ದಕ್ಷಿಣ ಕನ್ನಡ

ಕ್ಯಾಂಟಿನ್ ಗೆ ನುಗ್ಗಿದ ಕಾರು : ಮೂವರಿಗೆ ಗಾಯ, ಓರ್ವ ಗಂಭೀರ

ಸುಳ್ಯ: ಕಾರೊಂದು ಕ್ಯಾಂಟಿನ್‌ಗೆ ನುಗ್ಗಿದ ಪರಿಣಾಮ ಮೂರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಪೆರಾಜೆ ಪೀಚೆಯ ಲಿಖಿತ್, ಪೀಚೆ ಸುಮನ್ ಹಾಗೂ ಹೋಟೆಲ್ ಮಾಲಕ ನೌಫಲ್ ಗಾಯಗೊಂಡವರು. ಕ್ಯಾಂಟಿನ್‌ಗೆ ನುಗ್ಗಿ ಡಿಕ್ಕಿ ಹೊಡೆದ ಕಾರಣ ಚಹಾ ಕುಡಿಯುತ್ತಿದ್ದ ಇಬ್ಬರು ಹಾಗೂ ಕ್ಯಾಂಟೀನ್ ಮಾಲಕರು ಗಾಯಗೊಂಡಿದ್ದಾರೆ. ಅರಂತೋಡು ಕಡೆಗೆ ಹೋಗಿದ್ದ ಪೀಚೆ ಮನೆ ಲಿಖಿತ್ ಮತ್ತು ಸುಮನ್  ನೌಫಲ್ ರ ಹೋಟೆಲ್ ನಲ್ಲಿ ಚಾ ಕುಡಿಯುತ್ತಿದ್ದ ವೇಳೆ  ವೇಗವಾಗಿ ಬಂದ ರಿಡ್ಜ್ ಕಾರು ಕ್ಯಾಂಟಿನ್ ಗೆ ನುಗ್ಗಿ ಅನಾಹುತ […]

ಕ್ಯಾಂಟಿನ್ ಗೆ ನುಗ್ಗಿದ ಕಾರು : ಮೂವರಿಗೆ ಗಾಯ, ಓರ್ವ ಗಂಭೀರ Read More »

ಬೊಂಡ ಫ್ಯಾಕ್ಟರಿ ಬಂದ್ ಆದೇಶ- ಡಾ.ತಿಮ್ಮಯ್ಯ

ಮಂಗಳೂರು: ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥರಾಗಿರುವ ಘಟನೆಯೊಂದು ನಡೆದಿತ್ತು. ಒಟ್ಟು 137 ಮಂದಿ ಅಸ್ವಸ್ಥರಾಗಿರುವ ಕುರಿತು ವರದಿಯಾಗಿದೆ. ಎಳನೀರು ಮತ್ತು ನ್ಯಾಚುರಲ್‌ ಐಸ್‌ಕ್ರೀಂ ಮಾರಾಟ ಸಂಸ್ಥೆಯಾದ ʼಬೊಂಡ ಫ್ಯಾಕ್ಟರಿʼ ಯನ್ನು ಬಂದ್‌ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಆದೇಶ ನೀಡಿದ್ದಾರೆ. ತಾತ್ಕಾಲಿಕವಾಗಿ ಮತ್ತು ಮುಂದಿನ ಆದೇಶದವರೆಗೆ ಬೊಂಡ ನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟಿಸ್‌ ನೀಡಲಾಗಿದೆ.ಹೊರರೋಗಿಗಳಾಗಿ 84 ಮಂದಿ ಒಳರೋಗಿಗಳಾಗಿ ಹಾಗೂ 53 ಮಂದಿಗೆ

ಬೊಂಡ ಫ್ಯಾಕ್ಟರಿ ಬಂದ್ ಆದೇಶ- ಡಾ.ತಿಮ್ಮಯ್ಯ Read More »

ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಅಪರೇಟಿವ್‌ ಸೊಸೈಟಿಗೆ ರೂ. 4.57 ಕೋಟಿ ಲಾಭ

ಕಾರ್ಕಳ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಾರ್ಯವ್ಯಾಪ್ತಿ ಹೊಂದಿರುವ ಸಹಕಾರಿ ಸಂಸ್ಥೆ ಕಾರ್ಕಳದ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಅಪರೇಟಿವ್‌ ಸೊಸೈಟಿಯು 2023-24ನೇ ಸಾಲಿನಲ್ಲಿ ರೂ. 885.55 ಕೋಟಿ ವ್ಯವಹಾರ ನಡೆಸಿ ರೂ. 4.57 ಕೋಟಿ ಲಾಭ ಗಳಿಸಿದೆ ಎಂದು ಸೊಸೈಟಿಯ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು ಹೇಳಿದರು. ಅವರು ಏ. 11 ರಂದು ಸೊಸೈಟಿಯ ಪ್ರಧಾನ ಕಛೇರಿ ಜೋಡುರಸ್ತೆಯ ಸಾರಸ್ವತ ಸೌಧದಲ್ಲಿ ನಡೆದ 2023-24ನೇ ಸಾಲಿನ ಆಯವ್ಯಯ ಪರಿಶೀಲನೆ ಹಾಗೂ 2024-25ನೇ ಸಾಲಿನ

ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಅಪರೇಟಿವ್‌ ಸೊಸೈಟಿಗೆ ರೂ. 4.57 ಕೋಟಿ ಲಾಭ Read More »

ಬೈಹುಲ್ಲು ತರುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ

ಬೆಳ್ತಂಗಡಿ:  ಮಿನಿ ಲಾರಿಯೊಂದು ಬೈಹುಲ್ಲು ಮಾರಾಟಕ್ಕೆ ಆಗಮಿಸುತ್ತಿದ್ದ ವೇಳೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ  ಬೆಳ್ತಂಗಡಿ ತಾಲ್ಲೂಕಿನ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಟ್ಟೆಮಾರು ಎಂಬಲ್ಲಿ ನಡೆದಿದೆ. ಸ್ಥಳೀಯರು ಸಾಹಸ ಪ್ರದರ್ಶಿಸಿ ಬೆಂಕಿಯನ್ನು ನಂದಿಸಿ ಲಾರಿಯನ್ನು ಉಳಿಸಿದ್ದಾರೆ. ಹಾಸನದ ಸಕಲೇಶಪುರದ ಬೈಹುಲ್ಲು ವ್ಯಾಪಾರಸ್ಥರೋರ್ವರು ಹೈನುಗಾರಿಕೆ ಮಾಡುವ ಕೃಷಿಕರ ಮನೆ ಮನೆಗೆ ಬೈಹುಲ್ಲನ್ನು ಹಾಕಲು ತನ್ನ ಮಿನಿ ಲಾರಿಯಲ್ಲಿ ಹುಲ್ಲನ್ನು ತರುವಾಗ  ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಈ ವೇಳೆ ಸ್ಥಳೀಯವರೊಬ್ಬರು ಬೊಬ್ಬೆ ಹಾಕಿ ಲಾರಿ ಚಾಲಕನಿಗೆ ಮಾಹಿತಿ ನೀಡಿದರು.

ಬೈಹುಲ್ಲು ತರುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ Read More »

ಬೈಕ್ – ಪಿಕಪ್‌ ಡಿಕ್ಕಿ : ಬೈಕ್ ಸವಾರನಿಗೆ‌ ಗಾಯ

ಬೆಳ್ಳಾರೆ:ಪೇಟೆಯಲ್ಲಿ ಬೈಕ್‌ ಹಾಗೂ ಪಿಕಪ್ ಡಿಕ್ಕಿ ಹೊಡೆದುಕೊಂಡು ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬೈಕ್‌ ಸವಾರ ಪುಡ್ಕಜೆವರಾಗಿದ್ದು ಅವರಿಗೆ ತಲೆಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಬೈಕ್ – ಪಿಕಪ್‌ ಡಿಕ್ಕಿ : ಬೈಕ್ ಸವಾರನಿಗೆ‌ ಗಾಯ Read More »

ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

ಮಾಣಿ: ಯುವಕನೋರ್ವ ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಮಾಣಿಯಲ್ಲಿ ನಡೆದಿದೆ. ವೀರಕಂಭ ಮಜಿ ಶಾಲಾ ಬಳಿ ನಿವಾಸಿ ವಿಶ್ವನಾಥ (38) ಮೃತಪಟ್ಟವರು. ಬೆಂಗಳೂರು-ಮಂಗಳೂರು ರೈಲು ಡಿಕ್ಕಿ ಹೊಡೆದು ಮೃತಪಟ್ಟಿರಬೇಕೆಂದು ತಿಳಿದು ಬಂದಿದ್ದು, ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆಕಸ್ಮಿಕವೋ, ಆತ್ಮಹತ್ಯಯೋ ಎಂದು ತಿಳಿದು ಬರಬೇಕಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.              

ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು Read More »

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಪದ್ಮರಾಜ್ ಆರ್. ಪೂಜಾರಿ ಭೇಟಿ

ಪಂಜ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಪದ್ಮರಾಜ್ ಅವರನ್ನು ಪಂಜ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು  ಸನ್ಮಾನಿಸಿ, ಅವರ ಗೆಲುವಿಗೆ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕಲ್ಮಡ್ಕ ಗ್ರಾಪಂ ಅಧ್ಯಕ್ಷ ಮಹೇಶ್ ಕರಿಕ್ಕಳ, ಸುಳ್ಯ ಬ್ಲಾಕ್ ಅಧ್ಯಕ್ಷ ಪಿ.ಸಿ. ಜಯರಾಂ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಧರ್ಮಣ್ಣ ಗರಡಿ, ಸಂತೋಷ್ ರೈ ಅಡ್ಡಬೈಲು, ಉಮೇಶ್ ಬುಡೆಂಗಿ, ರಜಿತ್ ಭಟ್

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಪದ್ಮರಾಜ್ ಆರ್. ಪೂಜಾರಿ ಭೇಟಿ Read More »

ಸೋಮೇಶ್ವರ ಕಂದಾಯ ಅಧಿಕಾರಿಗೆ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆಯ ಪ್ರಕರಣ

ಉಳ್ಳಾಲ : ಸೋಮೇಶ್ವರ ಪುರಸಭೆ ಕಂದಾಯ ಅಧಿಕಾರಿಗೆ ಅಪರಿಚಿತನೊಬ್ಬ ಲೋಕಾಯುಕ್ತ ಪೊಲೀಸ್‌ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆಯಿಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿ ಪುರುಷೋತ್ತಮ ದ.ಕ. ಲೋಕಸಭಾ ಕ್ಷೇತ್ರದ ಸಂಚಾರಿ ತಂಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಏಪ್ರಿಲ್. 5ರಂದು ಮಧ್ಯಾಹ್ನದವರೆಗೆ ಎಂದಿನಂತೆ ಸೋಮೇಶ್ವರ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮಧ್ಯಾಹ್ನ ವೇಳೆಗೆ ಅಪರಿಚಿತನೊಬ್ಬನಿಂದ ಅವರಿಗೆ ವಾಟ್ಸ್‌ಆ್ಯಪ್ ಕರೆಯೊಂದು ಬಂದಿದೆ. ಆ ಕಡೆಯಿಂದ ಮಾತನಾಡುತ್ತಿದ್ದ

ಸೋಮೇಶ್ವರ ಕಂದಾಯ ಅಧಿಕಾರಿಗೆ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆಯ ಪ್ರಕರಣ Read More »

ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವದ ಆರಂಭ – ಏ.11 ರಿಂದ 12 ವರೆಗೆ

ಸುಳ್ಯ: ಕೊಡಗು ಸಂಪಾಜೆ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇಗುಲದಲ್ಲಿ ಕಾಲಾವಧಿ ಜಾತ್ರೋತ್ಸವವು ಎ.11ರಂದು ಬೆಳಿಗ್ಗೆ ಉಗ್ರಾಣ ತುಂಬಿಸುವುದರ ಮೂಲಕ ಪ್ರಾರಂಭಗೊಂಡಿದ್ದು, ನಾಳೆ ರಾತ್ರಿ ಶ್ರೀ ಪಂಚಲಿಂಗೇಶ್ವರ ದೇವರ ನೃತ್ಯಬಲಿ, ಬಟ್ಟಲುಕಾಣಿಕೆ ಉತ್ಸವ ಜರುಗಲಿದೆ. ಇಂದು ಬೆಳಿಗ್ಗೆ ದೇಗುಲದಲ್ಲಿ ಪರಿವಾರ ದೈವಗಳ ತಂಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.ಇಂದು ಸಂಜೆ ತಂತ್ರಿಗಳ ಆಗಮನ, ದೇವತಾ ಪ್ರಾರ್ಥನೆ, ಪಶುದಾನ, ಪುಣ್ಯಾಹ, ಪ್ರಸಾದ ಶುದ್ದಿ, ರಾಕ್ಷೆಘ್ನ

ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವದ ಆರಂಭ – ಏ.11 ರಿಂದ 12 ವರೆಗೆ Read More »

ಎಳನೀರು ಕುಡಿದು 15 ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಮಂಗಳೂರು: ಮಂಗಳೂರು ನಗರದ ಹೊರವಲಯದ ಅಡ್ಯಾರ್ ಬಳಿ ಎಳನೀರು ಕುಡಿದು ಸುಮಾರು 15 ಮಂದಿ ಸಾರ್ವಜನಿಕರು ಅಸ್ವಸ್ಥಗೊಂಡ ಘಟನೆ ನಡೆದಿದೆ. ಅಡ್ಯಾ‌ರ್ ನಲ್ಲಿರುವ ಲ್ಯಾಂಡ್ಸ್ ಫ್ಲವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಮ್ ಮಾರಾಟ ಮಾಡುವ ಸಂಸ್ಥೆಯಿಂದ ಏ.8 ರಂದು ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ಎಳನೀರನ್ನು ಲೀಟರ್ ಲೆಕ್ಕದಲ್ಲಿ ಖರೀದಿಸಿದ್ದಾರೆ. ಎಳನೀರು ಕುಡಿದ ಬಳಿಕ ಮರುದಿನ ಬೆಳಗ್ಗೆಯಿಂದ ಸಂಜೆಯ ತನಕ ಅಡ್ಯಾರ್ ಕಣ್ಣೂರು, ತುಂಬೆ ನಿವಾಸಿಗಳು ವಾಂತಿ

ಎಳನೀರು ಕುಡಿದು 15 ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು Read More »

error: Content is protected !!
Scroll to Top