ದಕ್ಷಿಣ ಕನ್ನಡ

ಕಡಬ ಐಐಸಿಟಿ ಮೊಂಟೆಸ್ಸರಿ ಶಿಕ್ಷಣ ಸಂಸ್ಥೆಗೆ ಪ್ರಥಮ ವರ್ಷದಲ್ಲಿ 100% ಫಲಿತಾಂಶ

ಕಡಬ: ಭಾರತ ಸರಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಅಧೀನದಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್  ಆಫ್ ಕ್ಯಾರಿಯರ್ ಟ್ರೈನಿಂಗ್ ನ ಆಶ್ರಯದಲ್ಲಿ ಕಡಬದ ಸೈಂಟ್ ಜೋಕಿಮ್ಸ್  ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಐ ಎಸ್ ಓ 9001: 2015 ಸಂಸ್ಥೆಯಿಂದ ಪ್ರಾಮಾಣಿಕರಿಸಿದ ಐಐಸಿಟಿ  ಶಿಕ್ಷಣ ಸಂಸ್ಥೆಯ ವತಿಯಿಂದ ಮೊಂಟೆಸ್ಸರಿ (ನರ್ಸರಿ ಟೀಚರ್ ಟ್ರೈನಿಂಗ್) ಶಿಕ್ಷಕರ ತರಬೇತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 9 ವಿದ್ಯಾರ್ಥಿನಿಯರಲ್ಲಿ 5 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 4 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವುದರೊಂದಿಗೆ ಸಂಸ್ಥೆಗೆ […]

ಕಡಬ ಐಐಸಿಟಿ ಮೊಂಟೆಸ್ಸರಿ ಶಿಕ್ಷಣ ಸಂಸ್ಥೆಗೆ ಪ್ರಥಮ ವರ್ಷದಲ್ಲಿ 100% ಫಲಿತಾಂಶ Read More »

ಶಾಸಕ ಹರೀಶ್ ಪೂಂಜ ಬಂಧನ ಸಾಧ್ಯತೆ | ವಕೀಲರ ತಂಡ ಭೇಟಿ

ಬೆಳ್ತಂಗಡಿ : ಹರೀಶ್ ಪೂಂಜ ಬಂಧನ ಸಾಧ್ಯತೆಯಿದ್ದು, ಈ ಹಿನ್ನಲೆಯಲ್ಲಿ ಹರೀಶ್ ಪೂಂಜ ಅವರ ನಿವಾಸಕ್ಕೆ ವಕೀಲರ ತಂಡ ಇಂದು ಭೇಟಿ ನೀಡಿದೆ. ಶಾಸಕ ಹರಿಶ್ ಪೂಂಜ ನಿವಾಸಕ್ಕೆ ಬೇಟಿ ನೀಡಿರುವ ವಕೀಲರ ತಂಡ ಪೊಲೀಸರ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮನೆಯ ಹೊರಗಡೆ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದಾರೆ. ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿಯು ನಡೆಯುತ್ತಿದೆ ಎನ್ನಲಾಗಿದೆ.

ಶಾಸಕ ಹರೀಶ್ ಪೂಂಜ ಬಂಧನ ಸಾಧ್ಯತೆ | ವಕೀಲರ ತಂಡ ಭೇಟಿ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ತಾಲೂಕು ಕಚೇರಿ ಎದುರು ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ. ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದ, ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಬೆದರಿಕೆ ಹಾಕಿದ್ದರು. ಇದೀಗ ಪೊಲೀಸರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ತಾಲೂಕು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಮತ್ತೊಂದು ಪ್ರಕರಣ ದಾಖಲು Read More »

ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿ.ಎಂ  ಸಿದ್ಧರಾಮಯ್ಯ

ಬೆಳ್ತಂಗಡಿ: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಮಂಗಳವಾರ ಮಾಜಿ ಸಚಿವ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದರು. ಸತ್ಯ,

ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿ.ಎಂ  ಸಿದ್ಧರಾಮಯ್ಯ Read More »

ಮೇ 25 : ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ ಸಮಾರಂಭ | ಮೇಳೈಸಲಿದೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು

ಕಡಬ: ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ ಸಮಾರಂಭ ಮೇ 25 ಶನಿವಾರ ಮಧ್ಯಾಹ್ನ 2 ರಿಂದ ಕಡಬ ತಾಲೂಕಿನ ಕೊಯಿಲದ ಕಲಾಯಿಗುತ್ತುವಿನಲ್ಲಿ ನಡೆಯಲಿದೆ. ಮಧ್ಯಾಹ್ನ ಗಂಟೆ 2 ರಿಂದ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ತಂಡದಿಂದ ಕುಣಿತ ಭಜನೆ, ಮಧ್ಯಾಹ್ನ 2.30 ರಿಂದ ಮಂಗಳೂರು ಶ್ರೀ ಶಬರಿ ಸಿಂಗಾರಿ ಮೇಳದಿಂದ ಚೆಂಡೆ ವಾದನ, ಮಧ್ಯಾಹ್ನ 3 ರಿಂದ ಶೃತಿ ಗಾಯನ ಮೆಲೋಡೀಸ್ ತಂಡದಿಂದ ಸಂಗೀತ ರಸಮಂಜರಿ, ಸರಿಗಮಪ ಖ್ಯಾತಿಯ ಕುಮಾರಿ ಪ್ರಜ್ಞ ಮರಾಠೆ

ಮೇ 25 : ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ ಸಮಾರಂಭ | ಮೇಳೈಸಲಿದೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು Read More »

ಕಂಟೈನರ್ ಹಾಗೂ ಇನ್ನೋವಾ ಡಿಕ್ಕಿ :  ತಾಯಿ, ಮಗ ಮೃತ್ಯು

ನೆಲ್ಯಾಡಿ : ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು, ನಾಲ್ಕೈದು ಮಂದಿ ಗಂಭೀರವಾದ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ನಡೆದಿದೆ. ತಾಯಿ ಸಪೀಯಾ, ಮಗ ಸಫೀಕ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮದುವೆ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ ಬಂಟ್ವಾಳ ತಾಲೂಕಿನ ಬೊಂಡಾಲದ ಕುಟುಂಬವೊಂದು ಬೆಂಗಳೂರಿನಿಂದ ಹಿಂತಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಕಾರು ಶಿರಾಡಿ ಘಾಟ್ ನ

ಕಂಟೈನರ್ ಹಾಗೂ ಇನ್ನೋವಾ ಡಿಕ್ಕಿ :  ತಾಯಿ, ಮಗ ಮೃತ್ಯು Read More »

ಕಂಪೌಂಡ್ ಕುಸಿದು ಬಿದ್ದು ಶಾಲಾ ವಿದ್ಯಾರ್ಥಿನಿ ಮೃತ್ಯು

ಕೊಣಾಜೆ : ಶಾಲಾ ಕಂಪೌಂಡ್ ಕುಸಿದು ಬಿದ್ದ ಪರಿಣಾಮ ಹರೇಕಳ ಹಾಜಬ್ಬರ ನ್ಯೂಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ನ್ಯೂಪಡ್ಪು ನಿವಾಸಿ ಸಿದ್ದೀಖ್ ಹಾಗೂ ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು (7) ಮೃತಪಟ್ಟ ಬಾಲಕಿ. ಸಂಜೆ ವೇಳೆ ಸುರಿದ ಮಳೆಯಿಂದಾಗಿ ದುರ್ಘಟನೆ ಸಂಭವಿಸಿದೆ. ಹರೇಕಳ ಹಾಜಬ್ಬರ ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ

ಕಂಪೌಂಡ್ ಕುಸಿದು ಬಿದ್ದು ಶಾಲಾ ವಿದ್ಯಾರ್ಥಿನಿ ಮೃತ್ಯು Read More »

ಬೆಂಗಳೂರಿನಲ್ಲಿ ಆತ್ಮಹತ್ಯೆಗೈದ ಎಡಮಂಗಲದ ಯುವಕ

ಸುಳ್ಯ,: ಎಡಮಂಗಲದ ಯುವಕನೋರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪುಚ್ಚಜ್ಜೆ  ನಿವಾಸಿ ದಿ.ಪುಟ್ಟಣ್ಣ ಗೌಡ ಎಂಬವರ ಪುತ್ರ ಪ್ರಸನ್ನ ಕುಮಾರ್ (26) ಆತ್ಮಹತ್ಯೆ ಮಾಡಿಕೊಂಡವರು ಪ್ರಸನ್ನ ಅವರು ಬೆಂಗಳೂರಿನ ಮಾರತಹಳ್ಳಿಯ ಸಂಸ್ಥೆಯೊಂದರಲ್ಲಿ ಎಸಿ ಟೆಕ್ನಿಷಿಯನ್ ಆಗಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದು, ಭಾನುವಾರ ರಾತ್ರಿ ಪಾಳಿನ ಕೆಲಸ ನಿರ್ವಹಿಸುತ್ತಿದ್ದು ಸೋಮವಾರ ಬೆಳಗ್ಗೆ ಸಂಸ್ಥೆಯ ಕೊಠಡಿಯಲ್ಲಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು.ತಾಯಿ, ಇಬ್ಬರು ಸಹೋದರನ್ನು ಅಗಲಿದ್ದಾರೆ.

ಬೆಂಗಳೂರಿನಲ್ಲಿ ಆತ್ಮಹತ್ಯೆಗೈದ ಎಡಮಂಗಲದ ಯುವಕ Read More »

ಆ್ಯಕ್ಟೀವಾಗೆ ಕಾರು ಡಿಕ್ಕಿ‌ : ಆ್ಯಕ್ಟೀವ ಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಆ್ಯಕ್ಟೀವಾಗೆ ಕಾರೊಂದು ಡಿಕ್ಕಿ‌ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ ನಿವಾಸಿ, ನಿವೃತ್ತ ಸೈನಿಕ ಚಿದಾನಂದ್ ಕಾಮತ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಡಿಪು ಇನ್ಫೋಸಿಸ್ ಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಅವಿವಾಹಿತರಾಗಿದ್ದು, ತನ್ನ ತಾಯಿ ಜೊತೆ ವಾಸವಾಗಿದ್ದಾರೆ. ಮೃತರು ತಾಯಿ, ಐವರು ಸಹೋದರರನ್ನು ಅಗಲಿದ್ದಾರೆ.

ಆ್ಯಕ್ಟೀವಾಗೆ ಕಾರು ಡಿಕ್ಕಿ‌ : ಆ್ಯಕ್ಟೀವ ಸವಾರ ಸ್ಥಳದಲ್ಲೇ ಮೃತ್ಯು Read More »

ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷರ ಬಂಧನ | ಬಿಜೆಪಿಯಿಂದ ಪ್ರತಿಭಟನೆ

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆಗೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ವತಿಯಿಂದ  ಬೆಳ್ತಂಗಡಿಯಲ್ಲಿ ಪ್ರತಿಭಟನೆ ಬೆಳ್ತಂಗಡಿಯಲ್ಲಿ ನಡೆಯಿತು. ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿಗರು ಪೊಲೀಸ್ ಇಲಾಖೆಯ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಲೋಕಸಭಾ ಅಭ್ಯರ್ಥಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ ಸಹಿತ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷರ ಬಂಧನ | ಬಿಜೆಪಿಯಿಂದ ಪ್ರತಿಭಟನೆ Read More »

error: Content is protected !!
Scroll to Top