ದಕ್ಷಿಣ ಕನ್ನಡ

ಮೇ19 (ನಾಳೆ) : ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, ಸಭಾ, ಸಾಂಸ್ಕೃತಿಕ ಕಾರ್ಯಕ್ರಮ

ಕಡಬ: ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ ಮೇ 19 ಭಾನುವಾರ ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಬೆಳಗ್ಗೆ 7 ಕ್ಕೆ ಪೂಜೆ ಆರಂಭ, 10 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. 10.30 ರಿಂದ ಸಭಾ ಕಾರ್ಯಕ್ರಮ, ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಶಿವಣ್ಣ ಗೌಡ ಕಕ್ವೆ […]

ಮೇ19 (ನಾಳೆ) : ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, ಸಭಾ, ಸಾಂಸ್ಕೃತಿಕ ಕಾರ್ಯಕ್ರಮ Read More »

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಮೃತ್ಯು

ಕಡಬ : ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೃತಪಟ್ಟಿರುವ ಘಟನೆ ಕಡಬ ತಾಲೂಕು ಕುಂತೂರು ಗ್ರಾಮದಲ್ಲಿ ನಡೆದಿದೆ. ಕೃಷ್ಣ ಕುಮಾರ್ ಎಂಬವರ ದೂರಿನಂತೆ, ಕೃಷ್ಣ ಕುಮಾರ್ ರವರ ಪತ್ನಿಯ ತಮ್ಮನಾದ ಕೋಡಿಂಬಾಳ ಗ್ರಾಮ ಕಡಬ ನಿವಾಸಿ ಶರತ್ (29), 6 ತಿಂಗಳಿನಿಂದ ಕಡಬ ತಾಲೂಕು ಕುಂತೂರು ಗ್ರಾಮದ ಉದಯಶಂಕರ್ ಭಟ್ ಎಂಬವರ ಮನೆಗೆ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗುತ್ತಿದ್ದು, ಮೇ 17 ರಂದು ಸಂಜೆ, ಉದಯಶಂಕರ್ ಭಟ್ ರವರ ಜಾಗದಲ್ಲಿರುವ ಶೆಡ್‌ನಲ್ಲಿ ಮೃತಪಟ್ಟಿರುವುದಾಗಿ ಉದಯಶಂಕರ್ ಭಟ್

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಮೃತ್ಯು Read More »

ಉಡುಪಿ ಕಾಲೇಜು ವಿದ್ಯಾರ್ಥಿನಿ‌ ನಾಪತ್ತೆ !

ಉಡುಪಿ : ಮನೆಯಿಂದ ಕಾಲೇಜಿಗೆ ಹೋಗುತ್ತೇನೆ ಎಂದು ಹೋಗಿದ್ದ ವಿಧ್ಯಾರ್ಥಿನಿ ನಾಪತ್ತೆಯಾದ ಘಟನೆ ಹಿರಿಯಡ್ಕದಲ್ಲಿ ನಡೆದಿದ್ದು, ನಾಪತ್ತೆಯಾದ ವಿಧ್ಯಾರ್ಥಿನಿ ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ(20), ಎಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ, 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್‌ ಠಾಣೆ ದೂ.ಸಂಖ್ಯೆ: 0820-2542248, ಮೊ.ನಂ. 9480805452, ಉಡುಪಿ ಕಂಟ್ರೋಲ್ ರೂಂ

ಉಡುಪಿ ಕಾಲೇಜು ವಿದ್ಯಾರ್ಥಿನಿ‌ ನಾಪತ್ತೆ ! Read More »

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ !

ಮಂಗಳೂರು : ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅವರು ಮೇ 17ರಂದು ಮುಂಬೈಯಲ್ಲಿ ನಿಧನ ಹೊಂದಿದರು. ರಘುನಂದನ್‌ ಅವರು 1954ರಲ್ಲಿ ಮೂಲ್ಕಿಯಲ್ಲಿ ಬಡ ಕುಟಂಬವೊಂದರಲ್ಲಿ ಜನಿಸಿದ್ದರು. ಕಾಮತ್ ಅವರ ತಂದೆ ಹಣ್ಣಿನ ವ್ಯಾಪಾರಿಯಾಗಿದ್ದರು. ಕಾಮತ್ ಅವರು ತಮ್ಮ 15ನೇ ವಯಸ್ಸಿನಲ್ಲಿ ಅಣ್ಣನ ಹೊಟೇಲ್‌ಗೆ ಕೆಲಸಕ್ಕೆಂದು ಮುಂಬೈಗೆ ತೆರಳಿದ್ದರು. ಅನಂತರ ಹೊಟೇಲ್ ಉದ್ಯಮ ಆರಂಭಿಸಿ ಹಣ್ಣುಗಳಿಂದಲೇ ಐಸ್‌ಕ್ರೀಂ ತಯಾರಿಸಿ ಜನಪ್ರಿಯರಾದರು.ಮುಂಬೈಯಲ್ಲಿ 1984ರಲ್ಲಿ ನ್ಯಾಚುರಲ್ಸ್ ಐಸ್ ಕ್ರೀಂ ಆರಂಭಿಸಿದ್ದರು. ಅದು ದೇಶಾದ್ಯಂತ ಜನಪ್ರಿಯವಾಗಿ ದೊಡ್ಡ ಉದ್ಯಮವಾಗಿ ಬೆಳೆದಿದೆ.

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ ! Read More »

ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಮೃತ್ಯು

ನೆಲ್ಯಾಡಿ : ಕೆಲ ದಿನದ ಹಿಂದೆ ತೆಂಗಿನಮರದಿಂದ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೆಲ್ಯಾಡಿ ಗ್ರಾಮದ ತೋಟ ನಿವಾಸಿ ಧನಂಜಯ ಗೌಡ (43) ಅವರು ಮೇ 16ರಂದು ಸಂಜೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಧನಂಜಯ ಗೌಡ ಅವರು ಮೇ.11ರಂದು ನೆರೆಮನೆಯ ಚಂದ್ರ ಬಿರುವಳಿಕೆ ಎಂಬವರ ಮನೆಗೆ ಕೃಷಿ ಕೆಲಸಕ್ಕೆ ಹೋಗಿದ್ದು ಅಲ್ಲಿ ಸಂಜೆ 6 ಗಂಟೆ ವೇಳೆಗೆ ತೆಂಗಿನ ಮರದಿಂದ ಕಾಯಿ ಕೀಳುತ್ತಿರುವಾಗ ಆಕಸ್ಮಿಕವಾಗಿ ಕೈ ಜಾರಿ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು. ಅವರನ್ನು

ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಮೃತ್ಯು Read More »

ಉಗ್ರ ಸಂಘಟನೆ ಐಸಿಸ್ ಜತೆ ನಂಟು | ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟ ಶಾಸಕ ದಿ.ಇದಿನಬ್ಬ ಮೊಮ್ಮಗ ಅಮರ್ ಅಬ್ದುಲ್ ರೆಹಮಾನ್ ಗೆ ಜಾಮೀನು ಮಂಜೂರು

ಮಂಗಳೂರು: ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿದ್ದ ಪ್ರಕರಣದಲ್ಲಿ ಮೂರು ವರ್ಷಗಳ ಹಿಂದೆ ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟಿದ್ದ ಮಾಜಿ ಶಾಸಕ ದಿವಂಗತ ಇದಿನಬ್ಬ ಮೊಮ್ಮಗ ಅಮ‌ರ್ ಅಬ್ದುಲ್ ರೆಹಮಾನ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಐಸಿಸ್ ಬಾವುಟ, ಕರಪತ್ರ ಮೊಬೈಲ್ ನಲ್ಲಿದ್ದರೆ ಉಗ್ರ ಎನ್ನಲು ಪೂರಕ ಸಾಕ್ಷ್ಯವಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಐಸಿಸ್ ನಂಟಿನ ಆರೋಪದಡಿ ಯುಎಪಿಎ ಕಾಯ್ದೆಯಡಿ ಅಮ‌ರ್ ಅಬ್ದುಲ್ ರೆಹಮಾನ್ ನನ್ನು ಅಗಸ್ಟ್ 21,

ಉಗ್ರ ಸಂಘಟನೆ ಐಸಿಸ್ ಜತೆ ನಂಟು | ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟ ಶಾಸಕ ದಿ.ಇದಿನಬ್ಬ ಮೊಮ್ಮಗ ಅಮರ್ ಅಬ್ದುಲ್ ರೆಹಮಾನ್ ಗೆ ಜಾಮೀನು ಮಂಜೂರು Read More »

ಕರ್ನಾಟಕದಲ್ಲಿ ಸಾಲು ಸಾಲಾಗಿ ಹಿಂದೂ ಯುವತಿಯರ ಹತ್ಯೆ | ಆರೋಪಿಗಳ ವಿರುದ್ಧ ಎನ್ಕೌಂಟರ್ ಅಸ್ತ್ರ ಉಪಯೋಗಿಸಿ | ವಿಶ್ವ ಹಿಂದೂ ಪರಿಷದ್ ಆಗ್ರಹ

ಮಂಗಳೂರು: ಕಳೆದ ಒಂದು ತಿಂಗಳಿನಿಂದ ಕರ್ನಾಟಕದಲ್ಲಿ ಪ್ರೀತಿಗಾಗಿ 3 ಯುವತಿಯರ ಹತ್ಯೆ, ಏಪ್ರಿಲ್ 18 ರಂದು  ಹುಬ್ಬಳ್ಳಿಯ ನೇಹಾ ಹತ್ಯೆ, ನಂತರ ಕೊಡಗಿನಲ್ಲಿ ಮೀನಾ ಹತ್ಯೆ, ಇದೀಗ ಮೇ 15ರಂದು ಹುಬ್ಬಳ್ಳಿಯ ಅಂಜಲಿ ಹತ್ಯೆ. ಪ್ರೀತಿಯ ಹೆಸರಲ್ಲಿ ಯುವತಿಯರ ಹತ್ಯೆ ಆಗುತ್ತಿರುವುದು ಬಹಳ ಕಳವಳಕಾರಿ ಸಂಗತಿಯಾಗಿದ್ದು ನಾಗರಿಕ ಸಮಾಜ ಎಚ್ಚೆತ್ತುಕೊಳ್ಳಬೇಕಿದೆ ಎಂದು ವಿಶ್ವ ಹಿಂದೂ ಪರಿಷದ್ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ವಿಎಚ್ ಪಿ, 2013 ರಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಬಂದಾಗ ಸಾಲು ಸಾಲು

ಕರ್ನಾಟಕದಲ್ಲಿ ಸಾಲು ಸಾಲಾಗಿ ಹಿಂದೂ ಯುವತಿಯರ ಹತ್ಯೆ | ಆರೋಪಿಗಳ ವಿರುದ್ಧ ಎನ್ಕೌಂಟರ್ ಅಸ್ತ್ರ ಉಪಯೋಗಿಸಿ | ವಿಶ್ವ ಹಿಂದೂ ಪರಿಷದ್ ಆಗ್ರಹ Read More »

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು-ಸಿಡಿಲಿನಿಂದ ಕೂಡಿದ ಉತ್ತಮ ಮಳೆಯಾಗಿದ್ದು ಇದೇ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುಂದಿನ 3 ದಿನಗಳ ಕಾಲ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಹಲವೆಡೆ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಮಣಿಪಾಲ, ಮಲ್ಪೆ ಭಾಗದಲ್ಲಿ ಗುಡುಗು ಸಹಿತ ಕೆಲಕಾಲ ಉತ್ತಮ ಮಳೆಯಾಗಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ Read More »

ಲಾರಿ-ಬೈಕ್ ಅಪಘಾತ, ಬೈಕ್ ಸವಾರ ಮೃತ್ಯು ಸಹಸವಾರ ಗಂಭೀರ

ಬಂಟ್ವಾಳ : ಬೈಕಿಗೆ ಲಾರಿ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಸವಾರರ ಮೇಲೆ ಅದೇ ಲಾರಿ ಹರಿದ ಪರಿಣಾಮ ಸವಾರ ದಾರುಣವಾಗಿ ಮೃತಪಟ್ಟು, ಇನ್ನೋರ್ವ ಸಹಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುದು ಗ್ರಾಮದ ಮಾರಿಪಳ್ಳ ಜಂಕ್ಷನ್ನಿನಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ ಬೈಕ್ ಸವಾರ ಮೂಲತಃ ಉತ್ತರ ಪ್ರದೇಶ ರಾಜ್ಯದ ನಿವಾಸಿ ಪ್ರಸ್ತುತ ಉಡುಪಿಯಲ್ಲಿ ವಾಸವಾಗಿರುವ ಸೋನು (19) ಹಾಗೂ ಗಾಯಾಳು ಸಹಸವಾರ ಕಾರ್ಕಳ ನಿವಾಸಿ ಪ್ರಸಾದ್ (22) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಸಮೀಪದ

ಲಾರಿ-ಬೈಕ್ ಅಪಘಾತ, ಬೈಕ್ ಸವಾರ ಮೃತ್ಯು ಸಹಸವಾರ ಗಂಭೀರ Read More »

ಕುಂಬ್ರ ಮಂಡಲ ಪಂಚಾಯತ್ ಮಾಜಿ ಸದಸ್ಯ ಚಿಲ್ಮೆತ್ತಾರು ನಾರಾಯಣ ರೈ ನಿಧನ

ಕುಂಬ್ರ: ಒಳಮೊಗ್ರು ಗ್ರಾಮದ ಚಿಲ್ಮೆತ್ತಾರು ನಾರಾಯಣ ರೈ ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ ಕೃಷಿಕರಾಗಿದ್ದ ಇವರು ಕುಂಬ್ರ ಮಂಡಲ ಪಂಚಾಯತ್ ಸದಸ್ಯರಾಗಿ , ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಏಕತ್ತಡ್ಕ ಇದರ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾಗಿ , ಶ್ರೀ ವೀರಕೇಸರಿ ಸ್ಪೋರ್ಟ್ಸ್ ಕ್ಲಬ್ ನ ಗೌರವ ಸಲಹೆಗಾರರಾಗಿ , ಓಂ ಶಿವ ಭಜನಾ ಮಂದಿರ , ಓಂ ಶಿವ ಯುವಕ ಮಂಡಲದ ಗೌರವಾಧ್ಯಕ್ಷರಾಗಿ , ಊರಿನ ಅಭಿವೃದ್ಧಿಯಲ್ಲಿ ಯುವ ಸಮುದಾಯಕ್ಕೆ ಪ್ರೇರಣಾದಾಹಿಯಾಗಿ ಸೇವೆ

ಕುಂಬ್ರ ಮಂಡಲ ಪಂಚಾಯತ್ ಮಾಜಿ ಸದಸ್ಯ ಚಿಲ್ಮೆತ್ತಾರು ನಾರಾಯಣ ರೈ ನಿಧನ Read More »

error: Content is protected !!
Scroll to Top