ದಕ್ಷಿಣ ಕನ್ನಡ

ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ಜೇನು ಸಾಕಾಣಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮ

ಸುಳ್ಯ: ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ಹಾಗೂ ಹೈದರಾಬಾದ್ ರಾಷ್ಟೀಯ ಕೃಷಿ ಸಂಶೋಧನಾ ನಿರ್ವಹಣಾ ಅಕಾಡೆಮಿ ಸಹಯೋಗದಲ್ಲಿ ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ಜೇನು ಸಾಕಾಣಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮ ಉಬರಡ್ಕ ಗ್ರಾಮದ ಪ್ರಗತಿಪರ ಜೇನು ಕೃಷಿಕ ಪುಟ್ಟಣ್ಣ ಗೌಡರ ತೋಟದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗ್ರಾಪಂ ಮಹಾ ಒಕ್ಕೂಟದ ಅಧ್ಯಕ್ಷ ಹರೀಶ್ ಉಬರಡ್ಕ, ಪಾಲ್ಗೊಂಡು, ರೈತರು ತಮ್ಮ ಸುಸ್ಥಿರ ಅಭಿವೃದ್ದಿಗಾಗಿ ಜೇನು ಕೃಷಿಯಂತಹ ಉಪ ಕಸುಬುಗಳನ್ನು ಕೈಗೊಳ್ಳಬೇಕು […]

ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ಜೇನು ಸಾಕಾಣಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮ Read More »

ಮಗುವಿಗೆ ಜೀವರಕ್ಷಕವಾದ ಶ್ವಾನ |  ಮಗು ಹಾವು ತುಳಿಯುವುದನ್ನು ತಪ್ಪಿಸಿದ ಶ್ವಾನ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಯಾತ್ರಾರ್ಥಿಗಳಾಗಿ ಬಂದಿದ್ದ ಭಕ್ತರ ಗುಂಪೊಂದರ ಜತೆಗಿದ್ದ ಮಗು ನಾಗರ ಹಾವೊಂದನ್ನು ತುಳಿಯುವುದನ್ನು ತಪ್ಪಿಸಿ ಶ್ವಾನವೊಂದು ಮೆಚ್ಚುಗೆಗೆ ಪಾತ್ರವಾಗಿದೆ.  ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕುಕ್ಕೆಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ಬಳಿ ರಸ್ತೆಯಲ್ಲಿ ತೆರಳುತ್ತಿದ್ದ ಭಕ್ತರ ತಂಡದಲ್ಲಿ ಮಹಿಳೆಯೊಬ್ಬರು ಚಿಕ್ಕ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿಸಲು ತೆರಳಿದ ವೇಳೆ ಮಗು ರಸ್ತೆಯ ಬದಿಗೆ ಬಂದಿದೆ. ಈ ಸಂದರ್ಭದಲ್ಲಿ ನಾಗರಹಾವೊಂದು ರಸ್ತೆ ದಾಟುತಿದ್ದು, ಮಗು ಹಾವನ್ನು ತುಳಿಯಬೇಕು ಅನ್ನುವಷ್ಟರಲ್ಲಿ ಅಲ್ಲಿಯೇ

ಮಗುವಿಗೆ ಜೀವರಕ್ಷಕವಾದ ಶ್ವಾನ |  ಮಗು ಹಾವು ತುಳಿಯುವುದನ್ನು ತಪ್ಪಿಸಿದ ಶ್ವಾನ Read More »

ಮಾ.9 : ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ

ಕಡಬ: ಕಡಬ ತಾಲೂಕಿನ ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನೇಮೋತ್ಸವ ಮಾ.9 ಶನಿವಾರ ಕುದ್ಮಾರು ಕಟ್ಟತ್ತಾರು ಕಟ್ಟೆಯಲ್ಲಿ (ದೈಪಿಲ ದ್ವಾರದ ಬಳಿ) ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ನೇಮೋತ್ಸವದ ಅಂಗವಾಗಿ ಬೆಳಿಗ್ಗೆ 8 ಕ್ಕೆ ಗಣಪತಿ ಹೋಮ, ಸಂಜೆ 7.15 ಕ್ಕೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯುವುದು, 8.30 ಕ್ಕೆ ದೈವಕ್ಕೆ ಎಣ್ಣೆ ಬೂಳ್ಯ ನೀಡುವುದು, ರಾತ್ರಿ 9 ಕ್ಕೆ

ಮಾ.9 : ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ Read More »

ಮಾದಕ ಸೇವನೆ ಮಾಡಿ ಅನುಚಿತ ವರ್ತನೆ | ಇಬ್ಬರ ಬಂಧನ

ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕದ್ರವ್ಯ ಸೇವನೆ ಮಾಡಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸವಣೂರು ನಿವಾಸಿ ಪಿ. ಹನೀಫ್, ಮಹಮ್ಮದ್ ಶಾಫಿ ಬಂಧಿತರು. ಉಪ್ಪಿನಂಗಡಿ ಠಾಣಾ ಉಪನಿರೀಕ್ಷಕರಾದ ಅವಿನಾಶ್ ಹೆಚ್ ಹಾಗೂ ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾದಕ ಸೇವನೆ ಮಾಡಿ ಅನುಚಿತ ವರ್ತನೆ | ಇಬ್ಬರ ಬಂಧನ Read More »

ಒತ್ತಡದಿಂದ ರಹಿತ ಜೀವನ ಸಾಗಿಸಲು ಇಂತಹಾ ರೆಸಾರ್ಟ್ ಗಳು ಅನುಕೂಲದಾಯಕ | ನೂತನ ‘ಸನ್ ರಾಕ್ ಬಲಿಪ ರೆಸಾರ್ಟ್’ ಉದ್ಘಾಟಿಸಿ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ತಾಲೂಕಿನ ಪ್ರವಾಸಿ ಸ್ಥಳಗಳಿಗೆ ತೆರಳುವ ರಸ್ತೆಗಳನ್ನು ನನ್ನ ಕಳೆದ ಶಾಸಕತ್ವದ ಅವಧಿಯಲ್ಲಿ ಅಭಿವೃದ್ಧಿಪಡಿಸಿ ಜನತೆಗೆ ಕೊಡುಗೆಯಾಗಿ ನೀಡಲಾಗಿದ್ದು, ಇದೀಗ ಕೇಂದ್ರ ಸರಕಾರದ ನೆರವಿನಿಂದ ಕರಾವಳಿ ಕರ್ನಾಟಕದ ಮಂಗಳೂರನ್ನು ಸಂಪರ್ಕಿಸಲು ಎಲ್ಲ ಕಡೆಗಳಿಂದ ರಾಷ್ಟ್ರೀಯ ಹೆದ್ದಾರಿಗಳು ಸಿದ್ಧವಾಗುತ್ತಿದೆ. ಇನ್ನೆರಡು ವರ್ಷದಲ್ಲಿ ಬೆಂಗಳೂರಿನ ಐಟಿ ಕ್ಷೇತ್ರ ಉದ್ಯೋಗಿಗಳು ವಾರಾಂತ್ಯದಲ್ಲಿ ಜಿಲ್ಲೆಗೆ ಅತೀ ಸರಳವಾಗಿ ತಲುಪುವ ಕೊಂಡಿಯಾಗಿ ಅಭೂತಪೂರ್ವ ಪರಿವರ್ತನೆ ಕಾಣಲಿದ್ದೇವೆ ಎಂದು ಶಾಸಕ ಹರೀಶ್ ಪೂಂಜ ವಿಶ್ವಾಸ ವ್ಯಕ್ತಪಡಿಸಿದರು. ಅವರು ನಡ ಗ್ರಾಮದ ಮಂಜೊಟ್ಟಿ ಸನ್ ರಾಕ್ ರೆಸಾರ್ಟ್

ಒತ್ತಡದಿಂದ ರಹಿತ ಜೀವನ ಸಾಗಿಸಲು ಇಂತಹಾ ರೆಸಾರ್ಟ್ ಗಳು ಅನುಕೂಲದಾಯಕ | ನೂತನ ‘ಸನ್ ರಾಕ್ ಬಲಿಪ ರೆಸಾರ್ಟ್’ ಉದ್ಘಾಟಿಸಿ ಶಾಸಕ ಹರೀಶ್ ಪೂಂಜಾ Read More »

ಮೇಲಿನ ಮುಕ್ಕೂರು ತರವಾಡು ಕ್ಷೇತ್ರದ ಸಾನಿಧ್ಯ ಅಭಿವೃದ್ಧಿ ಹಿನ್ನೆಲೆ | ನಾಲ್ಕು ದಿನಗಳ ಅಷ್ಟಮಂಗಲ ಪ್ರಶ್ನಾ ಚಿಂತನೆ ಪ್ರಾರಂಭ

ಮುಕ್ಕೂರು :  ಕಾರಣಿಕ ಶಕ್ತಿಯ ಐತಿಹ್ಯವುಳ್ಳ ದೇವಿ-ದೈವ ಶಕ್ತಿ ಸಾನಿಧ್ಯದ ನೆಲೆ ಮೇಲಿನ ಮುಕ್ಕೂರು ತರವಾಡು ಕ್ಷೇತ್ರದಲ್ಲಿ ದೈವ ಸಾನಿಧ್ಯಗಳ ಜೀರ್ಣೋದ್ಧಾರ ಕುರಿತಂತೆ ಅಷ್ಟಮಂಗಲ ಪ್ರಶ್ನಾ ಚಿಂತನೆ ಫೆ.26 ರಂದು ಪ್ರಾರಂಭಗೊಂಡಿತು. ದೈವಜ್ಞ ಗಣೇಶ್ ಭಟ್ ಮುಳಿಯ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆ ಪ್ರಾರಂಭಗೊಂಡು ಮೊದಲಾಗಿ ಸ್ವರ್ಣ ಪ್ರಶ್ನೆ ನಡೆದು ಸ್ವರ್ಣಾರೂಢರಾಶಿ ಪ್ರಕಾರ ಮುಂದಿನ ಪ್ರಕ್ರಿಯೆಗಳು ಸಂಜೆ ತನಕ ನಡೆಯಿತು. ಮಂಗಳವಾರವೂ ಪ್ರಶ್ನಾಚಿಂತನೆ ಮುಂದುವರಿಯಲಿದೆ. ಈ ಸಂದರ್ಭದಲ್ಲಿ ಮೇಲಿನ ಮುಕ್ಕೂರು ತರವಾಡು ಕ್ಷೇತ್ರದ ಪ್ರಮುಖರಾದ ಎಂ.ಕೆ. ಬಾಲಚಂದ್ರ

ಮೇಲಿನ ಮುಕ್ಕೂರು ತರವಾಡು ಕ್ಷೇತ್ರದ ಸಾನಿಧ್ಯ ಅಭಿವೃದ್ಧಿ ಹಿನ್ನೆಲೆ | ನಾಲ್ಕು ದಿನಗಳ ಅಷ್ಟಮಂಗಲ ಪ್ರಶ್ನಾ ಚಿಂತನೆ ಪ್ರಾರಂಭ Read More »

ನಾಪತ್ತೆಯಾಗಿದ್ದ ವಿದಾರ್ಥಿನಿ ಕೇರಳದಲ್ಲಿ ಮದುವೆಯಾಗಿ ಪತ್ತೆ !

ಮೂಡುಬಿದಿರೆ: ಆಳ್ವಾಸ್‌ ವಿದ್ಯಾ ಸಂಸ್ಥೆಯ ಬಿ.ಪಿ.ಟಿ ಪ್ರಥಮ ವರ್ಷದ ವಿದ್ಯಾರ್ಥಿನಿ ಆದಿರಾ ಎಂಬಾಕೆ ಫೆ. 23 ರಿಂದ ನಾಪತ್ತೆಯಾಗಿದ್ದು ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಡುಪಿ ಜಿಲ್ಲೆ ಕೊಲ್ಲೂರಿನವಳಾಗಿರುವ ಆದಿರಾ ಆಳ್ವಾಸ್ ನಲ್ಲಿ ಕಲಿಯುತ್ತಿದ್ದು ವಿದ್ಯಾಗಿರಿಯಲ್ಲಿರುವ ಶಾಂಭವಿ ಹಾಸ್ಟೆಲ್ ನ ಸಿ. ವಿಭಾಗದಲ್ಲಿ ವಾಸ್ತವ್ಯವಿದ್ದಳು. ಫೆಬ್ರವರಿ 23 ಶುಕ್ರವಾರದಂದು ಬೆಳಿಗ್ಗೆ 7-45 ಕ್ಕೆ ಹಾಸ್ಟೆಲ್‌ ನಿಂದ ಆಳ್ವಾಸ್ ಬಸ್ ನಲ್ಲಿ ಬಂದು ಮೂಡುಬಿದಿರೆ ಕನ್ನಡಭವನದ ಬಳಿ ಇಳಿದು ಹೋದಾಕೆ ಕಾಲೇಜಿಗೂ ಹೋಗದೆ, ಹಾಸ್ಟೆಲ್ ಗೂ

ನಾಪತ್ತೆಯಾಗಿದ್ದ ವಿದಾರ್ಥಿನಿ ಕೇರಳದಲ್ಲಿ ಮದುವೆಯಾಗಿ ಪತ್ತೆ ! Read More »

ಟ್ರಕ್ಕಿಂಗ್ ಗೆ ತೆರಳಿದ ಯುವಕರು ನಾಪತ್ತೆ ! ಪೊಲೀಸರಿಂದ ಶೋಧ

ಬೆಳ್ತಂಗಡಿ : ಅರಣ್ಯಕ್ಕೆ ಟ್ರಕ್ಕಿಂಗ್‌ಗೆ ಹೋದ ಯುವಕರು ನಾಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು, ನಿನ್ನೆ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಅರಣ್ಯ ವ್ಯಾಪ್ತಿಯ ದುರ್ಗದಹಳ್ಳಿಯಿಂದ ಚಾರಣಕ್ಕೆ ತೆರಳಿದ್ದರು. ರಾತ್ರಿ ವೇಳೆಗೆ ಇಬ್ಬರು ಯುವಕರು ನಾಪತ್ತೆ ಆಗಿದ್ದಾರೆ. ಓರ್ವ ಯುವಕ ನೀಡಿದ ಮಾಹಿತಿ ಮೇರೆಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರು, ಅರಣ್ಯಾಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಈ ವೇಳೆ ನಾಪತ್ತೆಯಾದ ಯುವಕರ ಮೊಬೈಲ್ ನೆಟ್ ವರ್ಕ್ ಪತ್ತೆಯಾಗಿ ಮತ್ತೆ ಸಂಪರ್ಕ ಕಡಿತವಾಗಿದೆ. ಇನ್ನು ಆ

ಟ್ರಕ್ಕಿಂಗ್ ಗೆ ತೆರಳಿದ ಯುವಕರು ನಾಪತ್ತೆ ! ಪೊಲೀಸರಿಂದ ಶೋಧ Read More »

ಎರಡು ದಿನಗಳ ಹಿಂದೆ ಸಮುದ್ರದಲ್ಲಿ ಕೊಚ್ಚಿಕೊಂಡು ಹೋದ ವಿದ್ಯಾರ್ಥಿಯ ಮೃತದೇಹ ಪತ್ತೆ !

ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಎರಡು ದಿನಗಳ ಹಿಂದೆ ಬೃಹತ್ ಅಲೆಗೆ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತುಕರಾಮ (13) ಮೃತದೇಹ ತಣ್ಣೀರುಬಾವಿ ಬಳಿ ಪತ್ತೆಯಾಗಿದೆ. ಎರಡು ದಿನಗಳ ಹಿಂದೆ ಬೀಚ್‍ನಲ್ಲಿ ನೀರಾಟವಾಡುತ್ತಿದ್ದಾಗ ಬೃಹತ್ ಅಲೆಗೆ ಕೊಚ್ಚಿಹೋಗಿ ಮುಳುಗಿ ತುಕರಾಮ ನಾಪತ್ತೆಯಾಗಿದ್ದ. ಮೀನುಗಾರರು ಮೃತದೇಹ ತೇಲುತ್ತಿರುವುದನ್ನು ಕಂಡಿದ್ದು, ಧನಪಾಲ್ ಸಾಲ್ಯನ್ ಅವರು ದಡಕ್ಕೆ ಎಳೆದು ತಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೈಕಂಪಾಡಿ ಮೀನಕಳಿಯ ಸರಕಾರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ತುಕಾರಾಮ್ ಶಾಲೆ ಬಿಟ್ಟ ಬಳಿಕ ಸ್ನೇಹಿತ

ಎರಡು ದಿನಗಳ ಹಿಂದೆ ಸಮುದ್ರದಲ್ಲಿ ಕೊಚ್ಚಿಕೊಂಡು ಹೋದ ವಿದ್ಯಾರ್ಥಿಯ ಮೃತದೇಹ ಪತ್ತೆ ! Read More »

ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತ್ಯು

ಬಂಟ್ವಾಳ : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಭಾನುವಾರ ಮುಂಜಾನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೂಲತಃ ಫರಂಗಿಪೇಟೆ ಸಮೀಪದ ಅಮ್ಮೆಮಾ‌ರ್ ನಿವಾಸಿ ಪ್ರಸ್ತುತ ಪಾಣೆಮಂಗಳೂರು – ಆಲಡ್ಕ ವಾಸ್ತವ್ಯವಿರುವ ಆಶ್ರಫ್ (32) ಮೃತಪಟ್ಟ ಯುವಕ. ಆಲಡ್ಕ ನಿವಾಸಿ ತಸ್ವೀ‌ರ್ ಆಶ್ರಫ್‌ ಅವರ ಸ್ನೇಹಿತರಾಗಿದ್ದು, ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಸ್ನೇಹಿತನಿಗೆ ಡ್ರಾಫ್ ಕೊಡುವ ಉದ್ದೇಶದಿಂದ ತನ್ನ ಸ್ಕೂಟರ್ ನಲ್ಲಿ ಬಿ.ಸಿ.ರೋಡಿಗೆ ತೆರಳಿದ್ದು ಬೆಳಿಗ್ಗೆ ಸುಮಾರು 5.30

ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತ್ಯು Read More »

error: Content is protected !!
Scroll to Top