ದಕ್ಷಿಣ ಕನ್ನಡ

ಬೈಕ್-ಕಾರು ಡಿಕ್ಕಿ : ಎರಡು ತುಂಡುಗಳಾದ ಬೈಕ್ !

ಬೆಳ್ತಂಗಡಿ: ಬೈಕ್‍ ಹಾಗೂ ಕಾರು ಡಿಕ್ಕಿ ಹೊಡೆದುಕೊಂಡ ಘಟನೆ ಬೆಳಾಲು ಉಜಿರೆ ರಸ್ತೆಯಲ್ಲಿರುವ ಮಾಚಾರು ಸಮೀಪ ಇಂದು ನಡೆದಿದೆ. ಅಪಘಾತದಲ್ಲಿ ಬೈಕ್ ಎರಡು ತುಂಡಾಗಿ ಬಿದ್ದಿದ್ದು, ಬೈಕಿನಲ್ಲಿದ್ದವರು ಪವಾಡಸದೃಶ್ಯವಾಗಿ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಅಪಘಾತದ ವೇಳೆ ಬೈಕ್ ಸವಾರ ಬೈಕಿನಿಂದ ಎಸೆಯಲ್ಪಟ್ಟಿದ್ದು ರಸ್ತೆಬದಿಗೆ ಬಿದ್ದಿದ್ದಾರೆ. ಆದರೆ ಯಾವುದೇ ಹೆಚ್ಚಿನ ಗಾಯಗಳಾಗಿಲ್ಲ. ಕಾರಿಗೂ ಹಾನಿಯಾಗಿದ್ದು ಕಾರಿನಲ್ಲಿದ್ದವರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಬೈಕ್-ಕಾರು ಡಿಕ್ಕಿ : ಎರಡು ತುಂಡುಗಳಾದ ಬೈಕ್ ! Read More »

ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಹೃದಯಾಘಾತದಿಂದ ನಿಧನ

ಮಂಗಳೂರು: ಹಿರಿಯ ಕಲಾವಿದ, ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿ ಗಂಗಾಧರ ಪುತ್ತೂರು (59) ಉಡುಪಿ ಜಿಲ್ಲೆಯ ಕೋಟದಲ್ಲಿ ವೇಷ ಕಳಚುತ್ತಿರುವಾಗ ಹೃದಯಘಾತದಿಂದ ನಿಧನ ಹೊಂದಿದ್ದಾರೆ. ಸುಮಾರು 4 ದಶಕಗಳ ಕಾಲ ಯಕ್ಷ ರಂಗದಲ್ಲಿ ಸೇವೆ ಸಲ್ಲಿಸಿದ ಗಂಗಾಧರ ಪುತ್ತೂರು ಶ್ರೀ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ 42 ವರ್ಷ ತಿರುಗಾಟ ನಡೆಸುತ್ತಿದ್ದರು. ಬುಧವಾರ ಕೋಟ ಗಾಂಧಿ ಮೈದಾನದಲ್ಲಿ ನಡೆದ ಯಕ್ಷಗಾನದಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಕುಕ್ಕಿತ್ತಾಯನ ವೇಷ ನಿರ್ವಹಿಸಿ, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು

ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಹೃದಯಾಘಾತದಿಂದ ನಿಧನ Read More »

ಪ್ಲಂಬರ್ ರಾಜೇಶ್ ಕುಮಾರ್ ನೇಣು ಬಿಗಿದು ಆತ್ಮಹತ್ಯೆ

ಕಡಬ : ಮೋಟಾರು ಸೈಕಲ್ ಗೆ ಮಾಡಿದ ಸಾಲವನ್ನು ಮರುಪಾವತಿ ಮಾಡಲಾಗದೇ ಜೀವನದಲ್ಲಿ ಜಿಗುಪ್ಪೆಹೊಂದಿ ಕಡಬ ಬೆಳಂದೂರಿನ ಪಟ್ಟೆ ಮನೆ ನಿವಾಸಿ ರಾಜೇಶ್ ಕುಮಾರ್ ಪಿ(37) ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಜೇಶ್, ಮನೆಯ ಕೊಟ್ಟಿಗೆಯ ಅಡ್ಡಕ್ಕೆ ನೈಲಾನ್ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ನಿನ್ನೆಯಷ್ಟೇ ಮೃತ ರಾಜೇಶ್ ಕುಮಾರ್ ಕುದ್ಮಾರಿನಲ್ಲಿರುವ ಸಹೋದರಿಯ ಮನೆಗೆ ತೆರಳಿದ್ದು ಸಂಜೆ ವೇಳೆಗೆ ಮನೆಗೆ ವಾಪಾಸಾಗಿದ್ದರು. ಪ್ಲಂಬಿಂಗ್ ಕೆಲಸ ಮಾಡಿಕೊಂಡಿದ್ದ ರಾಜೇಶ್ ಮನೆಯಲ್ಲಿ ಒಬ್ಬರೇ ವಾಸವಿದ್ದರು. ಇಂದು ಬೆಳಿಗ್ಗೆ ಚಿಕ್ಕಪ್ಪನ ಮಗ ಧನಂಜಯ್

ಪ್ಲಂಬರ್ ರಾಜೇಶ್ ಕುಮಾರ್ ನೇಣು ಬಿಗಿದು ಆತ್ಮಹತ್ಯೆ Read More »

ಪಂಜ ಸೀಮೆಯ ದೇವಳದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ  | ಶೀಘ್ರ ಮಳೆಗಾಗಿ ವಿಶೇಷ ಪೂಜೆ

ಪಂಜ : ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ  ಹಾಗೂ ಶೀಘ್ರ ಮಳೆಗಾಗಿ ವಿಶೇಷ ಪೂಜೆ ಬ್ರಹ್ಮಶ್ರೀ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.1 ರಂದು ಜರುಗಿತು. ಆ ಪ್ರಯುಕ್ತ 12 ಕಾಯಿ ಗಣಹವನ,ಆಶ್ಲೇಷ ಬಲಿ, ರುದ್ರ ಪಾರಾಯಣ, ಶತ ರುದ್ರಾಭಿಷೇಕ, ಸೀಯಾಳ ಅಭಿಷೇಕ, ಕಲಶಾಭಿಷೇಕ ಸೇವೆ ಗಳೊಂದಿಗೆ ಶೀಘ್ರ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ನಡೆಯಿತು.ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್,

ಪಂಜ ಸೀಮೆಯ ದೇವಳದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ  | ಶೀಘ್ರ ಮಳೆಗಾಗಿ ವಿಶೇಷ ಪೂಜೆ Read More »

ಅಡ್ಯಾರ್ ಎಳನೀರಿನಲ್ಲಿ  ವಿಷಕಾರಿ ಅಂಶವಿಲ್ಲ ಆರೋಗ್ಯ ಇಲಾಖೆ ದೃಢ

ಮಂಗಳೂರು : ನಗರದ ಹೊರವಲಯದ ಅಡ್ಯಾರ್ ಬೊಂಡಾ ಫ್ಯಾಕ್ಟರಿಯಿಂದ ಖರೀದಿಸಿದ ಎಳನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಗ್ಯ ಇಲಾಖೆಯು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿರುವ ಎಳನೀರು ಸ್ಯಾಂಪಲ್‌ನ ಪರೀಕ್ಷಾ ವರದಿ ಹೊರ ಬಂದಿದ್ದು, ವಿಷಕಾರಿ ಅಂಶವಿಲ್ಲ ಎನ್ನುವುದು ವರದಿಯಿಂದ ತಿಳಿದು ಬಂದಿದೆ. ಎ.8ರಂದು ಬೊಂಡ ಫ್ಯಾಕ್ಟರಿಯಿಂದ ಖರೀದಿಸಲಾದ ಎಳನೀರು ಸೇವಿಸಿದ 138 ಮಂದಿ ಮರುದಿನ ಅನಾರೋಗ್ಯಕ್ಕೆ ಒಳಗಾಗಿ ಜಿಲ್ಲೆಯ ಹಲವು ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಹಿನ್ನಲ್ಲೆ ದ.ಕ.

ಅಡ್ಯಾರ್ ಎಳನೀರಿನಲ್ಲಿ  ವಿಷಕಾರಿ ಅಂಶವಿಲ್ಲ ಆರೋಗ್ಯ ಇಲಾಖೆ ದೃಢ Read More »

ಕ್ಯಾಂಪ್ಕೋ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ| ಬಿ.ವಿ. ಸತ್ಯನಾರಾಯಣ ಆಯ್ಕೆ

ಮಂಗಳೂರು: ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾದ ಹೆಚ್.ಎಮ್.ಕೃಷ್ಣಕುಮಾರ್ ಅವರ ಅಧಿಕಾರ ಅವಧಿ ಏ. 30ಕ್ಕೆ ಕೊನೆಗೊಂಡಿದ್ದು ಮೇ 1 ರಿಂದ ಅನ್ವಯವಾಗುವಂತೆ ಡಾ| ಬಿ.ವಿ. ಸತ್ಯನಾರಾಯಣ ಅವರನ್ನು ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಕಳೆದ 50 ವರ್ಷಗಳಿಂದ ರೈತರ ಹಿತರಕ್ಷಕನಾಗಿ ಕಾರ್ಯನಿರ್ವಹಿಸುತ್ತಿರುವ ಕ್ಯಾಂಪ್ಕೋದ ಆಡಳಿತ ಮಂಡಳಿಯು, ಏ.23 ರಂದು ನಡೆದ ತನ್ನ ಮಂಡಳಿ ಸಭೆಯಲ್ಲಿ ಸಂಸ್ಥೆಯನ್ನು ಮುನ್ನಡೆಸುವ ಮಹತ್ತರ ಜವಾಬ್ದಾರಿಯನ್ನು ಡಾ| ಬಿ.ವಿ.ಸತ್ಯನಾರಾಯಣ ಅವರಿಗೆ ವಹಿಸುವ ನಿರ್ಣಯವನ್ನು ಅವಿರೋಧವಾಗಿ ತೆಗೆದುಕೊಂಡಿದೆ. ಡಾ| ಸತ್ಯನಾರಾಯಣ ಅವರು

ಕ್ಯಾಂಪ್ಕೋ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ| ಬಿ.ವಿ. ಸತ್ಯನಾರಾಯಣ ಆಯ್ಕೆ Read More »

ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ, ಮಾಜಿ ಮುಖ್ಯಮಂತ್ರಿ ಡಿವಿಎಸ್ ಭೇಟಿ

ಸುಳ್ಯ: ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಶುಭವಸರದಲ್ಲಿರುವ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ, ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಮಂಗಳವಾರ ಭೇಟಿ ನೀಡಿದರು. ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿ ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ ಸ್ವಯಂಸೇವಕರಾಗಿ ದುಡಿದ ಎಲ್ಲರೊಂದಿಗೂ ಮಾತನಾಡಿ ಖುಷಿಪಡಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಾಸ್ತರ್,  ಬ್ರಹ್ಮಕಲಶೋತ್ಸವ ಸಮಿತಿಯ ಆಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ, ಪ್ರಧಾನ

ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ, ಮಾಜಿ ಮುಖ್ಯಮಂತ್ರಿ ಡಿವಿಎಸ್ ಭೇಟಿ Read More »

ಇಂದು :  ಚೆನ್ನಾವರ ಉಳ್ಳಾಕುಲು ದೈವಸ್ಥಾನದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ,ವರ್ಷಾವಧಿ ನೇಮೋತ್ಸವ |ಕಾಪು ರಂಗ ತರಂಗ ಕಲಾವಿದರ ಅಭಿನಯದ ಒರಿಯೆ ನಾಟಕ ಪ್ರದರ್ಶನ

ಸವಣೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಚೆನ್ನಾವರಗಡಿಗುತ್ತು ಶ್ರೀ ಉಳ್ಳಾಕುಲು ಮಾಡ ,ಗ್ರಾಮ ದೈವ ಅಬ್ಬೆಜಲಾಯ ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಮೇ.1ರಂದು ವರ್ಷಾವಧಿ ನೇಮೋತ್ಸವ ನಡೆಯಲಿದೆ. ದೈವಸ್ಥಾನದಲ್ಲಿ ಮೇ.1ರಂದು ಬೆಳಿಗ್ಗೆ 7.30ರಿಂದ ಗಣಹೋಮ, ನವಕ ಕಲಶ ,ಬೆಳಿಗ್ಗೆ11ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ,ಮಧ್ಯಾಹ್ನ ಮಹಾಪೂಜೆ ,ಪ್ರಸಾದ ವಿತರಣೆ ,ಅನ್ನಸಂತರ್ಪಣೆ ನಡೆಯಲಿದೆ.ಸಂಜೆ 6.30ಕ್ಕೆ ಶ್ರೀ ದೈವಗಳ ಭಂಡಾರ ತೆಗೆಯುವುದು, ಅನ್ನಸಂತರ್ಪಣೆ. ರಾತ್ರಿ 11 ರಿಂದ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ. ಮೇ.2ರಂದು

ಇಂದು :  ಚೆನ್ನಾವರ ಉಳ್ಳಾಕುಲು ದೈವಸ್ಥಾನದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ,ವರ್ಷಾವಧಿ ನೇಮೋತ್ಸವ |ಕಾಪು ರಂಗ ತರಂಗ ಕಲಾವಿದರ ಅಭಿನಯದ ಒರಿಯೆ ನಾಟಕ ಪ್ರದರ್ಶನ Read More »

ಮೇ 5 : ಭಜನಾ ತರಬೇತಿ ಶಿಬಿರ

ಸುಳ್ಯ: ಪಂಜ ಶ್ರೀ ಶಾರದಾಂಬ ಭಜನಾ ಮಂಡಳಿ, ಸುಳ್ಯ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಹಾಗೂ ಪಂಜ ಮತ್ತು ನಿಂತಿಕಲ್ಲು ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಆಶ್ರಯದಲ್ಲಿ 15ನೇ ವರ್ಷದ ಭಜನಾ ತರಬೇತಿ ಶಿಬಿರ ಮೇ.5 ರಂದು ಹಾಗೂ ಮೇ.10 ರಂದು ಅರ್ಧ ಏಕಾಹ ಭಜನೆ ಕಾರ್ಯಕ್ರಮ, ಶ್ರೀ ಸತ್ಯನಾರಾಯಣ ದೇವರ ಪೂಜೆ ಜರುಗಲಿದೆ. ಭಜನಾ ತರಬೇತಿ ಶಿಬಿರವನ್ನು ಪಾಲ್ತಿಮಾರ್ ಶ್ರೀ ಮೂಕಾಂಬಿಕ ಕ್ಷೇತ್ರದ ಪಂಡಿತ್ ಕೇಶವ

ಮೇ 5 : ಭಜನಾ ತರಬೇತಿ ಶಿಬಿರ Read More »

ಮರದ ಕೊಂಬೆ ನಡುವೆ ಸಿಲುಕಿ ವ್ಯಕ್ತಿ ಮೃತ್ಯು !

ಸುಳ್ಯ: ವ್ಯಕ್ತಿಯೊಬ್ಬರು ಮರ ಕಡಿಯುತ್ತಿದ್ದ ವೇಳೆ ಮರದ ಕೊಂಬೆಯ ನಡುವೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯದ ಕುರುಂಜಿಗುಡ್ಡೆಯಲ್ಲಿ ಇಂದು ನಡೆದಿದೆ. ಬೆಳ್ಯಪ್ಪ ನಾಯ್ಕ ಕೇರ್ಪಳ ಮನೆ ಮೃತಪಟ್ಟವರು. ಮರ ಕಡಿಯುತ್ತಿದ್ದ ವೇಳೆ ಕೊಂಬೆಗಳ ನಡುವೆ ಸಿಲುಕಿದ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮರದ ಕೊಂಬೆ ನಡುವೆ ಸಿಲುಕಿ ವ್ಯಕ್ತಿ ಮೃತ್ಯು ! Read More »

error: Content is protected !!
Scroll to Top