ರಾಜ್ಯ ಕಾಂಗ್ರೇಸ್ ಸರಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳದಿಂದ ಬೃಹತ್ ಪ್ರತಿಭಟನೆ
ಬಂಟ್ವಾಳ: ರಾಜ್ಯ ಕಾಂಗ್ರೇಸ್ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ, ವಿಶ್ವಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಬಿಸಿರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆದು, ಬಳಿಕ ರಾಷ್ಟ್ರೀಯ ಹೆದ್ದಾರಿಯನ್ನು ತಡೆದ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಕಾರ್ಯಕರ್ತರನ್ನು ಬಂಟ್ವಾಳ ಪೋಲೀಸರು ಬಂಧಿಸಿ ಬಿಡುಗಡೆಗೊಳಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಬಂಟ್ವಾಳ ಪ್ರಖಂಡದ ಅಧ್ಯಕ್ಷ ನ್ಯಾಯವಾದಿ ಪ್ರಸಾದ್ ಕುಮಾರ್ ರೈ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನಿರಂತರವಾಗಿ ಹಿಂದೂ ವಿರೋಧಿ ನೀತಿಯನ್ನು ಅನುಸರಿಸಿ ಅಶಾಂತಿಯನ್ನು ಸೃಷ್ಟಿ […]










