ದಕ್ಷಿಣ ಕನ್ನಡ

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ : ಗಿರಿಯಪ್ಪ ಎಂಬುವವರು ತೆಂಗಿನಕಾಯಿ ಕೀಳಲು ಹೋಗಿ ಆಯಾ ತಪ್ಪಿ ಕೆಳಗೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನಲ್ಲಿ  ನಡೆದಿದೆ. ಅವರ ತೋಟದ ತೆಂಗಿನ ಮರದಿಂದ ಕಾಯಿ ಕೀಳಲು ಮರಕ್ಕೆ ಹತ್ತಿದ್ದರು. ಈ ವೇಳೆ ಜಾರಿ ಕೆಳಗೆ ಬಿದ್ದು ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ದಿನದ 24 ಗಂಟೆಗಳ ಕಾಲ ಚಿಕಿತ್ಸೆ ಪಡೆಯುತ್ತಿದ್ದ ಗಿರಿಯಪ್ಪ ಇಂದು ಬೆಳಿಗ್ಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಗಿರಿಯಪ್ಪ ಅವರನ್ನು ಬದುಕಿಸಲು […]

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ನಾಯಕತ್ವ ತರಬೇತಿ ಕಾರ್ಯಾಗಾರ

  ಸುಬ್ರಹ್ಮಣ್ಯ :  ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ನ. 27ರಂದು ನಾಯಕತ್ವ ತರಬೇತಿ ಕಾರ್ಯಗಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ ವಹಿಸಿದ್ದರು. ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯ ಇಂಗ್ಲೀಷ್  ಉಪನ್ಯಾಸಕ ಶೀನಾ ನಾಡೋಳಿ ಅವರು ವಿವಿಧ ಚಟುವಟಿಕೆಯ ಮೂಲಕ ನಾಯಕತ್ವದ ಬಗ್ಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ  ವಿದ್ಯಾರ್ಥಿ  ಪರಿಷತ್ತಿನ ಸಂಯೋಜಕ ಡಾ. ಪ್ರಸಾದ ಎನ್ ಸಹ ಸಂಯೋಜಕರಾದ ಶಿವಪ್ರಸಾದ ಎಸ್,ಅಶ್ವಿನಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ನಾಯಕತ್ವ ತರಬೇತಿ ಕಾರ್ಯಾಗಾರ Read More »

ವೇಣೂರು ಬರ್ಕಜೆಯಲ್ಲಿ ನದಿಗೆ ಇಳಿದ ಮೂವರು ನೀರು ಪಾಲು !

ವೇಣೂರು ಬರ್ಕಜೆ ಎಂಬಲ್ಲಿ ಮೂವರು ಯುವಕರು ನೀರುಪಾಲಾದ ಘಟನೆ ಇಂದು ನಡೆದಿದೆ. ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾರ್ಯಕ್ರಮದ ನಿಮ್ಮಿತ ಬಂದು ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್(20) , ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್(19) , ಬಂಟ್ವಾಳ ಗ್ರಾಮದ ವಗ್ಗದ ಜೈಸನ್(19) ನೀರು ಪಾಲಾದವರು ಸ್ಥಳೀಯ ಕುಟುಂಬದ ಮನೆಗೆ ನೆಂಟರಾಗಿ ಬಂದಿದ್ದ ಮೂವರು ನದಿಗೆ ಸ್ನಾನ ಮಾಡಲು ತೆರಳಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೂವರು ಮೃತದೇಹ ನೀರಿನಿಂದ ಹೊರತೆಗೆಯಲಾಗಿದ್ದು.

ವೇಣೂರು ಬರ್ಕಜೆಯಲ್ಲಿ ನದಿಗೆ ಇಳಿದ ಮೂವರು ನೀರು ಪಾಲು ! Read More »

ಕುಸಿದು ಬಿದ್ದು ಅಡ್ಕಾರಿನ ರಾಘವ ಆಚಾರ್ಯ ನಿಧನ

ಸುಳ್ಯ: ವೃದ್ಧಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಬಂದ ಹಿರಿಯ ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದಿದೆ. ಸುಳ್ಯ ಅಡ್ಕಾರಿನ ರಾಘವ ಆಚಾರ್ಯ (65) ಮೃತಪಟ್ಟವರು. ರಾಘವ ಆಚಾರ್ಯ ಅವರು ವೃದ್ದಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲೆಂದು ಸುಳ್ಯ ತಾಲೂಕು ಕಚೇರಿಯ ಪಡಶಾಲೆಗೆ ಬಂದಿದ್ದರು ಅರ್ಜಿ ಸ್ವೀಕರಿಸಿದ ಅಲ್ಲಿನ ಸಿಬ್ಬಂದಿ ಒಟಿಪಿ ಬರುವವರೆಗೆ ಕುಳಿತುಕೊಳ್ಳಲು ಹೇಳಿದ್ದರು. ಸ್ವಲ್ಪ ಹೊತ್ತಲ್ಲಿ ಒಟಿಪಿ ಬಂದಾಗ ಸಿಬ್ಬಂದಿಯು ಕೌಂಟರ್ ಬಳಿಗೆ ರಾಘವ ಆಚಾರ್ಯ ಅವರನ್ನು ಕರೆದಿದ್ದರು. ಕುಳಿತಲ್ಲಿಂದ ಎದ್ದು

ಕುಸಿದು ಬಿದ್ದು ಅಡ್ಕಾರಿನ ರಾಘವ ಆಚಾರ್ಯ ನಿಧನ Read More »

ಸಾಲ ಬಾಧೆಯಿಂದ ನೇಣಿಗೆ ಶರಣು

ಬೆಳ್ತಂಗಡಿ : ಸಾಲಗಾರರ ಬಾಧೆ ತಡೆಯಲಾಗದೆ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೆಂಗುಡೇಲು ನಿವಾಸಿ, ಪೂವಾಣಿ  ಗೌಡ ಮೃತ ಪಟ್ಟ ವ್ಯಕ್ತಿ. ಪೂವಣಿ ಗೌಡರವರು ಅವರದ್ದೆ ತೋಟದಲ್ಲಿ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ.  ಪೂವಣಿ ಗೌಡ ಅವರು ಸಾಲ ಬಾಧೆಯಿಂದ ನೊಂದಿದ್ದರು. ಈ ಕಾರಣಕ್ಕಾಗಿ ಆತ್ಮ ಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಾಲ ಬಾಧೆಯಿಂದ ನೇಣಿಗೆ ಶರಣು Read More »

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ | ಆಟೋಟ ಸ್ಪರ್ಧೆ

ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಾಣಿಯೂರು ಇದರ ಶತಮಾನೋತ್ಸವದ ಅಂಗವಾಗಿ ಆಟೋಟ ಸ್ಪರ್ಧೆ ನಾಣಿಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಹಕಾರಿ ಸಂಘದ ವ್ಯಾಪ್ತಿಯ ನಾಣಿಲ ಶಾಲೆಗೆ ಸಂಬಂಧಪಟ್ಟ ಆಟೋಟ ಸ್ಪರ್ಧೆ ನಡೆಯಿತು. ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ಸುಂದರ ದೇವಸ್ಯ, ವೀಣಾ ಅಂಬುಲ, ಶಾಲಾ ಮುಖ್ಯ ಶಿಕ್ಷಕ ಪದ್ಮಯ್ಯಗೌಡ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯ ಪುರಂದರ ಅಂಬುಲ ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು .

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ | ಆಟೋಟ ಸ್ಪರ್ಧೆ Read More »

ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು

ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ದಿಡುಪೆಯಿಂದ ವರದಿಯಾಗಿದೆ. ಮಿತ್ತಬಾಗಿಲು ನೆಲ್ಲಿಗುಡ್ಡ ನಿವಾಸಿ ಹೃಶ್ಮಿ (17ವ) ಮೃತಪಟ್ಟ ವಿದ್ಯಾರ್ಥಿನಿ ರಾಜೇಶ್ ಅರುಣಾ ದಂಪತಿ ಮಗಳಾದ ಹೃಶ್ಮಿ ಒಂದು ವಾರದ ಹಿಂದೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.

ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು Read More »

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಂಗಳೂರು ಶಾಖಾ ಮಠದ ರಜತ ಸಂಭ್ರಮ | ದ.ಕ.ಜಿಲ್ಲೆಯ ವಿವಿಧ ಸಾಧಕರಿಗೆ ಕರಾವಳಿ ರತ್ನ ಪ್ರಶಸ್ತಿ ಪ್ರದಾನ | ಮಂಗಳೂರು ಶಾಖಾ ಮಠ ಧರ್ಮ ಕಾರ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಉಂಟುಮಾಡಿದೆ : ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ | ಸಂತ ಮತ್ತು ಸಮಾಜ ನಾಣ್ಯದ ಎರಡು ಮುಖಗಳಿದ್ದಂತೆ : ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ | ಜನಮಾನಸದಲ್ಲಿ ಕಾರ್ಯಕ್ರಮ ಅಚ್ಚಳಿಯದೇ ಉಳಿಯಬೇಕು ಎಂಬ ಚಿಂತನೆಯಲ್ಲಿ ನಡೆದಿದೆ : ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ | ಜ್ಞಾನ ಹಾಗೂ ಮಾನವೀಯತೆ ಆಧಾರದಲ್ಲಿ ಸಮಾಜ ಕಟ್ಟಲು ಸಾಧ್ಯ : ಡಾ.ಭರತ್ ವೈ ಶೆಟ್ಟಿ | ಸರಕಾರ ಪ್ರಾಥಮಿಕ , ಪ್ರೌಢಶಾಲೆ ಜತೆಗೆ ಕನ್ನಡವನ್ನು ಉಳಿಸುವ ಕೆಲಸ ಬದ್ಧತೆಯಿಂದ ಮಾಡಬೇಕಾಗಿದೆ : ಡಾ.ಕೆ.ಚಿನ್ನಪ್ಪ ಗೌಡ

ಮಂಗಳೂರು: ಧರ್ಮ ಉಳಿವಿನ ಜತೆಗೆ ಧರ್ಮ ಪ್ರಚಾರ ಮಠಗಳ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಕಳೆದ 25 ವರ್ಷಗಳ ಹಿಂದೆ ಮಂಗಳೂರಿನಲ್ಲಿ ಪ್ರಾರಂಭವಾದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಇಂದು ಧರ್ಮ ಕಾರ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನುಂಟು ಮಾಡಿದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸ್ವಾಮೀಜಿ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ರಜತ ಸಂಭ್ರಮದ ಅಂಗವಾಗಿ ದ.ಕ.ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಕರಾವಳಿ ರತ್ನ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಂಗಳೂರು ಶಾಖಾ ಮಠದ ರಜತ ಸಂಭ್ರಮ | ದ.ಕ.ಜಿಲ್ಲೆಯ ವಿವಿಧ ಸಾಧಕರಿಗೆ ಕರಾವಳಿ ರತ್ನ ಪ್ರಶಸ್ತಿ ಪ್ರದಾನ | ಮಂಗಳೂರು ಶಾಖಾ ಮಠ ಧರ್ಮ ಕಾರ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಉಂಟುಮಾಡಿದೆ : ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ | ಸಂತ ಮತ್ತು ಸಮಾಜ ನಾಣ್ಯದ ಎರಡು ಮುಖಗಳಿದ್ದಂತೆ : ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ | ಜನಮಾನಸದಲ್ಲಿ ಕಾರ್ಯಕ್ರಮ ಅಚ್ಚಳಿಯದೇ ಉಳಿಯಬೇಕು ಎಂಬ ಚಿಂತನೆಯಲ್ಲಿ ನಡೆದಿದೆ : ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ | ಜ್ಞಾನ ಹಾಗೂ ಮಾನವೀಯತೆ ಆಧಾರದಲ್ಲಿ ಸಮಾಜ ಕಟ್ಟಲು ಸಾಧ್ಯ : ಡಾ.ಭರತ್ ವೈ ಶೆಟ್ಟಿ | ಸರಕಾರ ಪ್ರಾಥಮಿಕ , ಪ್ರೌಢಶಾಲೆ ಜತೆಗೆ ಕನ್ನಡವನ್ನು ಉಳಿಸುವ ಕೆಲಸ ಬದ್ಧತೆಯಿಂದ ಮಾಡಬೇಕಾಗಿದೆ : ಡಾ.ಕೆ.ಚಿನ್ನಪ್ಪ ಗೌಡ Read More »

ದೆಹಲಿಯ ಸಚಿವಾಲಯದಲ್ಲಿ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ  

ಮಂಗಳೂರು : ದ.ಕ. ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ ಅವರನ್ನು ದೆಹಲಿಯಲ್ಲಿ ಶನಿವಾರ ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ  ಇಂಡಿಯನ್ ಕೋಸ್ಟ್ ಗಾರ್ಡ್ ಅಕಾಡೆಮಿ ನಿರ್ಮಾಣ ಪ್ರಕ್ರಿಯೆಗೆ ವೇಗ ನೀಡುವುದು, ಕೊಂಕಣ ರೈಲ್ವೆಯ ವಿಲೀನ, ಜಾಗತಿಕ ಸಾಮರ್ಥ್ಯ  ಕೇಂದ್ರಗಳು (ಜಿಸಿಸಿ), ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆಯ ಸ್ಥಾಪನೆ ಕುರಿತು ಮನವಿ ಮಾಡಿದರು. ಕೊಂಕಣ ರೈಲ್ವೆಯ ವಿಲೀನ, ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ), ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆಯ ಸ್ಥಾಪನೆ ಪ್ರಮುಖವಾಗಿದೆ.

ದೆಹಲಿಯ ಸಚಿವಾಲಯದಲ್ಲಿ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ   Read More »

ನ.27 ರಿಂದ ಡಿ.12 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ

ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ನ.27 ರಿಂದ ಡಿ.12 ರವರೆಗೆ ನಡೆಯಲಿದೆ. ನ.27 ರಂದು ಕೊಪ್ಪರಿಗೆ ಏರುವುದು, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.30 ರಂದು ಲಕ್ಷದೀಪೋತ್ಸವ, ಡಿ.1 ರಂದು ರಾತ್ರಿ ಶೇಷ ವಾಹನೋತ್ಸವ, ಡಿ.2 ರಂದು ರಾತ್ರಿ ಅಶ್ವವಾಹನೋತ್ಸವ, ಡಿ.3 ರಂದು ರಾತ್ರಿ ಮಯೂರವಾಹನೋತ್ಸವ, ಡಿ.4 ರಂದು ರಾತ್ರಿ ಶೇಷವಾಹನೋತ್ಸವ, ಡಿ.5 ರಂದು ರಾತ್ರಿ ಹೂವಿನ ತೇರಿನ ಉತ್ಸವ, ಡಿ.6  ರಂದು ರಾತ್ರಿ ಪಂಚಮಿ ಉತ್ಸವ,

ನ.27 ರಿಂದ ಡಿ.12 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ Read More »

error: Content is protected !!
Scroll to Top