ದಕ್ಷಿಣ ಕನ್ನಡ

ಮತದಾನಕ್ಕಾಗಿ ಸರದಿ ಸಾಲಿನಲ್ಲಿ ನಿಂತ ಬ್ರಿಜೇಶ್ ಚೌಟ

ಮಂಗಳೂರು : ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರತೀ ಬೂತ್‍ ಗಳಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ. ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಕ್ಕು ಚಲಾಯಿಸಿದರು. ಅವರು ಮಂಗಳೂರಿನ ರಥಬೀದಿಯ ಮತಗಟ್ಟೆಯಲ್ಲಿ ಮತದಾನ  ಮಾಡಿದರು.

ಮತದಾನಕ್ಕಾಗಿ ಸರದಿ ಸಾಲಿನಲ್ಲಿ ನಿಂತ ಬ್ರಿಜೇಶ್ ಚೌಟ Read More »

ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತ ಶಾಸಕಿ ಭಾಗೀರಥಿ ಮುರುಳ್ಯ

ಪುತ್ತೂರು: ಬೂತ್ ನಂ -84 ಶಾಂತಿನಗರ ಮುರುಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಸಕರಾದ ಭಾಗೀರಥಿ ಮುರುಳ್ಯ ಮತದಾನ ಮಾಡಿದರು. ಗುತ್ತಿಗಾರಿನ ಮೊಗ್ರದಲ್ಲಿ ಮತಯಂತ್ರ ಕೈಕೊಟ್ಟಿದ್ದು, ಇನ್ನೂ ಮತದಾನ ಆರಂಭವಾಗಿಲ್ಲ ಎಂದು ತಿಳಿದು ಬಂದಿದೆ. ಗುತ್ತಿಗಾರು ಗ್ರಾಮದ ಮೊಗ್ರ ಹಿರಿಯ ಪ್ರಾಥಮಿಕ ಶಾಲೆಯ ಮತದಾನ ಕೇಂದ್ರದಲ್ಲಿ ವೋಟಿಂಗ್ ಮೆಷಿನ್ ಹಾಳಾಗಿರುವುದು.

ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತ ಶಾಸಕಿ ಭಾಗೀರಥಿ ಮುರುಳ್ಯ Read More »

ಬಸ್ಸಿನಡಿಗೆ ಸಿಲುಕಿ ಮಹಿಳೆ ಮೃತ್ಯು

ಧರ್ಮಸ್ಥಳ: ಬಸ್ಸಿನಡಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಕೆ ಎಸ್‌ ಆರ್‌ ಟಿ ಸಿ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಧರ್ಮಸ್ಥಳ ಬಸ್‌ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ ಎಸ್‌ ಆರ್‌ ಟಿ ಸಿ ಬಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆ ಆಕಸ್ಮಿಕವಾಗಿ ಟಯರ್‌ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಸೇರಿ 8 ಜನ ಮಂಡ್ಯ ಜಿಲ್ಲೆಯ ಮೇಲುಕೋಟೆಯಿಂದ ಧರ್ಮಸ್ಥಳಕ್ಕೆ ಬಂದಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಆಕಸ್ಮಿಕವಾಗಿ ಟಯರ್

ಬಸ್ಸಿನಡಿಗೆ ಸಿಲುಕಿ ಮಹಿಳೆ ಮೃತ್ಯು Read More »

ಹಿಂಜಾವೇಯ ಅಕ್ಷಯ್  ರಜಪೂತ್ ಗಡಿಪಾರು !

ವಿಟ್ಲ : ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ರನ್ನು ಪೊಲೀಸರು ಬಂಧಿಸಿ ಹಾವೇರಿಗೆ ಗಡಿಪಾರು ಮಾಡಿರುವ ಕುರಿತು ತಿಳಿದು ಬಂದಿದೆ. ರಾತ್ರಿ ವೇಳೆ ಪೊಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಿದ್ದಾರೆ. ಅಕ್ಷಯ್ ರಜಪೂತ್ ಗೆ ಗಡಿಪಾರು ಆದೇಶವಿರುವ  ಹಿನ್ನಲೆಯಲ್ಲಿ ವಿಟ್ಲ ಪೊಲೀಸರು ಬಂಧಿಸಿ ಹಾವೇರಿ ಜಿಲ್ಲೆಗೆ ಕೊಂಡೊಯ್ಯುತ್ತಿದ್ದಾರೆ ಎನ್ನಲಾಗಿದೆ.

ಹಿಂಜಾವೇಯ ಅಕ್ಷಯ್  ರಜಪೂತ್ ಗಡಿಪಾರು ! Read More »

ಬಸ್‍ ನಲ್ಲಿ ಅನ್ಯ ಕೋಮಿನ ಯುವಕನಿಂದ ಹಿಂದೂ ಯುವತಿಗೆ ಕಿರುಕುಳ | ಪ್ರಕರಣ ದಾಖಲು

ಉಪ್ಪಿನಂಗಡಿ : ಹಿಂದೂ ಯವತಿಯೊಬ್ಬರಿಗೆ ಅನ್ಯ ಕೋಮಿನ ಯುವಕನೋರ್ವ ಬಸ್ಸಿನಲ್ಲಿ ಕಿರುಕುಳ ನೀಡಿದ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತದಾನಕ್ಕೆಂದು ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಬರುತ್ತಿದ್ದ ಹಿಂದೂ ಯುವತಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅನ್ಯಕೋಮಿನ ಸಹಪ್ರಯಾಣಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಯುವತಿ ರಕ್ಷಣೆಗಾಗಿ ಬಸ್ ಚಾಲಕನ ಮೊರೆ ಹೋದ ವೇಳೆ ಯಾವುದೇ ಸ್ಪಂದನೆ ದೊರೆಯದಿದ್ದು, ಬಳಿಕ ಯುವತಿ ಯುವಕನ ಮೇಲೆ ಪ್ರತಿರೋಧವೊಡ್ಡಿ ಆತನಿಂದ ಆಧಾ‌ರ್ ಕಾರ್ಡ್ ಕಿತ್ತುಕೊಂಡಿದ್ದಾರೆ. ಈ ವೇಳೆ ಬಸ್ ನಿಧಾನವಾಗುತ್ತಿದ್ದಂತೆ

ಬಸ್‍ ನಲ್ಲಿ ಅನ್ಯ ಕೋಮಿನ ಯುವಕನಿಂದ ಹಿಂದೂ ಯುವತಿಗೆ ಕಿರುಕುಳ | ಪ್ರಕರಣ ದಾಖಲು Read More »

ಲೋಕಸಭೆ ಚುನಾವಣೆ : ಕೆ ಎಸ್ ಆರ್ ಟಿ ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಸುಳ್ಯ: ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯ ಕರ್ತವ್ಯ ನಿಮಿತ್ತ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ವ್ಯತ್ಯಯವಾಗಲಿದೆ ಎಂದು ಕೆ ಎಸ್ ಆರ್ ಟಿ ಸಿ ಸುಳ್ಯ ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ. ಮತಪೆಟ್ಟಿಗೆ ಮತ್ತು ಸಿಬ್ಬಂದಿಗಳನ್ನು ಮತಕಟ್ಟೆಗಳಿಗೆ ಸಾಗಿಸುವ ಸಲುವಾಗಿ ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ನಿಯೋಜಿಸಿರುವುದರಿಂದ ಎ. 25 ,26 ,27ರಂದು ಗ್ರಾಮಾಂತರ ಪ್ರದೇಶಗಳಿಗೆ ಬಸ್ಸು ಸಂಚಾರ ವ್ಯತ್ಯಯವಾಗಲಿದೆ ಎಂದು ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕಾಗಿದೆ.

ಲೋಕಸಭೆ ಚುನಾವಣೆ : ಕೆ ಎಸ್ ಆರ್ ಟಿ ಸಿ ಬಸ್ ಸಂಚಾರದಲ್ಲಿ ವ್ಯತ್ಯಯ Read More »

ಬಹಿರಂಗ ಪ್ರಚಾರಕ್ಕೆ ಕೊನೆಯ ದಿನ – ದಕ್ಷಿಣಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜು

ಮಂಗಳೂರು : ಲೋಕಸಭೆ ಚುನಾವಣೆಯ ಕೊನೆಯ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ   ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ. ಇನ್ನು ಮತದಾನಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಬುಧವಾರ ಸಂಜೆ 6ರ ಬಳಿಕ ರ‍್ಯಾಲಿ–ಬೀದಿ ಪ್ರಚಾರಕ್ಕೆ ಅವಕಾಶ ಇಲ್ಲ. ಮನೆ ಮನೆಗೆ ಹೋಗಿ ಪ್ರಚಾರ ಮಾಡಬಹುದು. ಈ ಕ್ಷೇತ್ರದ ಮತದಾರರಲ್ಲದ ರಾಜಕೀಯ ಮುಖಂಡರು ಕಡ್ಡಾಯವಾಗಿ ಕ್ಷೇತ್ರವನ್ನು ತೊರೆಯಬೇಕು. ಈ ಅವಧಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಮದ್ಯ

ಬಹಿರಂಗ ಪ್ರಚಾರಕ್ಕೆ ಕೊನೆಯ ದಿನ – ದಕ್ಷಿಣಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜು Read More »

ಬಾರ್ಯ ಗ್ರಾ .ಪಂ ಸಿಬ್ಬಂದಿ ಗಣೇಶ್ ಯಾನೆ ಕುಶಾಲಪ್ಪ ಆತ್ಮಹತ್ಯೆ

ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಪೆರಿಯೊಟ್ಟು ನಿವಾಸಿ, ಬಾರ್ಯ ಗ್ರಾಮ ಪಂಚಾಯತ್ ಸಿಬ್ಬಂದಿ ಗಣೇಶ್ ಯಾನೆ ಕುಶಾಲಪ್ಪ (38) ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ವರದಿಯಾಗಿದೆ. ಎ.22 ರಂದು ತನ್ನ ಮನೆ ಸಮೀಪದ ಮರದ ಕೆಳಗೆ ವಿಷ ಸೇವಿಸಿ ಅಸ್ವಸ್ಥರಾಗಿದ್ದರು. ಚಿಕಿತ್ಸೆಗಾಗಿ ಇವರನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಎ.23 ರಂದು ನಿಧನರಾದರು. ಗಣೇಶ್ ಯಾನೆ ಕುಶಾಲಪ್ಪ ಅವರು ಕಳೆದ 19 ವರ್ಷಗಳಿಂದ ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗಿಯಾಗಿದ್ದರು. ಉಪ್ಪಿನಂಗಡಿ

ಬಾರ್ಯ ಗ್ರಾ .ಪಂ ಸಿಬ್ಬಂದಿ ಗಣೇಶ್ ಯಾನೆ ಕುಶಾಲಪ್ಪ ಆತ್ಮಹತ್ಯೆ Read More »

ಬೆಳ್ಳಾರೆ ಪೊಲೀಸ್ ಠಾಣೆಗೆ ವಿದ್ಯಾರಶ್ಮಿ ವಿದ್ಯಾಲಯದ ವತಿಯಿಂದ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

ಬೆಳ್ಳಾರೆ : ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ವತಿಯಿಂದ ಬೆಳ್ಳಾರೆ ಪೊಲೀಸ್ ಠಾಣೆಗೆ ಸುಮಾರು 40,000/- ರೂ. ಮೌಲ್ಯದ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಕೊಡುಗೆಯಾಗಿ ನೀಡಲಾಯಿತು. ಕಾಲೇಜಿನ ಸಂಚಾಲಕ ಸಹಕಾರಿ ರತ್ನ ಸವಣೂರು ಸೀತಾರಾಮ ರೈಯವರು  ಠಾಣಾಧಿಕಾರಿ ಸಂತೋಷ್ ಬಿ. ಪಿ.ಯವರಿಗೆ ಯಂತ್ರವನ್ನು ಹಸ್ತಾಂತರಿಸಿದರು. ಕಾಲೇಜಿನ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮತ್ತು ಠಾಣಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಬೆಳ್ಳಾರೆ ಪೊಲೀಸ್ ಠಾಣೆಗೆ ವಿದ್ಯಾರಶ್ಮಿ ವಿದ್ಯಾಲಯದ ವತಿಯಿಂದ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ Read More »

ಲೋಕಸಭೆ ಚುನಾವಣೆ : ಏ.24-26 ರ ವರೆಗೆ ಮದ್ಯದಂಗಡಿ ಬಂದ್

ಮಂಗಳೂರು: ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಎ.26ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.24. ಸಂಜೆ 6 ಗಂಟೆಯಿಂದ 26ರ ವರೆಗೆ ಮದ್ಯಪಾನ ನಿಷೇಧ ಘೋಷಣೆ ಮಾಡಲಾಗಿದೆ. ಎ.26ರಂದು ದಕ್ಷಿಣ ಕನ್ನಡ ಜಿಲ್ಲೆಯ 1876ಮತಗಟ್ಟೆಗಳಲ್ಲಿ ಬೆಳಗ್ಗೆ 7ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮತದಾನ ನಡೆಸಲು ಎಲ್ಲಾ ಸಿದ್ದತೆ ಪೂರ್ಣ ಗೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ ಹಾಗೂ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ. ಈ ದಿನಗಳಂದು ಎಲ್ಲಾ

ಲೋಕಸಭೆ ಚುನಾವಣೆ : ಏ.24-26 ರ ವರೆಗೆ ಮದ್ಯದಂಗಡಿ ಬಂದ್ Read More »

error: Content is protected !!
Scroll to Top