ಬೈಕ್-ಕಾರು ಡಿಕ್ಕಿ : ಎರಡು ತುಂಡುಗಳಾದ ಬೈಕ್ !
ಬೆಳ್ತಂಗಡಿ: ಬೈಕ್ ಹಾಗೂ ಕಾರು ಡಿಕ್ಕಿ ಹೊಡೆದುಕೊಂಡ ಘಟನೆ ಬೆಳಾಲು ಉಜಿರೆ ರಸ್ತೆಯಲ್ಲಿರುವ ಮಾಚಾರು ಸಮೀಪ ಇಂದು ನಡೆದಿದೆ. ಅಪಘಾತದಲ್ಲಿ ಬೈಕ್ ಎರಡು ತುಂಡಾಗಿ ಬಿದ್ದಿದ್ದು, ಬೈಕಿನಲ್ಲಿದ್ದವರು ಪವಾಡಸದೃಶ್ಯವಾಗಿ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಅಪಘಾತದ ವೇಳೆ ಬೈಕ್ ಸವಾರ ಬೈಕಿನಿಂದ ಎಸೆಯಲ್ಪಟ್ಟಿದ್ದು ರಸ್ತೆಬದಿಗೆ ಬಿದ್ದಿದ್ದಾರೆ. ಆದರೆ ಯಾವುದೇ ಹೆಚ್ಚಿನ ಗಾಯಗಳಾಗಿಲ್ಲ. ಕಾರಿಗೂ ಹಾನಿಯಾಗಿದ್ದು ಕಾರಿನಲ್ಲಿದ್ದವರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಬೈಕ್-ಕಾರು ಡಿಕ್ಕಿ : ಎರಡು ತುಂಡುಗಳಾದ ಬೈಕ್ ! Read More »










