ದಕ್ಷಿಣ ಕನ್ನಡ

ಚಂದಳಿಕೆ ಯುವಕೇಸರಿ ಅಬೀರಿ- ಅತಿಕಾರಬೈಲು ಸಂಘಟನೆ ವತಿಯಿಂದ ಸಹಾಯಧನ ಹಸ್ತಾಂತರ

ವಿಟ್ಲ: ಕಷ್ಟದಲ್ಲಿರುವ ದಾಮೋದರ ಗೌಡರಿಗೆ ಚಂದಳಿಕೆ ಯುವಕೇಸರಿ ಅಬೀರಿ- ಅತಿಕಾರಬೈಲು ಸಂಘಟನೆ ವತಿಯಿಂದ 10,000 ರೂ. ಚೆಕ್‍ ಹಾಗೂ ದೈನಂದಿನ ಖರ್ಚಿಗಾಗಿ 26 ಕೆ. ಜಿ ಅಕ್ಕಿಯನ್ನು ಹಸ್ತಾಂತರಿಸಲಾಯಿತು. ವಿಟ್ಲ ಮೂಡ್ನೂರು ಗ್ರಾಮದ ಮಾಡತ್ತಾರು  ದರ್ಭೆ ನಿವಾಸಿ ದಾಮೋದರ ಗೌಡ ಅವರು  ಕೂಲಿ ಕೆಲಸ ಮಾಡಿಕೊಂಡು ಹೆಂಡತಿ ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದ್ದರು, ವರ್ಷಗಳ ಹಿಂದೆ ಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಹೆಂಡತಿಯಲ್ಲೂ ಆರೋಗ್ಯ ಸಮಸ್ಯೆಯುಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಮನೆಯಲ್ಲಿ ಔಷಧಿ ಮಾಡುತ್ತಿದ್ದು, […]

ಚಂದಳಿಕೆ ಯುವಕೇಸರಿ ಅಬೀರಿ- ಅತಿಕಾರಬೈಲು ಸಂಘಟನೆ ವತಿಯಿಂದ ಸಹಾಯಧನ ಹಸ್ತಾಂತರ Read More »

ಸಿಸಿಟಿವಿಯಲ್ಲಿ ಕಂಡು ಬಂದ ಚಿರತೆ ಓಡಾಟ : ಭಯಭೀತರಾದ ಸ್ಥಳೀಯ ಜನ

ಬೆಳ್ತಂಗಡಿ: ಚಿರತೆಯೊಂದು ಓಡಾಡುತ್ತಿರುವ ದೃಶ್ಯ ಬೆಳ್ತಂಗಡಿಯ ಹುಣ್ಸೆಕಟ್ಟೆಯ ಪಂಜಿರ್ಪು ಎಂಬಲ್ಲಿ ಮುಂಜಾನೆ ನಡೆದಿದ್ದು, ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಪಂಜಿರ್ಪು ಗಣೇಶ್ ಐತಾಳ್ ಎಂಬವರ ಮನೆ ಸಮೀಪ ಬೆಳಿಗ್ಗೆ 4 ಗಂಟೆಯ ಹೊತ್ತಿಗೆ ಚಿರತೆ ರಸ್ತೆಯ ಬದಿ ಓಡಾಡುತ್ತಿರುವ ದೃಶ್ಯ ಮನೆಯ ಸಿಸಿ ಕ್ಯಾಮರದಲ್ಲಿ ಪತ್ತೆಯಾಗಿದ್ದು, ಸ್ಥಳೀಯ ಜನತೆ ಇದೀಗ ಭಯಭೀತರಾಗಿದ್ದಾರೆ. ಈ ಪ್ರದೇಶವು ನಗರದಿಂದ ಒಂದು ಕಿಮೀ ದೂರದಲ್ಲಿದ್ದು, ಸಮೀಪದ ಕೊಯ್ಯೂರು ಮತ್ತು ಗೇರುಕಟ್ಟೆ ಅರಣ್ಯ ಪ್ರದೇಶವಿದೆ.

ಸಿಸಿಟಿವಿಯಲ್ಲಿ ಕಂಡು ಬಂದ ಚಿರತೆ ಓಡಾಟ : ಭಯಭೀತರಾದ ಸ್ಥಳೀಯ ಜನ Read More »

ಎಸ್.ಎಸ್.ಎಲ್. ಸಿ ಫಲಿತಾಂಶ : ಉಡುಪಿ, ದಕ್ಷಿಣ ಕನ್ನಡ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಭಿನಂದನೆ

ಮಂಗಳೂರು : ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಗಳಿಸಿದೆ.  ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಅಭಿನಂದಿಸಿದ್ದಾರೆ. ಗುಣ ಮಟ್ಟದ  ಶಿಕ್ಷಣದೊಂದಿಗೆ ಅವಳಿ ಜಿಲ್ಲೆಗಳ ಈ ಸಾಧನೆಗೆ ಕಾರಣೀಭೂತರಾದ ಶಾಲೆಯ ಮುಖ್ಯೋಪಾಧ್ಯಯರ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮವನ್ನು ಶ್ಲಾಘಿಸುತ್ತಾ, ಕರಾವಳಿಯ ಉತ್ಕೃಷ್ಟ ಶೈಕ್ಷಣಿಕ ಪರಂಪರೆಯನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದ್ದಾರೆ.

ಎಸ್.ಎಸ್.ಎಲ್. ಸಿ ಫಲಿತಾಂಶ : ಉಡುಪಿ, ದಕ್ಷಿಣ ಕನ್ನಡ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಭಿನಂದನೆ Read More »

ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಬೀಬಿ ಅಲಾಬಿ ರಸ್ತೆ ಬಳಿ ನಡೆದಿದೆ. ನಿತೇಶ್ ರಾವ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್ನಲ್ಲಿ ವಾಸವಿದ್ದ ನಿತೇಶ್ 2ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಡುಪಿ ಜಿಲ್ಲೆಯವರಾದ ನಿತೇಶ್ ಕಳೆದ ಎರಡು ವರ್ಷಗಳಿಂದ ಮಂಗಳೂರಿನಲ್ಲಿ ಓದುತ್ತಿದ್ದರು. ಮೃತರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ನಿತೇಶ್

ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಸುಳ್ಯದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ಕಾಲೇಜು ವಿದ್ಯಾರ್ಥಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕದಲ್ಲಿ ಇಂದು ನಡೆದಿದೆ. ಸುಳ್ಯ ಸರಕಾರಿ ಪಿಯು  ಕಾಲೇಜಿನ ವಿದ್ಯಾರ್ಥಿನಿ ರಶ್ಮಿತಾ (16) ಆತ್ಮಹತ್ಯೆ ಮಾಡಿಕೊಂಡವರು. ಸಂಪಾಜೆ ಗ್ರಾಮದ ದೊಡ್ಡಡ್ಕ ಗೋಪಾಲ ಹಾಗೂ ಬಾಬಿ ದಂಪತಿಯ ಪುತ್ರಿಯಾಗಿರುವ ರಶ್ಮಿತಾ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸುಳ್ಯ‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುಳ್ಯದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ಬಸ್-ಟ್ಯಾಂಕರ್ ಡಿಕ್ಕಿ : 19 ಮಂದಿಗೆ ಗಾಯ

ಬೆಳ್ತಂಗಡಿ: ಬಸ್ ಹಾಗೂ ಟ್ಯಾಂಕರ್ ಡಿಕ್ಕಿ ಹೊಡೆದುಕೊಂಡ ಪರಿಣಾಮ 19 ಮಂದಿ ಗಾಯಗೊಂಡ ಘಟನೆ ಬೆಳ್ತಂಗಡಿ ಮಾರಿಗುಡಿ ಬಳಿ ಇಂದು ನಡೆದಿದೆ. ಬೆಳ್ತಂಗಡಿ ಕಡೆಯಿಂದ ಗುರುವಾಯನಕೆರೆಯತ್ತ ಬರುತ್ತಿದ್ದ ವಿಶಾಲ್ ಬಸ್‍, ಎದುರಿನಿಂದ ಬರುತ್ತಿದ್ದ ಎಚ್‍.ಪಿ. ಕಂಪೆನಿಯ ಪೆಟ್ರೋಲಿಯಂ ಕಂಪೆನಿಯ ಟ್ಯಾಂಕರ್ ನಡುವೆ ಮಾರಿಗುಡಿ ಬಳಿ ಡಿಕ್ಕಿ ಸಂಭವಿಸಿದೆ. ಅಪಘಾತದಿಂದ ಎರಡೂ ವಾಹನಗಳ ಚಾಲಕರು ಸಹಿತ  ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಎರಡೂ ವಾಹನಗಳ ಮುಂಭಾಗದ ಗಾಜು ಒಡೆದು ಜಖಂಗೊಂಡಿದೆ.

ಬಸ್-ಟ್ಯಾಂಕರ್ ಡಿಕ್ಕಿ : 19 ಮಂದಿಗೆ ಗಾಯ Read More »

ಪ್ರಭಾವಿ ನಾಯಕ, ಮಾಜಿ ಶಾಸಕ ವಸಂತ ಬಂಗೇರ ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕ, ಕಾಂಗ್ರೆಸ್ ಮುಖಂಡ ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ (79) ಮೇ 8 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಕೊನೆಯುಸಿರೆಳೆದಿದ್ದಾರೆ. ಮೇ 9ರಂದು ಮುಂಜಾನೆ ಪಾರ್ಥಿವ ಶರೀರ

ಪ್ರಭಾವಿ ನಾಯಕ, ಮಾಜಿ ಶಾಸಕ ವಸಂತ ಬಂಗೇರ ನಿಧನ Read More »

ಸಮುದ್ರ ಪಾಲಾಗುತ್ತಿದ್ದ ಇಬ್ಬರ ರಕ್ಷಣೆ

ಮಂಗಳೂರು: ಸಮುದ್ರದಲ್ಲಿ ಬೆಳ್ಳಂಬೆಳಿಗ್ಗೆ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ತಾಲೂಕಿನ ಮಲ್ಪೆ ಸಮೀಪದ ತೊಟ್ಟಂನಲ್ಲಿ ನಡೆದಿದೆ. ಬಳ್ಳಾರಿಯ ಕೊಟ್ಟೂರು ತಾಲೂಕಿನಿಂದ ಬಂದಿದ್ದ ಯುವಕರ ತಂಡವೊಂದು ಇಂದು ಬೆಳಿಗ್ಗೆ ನೀರಿನಲ್ಲಿ ಆಟವಾಡಲು ಸಮುದ್ರಕ್ಕಿಳಿದಿತ್ತು. ಈ ವೇಳೆ ಯುವಕರ ತಂಡವು ರಕ್ಕಸ ಗಾತ್ರದ ಅಲೆಗೆ ಸಿಲುಕಿ ಒದ್ದಾಡುತ್ತಿತ್ತು. ತಕ್ಷಣ ಅಪಾಯವನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ, ಗೋಪಿನಾಥ್ (25) ಮತ್ತು ರಂಗನಾಥ್ (26) ಎಂಬ ಇಬ್ಬರು ಪ್ರವಾಸಿಗರನ್ನು ರಕ್ಷಣೆ ಮಾಡಿದ್ದಾರೆ.  ಮಲ್ಪೆ ಪೊಲೀಸ್ ಠಾಣಾ

ಸಮುದ್ರ ಪಾಲಾಗುತ್ತಿದ್ದ ಇಬ್ಬರ ರಕ್ಷಣೆ Read More »

ಕೌಟುಂಬಿಕ ಕಲಹ : ಜೀವ ಬೆದರಿಕೆ

ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನಿಗೆ ಸೊಸೆ ಹಾಗೂ ಆಕೆಯ ತವರು ಮನೆಯವರು ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ. ಮೂಡುಕೋಡಿ ಗ್ರಾಮದ ನಿವಾಸಿ ವೆಂಕಟ್ರಮಣ ಭಟ್ (71) ಎಂಬವರ ಸೊಸೆ  ವಸಂತಾ ಯಾನೆ ಮೋಹನಾಕ್ಷಿ, ಸುಮಾರು ಒಂದು ತಿಂಗಳ ಹಿಂದೆ ತನ್ನ ಗಂಡ ಹಾಗೂ ಮನೆಯವರೊಂದಿಗೆ ಗಲಾಟೆ ನಡೆಸಿ ಸಣ್ಣ ಮಗನನ್ನು ಕರೆದುಕೊಂಡು ಆಕೆಯ ತವರು ಮನೆಗೆ ಹೋಗಿದ್ದರು. ಮಂಗಳವಾರ ಬೆಳಿಗ್ಗೆ, ತನ್ನ ದೊಡ್ಡ ಮಗನನ್ನು ಕರೆದುಕೊಂಡು ಹೋಗಲು, ಸೊಸೆ ತನ್ನ ತಾಯಿ ಹಾಗೂ ಸಹೋದರ

ಕೌಟುಂಬಿಕ ಕಲಹ : ಜೀವ ಬೆದರಿಕೆ Read More »

ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಬಿ.ಸಿ.ರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ (30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಜ್ವಲ್ ಮೇ 5 ರಂದು ಬಿ.ಸಿರೋಡಿನ ಖಾಸಗಿ ಬಸ್‌ ನಿಲ್ದಾಣದ ಹತ್ತಿರವಿರುವ ಹೋಟೆಲ್ ಕೃಷ್ಣಿ ಮಾದಲ್ಲಿ ರೂಮ್ ಮಾಡಿದ್ದ, ಮೇ 6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಮ್ ನ ಬಾಗಿಲು ತೆರೆಯದ ಕಾರಣ ಹೋಟೆಲ್

ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top