ದಕ್ಷಿಣ ಕನ್ನಡ

ಚಲಿಸುತ್ತಿದ್ದ ಕಾರಿನಲ್ಲಿ ಯುವಕರಿಂದ ಅಪಾಯಕಾರಿ ಸ್ಟಂಟ್ : ಪ್ರಕರಣ ದಾಖಲು..!!

ಕಡಬ : ಚಲಿಸುತ್ತಿದ್ದ ಕಾರಿನಲ್ಲಿ ಬಾಗಿಲು ಹಾಗೂ  ಕಾರಿನ ಮೇಲ್ಬಾಗದಲ್ಲಿ ಕುಳಿತು ಹರಸಾಹಸವನ್ನು ಮಾಡುತ್ತಾ ಚಲಿಸುತ್ತಿದ್ದ ಇತರ ವಾಹನಗಳ ಸಂಚಾರಕ್ಕೆ ತೊಂದರೆಯನ್ನುಂಟು ಮಾಡಿ ಹುಚ್ಚಾಟ ಮೆರೆದ ಘಟನೆ ಎ. 27 ಭಾನುವಾರದಂದು ರಾತ್ರಿ ಕಡಬದಲ್ಲಿ ನಡೆದಿದೆ. ಕಡಬ-ಉಪ್ಪಿನಂಗಡಿ ರಾಜ್ಯ ರಸ್ತೆಯಲ್ಲಿ ಕಡಬದಿಂದ ಅಲಂಕಾರು ತನಕ 15 ಕಿ.ಮೀ. ದೂರ ಹಲವು ಕಾರು ಮತ್ತು ದ್ವಿಚಕ್ರ ವಾಹನಗಳಲ್ಲಿ ಕರ್ಕಶವಾಗಿ ನಿರಂತರ ಹಾರ್ನ್ ಹಾಕುತ್ತಾ ಸಂಚಾರ ನಿಯಮವನ್ನು  ಉಲ್ಲಂಘಿಸಿ ವಾಹನ ಚಲಾಯಿಸಿರುವಂತಹ ಆರೋಪಗಳು ಸಾರ್ವಜನಿಕರಿಂದ ಕೇಳಿ ಬಂದಿದೆ. ಇದಕ್ಕೆ ಪೂರಕ […]

ಚಲಿಸುತ್ತಿದ್ದ ಕಾರಿನಲ್ಲಿ ಯುವಕರಿಂದ ಅಪಾಯಕಾರಿ ಸ್ಟಂಟ್ : ಪ್ರಕರಣ ದಾಖಲು..!! Read More »

ಮಂಗಳೂರು : ಹೊತ್ತಿ ಉರಿದ ಲಾರಿ | ಚಾಲಕ  ಪ್ರಾಣಪಾಯದಿಂದ ಪಾರು

ಮಂಗಳೂರು: ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಗೆ ಆಕಸ್ಮಿಕವಾಗಿ ಅಗ್ನಿ ಸ್ಪರ್ಶಗೊಂಡು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಮಡ್ ಬ್ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ವೇಳೆ ಕೊಯನಾಡು ಸಮೀಪ ಲಾರಿಯಲ್ಲಿ ದಿಡೀ‌ರ್ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಚಾಲಕ ಲಾರಿಯನ್ನು ನಿಲ್ಲಿಸಿ ಇಳಿದಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಸ್ಥಳೀಯರು, ಅಗ್ನಿಶಾಮಕ ದಳದವರು, ಪೊಲೀಸರು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಮಂಗಳೂರು : ಹೊತ್ತಿ ಉರಿದ ಲಾರಿ | ಚಾಲಕ  ಪ್ರಾಣಪಾಯದಿಂದ ಪಾರು Read More »

ಯಕ್ಷದ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಕಲಾವಿದರ ಘಟಕ: ನೂತನ ಪದಾಧಿಕಾರಿಗಳ ಆಯ್ಕೆ

ಮಂಗಳೂರಿನ ಬಳ್ಳಾಲ್ ಬಾಗ್ ಹೋಟೆಲ್ ಪತ್ತುಮುಡಿ ಸಭಾಭವನದಲ್ಲಿ  ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ನೇತೃತ್ವದಲ್ಲಿ ಜರಗಿದ ಸಭೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ಹವ್ಯಾಸಿ ಕಲಾವಿದರ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಮಧುಕರ ಭಾಗವತ ಕುಳಾಯಿ, ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ, ಕಾರ್ಯದರ್ಶಿಯಾಗಿ ವಿನಯ ಆಚಾರ್ ಹೊಸಬೆಟ್ಟು ಸಂಚಾಲಕರಾಗಿ ಸದಾಶಿವ ಆಳ್ವ ತಲಪಾಡಿ, ಕೋಶಾಧಿಕಾರಿಯಾಗಿ ವಿಜಯ ಶಂಕರ ಆಳ್ವ ಮಿತ್ತಳಿಕೆ, ಉಪಾಧ್ಯಕ್ಷರಾಗಿ ತೋನ್ಸೇ ಪುಷ್ಕಳ ಕುಮಾರ್ ಮತ್ತು ದಿವಾಕರ ಆಚಾರ್ಯ ಗೇರುಕಟ್ಟೆ, ಸಹ ಕಾರ್ಯದರ್ಶಿಗಳಾಗಿ

ಯಕ್ಷದ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಕಲಾವಿದರ ಘಟಕ: ನೂತನ ಪದಾಧಿಕಾರಿಗಳ ಆಯ್ಕೆ Read More »

ಕುಡುಪು ಕೊಲೆ ಪ್ರಕರಣ : ಹಲವು ಮಂದಿ ವಶ

ಕೋಮು ವೈಷಮ್ಯಕ್ಕೆ ಎಡೆಮಾಡಿಕೊಡದಂತೆ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಮನವಿ ಮಂಗಳೂರು : ಮಂಗಳೂರಿನ ಹೊರವಲಯದ ಕುಡುಪು ಬಳಿ ಯುವಕನನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಂತ್ಯಂತ ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಚಿವ ದಿನೇಶ್ ಗುಂಡೂರಾವ್, ಕ್ರಿಕೆಟ್ ಆಟ ಆಡುವ ವೇಳೆ ಆಟಗಾರರು ಹಾಗೂ ಅನ್ಯ ಕೋಮಿನ ಯುವಕನ ನಡುವೆ ಮಾತಿನ ಚಕಮಕಿ ನಡೆದು, ಯುವಕನ ಮೇಲೆ

ಕುಡುಪು ಕೊಲೆ ಪ್ರಕರಣ : ಹಲವು ಮಂದಿ ವಶ Read More »

ಹಿಂದೂ ದ್ವೇಷದ ಪೋಸ್ಟ್‌ ಹಾಕಿದ ಮಂಗಳೂರಿನ ವೈದ್ಯೆ ವಿರುದ್ಧ ಎಫ್‌ಐಆರ್‌

ನೌಕರಿಯಿಂದ ವಜಾಗೊಳಿಸಿದ ಹೈಲ್ಯಾಂಡ್‌ ಆಸ್ಪತ್ರೆ ಮಂಗಳೂರು : ಪಹಲ್ಗಾಮ್‌ ಉಗ್ರ ದಾಳಿಯ ಬಳಿಕ ಸೋಷಿಯಲ್‌ ಮೀಡಿಯಾದಲ್ಲಿ ವಿವಾದಾತ್ಮಕ ಪೋಸ್ಟ್‌ ಒಂದನ್ನು ಹಾಕಿದ್ದ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ವೈದ್ಯೆಯನ್ನು ನೌಕರಿಯಿಂದ ವಜಾ ಮಾಡಲಾಗಿದೆ. ಡಾ.ಅಫೀಫ ಫಾತಿಮಾ ಎಂಬಾಕೆ ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ಥಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ʼಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ’ ಎಂದು ಸೋಷಿಯಲ್‌

ಹಿಂದೂ ದ್ವೇಷದ ಪೋಸ್ಟ್‌ ಹಾಕಿದ ಮಂಗಳೂರಿನ ವೈದ್ಯೆ ವಿರುದ್ಧ ಎಫ್‌ಐಆರ್‌ Read More »

ಶರವೂರಿನಲ್ಲಿ ಇಂದ್ರಜಿತು ಕಾಳಗ ತಾಳಮದ್ದಳೆ

ಶ್ರೀ ದುರ್ಗಾಂಬ ಕಲಾಸಂಗಮ ಶ್ರೀ ಕ್ಷೇತ್ರ ಶರವೂರು ಆಲಂಕಾರು ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ  ಇಂದ್ರಜಿತು ಕಾಳಗ ತಾಳಮದ್ದಳೆ ಜರಗಿತು. ಭಾಗವತರಾಗಿ ಡಿ. ಕೆ ಆಚಾರ್ಯ ಹಳೆನೇರೆಂಕಿ ಹಿಮ್ಮೇಳದಲ್ಲಿ  ಮುರಳೀಧರ ಕಲ್ಲೂರಾಯ,  ಚಂದ್ರ ದೇವಾಡಿಗ ನಗ್ರಿ ಅರ್ಥದಾರಿಗಳಾಗಿ (ರಾಮ1)  ಜಯರಾಮ ಗೌಡ ಬಲ್ಯ (ಇಂದ್ರಜಿತು), ಜಬ್ಬಾರ್ ಸಮೋ ಸಂಪಾಜೆ(ಹನುಮಂತ), ದಿವಾಕರ ಆಚಾರ್ಯ ಹಳೆನೇರೆಂಕಿ (ಮಾಯಾ ಸೀತೆ 1),  ಗುರು ಪ್ರಸಾದ್ ಆಲಂಕಾರು (ಮಾಯಾ ಸೀತೆ 2), ರಾಘವೇಂದ್ರ ಭಟ್ ತೋಟಂತಿಲ (ವಿಭೀಷಣ), ರಾಮ್

ಶರವೂರಿನಲ್ಲಿ ಇಂದ್ರಜಿತು ಕಾಳಗ ತಾಳಮದ್ದಳೆ Read More »

“ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ  ಅಚಲ್ ಬಿಳಿನೆಲೆ ಆಯ್ಕೆ.

ಸುಳ್ಯದ ಅಚಲ್ ಬಿಳಿನೆಲೆ ಬಿಹಾರದ “ಸ್ವಾಮಿ ತೇಜೋಮಯಾನಂದ ಸ್ಕೂಲ್ ಆಫ್ ಯೋಗ ಟ್ರೇಡಿಷನ್” ನಲ್ಲಿ ನಡೆಯಲಿರುವ ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು  ಹಿಂದಿನ ಕಾಲದ ಗುರುಕುಲ ಶಿಕ್ಷಣ  ಸಂಪ್ರದಾಯದ ಅನುಭವ ಪಡೆಯುವ  ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು  ಶ್ರೇಷ್ಟ ಗುರುಗಳ ಜೀವನ ವಿಧಾನಕ್ಕೆ ಒಡ್ಡಿಕೊಳ್ಳುವ ಪ್ರಯತ್ನವಾಗಿರುವ ಈ ಯೋಜನೆಯು ಬೇಸಿಗೆ ರಜೆಯಲ್ಲಿ ಒಂದು ತಿಂಗಳ ಕಾಲ ತಮ್ಮ ಕಲಾ ಕ್ಷೇತ್ರದ  ಗುರುವಿನೊಂದಿಗಿದ್ದು ಅಭ್ಯಾಸ ಮಾಡುವ  ವಿಭಿನ್ನ  ಅವಕಾಶವನ್ನು ಒದಗಿಸುತ್ತದೆ. ಸುಮಾರು

“ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ  ಅಚಲ್ ಬಿಳಿನೆಲೆ ಆಯ್ಕೆ. Read More »

ಉಪ್ಪಿನಂಗಡಿ ಕಾಳಿಕಾಂಬಾ ಸಂಘದಿಂದ ಶ್ರೀ ಶನೀಶ್ವರ ಮಹಾತ್ಮೆ ತಾಳಮದ್ದಳೆ

ಸಸಿಹಿತ್ತಿಲು ದೊಡ್ಡಮನೆ ಶ್ರೀಧರ ಅಮೀನ್ ಗೃಹಪ್ರವೇಶದ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ವತಿಯಿಂದ ಶ್ರೀ ಶನೀಶ್ವರ ಮಹಾತ್ಮೆ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ನಿತೇಶ್ ಕುಮಾರ್. ವೈ, ಸಂತೋಷ್ ಕುಮಾರ್ ಹರಿಹರ, ಹಿಮ್ಮೇಳದಲ್ಲಿ ದೇವಿಪ್ರಸಾದ್ ಕಟೀಲು, ಎಸ್‌ ಎನ್ ಭಟ್ ಬಾಯಾರು, ರಘುಪತಿ ಭಟ್ ಸಸಿಹಿತ್ತಿಲು, ಅರ್ಥದಾರಿಗಳಾಗಿ  ಗುಡ್ಡಪ್ಪ ಬಲ್ಯ, ಗೀತಾ ಕರಾಯ (ವಿಕ್ರಮಾದಿತ್ಯ,) ದಿವಾಕರ ಆಚಾರ್ಯ ಗೇರುಕಟ್ಟೆ (ವಿಭಾಕರ), ಹರೀಶ ಆಚಾರ್ಯ ಬಾರ್ಯ(ಆಸ್ಥಾನ ವಿದ್ವಾಂಸ), ಆಶಾಲತಾ

ಉಪ್ಪಿನಂಗಡಿ ಕಾಳಿಕಾಂಬಾ ಸಂಘದಿಂದ ಶ್ರೀ ಶನೀಶ್ವರ ಮಹಾತ್ಮೆ ತಾಳಮದ್ದಳೆ Read More »

ಕಾರು- ಮಿನಿ ಲಾರಿ ಡಿಕ್ಕಿ | ಓರ್ವ ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ನೆಲ್ಯಾಡಿ: ಕಾರು ಮತ್ತು ಮಿನಿ ಲಾರಿ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ಶಿರಾಡಿ ಗ್ರಾಮದ ಬರ್ಚಿನಹಳ್ಳದಲ್ಲಿ ನಿನ್ನೆ ನಡೆದಿದೆ. ನಿನ್ನೆ ಸಂಜೆ ಕಾರು ಮತ್ತು ಮಿನಿ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಜೈಪುರ ಮೂಲದ ಅಬ್ದುಲ್ ಶುಕ್ರು ಚೌಧರಿ ಮೃತಪಟ್ಟು, ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಹುಂಡೈ ಕಂಪನಿಯ ಕಾರು, ಬೆಂಗಳೂರು ಕಡೆಯಿಂದ ಬರುವ ಮಿನಿ ಲಾರಿ ಎನ್ನಲಾಗಿದೆ. ಕಾರಿನಲ್ಲಿ ಮೃತಪಟ್ಟ ಅಬ್ದುಲ್ ಅವರ ಪತ್ನಿ ಲತಿಕಾ, ಮಗಳು ಅನ್ವೇಷ, ಅಳಿಯ

ಕಾರು- ಮಿನಿ ಲಾರಿ ಡಿಕ್ಕಿ | ಓರ್ವ ಮೃತ್ಯು, ನಾಲ್ವರಿಗೆ ಗಂಭೀರ ಗಾಯ Read More »

ವ್ಯಕ್ತಿಯೋರ್ವನ ಕುತ್ತಿಗೆಗೆ ಚೂರಿಯಿಂದ ಇರಿತ | ಗಂಭೀರ ಗಾಯ

ಬೆಳ್ತಂಗಡಿ: ವ್ಯಕ್ತಿಯೊಬ್ಬನ ಕುತ್ತಿಗೆಗೆ ಹಾಗೂ ಎದೆಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ಡೆನ್ನಿಸ್ ಪಿಂಟೋ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದಾರೆ. ಕೊಲೆಗೈದವ ಸ್ಥಳೀಯ ನಿವಾಸಿ ಶೀನ ಎಂಬವರು ಆರೋಪಿಯಾಗಿದ್ದಾನೆ. ಅಳದಂಗಡಿ ಸಂತೆ ಮಾರುಕಟ್ಟೆಯ ಒಳಗೆ ಎ.26 ರಂದು ರಾತ್ರಿಯ ವೇಳೆ ಕ್ಷುಲ್ಲಕ ಕಾರಣಕ್ಕೆ ಆರೋಪಿ ಶೀನ ಎಂಬಾತ ಹಾಗೂ ಡೆನ್ನಿಸ್ ಪಿಂಟೋ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಶೀನ

ವ್ಯಕ್ತಿಯೋರ್ವನ ಕುತ್ತಿಗೆಗೆ ಚೂರಿಯಿಂದ ಇರಿತ | ಗಂಭೀರ ಗಾಯ Read More »

error: Content is protected !!
Scroll to Top