ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ

ಹಿಂದೂ ಮುಖಂಡನಿಗೆ ಚೂರಿ ಇರಿತ ! Read More »

ಮೋದಿ ರೋಡ್ ಶೋ | ಕೆಲ ಹೊತ್ತಿನ ಮುಂಚೆ ಕಟ್ಟಡದಲ್ಲಿ ಅಗ್ನಿದುರಂತ

ಮಂಗಳೂರು : ಮಂಗಳೂರಿನಲ್ಲಿ  ಇಂದು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದ ಬಳಿ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾದ ಘಟನೆ  ನಡೆದಿದೆ. ಭಾನುವಾರ ಸಂಜೆ ರೋಡ್ ಶೋ ಆರಂಭವಾಗುವ ಕೆಲ‌ಹೊತ್ತಿನ ಮುಂಚೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾಗಿದೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸು ಕಾರ್ಯ ನಡೆಸಿದ್ದಾರೆ.

ಮೋದಿ ರೋಡ್ ಶೋ | ಕೆಲ ಹೊತ್ತಿನ ಮುಂಚೆ ಕಟ್ಟಡದಲ್ಲಿ ಅಗ್ನಿದುರಂತ Read More »

ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ| ಬೃಹತ್ ಸಂಖ್ಯೆಯಲ್ಲಿ ಸೇರಿದ ಜನಸಮೂಹ

ಮಂಗಳೂರು: ಲೋಕಸಭೆ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋದಲ್ಲಿ ಪಾಲ್ಗೊಂಡರು. ಇದಕ್ಕೂ ಮುನ್ನ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ವಿಜಯಸಂಕಲ್ಪ ಬೃಹತ್ ಸಮಾವೇಶ ಮುಗಿಸಿದ ಬಳಿಕ ಪ್ರಧಾನಿ ಮೋದಿ ಮಂಗಳೂರು ತಲುಪಿದರು. ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಅವರು, ಕೆಂಜಾರಿನಿಂದ ನೇರವಾಗಿ ಲೇಡಿಹಿಲ್ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ರೋಡ್ ಶೋ ಆರಂಭಿಸಿದರು. ಲಾಲ್

ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ| ಬೃಹತ್ ಸಂಖ್ಯೆಯಲ್ಲಿ ಸೇರಿದ ಜನಸಮೂಹ Read More »

ಸಾವಿರ ಸೀಮೆಯ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶು ಕಣಿ ಪೂಜೆ

ಪಂಜ : ಸಾವಿರ ಸೀಮೆಯ ಒಡೆಯ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೌರಮಾನ ಯುಗಾದಿ ಪ್ರಯುಕ್ತ ವಿಶು ಕಣಿ ಪೂಜೆ ಇಂದು ಜರುಗಿತು. ಸ್ಥಳೀಯ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್, ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಸಾವಿರ ಸೀಮೆಯ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶು ಕಣಿ ಪೂಜೆ Read More »

ಚುನಾವಣೆ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು : ಬಿ.ಮುರಳಿ ಕುಮಾರ್

ಮಂಗಳೂರು : ಪ್ರತಿಯೊಂದು ಘಟನೆಯನ್ನು ಸೂಕ್ಷ್ಮವಾಗಿ ಗಮನಿಸಿ ಅಭ್ಯರ್ಥಿಗಳ ವೆಚ್ಚದ ಬಗ್ಗೆ ನಿಗಾವಹಿಸಬೇಕು.ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಮಾದರಿ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಎಂದು ರಾಜ್ಯಕ್ಕೆ ನಿಯೋಜನೆಗೊಂಡ ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್ ನಿರ್ದೇಶನ ನೀಡಿದರು. ಅವರು ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಕುರಿತಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ  ಮಾತನಾಡಿದರು. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ವೆಚ್ಚಗಳ ಬಗ್ಗೆ ವಿಶೇಷ ನಿಗಾವಹಿಸುವಂತೆ  ಮತ್ತು ಕಾಲಕಾಲಕ್ಕೆ ಪರಿಶೀಲಿಸುವಂತೆ ಸೂಚಿಸಿದರು.ಚುನಾವಣಾ ಅವಧಿಯಲ್ಲಿ

ಚುನಾವಣೆ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು : ಬಿ.ಮುರಳಿ ಕುಮಾರ್ Read More »

ನಾವು ಯಾರನ್ನೂ ದ್ವೇಷಿಸಿಲ್ಲ. ಪ್ರೀತಿಯಿಂದಲೇ ಜನರ ಬಳಿಗೆ ಹೋಗಿದ್ದೇವೆ : ಪದ್ಮರಾಜ್ ಆರ್. ಪೂಜಾರಿ

ಬೆಳ್ತಂಗಡಿ : ನಾವು ಯಾರನ್ನೂ ದ್ವೇಷಿಸಿಲ್ಲ. ಪ್ರೀತಿಯಿಂದಲೇ ಜನರ ಬಳಿಗೆ ಹೋಗಿದ್ದೇವೆ. ಹಾಗಾಗಿ ಮುವತ್ತ್ಮೂರು ವರ್ಷಗಳ ಸರಪಳಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮುರಿಯಲಿದೆ. ಕಾಂಗ್ರೆಸ್ ಜಿಲ್ಲೆಯಲ್ಲಿ ಗೆಲುವು ಪಡೆಯುವುದು ನಿಶ್ಚಿತ  ಎಂದು  ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಗರ ಹಾಗೂ ಗ್ರಾಮೀಣ ಘಟಕದ ಮುಖಂಡರು, ಕಾರ್ಯಕರ್ತರ ಸಭೆ ಬೆಳ್ತಂಗಡಿ ಕಾಂಗ್ರೆಸ್ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಹಿಂದುಳಿದ ವರ್ಗದ ಸಮುದಾಯಗಳ ಸಭೆಯನ್ನು ಮಂಗಳೂರಿನಲ್ಲಿ ಕರೆದಿದ್ದೇವು. ಎಲ್ಲಾ

ನಾವು ಯಾರನ್ನೂ ದ್ವೇಷಿಸಿಲ್ಲ. ಪ್ರೀತಿಯಿಂದಲೇ ಜನರ ಬಳಿಗೆ ಹೋಗಿದ್ದೇವೆ : ಪದ್ಮರಾಜ್ ಆರ್. ಪೂಜಾರಿ Read More »

ಕಾರಿನಲ್ಲಿ ಬಂದ ತಂಡವೊಂದು ಯುವಕನ ಮೇಲೆ ಚೂರಿ ಇರಿತ

ಉಪ್ಪಿನಂಗಡಿ : ಕಾರಿನಲ್ಲಿ ಬಂದ ತಂಡವೊಂದು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಬಿಳಿಯೂರು ಗ್ರಾಮದ ಕರ್ವೇಲು ಬಳಿ ಎ.12ರಂದು ನಡೆದಿದೆ. ಕರ್ವೇಲು ಜನತಾ ಕಾಲನಿ ನಿವಾಸಿ ಹಕೀಂ (34) ಇವರು ಜಂಕ್ಷನ್ ಬಳಿ ನಿಂತಿದ್ದ ಸಂದರ್ಭ ಅಲ್ಲಿಗೆ ಕಾರಿನಲ್ಲಿ ಬಂದ ತಂಡ ಚೂರಿಯಿಂದ ಇರಿದು ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.ಚೂರಿ ಇರಿತಕ್ಕೆ ಒಳಗಾಗಿ, ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನಲ್ಲಿ ಬಂದ ತಂಡವೊಂದು ಯುವಕನ ಮೇಲೆ ಚೂರಿ ಇರಿತ Read More »

ಕೋಳಿ ಅಂಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆ

ಕನಕಮಜಲು: ಕನಕಮಜಲು ಗ್ರಾಮದ ಸುಣ್ಣಮೂಲೆ ಬಾಡಿಗೆ ಕೊಠಡಿಯಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೋರ್ವ ಕೋಳಿ ಅಂಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.  ನೇಣು ಬಿಗಿದುಕೊಂಡ ವ್ಯಕ್ತಿ ಬಾಬಣ್ಣ ಎಂದು ಗುರುತಿಸಲಾಗಿದೆ.ಕೋಳಿ ಅಂಗಡಿಯ ಹತ್ತಿರದಲ್ಲಿ ಇವರ ರೂಮ್ ಇದ್ದು ಅಲ್ಲಿಂದ ಕೋಳಿ ಅಂಗಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಗೆ ಆರೋಗ್ಯ ಸಮಸ್ಯೆ ಇತ್ತು ಎಂದು ಹೇಳಲಾಗುತ್ತಿದ್ದು ರೂಮ್ ನಲ್ಲಿ ಇವರು ಒಬ್ಬರೇ ವಾಸಿಸುತ್ತಿದ್ದರು. ಇದೀಗ ಸ್ಥಳಕ್ಕೆ ಪೋಲಿಸ್ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೋಳಿ ಅಂಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆ Read More »

error: Content is protected !!
Scroll to Top