ದಕ್ಷಿಣ ಕನ್ನಡ

ಉಷ್ಣಾಂಶ ತೀವ್ರತೆಯಿಂದ ಕೋಳಿಗಳ ಸಾವು

ಮಂಗಳೂರು: ಕರಾವಳಿಯಲ್ಲಿ ಕೋಳಿ ಮಾಂಸ ಸೇವಿಸುವವರಿಗೂ ಉಷ್ಣಾಂಶ ಹೆಚ್ಚಳದ ಬಿಸಿ ತಟ್ಟಿದೆ. ಉಷ್ಣಾಂಶ ಹೆಚ್ಚಳದಿಂದ ಫಾರಂಗಳಲ್ಲಿ ಕೋಳಿಗಳು ಅನಿರೀಕ್ಷಿತವಾಗಿ ಸಾವಿಗೀಡಾಗುತ್ತಿದ್ದು ಕೋಳಿ ಮಾಂಸದ ಧಾರಣೆ ಮೂರು ನಾಲ್ಕು ದಿನಗಳಲ್ಲಿ ಪ್ರತಿ ಕೆ.ಜಿ.ಗೆ ರೂ. 40ರಿಂದ ರೂ.50ರವರೆಗೆ ಜಾಸ್ತಿ ಆಗಿದೆ. ನಾಲ್ಕು ದಿನಗಳ ಹಿಂದೆ ಪ್ರತಿ ಕೆ.ಜಿ.ಗೆ ರೂ. 220 ಇದ್ದ ಕೋಳಿಮಾಂಸದ ದರ ಈಗ ರೂ. 270ಕ್ಕೆ ಹೆಚ್ಚಳವಾಗಿದೆ. ಚರ್ಮಸಹಿತ ಕೋಳಿ ಮಾಂಸದ ಧಾರಣೆ ಕೆ.ಜಿ.ಗೆ ರೂ. 190 ಇದ್ದುದು ಈಗ ರೂ.240ಕ್ಕೆ ಏರಿಕೆಯಾಗಿದೆ. ಜೀವಂತ ಬ್ರಾಯ್ಲರ್ […]

ಉಷ್ಣಾಂಶ ತೀವ್ರತೆಯಿಂದ ಕೋಳಿಗಳ ಸಾವು Read More »

ಲೋಕಸಭಾ ಚುನಾವಣೆ ; ಪೋಲಿಸರು ಹಾಗೂ ಸಿ ಆರ್ ಪಿ ಎಫ್ ಪಡೆ ವತಿಯಿಂದ ಕಲ್ಲುಗುಂಡಿ ಪೇಟೆಯ ಮುಖ್ಯ ರಸ್ತೆಯಲ್ಲಿ ಪಥ ಸಂಚಲನ

ಸುಳ್ಯ: ಲೋಕಸಭಾ ಚುನಾವಣೆಯ ಪ್ರಯುಕ್ತ ಕಲ್ಲುಗುಂಡಿ ಪೇಟೆಯ ಮುಖ್ಯ ರಸ್ತೆಯಲ್ಲಿ ಪೋಲಿಸರು ಹಾಗೂ ಸಿ ಆರ್ ಪಿ ಎಫ್ ಪಡೆ ವತಿಯಿಂದ ಇಂದು ಪಥ ಸಂಚಲನ ನಡೆಯಿತು. ಕಲ್ಲು ಗುಂಡಿ ಮುಖ್ಯ ಬೀದಿಗಳಲ್ಲಿ ಸಾಗಿ ಪೊಲೀಸ್‌ ಔಟ್ ಪೋಸ್ಟ್ ಬಳಿ ಸಮಾಪನಗೊಂಡಿತು .ಸಿ ಆರ್ ಪಿ ಎಫ್ ನ 30ಕ್ಕೂ ಹೆಚ್ಚು ಮಂದಿ ಸಿಬ್ಬಂದಿಗಳು,ಸುಳ್ಯ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಗಳು, ಗೃಹರಕ್ಷಕ ದಳದ ಸಿಬ್ಬಂದಿಗಳು,ಅಧಿಕಾರಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಸುಳ್ಯ ಪೊಲೀಸ್‌ ಠಾಣಾ ಉಪನಿರೀಕ್ಷಕರುಗಳಾದ ಈರಯ್ಯ ದೂಂತೂರು, ಸರಸ್ವತಿ ಉಪಸ್ಥಿತರಿದ್ದರು.

ಲೋಕಸಭಾ ಚುನಾವಣೆ ; ಪೋಲಿಸರು ಹಾಗೂ ಸಿ ಆರ್ ಪಿ ಎಫ್ ಪಡೆ ವತಿಯಿಂದ ಕಲ್ಲುಗುಂಡಿ ಪೇಟೆಯ ಮುಖ್ಯ ರಸ್ತೆಯಲ್ಲಿ ಪಥ ಸಂಚಲನ Read More »

ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿಗಳ ಭೇಟಿ- ಬಾಲಕೃಷ್ಣ ಶಾಸ್ತ್ರಿ

ಪಂಜ: ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ದ ಹಿರಿಯ ನ್ಯಾಯವಾದಿಗಳಾದ ಬಾಲಕೃಷ್ಣ ಶಾಸ್ತ್ರಿ ಗಟ್ಟಿಗಾರ್ ಇಂದು ಶ್ರೀ ಪರಿವಾರ ಪಂಚಲಿಗೇಶ್ವರ ದೇಗುಲಕ್ಕೆ ಭೇಟಿ ನೀಡಿದರು. ಬಳಿಕ ಪ್ರಸಾದ ಸ್ವೀಕರಿಸಿದರು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾದ ದಾ. ದೇವಿ ಪ್ರಸಾದ್ ಕಾನತ್ತೂರು, ವ್ಯವಸ್ಥಾ ಪನ ಸಮಿತಿ ಸದಸ್ಯ ರಾದ ಕಾಯಂಬಾಡಿ ಸತ್ಯನಾರಾಯಣ ಭಟ್, ಸಂತೋಷ್ ಕುಮಾ‌ರ್ ರೈಬಳ್ಪ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರಾದ ರಜಿತ್‌ ಭಟ್ ಪಂಜ ಬೀಡು, ಅರ್ಚಕರಾದ ನರೇಶ್ ಕೃಷ್ಣ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿಗಳ ಭೇಟಿ- ಬಾಲಕೃಷ್ಣ ಶಾಸ್ತ್ರಿ Read More »

ಪ್ರಾಣಿ ಪಕ್ಷಿಗಳಿಗೆ ಬಿಸಿಲಿನ ಧಗೆಯಲ್ಲಿ ನೀರುಣಿಸುವ ಸೂಚನೆ- ಮುಲ್ಲೈ ಮುಗಿಲನ್

ಮಂಗಳೂರು : ದಕ್ಷಿಣಕನ್ನಡದಲ್ಲಿ ಬಿಸಿಲಿನ ಶಾಖ ಹೆಚ್ಚಾಗಿದ್ದು, ಪ್ರಾಣಿ ಪಕ್ಷಿಗಳಿಗೆ ನೀರಿನ ತೊಂದರೆಯಾಗುತ್ತಿದೆ. ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದರೆ.ಅವರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಯ ಕಟ್ಟಡಗಳ ಮೇಲೆ ನೆರಳಿನ ಆಶ್ರಯ ಇರುವಲ್ಲಿ ಮಡಕೆ, ಪಾತ್ರೆ, ಅಥವಾ ಟಬ್‌ಗಳಲ್ಲಿ ಸಾಕಷ್ಟು ನೀರು ತುಂಬಿಸಿಡುವ ಮೂಲಕ ಹಕ್ಕಿಗಳಿಗೆ ನೀರುಣಿಸಬೇಕು.ಬೇಸಿಗೆಯಲ್ಲಿ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಉಂಟಾಗಿದೆ. ಒಂದು ವಾರದಿಂದ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದೆ. ಬಿಸಿಲಿನ ತೀವ್ರತೆಗೆ ಜನ ಸಾಮಾನ್ಯರಿಗೆ ಮಾತ್ರವಲ್ಲದೆ ಹಕ್ಕಿಗಳಿಗೆ ಕೂಡಾ

ಪ್ರಾಣಿ ಪಕ್ಷಿಗಳಿಗೆ ಬಿಸಿಲಿನ ಧಗೆಯಲ್ಲಿ ನೀರುಣಿಸುವ ಸೂಚನೆ- ಮುಲ್ಲೈ ಮುಗಿಲನ್ Read More »

ಏಪ್ರಿಲ್‍14: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ

ಮಂಗಳೂರು :ಏ.14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ದ.ಕ ಜಿಲ್ಲೆಗೆ ಹಿಂದಿನ ಬಾರಿ ಮೋದಿ ಅವರು ಭೇಟಿ ನೀಡಿದಾಗ ಸೇರಿದ ಜನತೆಯ ದಾಖಲೆ ಮೀರಿಸುವಂತೆ ಈ ಬಾರಿ ಜನರು ಸಮಾವೇಶಗೊಳ್ಳಲಿದ್ದಾರೆ. ಏ.15,16, 17ರಂದು ಪಕ್ಷದ ರಾಜ್ಯಾಧ್ಯಕ್ಷರಿಂದ ತೊಡಗಿ ಎಲ್ಲ ಪ್ರಮುಖರು, ಅಭ್ಯರ್ಥಿಗಳು, ಕಾರ್ಯಕರ್ತರು ಮನೆ ಮನೆ ಸಂಪರ್ಕ ಹಾಗೂ ಪ್ರಚಾರ ನಡೆಸಲಿದ್ದಾರೆ

ಏಪ್ರಿಲ್‍14: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ Read More »

ಲೋಕಸಭಾ ಚುನಾವಣೆ | ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಏ.26ರಂದು ನಡೆಯುವ ಚುನಾವಣೆಯಲ್ಲಿ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿತ್ತು. ನಿನ್ನೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಅದರಂತೆ ಪಕ್ಷೇತರ ಅಭ್ಯರ್ಥಿ ಸತೀಶ್ ಬೂಡುಮಕ್ಕಿ ನಾಮಪತ್ರ ವಾಪಸ್ ಪಡೆದಿದ್ದಾರೆ ಎಂದು ಚುನಾವಣಾಧಿಕಾರಿ, ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ತಿಳಿಸಿದ್ದಾರೆ. ಕಣದಲ್ಲಿ ಕಾಂಗ್ರೆಸ್‌ನ ಪದ್ಮರಾಜ್ ಆ‌ರ್., ಬಿಜೆಪಿಯ ಬ್ರಿಜೇಶ್ ಚೌಟ, ಬಹುಜನ ಸಮಾಜ ಪಾರ್ಟಿಯ ಕಾಂತಪ್ಪ ಅಲಂಗಾರ್,

ಲೋಕಸಭಾ ಚುನಾವಣೆ | ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 9 ಅಭ್ಯರ್ಥಿಗಳು ಕಣದಲ್ಲಿ Read More »

ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2023-24ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಏಳು ದಿನಗಳ ಕಾಲ ಕಡಬ ತಾಲೂಕಿನ ನೇಲ್ಯಡ್ಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಸಮಾರೋಪ ಸಮಾರಂಭ ಏ.6 ರಂದು ನಡೆಯಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ದೀಪ ಬೆಳಗಿಸಿ ಉದ್ಘಾಟಿಸಿದರು. ನೇಲ್ಯಡ್ಕ ಶಾಲಾಭಿವೃದ್ಧಿ ಸಮಿತಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಘುನಾಥ್ ರೈ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಹಾಯಕ

ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ Read More »

ಚಲಿಸುತ್ತಿದ್ದ ಕಾರಿಗೆ ಹತ್ತಿಕೊಂಡ ಬೆಂಕಿ | ಅಪಾಯದಿಂದ ಪಾರು

ಬಂಟ್ವಾಳ:  ಕಾರೊಂದಕ್ಕೆ ಏಕಾಏಕಿ ಬೆಂಕಿ ಹತ್ತಿಕೊಂಡ ಘಟನೆ ಇಂದು ಬೆಳಿಗ್ಗೆ ಮೂಡುಬಿದಿಯ ರಾಯಿ ಕಂಗಿತ್ತಿಲು ಎಂಬಲ್ಲಿ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರಿನಲ್ಲಿದ್ದವರು ಇಳಿದಿದ್ದಾರೆ. ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಏಳಿಂಜೆಗುತ್ತು ಕೊಲ್ಲೆಟ್ಟು ಶರತ್ ಶೆಟ್ಟಿ ಅವರಿಗೆ ಸೇರಿದ ಡಸ್ಟರ್ ಕಾರಿನಲ್ಲಿ ಶಾರ್ಟ್‍ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕಾರಿನಲ್ಲಿ ಮಗು ಸಹಿತ ನಾಲ್ಕು ಮಂದಿ ಇದ್ದು, ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು

ಚಲಿಸುತ್ತಿದ್ದ ಕಾರಿಗೆ ಹತ್ತಿಕೊಂಡ ಬೆಂಕಿ | ಅಪಾಯದಿಂದ ಪಾರು Read More »

ಗುತ್ತಿಗಾರಿನ ಯುವಕ ರೈಲಿನಡಿಗೆ ಬಿದ್ದು ಮೃತ್ಯು

ಮಂಗಳೂರು: ಸುಳ್ಯ ತಾಲೂಕಿನ ಗುತ್ತಿಗಾರಿನ ಯುವಕನೋರ್ವ ಮಂಗಳೂರಿನಲ್ಲಿ ರೈಲಿನಡಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಗುತ್ತಿಗಾರು ಗ್ರಾಮದ ಚನಿಲ ನಿವಾಸಿ ಸುಪ್ರೀತ್ ನಾಯ್ಕ ಮೃತ ಪಟ್ಟ ಯುವಕ. ಘಟನೆಗೆ ಕಾರಣಗಳು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಗುತ್ತಿಗಾರಿನ ಯುವಕ ರೈಲಿನಡಿಗೆ ಬಿದ್ದು ಮೃತ್ಯು Read More »

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ !

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಮಗುಚಿ ಬಿದ್ದ ಘಟನೆ ಜೋಡುಪಾಲ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ. ಪರಿಣಾಮ ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ನಾಲ್ಕು ಜನ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿ ಲಭಿಸಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಷ್ಟೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ! Read More »

error: Content is protected !!
Scroll to Top