ದಕ್ಷಿಣ ಕನ್ನಡ

ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ | ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಮೊಮ್ಮಗ ಮೃತ್ಯು

ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‍ ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನಂತೂರಿನಲ್ಲಿ ನಡೆದಿದೆ. ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ (29) ಮೃತಪಟ್ಟವರು. ಶಮಿತ್ ನಿನ್ನೆ ರಾತ್ರಿ ಮಂಗಳೂರಿನ ಸ್ನೇಹಿತನ ಮನೆಯಲ್ಲಿ ದೈವದ ಕೋಲವೊಂದರಲ್ಲಿ ಪಾಲ್ಗೊಂಡು ತೊಕ್ಕೊಟ್ಟಿನ ಮನೆಗೆ ಕಾರಿನಲ್ಲಿ ಹಿಂತಿರುಗುತಿದ್ದಾಗ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಡಿವೈಡರ್‍ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ […]

ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ | ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಮೊಮ್ಮಗ ಮೃತ್ಯು Read More »

ಪೆಟ್ರೋಲಿಯಂ ಪೈಪ್ ಲೈನಿಗೆ ಕನ್ನ ಕೊರೆದು ಲಕ್ಷಾಂತರ ಮೌಲ್ಯದ ಪೆಟ್ರೋಲ್ ಕಳ್ಳತನ

ಬೆಳ್ತಂಗಡಿ; ಪುದುವೆಟ್ಟುವಿನಲ್ಲಿ ಪೆಟ್ರೋಲಿಯಂ ಪೈಫ್ ಲೈನ್ ಗೆ ಕನ್ನ ಕೊರೆದು ಲಕ್ಷಾಂತರ ಮೌಲ್ಯದ ಪೆಟ್ರೋಲ್ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಕಂಪೆನಿಯವರು ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೆಟ್ರೋನೆಟ್ ಎಂ ಹೆಚ್ ಬಿ ಲಿಮಿಟೆಡ್ ನ ನೆರಿಯದ ಸ್ಟೇಶನ್ ಇನ್ ಚಾರ್ಜ್ ರಾಜನ್  ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.  ಮಂಗಳೂರು ಹಾಸನ ಬೆಂಗಳೂರು ಪೆಟ್ರೋನೆಟ್ ಪೈಪ್ ಮೂಲಕ ಪೆಟ್ರೋಲಿಯಂ  ವಸ್ತುಗಳು ಸಾಗಾಟವಾಗುತ್ತಿದ್ದು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಆಲಡ್ಕ

ಪೆಟ್ರೋಲಿಯಂ ಪೈಪ್ ಲೈನಿಗೆ ಕನ್ನ ಕೊರೆದು ಲಕ್ಷಾಂತರ ಮೌಲ್ಯದ ಪೆಟ್ರೋಲ್ ಕಳ್ಳತನ Read More »

ದ.ಕ.ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ರೈತರಿಗೆ ಪರವಾನಿಗೆ ಪಡೆದ ಆಯುಧಗಳನ್ನು ಠೇವಣಿ ಇಡಲು ವಿನಾಯಿತಿ ನೀಡಿ | ರಾಜ್ಯ ರೈತ ಸಂಘ, ಹಸಿರು ಸೇನೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಪುತ್ತೂರು: ಚುನಾವಣೆ ಸಂದರ್ಭದಲ್ಲಿ ರೈತರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಪರವಾನಿಗೆ ಪಡೆದ ಕೋವಿಗಳನ್ನು ಠೇವಣಿ ಇರಿಸಲು ಆದೇಶ ನೀಡಲಾಗಿದ್ದು, ಈ ನಿಟ್ಟಿನಲ್ಲಿ ಠೇವಣಿ ಇಡಲು ವಿನಾಯಿತಿ ನೀಡಬೇಕು ಎಂದು ರಾಜ್ಯ ರೈತ ಸಂಘ, ಹಸಿರು ಸೇನೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ. ಈಗಾಗಲೇ ಕೇರಳ ರಾಜ್ಯದ ಹೈಕೋರ್ಟ್‍ ಪರವಾನಿಗೆ ಪಡೆದ ಆಯುಧಗಳನ್ನು ಠೇವಣಿ ಇಡುವ ವಿಚಾರದಲ್ಲಿ ವಿನಾಯಿತಿ ನೀಡಿದೆ. ಕಳೆದ ಬಾರಿಯೂ ಚುನಾವಣಾ ಸಂದರ್ಭದಲ್ಲಿ ವಿನಾಯಿತಿ ನೀಡುವಂತೆ ನಮ್ಮ ಸಂಘದಿಂದ ಮನವಿ ನೀಡಿದ್ದೆವು. ಆದರೆ ವಿನಾಯಿತಿ ನೀಡಲಾಗಿಲ್ಲ.

ದ.ಕ.ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ರೈತರಿಗೆ ಪರವಾನಿಗೆ ಪಡೆದ ಆಯುಧಗಳನ್ನು ಠೇವಣಿ ಇಡಲು ವಿನಾಯಿತಿ ನೀಡಿ | ರಾಜ್ಯ ರೈತ ಸಂಘ, ಹಸಿರು ಸೇನೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ Read More »

ಅರಣ್ಯ ಪ್ರದೇಶದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಬೆಳ್ತಂಗಡಿ: ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹವೊಂದು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಬೋಳ್ಮಿನಾರು ಎಂಬಲ್ಲಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಮೃತದೇಹದ ಬಳಿ ಪತ್ತೆಯಾದ ಆಧಾರ್ ಕಾರ್ಡ್‍ ಆಧಾರದಲ್ಲಿ ಮೃತ ವ್ಯಕ್ತಿಯನ್ನು ಪತ್ತೆಹಚ್ಚಲಾಗಿದ್ದು, ಕಳೆಂಜ ಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್‍ ಎಂದು ಗುರುತಿಸಲಾಗಿದೆ. ಬುಧವಾರ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರಿಗೆ ಮೃತದೇಹ ಪತ್ತೆಯಾಗಿದ್ದು, ಈ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಾಜು ಜೋಸೆಫ್ ಅವರು ಕೆಲವು ವರ್ಷಗಳ ಹಿಂದೆ ಮನೆ

ಅರಣ್ಯ ಪ್ರದೇಶದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆ Read More »

ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ | ವೈಭವದಿಂದ ನಡೆಯಿತು ದರ್ಶನ ಬಲಿ, ಬಟ್ಟಲು ಕಾಣಿಕೆ

ಕಡಬ: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಉತ್ಸವ ಮಾ.14 ರಿಂದ ಆರಂಭಗೊಂಡಿದ್ದು, ವೈಭವದಿಂದ ನಡೆಯುತ್ತಿದೆ. ಜಾತ್ರೋತ್ಸವದ ಅಂಗವಾಗಿ ಮಾ.21 ಗುರುವಾರ ಬೆಳಿಗ್ಗೆ 8.30 ಕ್ಕೆ ಬಲಿ ಹೊರಟು ಉತ್ಸವ, ಮಧ್ಯಾಹ್ನ 12 ಕ್ಕೆ ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ, ಬಳಿಕ ಮಹಾ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಗೋಪಾಲ ಕೆ., ಭಕ್ತಾದಿಗಳು ಪಾಲ್ಗೊಂಡಿದ್ದರು. ನಾಳೆ ದೇವಸ್ಥಾನದಲ್ಲಿ : ಮಾ.22  ಶುಕ್ರವಾರ ಬೆಳಿಗ್ಗೆ ಬಲಿ ಹೊರಟು

ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ | ವೈಭವದಿಂದ ನಡೆಯಿತು ದರ್ಶನ ಬಲಿ, ಬಟ್ಟಲು ಕಾಣಿಕೆ Read More »

ಲೋಕಸಭಾ ಚುನಾವಣೆ | ಮೂರು ಕೋಟಿಗೂ ಅಧಿಕ ಮೌಲ್ಯದ ಮದ್ಯ, ಡ್ರಗ್ಸ್ ವಶ

ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ಬಳಿಕ ಮಾ.20 ರವರೆಗೆ 12,300 ರೂಪಾಯಿ ಮೌಲ್ಯದ 21.34 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 3,13,500 ರೂ.ಗಳ ಮೌಲ್ಯದ 1.65 ಕೆಜಿ ಡ್ರಗ್ಸ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ನೀತಿ ಸಂತೆ ಜಾರಿಯಾದ ದಿನದಿಂದ ಮಾ.20ವರೆಗೆ ದೂರವಾಣಿ ಮೂಲಕ (1950) ಸಾರ್ವಜನಿಕರಿಂದ 75 ಕರೆಗಳನ್ನು ಸ್ವೀಕರಿಸಿ ಸ್ಪಂದಿಸಲಾಗಿದೆ ಸಿ-ಸಿಲ್ ಆಪ್ ಮೂಲಕ 11 ದೂರುಗಳು ಸ್ವೀಕೃತಗೊಂಡಿದೆ. ಈ ಎಲ್ಲಾ ದೂರುಗಳನ್ನು ವಿಲೇವಾರಿ ಮಾಡಲಾಗಿದೆ. ಎನ್.

ಲೋಕಸಭಾ ಚುನಾವಣೆ | ಮೂರು ಕೋಟಿಗೂ ಅಧಿಕ ಮೌಲ್ಯದ ಮದ್ಯ, ಡ್ರಗ್ಸ್ ವಶ Read More »

ಮರಳು ದಂಧೆಕೋರರ ಅಟ್ಟಹಾಸಕ್ಕೆ ಕಿಂಡಿ ಅಣೆಕಟ್ಟಿನ ನೀರು ಖಾಲಿ | ತಮ್ಮ ಸ್ವಾರ್ಥಕ್ಕಾಗಿ ಅಣೆಕಟ್ಟಿನ ಹಲಗೆ ಜಾರಿಸುತ್ತಿರುವವರು ಯಾರು ? ಸ್ಥಳೀಯರಿಂದ ಆಕ್ರೋಶ

ಆಲಂಕಾರು: ಕಡಬ ತಾಲೂಕಿನ ಆಲಂಕಾರು- ಸವಣೂರು ಸಂಪರ್ಕ ರಸ್ತೆಯಲ್ಲಿ ಬರುವ ಶಾಂತಿಮೊಗರು ಎಂಬಲ್ಲಿ ಕುಮಾರಧಾರ ನದಿಗೆ ಅಡ್ಡಲಾಗಿರುವ ಕಿಂಡಿ ಅಣೆಕಟ್ಟಿಗೆ ಕಳೆದ ಎರಡು ತಿಂಗಳ ಹಿಂದೆ ಹಲಗೆ ಜೋಡಣೆಯಾಗಿ ಭರಪೂರ ನೀರು ಸಂಗ್ರಹವಾಗಿದ್ದರೂ, ಮರಳು ದಂಧೆಕೋರರ ಅಟ್ಟಹಾಸಕ್ಕೆ ನೀರು ಕಡಿಮೆಯಾಗಿರುವುದು ಬೆಳಕಿಗೆ ಬಂದಿದೆ. ನೀರು ಏಕಾಏಕಿ ಕಡಿಮೆಯಾಗಿರುವುದರ ಕುರಿತು ಮಾಹಿತಿ ಕಲೆ ಹಾಕಲು ತೆರಳಿದಾಗ ಈ ಜಾಗದಲ್ಲಿ ಅಕ್ರಮ ಮರಳುಗಾರಿಕೆ ಮಾಡುವವರು ತಮ್ಮ ಸ್ವಾರ್ಥಕ್ಕಾಗಿ ನೀರು ಸೋರಿಕೆಯಾಗುವಂತೆ ಮಾಡುತ್ತಿರುವುದು ತಿಳಿದು ಬಂದಿದೆ. ನೀರು ವಿಪರೀತ ಸಂಗ್ರಹವಾಗಿರುವುದರಿಂದ ಮರಳು

ಮರಳು ದಂಧೆಕೋರರ ಅಟ್ಟಹಾಸಕ್ಕೆ ಕಿಂಡಿ ಅಣೆಕಟ್ಟಿನ ನೀರು ಖಾಲಿ | ತಮ್ಮ ಸ್ವಾರ್ಥಕ್ಕಾಗಿ ಅಣೆಕಟ್ಟಿನ ಹಲಗೆ ಜಾರಿಸುತ್ತಿರುವವರು ಯಾರು ? ಸ್ಥಳೀಯರಿಂದ ಆಕ್ರೋಶ Read More »

ಪ್ರವೀಣ್‍ ನೆಟ್ಟಾರು ಮನೆಗೆ ಕ್ಯಾ.ಬ್ರಿಜೇಶ್‍ ಚೌಟ ಭೇಟಿ

ಬೆಳ್ಳಾರೆ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಗುರುವಾರ ಭೇಟಿ ನೀಡಿದರು. ಭೇಟಿ ನೀಡಿದ ಸಂದರ್ಭ ನೆಟ್ಟಾರು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರ ಕುಟುಂಬದ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರವೀಣ್‍ ನೆಟ್ಟಾರು ಮನೆಗೆ ಕ್ಯಾ.ಬ್ರಿಜೇಶ್‍ ಚೌಟ ಭೇಟಿ Read More »

ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ, ಸಹಸಂಚಾಲಕರ ಆಯ್ಕೆ | ಸುಳ್ಯ ನಿರ್ವಹಣಾ ಸಮಿತಿ ಸಂಚಾಲಕರಾಗಿ ಹರೀಶ್‍ ಕಂಜಿಪಿಲಿ, ಸಹಸಂಚಾಲಕರಾಗಿ ದಿನೇಶ್‍ ಮೆದು

ಸುಳ್ಯ: ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಹಾಗೂ ಸಹಸಂಚಾಲಕರನ್ನು ನೇಮಕ ಮಾಡಲಾಗಿದೆ. ಲೋಕಸಭೆ ಚುನಾವಣೆಗೆ ಸುಳ್ಯ ವಿಧಾನಸಭೆಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಸುಳ್ಯ ಮಂಡಲ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಸಹಸಂಚಾಲಕರಾಗಿ ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‍ ಕುಂಪಲ ಈ ನೇಮಕ ಮಾಡಿದ್ದಾರೆ.

ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ, ಸಹಸಂಚಾಲಕರ ಆಯ್ಕೆ | ಸುಳ್ಯ ನಿರ್ವಹಣಾ ಸಮಿತಿ ಸಂಚಾಲಕರಾಗಿ ಹರೀಶ್‍ ಕಂಜಿಪಿಲಿ, ಸಹಸಂಚಾಲಕರಾಗಿ ದಿನೇಶ್‍ ಮೆದು Read More »

ಲೋಕಸಭೆ ಚುನಾವಣೆ | ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ 19 ಮಂದಿ ರೌಡಿ ಶೀಟರ್ ಗಳಿಗೆ ಗಡಿಪಾರು ಆದೇಶ

ಮಂಗಳೂರು : ಲೋಕಸಭಾ ಚುನಾವಣೆ ದಿನಾಂಕ ನಿಗದಿಯಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 19 ಮಂದಿ ರೌಡಿ ಶೀಟರ್‍ ಗಳಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ ಈ 19 ಮಂದಿ ರೌಡಿಶೀಟರ್‌ಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ. ಮೂಡಬಿದಿರೆಯ ಅತ್ತೂರು ನಸೀಬ್, ಕಾಟಿಪಳ್ಳದ ಶ್ರೀನಿವಾಸ್ ಎಚ್‍, ಬಜ್ಪೆ ಶಾಂತಿಗುಡ್ಡದ ಸಫ್ವಾನ್, ಬೊಂದೇಲ್‍ ನ ಜಯೇಶ್‍ ಯಾನೆ ಸಾಚು, ನೀರು ಮಾರ್ಗದ ವರುಣ್ ಪೂಜಾರಿ, ಅಶೋಕ

ಲೋಕಸಭೆ ಚುನಾವಣೆ | ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ 19 ಮಂದಿ ರೌಡಿ ಶೀಟರ್ ಗಳಿಗೆ ಗಡಿಪಾರು ಆದೇಶ Read More »

error: Content is protected !!
Scroll to Top