ದಕ್ಷಿಣ ಕನ್ನಡ

ದುಬೈಯಿಂದ ಅಕ್ರಮ ಚಿನ್ನ ಸಾಗಾಟ | ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

ಮಂಗಳೂರು: ಪ್ರಯಾಣಿಕರೊಬ್ಬರು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಕೊಂಡ ಘಟನೆ ನಡೆದಿದೆ. ದುಬೈಯಿಂದ ಪ್ರಯಾಣಿಸುತ್ತಿದ್ದ ಭಟ್ಕಳ ಮೂಲದ ಪ್ರಯಾಣಿಕರಿಂದ ಚಿನ್ನ ವಶಪಡಿಸಿಕೊಂಡಿದ್ದು, ಚಿನ್ನವನ್ನು ಪೇಸ್ಟ್ ಆಗಿ ಪರಿವರ್ತಿಸಿ ಎರಡು ಲೇಯರ್ ಕಂದು ಕಾಗದದ ಹಾಳೆಗಳ ನಡುವೆ ಬಚ್ಚಿಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 96 ಗ್ರಾಂ ಚಿನ್ನದ ಮೌಲ್ಯ 6.19 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ದುಬೈಯಿಂದ ಅಕ್ರಮ ಚಿನ್ನ ಸಾಗಾಟ | ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ Read More »

ಲೋಕಸಭೆ ಚುನಾವಣೆ | ಸಾರ್ವಜನಿಕ ಶಾಂತಿ ಮತ್ತು ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಪರವಾನಿಗೆ ಹೊಂದಿದ ಆಯುಧಗಳನ್ನು ಠೇವಣಿ ಇಡುವಂತೆ ಆದೇಶ

ಮಂಗಳೂರು: ಲೋಕಸಭೆ ಚುನಾವಣೆ ಅಂಗವಾಗಿ ಈಗಾಗಲೇ ನೀತಿ ಸಂಹಿತೆ ಜಾರಿಗೊಂಡಿದ್ದು, ಈ ಹಿನ್ನಲೆಯಲ್ಲಿ ಪರವಾನಿಗೆ ಪಡೆದ ಕೋವಿ, ಇನ್ನಿತರ ಆಯುಧಗಳನ್ನು ಠೇವಣಿ ಇಡುವಂತೆ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ನೀಡಿದ್ದಾರೆ. ಭಾರತ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿ ದಿನಾಂಕ: 16-03-2024 ರಿಂದ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆಯನ್ನು ಜಾರಿಗೊಳಿಸಿ ಕರ್ನಾಟಕ ರಾಜ್ಯದಲ್ಲಿ ಏ.26 ಹಾಗೂ ಜು.2 ಎರಡು ಹಂತದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ನ್ನು ನಡೆಸಲು ದಿನಾಂಕವನ್ನು ಘೋಷಿಸಲಾಗಿದೆ. ಈ ಹಿನ್ನಲೆ ಪರವಾನಿಗೆ

ಲೋಕಸಭೆ ಚುನಾವಣೆ | ಸಾರ್ವಜನಿಕ ಶಾಂತಿ ಮತ್ತು ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಪರವಾನಿಗೆ ಹೊಂದಿದ ಆಯುಧಗಳನ್ನು ಠೇವಣಿ ಇಡುವಂತೆ ಆದೇಶ Read More »

ಸುಳ್ಯ ಶ್ರೀ ಚೆನ್ನಕೇಶವ ದೇವಾಲಯಕ್ಕೆ ಭೇಟಿ ನೀಡಿದ ಕ್ಯಾ.ಬ್ರಿಜೇಶ್ ಚೌಟ

ಸುಳ್ಯ: ದ.ಕ.ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಬುಧವಾರ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಸುಳ್ಯ ಶ್ರೀ ಚೆನ್ನಕೇಶವ ದೇವಾಲಯಕ್ಕೆ ಭೇಟಿ ನೀಡಿದ ಕ್ಯಾ.ಬ್ರಿಜೇಶ್ ಚೌಟ Read More »

ಡಾ. ಅನುರಾಧಾ ಕುರುಂಜಿಯವರಿಗೆ  ಶಿವಶರಣೆ ನೀಲಾಂಬಿಕೆ  ಪ್ರಶಸ್ತಿ, ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ | ರಾಜ್ಯ ಮಟ್ಟದ  ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ 25 ಮಹಿಳಾ ಸಾಧಕಿಯರಿಗೆ ಪುರಸ್ಕಾರ

ಸುಳ್ಯ: ಉಪನ್ಯಾಸಕಿ, ವ್ಯಕ್ತಿತ್ವ ವಿಕಸನ ತರಬೇತುದಾರೆ ಡಾ. ಅನುರಾಧಾ ಕುರುಂಜಿಯವರು ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ  ಶಿವಶರಣೆ ನೀಲಾಂಬಿಕೆ  ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶೈಕ್ಷಣಿಕ ಕಾರ್ಯ ಚಟುವಟಿಕೆಯ ಜೊತೆಗೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಬಿಡುವಿನ ವೇಳೆ ಸುಮಾರು 2100 ಕ್ಕೂ ಅಧಿಕ ತರಬೇತಿ ನೀಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಾ.29 ರಂದು ಬೆಂಗಳೂರಿನ ಬಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ  ನಡೆಯುವ ವಿಶ್ವ ಕನ್ನಡ

ಡಾ. ಅನುರಾಧಾ ಕುರುಂಜಿಯವರಿಗೆ  ಶಿವಶರಣೆ ನೀಲಾಂಬಿಕೆ  ಪ್ರಶಸ್ತಿ, ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ | ರಾಜ್ಯ ಮಟ್ಟದ  ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ 25 ಮಹಿಳಾ ಸಾಧಕಿಯರಿಗೆ ಪುರಸ್ಕಾರ Read More »

ವೀಸಾ ಕೊಡಿಸುವುದಾಗಿ ವಂಚನೆ | ಪ್ರಕರಣ ದಾಖಲು

ಬೆಳ್ತಂಗಡಿ: ಪೋಲಂಡ್ ದೇಶದಲ್ಲಿ ಕೆಲಸ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಗೆ ವಂಚಿಸಿದ ಘಟನೆ ನಡೆದಿದೆ. ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ನಿವಾಸಿ ರೆಜಿ ಕೆ.ಎ ಅವರ ಪುತ್ರ ಆಲ್ವಿನ್ ಕೆ.ಆರ್‍. ಅವರಿಗೆ ಮನೋಜ್ ಎಂಬಾತ ವೀಸಾ ಕೊಡುವುದಾಗಿ ವಂಚಿಸಿರುವುದಾಗಿ ತಿಳಿದು ಬಂದಿದೆ. ಆರೋಪಿ ವೀಸಾ ಕೊಡಿಸುವುದಾಗಿ 2023 ಮೇ ತಿಂಗಳಿನಿಂದ 2024 ಮಾ.19 ರ ತನಕ ವಿವಿಧ ಕಾರಣ ನೀಡಿ ಹಂತ ಹಂತವಾಗಿ 2.50 ಲಕ್ಷ ರೂ. ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು ವೀಸಾ ಕೊಡಿಸದೇ ವಮಚಿಸಿರುವುದಾಗಿ ಧರ್ಮಸ್ಥಳ ಠಾಣೆಗೆ ನೀಡಿದ

ವೀಸಾ ಕೊಡಿಸುವುದಾಗಿ ವಂಚನೆ | ಪ್ರಕರಣ ದಾಖಲು Read More »

ದೇಶದ ಅತೀ ದೊಡ್ಡ ಸಂಸ್ಥೆ ದಕ್ಷಿಣ ಕನ್ನಡ ರೈತ ಉತ್ಪಾದಕರ‌ ಕಂಪೆನಿಯ‌ ಷೇರು ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು: ತೆಂಗು ಬೆಳೆಗಾರರೇ ಸ್ಥಾಪಿಸಿ, ಮುನ್ನಡೆಸುತ್ತಿರುವ ದೇಶದ ಅತೀ ದೊಡ್ಡ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿಯು ತನ್ನ ಕಾರ್ಯ ವ್ಯಾಪ್ತಿ ಹಾಗೂ ಮಾರುಕಟ್ಟೆ ವಿಸ್ತರಣೆ ಉದ್ದೇಶದಿಂದ ಸಾರ್ವಜನಿಕರಿಂದ ಷೇರು ಸಂಗ್ರಹಕ್ಕೆ ಮುಂದಾಗಿದೆ. 15 ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ತೆಂಗು ಬೆಳೆಗಾರರ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಸಂಸ್ಥೆ 300 ಕೋಟಿ ರೂ. ಮೌಲ್ಯದ ವಿಸ್ತ್ರತ ಯೋಜನೆ ಕೈಗೆತ್ತಿಕೊಂಡಿದ್ದು, ಮೊದಲ ಹಂತದಲ್ಲಿ 50 ಕೋಟಿ ರೂ. ಮೌಲ್ಯದ ಷೇರು ಸಂಗ್ರಹಿಸುವ ಗುರಿ ಇಟ್ಟುಕೊಂಡಿದೆ.

ದೇಶದ ಅತೀ ದೊಡ್ಡ ಸಂಸ್ಥೆ ದಕ್ಷಿಣ ಕನ್ನಡ ರೈತ ಉತ್ಪಾದಕರ‌ ಕಂಪೆನಿಯ‌ ಷೇರು ಮಾರುಕಟ್ಟೆಗೆ ಬಿಡುಗಡೆ Read More »

ನೇತ್ರಾವತಿ ನದಿಗೆ ಬಿದ್ದು ಯುವಕ ಮೃತ್ಯು !

ಬಂಟ್ವಾಳ: ನೇತ್ರಾವತಿ ನದಿಗೆ ಬಿದ್ದು ಯುವಕ ಮೃತಪಟ್ಟ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮಂಜೊಟ್ಟಿ ನಿವಾಸಿ ಲೋಹಿತಾಶ್ವ (30) ಮೃತ ಯುವಕ. ಲೋಹಿತಾಶ್ವ ಅವರು ಕಾರಿನಲ್ಲಿ ಊರಿನ ನಾಲ್ವರು ಸ್ನೇಹಿತರ ಜೊತೆ ಶಂಭೂರಿಗೆ ಬಂದಿದ್ದು, ಸ್ನೇಹಿತರು ಸ್ನಾನ ಮಾಡುವುದಕ್ಕೆ ನೀರಿಗೆ ಇಳಿದಿದ್ದರು, ಆದರೆ ಲೋಹಿತಾಶ್ವ ನದಿ ಕಿನಾರೆಯಲ್ಲೇ ಕುಳಿತ್ತಿದ್ದರು ಎನ್ನಲಾಗಿದೆ. ಆದರೆ ಸ್ನೇಹಿತರು ಸ್ನಾನ ಮುಗಿಸಿ ಬರುವ ವೇಳೆ ಲೋಹಿತಾಶ್ವ ಅವರು ನೀರಿನಲ್ಲಿ ಬಿದ್ದಿದ್ದರು. ನದಿ ಕಿನಾರೆಯಲ್ಲಿ ಕುಳಿತಿದ್ದ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದು

ನೇತ್ರಾವತಿ ನದಿಗೆ ಬಿದ್ದು ಯುವಕ ಮೃತ್ಯು ! Read More »

ಸೂಕ್ತ ದಾಖಲೆ ಪತ್ರ ಇಲ್ಲದೆ ಸಾಗಿಸುತ್ತಿದ್ದ 1.32 ಲಕ್ಷ ರೂ. | ವಶಕ್ಕೆ ಪಡೆದ ಚುನಾವಣಾಧಿಕಾರಿಗಳು

ಪುತ್ತೂರು: ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.32 ಲಕ್ಷ ರೂ. ನಗದನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದ ಘಟನೆ ಮಂಗಳೂರು ಹೊರವಲಯದ ಬಡಗ ಎಡಪದವು ಎಂಬಲ್ಲಿ ನಡೆದಿದೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಕಾರಣ ಅಕ್ರಮ ಹಣ ವಹಿವಾಟಿನ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದ್ದರೂ ಈ ನಡುವೆ ಮಂಗಳೂರು ಹೊರವಲಯದ ಬಡಗ ಎಡಪದವು ಚೆಕ್‍ ಪೋಸ್ಟ್‍  ನಲ್ಲಿ ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದಾಗ ನಗದನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಭಾನುವಾರ ತಡರಾತ್ರಿ ಕೈಕಂಬ ನಿವಾಸಿಯೊಬ್ಬರು ಹುಂಡೈ

ಸೂಕ್ತ ದಾಖಲೆ ಪತ್ರ ಇಲ್ಲದೆ ಸಾಗಿಸುತ್ತಿದ್ದ 1.32 ಲಕ್ಷ ರೂ. | ವಶಕ್ಕೆ ಪಡೆದ ಚುನಾವಣಾಧಿಕಾರಿಗಳು Read More »

ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ರಾಘವ ಎಚ್.ಗೇರುಕಟ್ಟೆ

ಬೆಳ್ತಂಗಡಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ರಾಘವ ಎಚ್. ಗೇರುಕಟ್ಟೆ ನೇಮಕಗೊಂಡಿದ್ದಾರೆ. ರಾಘವ ಅವರು ನಾಳ ಶ್ರೀ ದುರ್ಗಾಪರಮೇಶ್ವರಿ ಚಿಕ್ಕಮೇಳದ ಸಂಚಾಲಕರಾಗಿ ಮತ್ತು ನಾಳ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ವ್ಯವಸ್ಥಾಪಕರಾಗಿ ಯಕ್ಷಗಾನ ಮತ್ತು ತಾಳಮದ್ದಳೆಯ ಸಂಯೋಜಕರಾಗಿ, ಕಲಾವಿದರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸಂಘ ಮತ್ತು ಉಪ್ಪಿನಂಗಡಿಯ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ್ ಆಚಾರ್ಯ ಗೇರುಕಟ್ಟೆ ಅಭಿನಂದನೆ ಸಲ್ಲಿಸಿದ್ದಾರೆ.

ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ರಾಘವ ಎಚ್.ಗೇರುಕಟ್ಟೆ Read More »

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಸಹಿತ ಮೂರು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗೆ ತಾತ್ಕಾಲಿಕ ತಡೆ | ಧಾರ್ಮಿಕದತ್ತಿ ಇಲಾಖೆ ಆಯುಕ್ತರಿಂದ ಆದೇಶ

ಪುತ್ತೂರು: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚಿಸಿ ಹೊರಡಿಸಲಾದ ಆದೇಶಕ್ಕೆ ಸರಕಾರ ತಾತ್ಕಾಲಿಕ ತಡೆ ನೀಡಿ ಮತ್ತೊಂದು ಆದೇಶ ಹೊರಡಿಸಿದೆ. ಎ ಗ್ರೇಡೆ ದೇವಸ್ಥಾನವಾಗಿರುವ ಪಂಜ ದೇವಸ್ಥಾನಕ್ಕೆ ಡಾ.ದೇವಿಪ್ರಸಾದ್ ಕಾನತ್ತೂರು ಹಾಗೂ ಇತರರನ್ನು ಸದಸ್ಯರಾಗಿ ನೇಮಿಸಿ ಎರಡು ದಿನಗಳ ಹಿಂದೆ ಧಾರ್ಮಿಕದತ್ತಿ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದರು. ಆದೇಶ ಬಂದ ಬೆನ್ನಲ್ಲೇ ವ್ಯವಸ್ತಾಪನಾ ಸಮಿತಿ ಸದಸ್ಯರು ಸಭೆ ಸೇರಿ ದೇವಿಪ್ರಸಾದ್ ಕಾನತ್ತೂರು ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಪದಗ್ರಹಣವೂ ನಡೆದಿತ್ತು. ಇದೀಗ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಸಹಿತ ಮೂರು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗೆ ತಾತ್ಕಾಲಿಕ ತಡೆ | ಧಾರ್ಮಿಕದತ್ತಿ ಇಲಾಖೆ ಆಯುಕ್ತರಿಂದ ಆದೇಶ Read More »

error: Content is protected !!
Scroll to Top