ದಕ್ಷಿಣ ಕನ್ನಡ

ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವದ ಆರಂಭ – ಏ.11 ರಿಂದ 12 ವರೆಗೆ

ಸುಳ್ಯ: ಕೊಡಗು ಸಂಪಾಜೆ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇಗುಲದಲ್ಲಿ ಕಾಲಾವಧಿ ಜಾತ್ರೋತ್ಸವವು ಎ.11ರಂದು ಬೆಳಿಗ್ಗೆ ಉಗ್ರಾಣ ತುಂಬಿಸುವುದರ ಮೂಲಕ ಪ್ರಾರಂಭಗೊಂಡಿದ್ದು, ನಾಳೆ ರಾತ್ರಿ ಶ್ರೀ ಪಂಚಲಿಂಗೇಶ್ವರ ದೇವರ ನೃತ್ಯಬಲಿ, ಬಟ್ಟಲುಕಾಣಿಕೆ ಉತ್ಸವ ಜರುಗಲಿದೆ. ಇಂದು ಬೆಳಿಗ್ಗೆ ದೇಗುಲದಲ್ಲಿ ಪರಿವಾರ ದೈವಗಳ ತಂಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.ಇಂದು ಸಂಜೆ ತಂತ್ರಿಗಳ ಆಗಮನ, ದೇವತಾ ಪ್ರಾರ್ಥನೆ, ಪಶುದಾನ, ಪುಣ್ಯಾಹ, ಪ್ರಸಾದ ಶುದ್ದಿ, ರಾಕ್ಷೆಘ್ನ […]

ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವದ ಆರಂಭ – ಏ.11 ರಿಂದ 12 ವರೆಗೆ Read More »

ಎಳನೀರು ಕುಡಿದು 15 ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಮಂಗಳೂರು: ಮಂಗಳೂರು ನಗರದ ಹೊರವಲಯದ ಅಡ್ಯಾರ್ ಬಳಿ ಎಳನೀರು ಕುಡಿದು ಸುಮಾರು 15 ಮಂದಿ ಸಾರ್ವಜನಿಕರು ಅಸ್ವಸ್ಥಗೊಂಡ ಘಟನೆ ನಡೆದಿದೆ. ಅಡ್ಯಾ‌ರ್ ನಲ್ಲಿರುವ ಲ್ಯಾಂಡ್ಸ್ ಫ್ಲವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಮ್ ಮಾರಾಟ ಮಾಡುವ ಸಂಸ್ಥೆಯಿಂದ ಏ.8 ರಂದು ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ಎಳನೀರನ್ನು ಲೀಟರ್ ಲೆಕ್ಕದಲ್ಲಿ ಖರೀದಿಸಿದ್ದಾರೆ. ಎಳನೀರು ಕುಡಿದ ಬಳಿಕ ಮರುದಿನ ಬೆಳಗ್ಗೆಯಿಂದ ಸಂಜೆಯ ತನಕ ಅಡ್ಯಾರ್ ಕಣ್ಣೂರು, ತುಂಬೆ ನಿವಾಸಿಗಳು ವಾಂತಿ

ಎಳನೀರು ಕುಡಿದು 15 ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು Read More »

ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿ

ಬೆಳ್ತಂಗಡಿ: ಗರ್ಭಿಣಿ ಮಹಿಳೆಯೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ಬೆಳ್ತಂಗಡಿಯ ಕಲ್ಮಂಜ ಆದರ್ಶ ನಗರದಲ್ಲಿ ನಡೆದಿದೆ. ಆದರ್ಶ ನಗರದ ಹಮೀದ್ ಹಾಗೂ ನಝೀಮ ದಂಪತಿ ಪುತ್ರಿ ನಿಶ್ಚಾ (19) ಮೃತಪಟ್ಟವರು. ಮೃತ ನಿಶ್ಚಾ ಕುಂಟಿನಿ ನಿವಾಸಿ ಖಾಲಿದ್ ಉಸ್ಮಾನ್ ಅವರ ಸೊಸೆಯಾಗಿದ್ದು ಇವರಿಗೆ ಮದುವೆಯಾಗಿ 9 ತಿಂಗಳಾಗಿದ್ದು, ಇವರು 4 ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದು ಬಂದಿದೆ. ಮಹಿಳೆಯರು ಮೆನೋಪಾಸ್ ಆಗುವ ತನಕ ಅವರು ಹೃದಯ ಸಂಬಂಧಿ ಕಾಯಿಲೆಗಳಿಂದ ಬಹುತೇಕ ಮುಕ್ತರು ಎಂದು ವೈದ್ಯಲೋಕ ಹೇಳುತ್ತಿದೆ. ಅದರಲ್ಲೂ ಗರ್ಭವತಿ

ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿ Read More »

ತೋಟಕ್ಕೆ ದಾಳಿ ಮಾಡಿದ ಮಂಗಗಳ ತಂಡ | ಮಂಗಗಳನ್ನು ಓಡಿಸಲು ಪೊಲೀಸರನ್ನೇ ತೋಟಕ್ಕೆ ಕರೆಸಿದ ಕೃಷಿಕ

ವಿಟ್ಲ: ಚುನಾವಣಾ ನೀತಿ ಸಂಹಿತೆ ಪ್ರಕಾರ ಕೋವಿ ಡೆಪಾಸಿಟ್ ಮಾಡಿದ್ದ ಹಿನ್ನಲೆ ಕೃಷಿಕರೋರ್ವರು ತೋಟಕ್ಕೆ ನುಗ್ಗಿದ ಮಂಗಗಳನ್ನು ಓಡಿಸಲು 112 ತುರ್ತು ಪೊಲೀಸರನ್ನೇ ತೋಟಕ್ಕೆ ಕರೆಸಿದ ಘಟನೆ ಬುಧವಾರ ರಾತ್ರಿ ಅಳಿಕೆ ಗ್ರಾಮದ ಬಿಲ್ಲಂಪದವು ಎಂಬಲ್ಲಿ ನಡೆದಿದೆ. ಅಳಿಕೆ ಗ್ರಾಮದ ಕೃಷಿಕರು ಕಾಡುಹಂದಿ, ಕೋತಿಗಳ ಉಪಟಳದಿಂದ ಕಂಗಾಲಾಗಿದ್ದು, ಅಳಿಕೆ ಗ್ರಾಮದ ಕೃಷಿಕ ಬಿಲ್ಲಂಪದವು ನಿಶಾಂತ್ ಎಂಬವರು ಜಿಲ್ಲಾಧಿಕಾರಿಗೆ ಕರೆ ಮಾಡಿ ಸಮಸ್ಯೆ ವಿವರಿಸಿದರು, 112 ತುರ್ತು ಸಂಖ್ಯೆಗೆ ಕರೆಮಾಡುವಂತೆ ಜಿಲ್ಲಾಧಿಕಾರಿ ಸಲಹೆಯನ್ನು ನೀಡಿದ ಮೇರೆಗೆ ಬಳಿಕ 112

ತೋಟಕ್ಕೆ ದಾಳಿ ಮಾಡಿದ ಮಂಗಗಳ ತಂಡ | ಮಂಗಗಳನ್ನು ಓಡಿಸಲು ಪೊಲೀಸರನ್ನೇ ತೋಟಕ್ಕೆ ಕರೆಸಿದ ಕೃಷಿಕ Read More »

ಡಾಕ್ಟರೇಟ್ ಪದವಿ ಪಡೆದ ಕೆ.ವಿ.ಜಿ ಇಂಜನಿಯರಿಂಗ್ ಕಾಲೇಜಿನ ಉಪನ್ಯಾಸಕ: ಫ್ರೋ ಸಲೀಮ್ ಮಲಿಕ್ ಎಸ್

ಸುಳ್ಯ:ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ರೀಸರ್ಚ್ ಸೆಂಟರ್‌ನ ವಿದ್ಯಾರ್ಥಿ ಪ್ರೊಫೆಸರ್ ಸಲೀಮ್ ಮಲಿಕ್ ಎಸ್. ಇವರ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ವಿಟಿಯುನ ಎಕ್ಸೆಕ್ಯುಟಿವ್ ಕೌನ್ಸಿಲ್ ಸದಸ್ಯರು, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ. ಇವರ ಮಾರ್ಗದರ್ಶನದಲ್ಲಿ “Build out of an efficacious Arbitrator Miniature in Scolastic Systamatics for

ಡಾಕ್ಟರೇಟ್ ಪದವಿ ಪಡೆದ ಕೆ.ವಿ.ಜಿ ಇಂಜನಿಯರಿಂಗ್ ಕಾಲೇಜಿನ ಉಪನ್ಯಾಸಕ: ಫ್ರೋ ಸಲೀಮ್ ಮಲಿಕ್ ಎಸ್ Read More »

ಏ.14 ರ ಬಿಜೆಪಿ ಸಮಾವೇಶ ರದ್ದು | ಪ್ರಧಾನಿ ಮೋದಿಯಿಂದ ರೋಡ್ ಶೋ ಮಾತ್ರ

ಮಂಗಳೂರು: ಏ.14 ರಂದು ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಏ. 14ರಂದು ಸಂಜೆ 4 ಗಂಟೆಗೆ ಏರ್ಪಡಿಸಲಾದ ಸಮಾವೇಶ ದಿಢೀರ್ ರದ್ದಾಗಿದೆ. ಕೇವಲ ರೋಡ್ ಶೋ ಮಾತ್ರ ನಡೆಯಲಿದೆ. ಈ ಮೊದಲು ಏ.14 ರಂದು ಸಮಾವೇಶ ಏರ್ಪಡಿಸಲಾಗಿತ್ತು. ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ ಎಂದು ತಿಳಿಸಲಾಗಿತ್ತು. ಕೊನೆ ಕ್ಷಣದಲ್ಲಿ ಸಮಾವೇಶ ರದ್ದಾಗಿದೆ ಎಂಬ ಮಾಹಿತಿ ಜಿಲ್ಲಾ ಬಿಜೆಪಿಗೆ ಲಭ್ಯವಾಗಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಸಿಟಿಯಲ್ಲಿ ರೋಡ್ ಶೋ ಮಾತ್ರ ನಡೆಯಲಿದೆ ಎನ್ನಲಾಗಿದೆ.

ಏ.14 ರ ಬಿಜೆಪಿ ಸಮಾವೇಶ ರದ್ದು | ಪ್ರಧಾನಿ ಮೋದಿಯಿಂದ ರೋಡ್ ಶೋ ಮಾತ್ರ Read More »

ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ಕೋಟೆಬಾಗಿಲಿನ ಆಶಿಕ್ ಕೆ.ವೈ. ಆಯ್ಕೆ

ಸುಳ್ಯ: ಧಾರವಾಡದ ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ಸುಳ್ಯ ತಾಲೂಕಿನ ಕೋಟೆಬಾಗಿಲು ನಿವಾಸಿ ಆಶಿಶ್ ಕೆ.ವೈ ಆಯ್ಕೆಯಾಗಿದ್ದಾರೆ. ಕಬಡ್ಡಿಯಲ್ಲಿ ಅವರ ಪ್ರದರ್ಶನ ಹಾಗೂ ಸಾಧನೆ ಗುರುತಿಸಿ ಅವರ ಆಯ್ಕೆ ನಡೆದಿರುತ್ತದೆ. ಆಶಿಕ್ ಕೆ.ವೈ.ಯವರು ಮಂಗಳೂರಿನ ಶಕ್ತಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ತಾಲೂಕು ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿದ್ಯಾಭಾರತಿ ತಂಡವನ್ನು ಪ್ರತಿನಿಧಿಸಿದ್ದಾರೆ. ಅವರಿಗೆ ಕಿರಣ್ ಆರಂಪಾಡಿ ಹಾಗೂ ಮನೋಹ‌ರ್ ಸವಣೂರು ತರಬೇತು ನೀಡಿದ್ದಾರೆ. ಬಿಳಿನೆಲೆ ಗ್ರಾಮದ ಕೋಟೆ ಬಾಗಿಲು ನಿವಾಸಿ, ಸುಬ್ರಹ್ಮಣ್ಯ ಠಾಣೆಯ ಹಡೆ ಕಾನ್ಸ್ ಟೇಬಲ್ ಸಂಧ್ಯಾ ಮಣಿ-ಯೋಗೀಶ್

ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ಕೋಟೆಬಾಗಿಲಿನ ಆಶಿಕ್ ಕೆ.ವೈ. ಆಯ್ಕೆ Read More »

1300 ವರ್ಷ ಹಳೆಯ ಶಾಸನ ಪತ್ತೆ| ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಶಾಸನ- ಶೋಧನ- ಅಧ್ಯಯನ -ಸಂರಕ್ಷಣ ತಂಡದಿಂದ ಕುರುಹುಗಳ ಪರಿಶೀಲನೆ

ಬೆಳ್ಳಾರೆ: ಬೆಳ್ಳಾರೆಯ ಗೌರಿಪುರಂ ಎಂಬಲ್ಲಿ ಶ್ರೀ ರಾಜರಾಜೇಶ್ವರಿ ಸಾನಿಧ್ಯವಿರುವ ಕ್ಷೇತ್ರದ ಪರಿಸರದಲ್ಲಿ ಪತ್ತೆಯಾದ ಕೆಲವು ಶಾಸನ ಇತ್ಯಾದಿ ಪರಿಕರ ಕುರುಹು ಗಳ ಪರಿಶೀಲನೆಗೆ ಶಾಸನ ತಜ್ಞರಾದ ಡಾ.ಉಮಾನಾಥ್ ಶೆಣೈ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ  ಪುತ್ತೂರು ಉಮೇಶ್ ನಾಯಕ್ ಭೇಟಿ ನೀಡಿ  ಪರಿಶೀಲಿಸಿದರು. ಪರಿಶೀಲನೆಯ ಸಮಯದಲ್ಲಿ ಪುರಾತನ ಕಾಲದಲ್ಲಿ ವೈಭವದಲ್ಲಿ ಮೆರೆದ ದೇವಸ್ಥಾನದ ಕುರುಹುಗಳು, ಪಾಣಿಪೀಠ, ಸೋಮಸೂತ್ರ, ಬಲಿಕಲ್ಲು, ಇತ್ಯಾದಿಗಳು ಪತ್ತೆಯಾಗಿವೆ. ಮಾತ್ರವಲ್ಲದೆ ವಿಶೇಷವಾಗಿ   ದೇವಸ್ಥಾನವಿರುವ ಸ್ಥಳದಿಂದ ಸುಮಾರು 300 ಮೀಟರ್ ದೂರದ ದೇವರ

1300 ವರ್ಷ ಹಳೆಯ ಶಾಸನ ಪತ್ತೆ| ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಶಾಸನ- ಶೋಧನ- ಅಧ್ಯಯನ -ಸಂರಕ್ಷಣ ತಂಡದಿಂದ ಕುರುಹುಗಳ ಪರಿಶೀಲನೆ Read More »

ಪವಿತ್ರ ರಂಝಾನ್ ಹಬ್ಬ | ಇಂದು ಸಾರ್ವತ್ರಿಕ ರಜೆ ಘೋಷಣೆ

ಮಂಗಳೂರು: ಮುಸ್ಲಿಮರ ಪವಿತ್ರ ರಂಝಾನ್ ಹಬ್ಬದ ಪ್ರಯುಕ್ತ ಬುಧವಾರ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಬ್ಯಾಂಕ್‍ ಹಾಗೂ ಇತರ ಹಣಕಾಸು ಸಂಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಬ್ಯಾಂಕ್‍ಗಳಿಗೆ ನೆಗೋಷಿಯೇಬಲ್ ಇನ್ಸ್ ಟ್ರುಮೆಂಟ್ಸ್ ಆ್ಯಕ್ಟ್ ಅನ್ವಯವಾಗುವುದರಿಂದ ಜಿಲ್ಲಾಧಿಕಾರಿ ಆದೇಶದ ಹೊರತಾಗಿದೆ. ಈಗಾಗಲೇ ನಿಗದಿಯಾಗಿರುವ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಉಳಿದಂತೆ ಎಲ್ಲಾ ಸರಕಾರಿ ಕಚೇರಿಗಳಿಗೆ ರಜೆ ಘೊಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಪವಿತ್ರ ರಂಝಾನ್ ಹಬ್ಬ | ಇಂದು ಸಾರ್ವತ್ರಿಕ ರಜೆ ಘೋಷಣೆ Read More »

ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಪಲ್ಟಿ

ಸುಳ್ಯ: ಓಮ್ನಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಹಾಲೆಮಜಲು ಬಸ್ ತಂಗುದಾಣದ ಬಳಿ ಹೆದ್ದಾರಿ ತಿರುವಿನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಹರಿಹರದಿಂದ ಹಾಲೆಮಜಲು ಓಮ್ಮಿ ಬರುತ್ತಿದ್ದು, ಚಾಲಕ ಸೇರಿದಂತೆ ಓಮ್ಮಿಯಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಪಲ್ಟಿ Read More »

error: Content is protected !!
Scroll to Top