ದಕ್ಷಿಣ ಕನ್ನಡ

ಕುಂಜಾರಮ್ಮ ಕುಕ್ಕುಂದೂರು ನಿಧನ

ಸುಳ್ಯ: ಕುಂಜಾರಮ್ಮ ಕುಕ್ಕುಂದೂರು (79) ಇಂದು ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಅವರು ನಿಧನರಾಗಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

ಕುಂಜಾರಮ್ಮ ಕುಕ್ಕುಂದೂರು ನಿಧನ Read More »

ನೇಲ್ಯಡ್ಕ ಶಾಲೆಯಲ್ಲಿ ನಡೆದ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ 2024ನೇ ಸಾಲಿನ ಎನ್‍.ಎಸ್‍.ಎಸ್‍ ವಾರ್ಷಿಕ ಶಿಬಿರ

ಸವಣೂರು: ಸವಣೂರು ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2024ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಭಾನುವಾರ ಕಡಬ ತಾಲೂಕಿನ ನೇಲ್ಯಡ್ಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸುಬ್ರಹ್ಮಣ್ಯ ಕಣ್ಕಲ್ ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ನಿರಂಜನ್ ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕೆ.ರಘುನಾಥ ರೈ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಗ್ರಾಮದಲ್ಲಿ ಬರುವ ಏಳು ಶಾಲೆಗಳ ಪೈಕಿ ಆರು ಶಾಲೆಗಳಲ್ಲಿ ಮಾತ್ರ

ನೇಲ್ಯಡ್ಕ ಶಾಲೆಯಲ್ಲಿ ನಡೆದ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ 2024ನೇ ಸಾಲಿನ ಎನ್‍.ಎಸ್‍.ಎಸ್‍ ವಾರ್ಷಿಕ ಶಿಬಿರ Read More »

ಮನೆಯ ಮಹಡಿಯಿಂದ ಬಿದ್ದು ಬಾಲಕ ಮೃತ್ಯು !

ಬಂಟ್ವಾಳ: ಬಾಲಕನೋರ್ವ ಮನೆಯ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಎಂಬವರ ಪುತ್ರ ಆದಿಶ್ (15) ಮೃತಪಟ್ಟ ಬಾಲಕ. ಆದಿಶ್ ತನ್ನ ಮನೆಯ ಮಹಡಿಯಲ್ಲಿ ಮಲಗಿದ್ದು, ಮುಂಜಾನೆ ಎದ್ದು ಮೊಬೈಲ್‍ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡಿದಾಗ ಮಹಡಿಯಿಂದ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಆತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತಂದಾಗ ಅದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ.ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಯ ಮಹಡಿಯಿಂದ ಬಿದ್ದು ಬಾಲಕ ಮೃತ್ಯು ! Read More »

ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜನೆ | ಚುನಾವಣಾ ಆಯೋಗದಿಂದ ನೋಟೀಸ್

ಮಂಗಳೂರು: ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆಯೋಜಕರಿಗೆ ಚುನಾವಣಾ ಆಯೋಗ ನೋಟೀಸ್ ಜಾರಿ ಮಾಡಿದೆ. ಮಂಗಳೂರಿನ ಮುಡಿಪು ನಲ್ಲಿ ಒಂದು ಬದಿಯ ರಸ್ತೆಯನ್ನು ತಡೆಮಾಡಿ ಚಯರ್‍ ಗಳನ್ನು ಅಳವಡಿಸಿ ಇಫ್ತಾರ್ ಕೂಟ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಹಿಜಾಂವೇ ಆಯೋಜಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಅದರಂತೆ ಇದೀಗ ಚುನಾವಣಾ ಆಯೋಗ ನೋಟೀಸ್ ಜಾರಿ ಮಾಡಿದೆ.

ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜನೆ | ಚುನಾವಣಾ ಆಯೋಗದಿಂದ ನೋಟೀಸ್ Read More »

ಕಾಪು ಮಹಿಳಾ ಪಿಸಿ ಆತ್ಮಹತ್ಯೆ : ಪತಿ ಬಂಧನ

ಕಾಪು: ಪೋಲಿಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಅವರ ಪತಿ ರವಿಕುಮಾರ್ (35) ಅವರನ್ನು  ಕಾಪು ಪೋಲಿಸರು ಬಂಧಿಸಿದ್ದಾರೆ. ಆತ್ಮಹತ್ಯೆಗೈದ ಬಳಿಕ ಜ್ಯೋತಿ ಅವರ ಕೊಠಡಿಯಲ್ಲಿ ಡೈರಿಯೊಂದು ಸಿಕ್ಕಿದ್ದು  ಅದರಲ್ಲಿ ಆಕೆ  ತನ್ನ ಆತ್ಮಹತ್ಯೆಗೆ ನನ್ನ ಗಂಡನ ಸಂಶಯ ಪ್ರವೃತ್ತಿಯೇ ಕಾರಣ ಎಂದು ಬರೆದುಕೊಂಡಿದ್ದಾಗಿ ಆಕೆಯ ತಾಯಿ ದೇವಮ್ಮ ವಿಟ್ಲಾಪುರ ಪೋಲಿಸರಿಗೆ ದೂರು ನೀಡಿದ್ದಾರೆ. ಈ  ಹಿನ್ನಲೆಯಲ್ಲಿ ಪೋಲೀಸರು ಶನಿವಾರ ತಡರಾತ್ರಿ ಆಕೆಯ ಪತಿಯನ್ನು ಬಂಧಿಸಿದ್ದಾರೆ.

ಕಾಪು ಮಹಿಳಾ ಪಿಸಿ ಆತ್ಮಹತ್ಯೆ : ಪತಿ ಬಂಧನ Read More »

ಉಡುಪಿ ಪೇಜಾವರ ಶ್ರೀಗಳಿಂದ ಆಶೀರ್ವಾದ ಪಡೆದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಉಡುಪಿ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರನ್ನು ಭೇಟಿ ಮಾಡಿದರು. ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಪ್ರದೀಪ್ ಕುಮಾರ್ ಕಲ್ಕೂರ ಅವರ ನಿವಾಸದಲ್ಲಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪ್ರದೀಪ್ ಕುಮಾರ್ ಕಲ್ಕೂರ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಉಡುಪಿ ಪೇಜಾವರ ಶ್ರೀಗಳಿಂದ ಆಶೀರ್ವಾದ ಪಡೆದ ಕ್ಯಾ.ಬ್ರಿಜೇಶ್ ಚೌಟ Read More »

ಮುಡಿಪು ರಸ್ತೆಯಲ್ಲಿ ಇಫ್ತಾರ್ ಕೂಟ | ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂಜಾವೇಯಿಂದ ಚುನಾವಣಾ ಆಯುಕ್ತರಿಗೆ ದೂರು

ಮಂಗಳೂರು: ಮುಡಿಪು ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದ್ದು, ಈ ಕುರಿತು ಚುನಾವಣಾ ಆಯೋಗ ಹಾಗೂ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿ ಮುಡಿಪು ರಸ್ತೆಯಲ್ಲಿ ಒಂದು ಭಾಗವನ್ನು ತಡೆಮಾಡಿ ಒಂದು ಸಮುದಾಯ ಅನ್ಯರಾಜ್ಯಗಳ ವ್ಯಕ್ತಿಗಳನ್ನು ಸೇರಿಸಿ ಇಫ್ತಾರ್ ಕೂಟ ಮಾಡಿರುವುದು ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಇದರಿಂದ ಚುನಾವಣಾ ನೀತಿ ಉಲ್ಲಂಘನೆಯಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ತಕ್ಷಣ ಈ ಕುರಿತು ಮೊಕದ್ದಮೆ ದಾಖಲಿಸಿ

ಮುಡಿಪು ರಸ್ತೆಯಲ್ಲಿ ಇಫ್ತಾರ್ ಕೂಟ | ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂಜಾವೇಯಿಂದ ಚುನಾವಣಾ ಆಯುಕ್ತರಿಗೆ ದೂರು Read More »

ರಸ್ತೆಯಲ್ಲೇ ಇಫ್ತಾರ್ ಕೂಟ ಆಯೋಜನೆ | ವಿವಾದಕ್ಕೆಡೆ ಮಾಡಿದ ಇಫ್ತಾರ್ ಕೂಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಮಂಗಳೂರು: ಸೌಹಾರ್ದತೆಯ ಹೆಸರಿನಲ್ಲಿ ಇಫ್ತಾರ್ ಕೂಟವೊಂದನ್ನು ರಸ್ತೆಯಲ್ಲೇ ಆಯೋಜಿಸಿ ವಿವಾದಕ್ಕೆ ಕಾರಣವಾದ ಘಟನೆ ಉಳ್ಳಾಲ ತಾಲೂಕಿನ ಮುಡಿಪುವಿನಲ್ಲಿ ನಡೆದಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗುತ್ತಿದೆ. ಸೌಹಾರ್ದತೆಯ ಹೆಸರಿನಲ್ಲಿ  ಮುಡಿಪುವಿನ ಮುಖ್ಯರಸ್ತೆಯ ಒಂದು ಬದಿಯಲ್ಲಿ ಬ್ಲಾಕ್ ಇಫ್ತಾರ್ ಕೂಟ ನಡೆಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗಿದ್ದು, ನಾನಾ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮುಡಿಪು ಜಂಕ್ಷನ್‌ನಲ್ಲಿ ಆಟೋ ರಾಜಕನ್ಮಾರ್ ಎಂಬ ಸಂಘಟನೆ ಈ ಇಫ್ತಾರ್ ಕೂಟ ಆಯೋಜಿಸಿದೆ ಎನ್ನಲಾಗಿದೆ. ರಿಕ್ಷಾ ಚಾಲಕರೆಲ್ಲರೂ ಒಟ್ಟಾಗಿ ಸೇರಿಕೊಂಡು

ರಸ್ತೆಯಲ್ಲೇ ಇಫ್ತಾರ್ ಕೂಟ ಆಯೋಜನೆ | ವಿವಾದಕ್ಕೆಡೆ ಮಾಡಿದ ಇಫ್ತಾರ್ ಕೂಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ಸಾಕು ನಾಯಿಗಳಿಗೆ ವಿಷವಿಕ್ಕಿದ ನೀಚರು | 10 ಕ್ಕೂ ಅಧಿಕ ನಾಯಿಗಳ ಸಾವು

ಮುಂಡಾಜೆ : ಸಾಕು ನಾಯಿಗಳಿಗೆ ವಿಷವಿಕ್ಕಿದ ಪರಿಣಾಮ 10 ಕ್ಕೂ ಅಧಿಕ ನಾಯಿಗಳು ಸಾವನ್ನಪ್ಪಿದ ಘಟನೆ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ ಎಸೆದು ಹೋಗಿದ್ದಾರೆ. ಇದನ್ನು ತಿಂದಿರುವ ನಾಯಿಗಳು ಸಾವನ್ನಪ್ಪಿದೆ ಎನ್ನಲಾಗಿದೆ. ತಡರಾತ್ರಿ ಈಸ್ಟರ್ ಹಬ್ಬದಿಂದ ತೆರಳುತ್ತಿದ್ದ ಮಂದಿ ಇದನ್ನು ಗಮನಿಸಿ ತಕ್ಷಣ ಪಂಚಾಯಿತಿ ಅಧ್ಯಕ್ಷ ಗಣೇಶ್ ಬಂಗೇರ ಅವರ ಗಮನಕ್ಕೆ ತಂದರು. ಪರಿಶೀಲನೆ ನಡೆಸಿದಾಗ ಕೆಲವು ಮನೆಗಳ

ಸಾಕು ನಾಯಿಗಳಿಗೆ ವಿಷವಿಕ್ಕಿದ ನೀಚರು | 10 ಕ್ಕೂ ಅಧಿಕ ನಾಯಿಗಳ ಸಾವು Read More »

ಅಕ್ರಮ ಗೋಸಾಗಾಟ ಕಾರು ಪಾದಚಾರಿಗೆ ಡಿಕ್ಕಿ | ಘಟನೆಗೆ ಸಂಬಂಧಿಸಿ ಇಬ್ಬರು ಪೊಲೀಸ್ ವಶಕ್ಕೆ

ಪುತ್ತೂರು: ಅಕ್ರಮ ಗೋ ಸಾಗಾಟದ ಕಾರು ಡಿಕ್ಕಿಯಾಗಿ ಪಾದಚಾರಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಶನಿವಾರ ತಡರಾತ್ರಿ ವಿಠಲ ರೈ ಎಂಬವರು ತನ್ನ ಕಾರನ್ನು ಮರ್ದಾಳ ಪೇಟೆಯಲ್ಲಿ ರಸ್ತೆ ಬದಿ ನಿಲ್ಲಿಸಿ ರಸ್ತೆ ದಾಟುತಿದ್ದ ಸಂದರ್ಭ ಸುಬ್ರಹ್ಮಣ್ಯ ಕಡೆಯಿಂದ ಅಕ್ರಮ ಗೋಸಾಗಾಟ ಮಾಡಿಕೊಂಡು ಬರುತ್ತಿದ್ದ ಮಾರುತಿ 800 ಕಾರು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ತಕ್ಷಣ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ಕರೆತಂದಾಗ ಆದಾಗಲೇ ಮೃತಪಟ್ಟಿದ್ದರು.

ಅಕ್ರಮ ಗೋಸಾಗಾಟ ಕಾರು ಪಾದಚಾರಿಗೆ ಡಿಕ್ಕಿ | ಘಟನೆಗೆ ಸಂಬಂಧಿಸಿ ಇಬ್ಬರು ಪೊಲೀಸ್ ವಶಕ್ಕೆ Read More »

error: Content is protected !!
Scroll to Top