ದಕ್ಷಿಣ ಕನ್ನಡ

ಜಡ್ಜ್ ಹುದ್ದೆಗೇರಿದ ಮಂಗಳೂರಿನ ವಕೀಲೆ ಗೀತಾ ಡಿ. | 2023 ನೇ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ತೇರ್ಗಡೆ

ಮಂಗಳೂರು: ಮಂಗಳೂರಿನಲ್ಲಿ ವಕೀಲರಾಗಿ ಪ್ರಾಕ್ಟಿಸ್ ಮಾಡುತ್ತಿದ್ದ ಗೀತಾ ಡಿ. 2023ನೇ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಜಡ್ಜ್ ಹುದ್ದೆಗೇರಿದ್ದಾರೆ. ಮೂಲತಃ ತುಮಕೂರು ಜಿಲ್ಲೆ ನಿವಾಸಿಯಾದ ಗೀತಾ ಅವರು, ಚಿಕ್ಕಮಗಳೂರಿನಲ್ಲಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಜಡ್ಜ್ ಆಗಿ ನಿವೃತ್ತರಾಗಿದ್ದ ಡಿ. ಕಂಬೇಗೌಡ ಅವರ ಪುತ್ರಿ. ಮೂಡುಬಿದ್ರೆ  ಆಳ್ವಾಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಗೀತಾ ಅವರು, ಮಂಗಳೂರಿನ ಎಸ್ ಡಿ ಎಂ ಕಾನೂನು ಕಾಲೇಜಿನಲ್ಲಿ ಎಲ್ ಎಲ್ ಬಿ ಪದವಿ ಗಳಿಸಿದ್ದರು. […]

ಜಡ್ಜ್ ಹುದ್ದೆಗೇರಿದ ಮಂಗಳೂರಿನ ವಕೀಲೆ ಗೀತಾ ಡಿ. | 2023 ನೇ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ತೇರ್ಗಡೆ Read More »

ಸುಳ್ಯ ಬಿಜೆಪಿ ಮಂಡಲ ಕಾರ್ಯದರ್ಶಿಯಾಗಿ ತೇಜಸ್ವಿನಿ ಕಟ್ಟಪುಣಿ

ಸುಳ್ಯ: ಭಾರತೀಯ ಜನತಾ ಪಾರ್ಟಿ – ಸುಳ್ಯ ಮಂಡಲದ ನೂತನ ಕಾರ್ಯದರ್ಶಿಯಾಗಿ ತೇಜಸ್ವಿನಿ ಕಟ್ಟಪುಣಿ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಮಾಜಿ ಸದಸ್ಯೆಯಾಗಿರುವ ತೇಜಸ್ವಿನಿ ಸುಳ್ಯ ಮಂಡಲದ ಮಾಹಿಳಾ ಮೋರ್ಚದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ತೇಜಸ್ವಿನಿ ಕಟ್ಟಪುಣಿಯವರಿಗೆ ಸುಳ್ಯ ಬಿಜೆಪಿ ಅಭಿನಂದನೆ ಸಲ್ಲಿಸಿದೆ.

ಸುಳ್ಯ ಬಿಜೆಪಿ ಮಂಡಲ ಕಾರ್ಯದರ್ಶಿಯಾಗಿ ತೇಜಸ್ವಿನಿ ಕಟ್ಟಪುಣಿ Read More »

ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಿದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೇರಾ | ಜಡ್ಜ್ ಹುದ್ದೆಗೇರಿದ ಅತೀ ಕಿರಿಯ ವ್ಯಕ್ತಿ

ಮಂಗಳೂರು: ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಿದ ಅತೀ ಕಿರಿಯ ವ್ಯಕ್ತಿ ಎಂಬುದಕ್ಕೆ ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ 25 ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೇರಾ ಪಾತ್ರರಾಗಿದ್ದಾರೆ. 2023 ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡುವ ಮೂಲಕ ಹುದ್ದೆಗೇರಿದ್ದಾರೆ. ಮಂಗಳೂರಿನ ಎಸ್ ಡಿ ಎಂ ಕಾನೂನು ಕಾಲೇಜಿನಲ್ಲಿ ಬಿಬಿಎ ಮತ್ತು ಎಲ್ ಎಲ್ ಬಿ. ಪೂರೈಸಿದ ಜಾನ್ ಸಿಕ್ವೇರಾ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು, ಬಂಟ್ವಾಳದ ಬೊರಿಮಾರಿನ ಸೈಂಟ್ ಜೋಸೆಫ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಮಾಣಿ

ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಿದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೇರಾ | ಜಡ್ಜ್ ಹುದ್ದೆಗೇರಿದ ಅತೀ ಕಿರಿಯ ವ್ಯಕ್ತಿ Read More »

ಕ್ರೀಡಾಕೂಟದಲ್ಲಿ ಯುವಕರು ಮುತುವರ್ಜಿಯಿಂದ ಭಾಗವಹಿಸಿ ಸಮುದಾಯದ ಏಳಿಗೆಗೆ ಕೈಜೋಡಿಸಬೇಕು | ಮಂಗಳೂರು ಯುವ ಘಟಕ-ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ವತಿಯಿಂದ ಒಕ್ಕಲಿಗರ ಪ್ರೀಮಿಯರ್ ಲೀಗ್-2024 ಕ್ರಿಕಟ್ ಪಂದ್ಯಾಟದಲ್ಲಿ ಅಕ್ಷಯ ಕುರುಂಜಿ

ಮಂಗಳೂರು: ಮಂಗಳೂರು ಯುವ ಘಟಕ-ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ವತಿಯಿಂದ ಒಕ್ಕಲಿಗರ ಪ್ರೀಮಿಯಾರ್ ಲೀಗ್-2024 ಮಂಗಳೂರು (ವಿಪಿಎಲ್) ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಮೈದಾನದಲ್ಲಿ ಪ್ರಥಮ ಬಾರಿಗೆ ಅದ್ಧೂರಿಯಾಗಿ ನಡೆಯಿತು. ಸುಳ್ಯ ಅಕಾಡೆಮಿ ಆಫ್‍ ಲಿಬರಲ್ ಎಜುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕುರುಂಜಿ ಉದ್ಘಾಟನಾ ಸಮಾರಂಭಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿ, ಯುವ ಸಮುದಾಯದ ಸಂಘಟನೆಗಾಗಿ ಹಮ್ಮಿಕೊಂಡ ಇಂತಹ ಪಂದ್ಯಾಟಗಳಲ್ಲಿ ಯುವಕರು ಮುತುವರ್ಜಿಯಿಂದ ಭಾಗವಹಿಸಿ ಸಮುದಾಯದ

ಕ್ರೀಡಾಕೂಟದಲ್ಲಿ ಯುವಕರು ಮುತುವರ್ಜಿಯಿಂದ ಭಾಗವಹಿಸಿ ಸಮುದಾಯದ ಏಳಿಗೆಗೆ ಕೈಜೋಡಿಸಬೇಕು | ಮಂಗಳೂರು ಯುವ ಘಟಕ-ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ವತಿಯಿಂದ ಒಕ್ಕಲಿಗರ ಪ್ರೀಮಿಯರ್ ಲೀಗ್-2024 ಕ್ರಿಕಟ್ ಪಂದ್ಯಾಟದಲ್ಲಿ ಅಕ್ಷಯ ಕುರುಂಜಿ Read More »

ನಾಳೆ (ಫೆ.24): ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳ್ಳಿ ಹಬ್ಬದ ಅಂಗವಾಗಿ ಶಾಲಾ ಕೊಠಡಿಗಳಿಗೆ ಗುದ್ದಲಿಪೂಜೆ, ಕ್ರೀಡಾ ಸಮ್ಮಿಲನ

ಸುಳ್ಯ: ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸುಳ್ಯ ಸಂಸ್ಥೆಯ ಬೆಳ್ಳಿಹಬ್ಬ ಆಚರಣೆ ಅಂಗವಾಗಿ ಸೊಸೈಟಿಯ ಸಹ ಸಂಸ್ಥೆಯಾದ ಮಹಾತ್ಮಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಗಳ 2 ನೂತನ ಕೊಠಡಿಗಳಿಗೆ ಗುದ್ದಲಿಪೂಜೆ ಹಾಗೂ ಕ್ರೀಡಾ ಸಮ್ಮಿಲನ ಫೆ.24 ಶನಿವಾರ ಬೆಳಗ್ಗೆ 8.30 ರಿಂದ ಕೊಡಿಯಾಲಬೈಲು ಎಂ.ಜಿ.ಎಂ. ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಇತರ ಸಹಕಾರಿ ಸಂಘ, ಶ್ರೀ ವೆಂಕಟರಮಣ ಸೊಸೈಟಿಯ ಸದಸ್ಯರಿಗೆ, ಆಡಳಿತ ಮಂಡಳಿ- ಸಲಹಾ ಸಮಿತಿ ಹಾಗೂ ಸಿಬ್ಬಂದಿಗಳಿಗೆ ನಡೆಯುವ ಕ್ರೀಡಾಕೂಟದ

ನಾಳೆ (ಫೆ.24): ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳ್ಳಿ ಹಬ್ಬದ ಅಂಗವಾಗಿ ಶಾಲಾ ಕೊಠಡಿಗಳಿಗೆ ಗುದ್ದಲಿಪೂಜೆ, ಕ್ರೀಡಾ ಸಮ್ಮಿಲನ Read More »

ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಕುಡಿದು ತೂರಾಡಿದ ಗ್ರಾಮಕರಣಿಕ

ಕಡಬ: ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಕಂಠಪೂರ್ತಿ ಕುಡಿದು ಬಿದ್ದು ಹೊರಳಾಡುತ್ತಿದ್ದ ಗ್ರಾಮಕರಣಿಕನನ್ನು ಬಸ್ ಚಾಲಕ ಪೊಲೀಸ್‌ ಠಾಣೆಗೆ ಕರೆದೊಯ್ದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕಂಠಪೂರ್ತಿ ಕುಡಿದು ನಶೆಯಲ್ಲಿದ್ದ ವ್ಯಕ್ತಿಯನ್ನು ಕಡಬ ತಾಲೂಕು ಗೋಳಿತೊಟ್ಟು ಗ್ರಾಮಕರಣಿಕ ನಾಗಸುಂದರ ಎಂದು ಗುರುತಿಸಲಾಗಿದೆ. ಈ ಹಿಂದೆಯು ಕರ್ತವ್ಯದ ವೇಳೆಯೇ ಮದ್ಯಪಾನದ ಚಟ ಹೊಂದಿರುವ ನಾಗಸುಂದರನ ಬಗ್ಗೆ ಮೇಲಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ನಾಗಸುಂದರನ ಮೇಲೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರು. ಈ ಬಗ್ಗೆ ಪೋಲಿಸ್ ಠಾಣೆಯಲ್ಲಿ

ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಕುಡಿದು ತೂರಾಡಿದ ಗ್ರಾಮಕರಣಿಕ Read More »

ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರಿಗೂ ವಿಸ್ತರಣೆ | ನಳೀನ್ ಕುಮಾರ್

ಮಂಗಳೂರು: ತಿರುವನಂತಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ರವರ ಮನವಿಯ ಮೇರೆಗೆ ಮಂಗಳೂರಿಗೂ ವಿಸ್ತರಣೆ ಮಾಡಲಾಗಿದೆ. ರೈಲ್ವೆ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ ವಂದೇ ಭಾರತ್ ರೈಲ್ ನಂ. 20632/20631 ಇನ್ನು ಮುಂದೆ ತಿರುವನಂತಪುರ-ಮಂಗಳೂರು ನಡುವೆ ಸಂಚರಿಸಲಿದೆ. ಹೊಸ ರೈಲ್ವೆ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 6.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05

ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರಿಗೂ ವಿಸ್ತರಣೆ | ನಳೀನ್ ಕುಮಾರ್ Read More »

ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ | ಆರೋಪಿ ಬಂಧನ !

ಬಂಟ್ವಾಳ : ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಆರೋಪದ ಮೇಲೆ ಹೊಟೇಲ್ ಮಾಲಕರೊಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಜೀಪನಡು ಗ್ರಾಮದ ಅಬ್ದುಲ್ಲಾ ಎಂಬಾತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿದ್ದಾನೆ ಎಂದು ಬಾಲಕಿಯ ತಾಯಿ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಠಾಣಾ ಎಸ್‍.ಐ. ಮೂರ್ತಿ ಹಾಗೂ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ | ಆರೋಪಿ ಬಂಧನ ! Read More »

ಪುತ್ತೂರು ಮೂಲದ ವಿದ್ಯಾರ್ಥಿನಿ ಮಾಡೂರಿನ ಪಿಜಿಯಿಂದ ನಾಪತ್ತೆ !

ಉಳ್ಳಾಲ: ಪುತ್ತೂರು ಮೂಲದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ಪುತ್ತೂರಿನ ಮುಕ್ವೆ ನಿವಾಸಿ ಪ್ರಸ್ತುತ ಕೋಟೆಕಾರು ಬಳಿಯ ಮಾಡೂರಿನ ಪಿಜಿಯಲ್ಲಿದ್ದು, ದೇರಳಕಟ್ಟೆ ಖಾಸಗಿ ಯುನಿವರ್ಸಿಟಿಯಲ್ಲಿ ಪಿ.ಎಚ್‍.ಡಿ ಅಧ್ಯಯನ ಮಾಡುತ್ತಿರುವ ಚೈತ್ರಾ (27) ನಾಪತ್ತೆಯಾದ ವಿದ್ಯಾರ್ಥಿನಿ. ಚೈತ್ರಾಳ ತಂದೆ ಮೃತರಾಗಿದ್ದು, ಮಂಗಳೂರಿನ ಸಂಬಂಧಿಕರ ಆಶ್ರಯದಲ್ಲಿದ್ದುಕೊಂಡು ಎಂ.ಎ.ಸ್ಸಿ ವ್ಯಾಸಂಗ ಮಾಡಿದ್ದಳು. ಫೆ.17 ರಂದು ಬೆಳಿಗ್ಗೆ ಮಾಡೂರಿನ ಪಿಜಿಯಿಂದ ತನ್ನ ಸ್ಕೂಟರಲ್ಲಿ ತೆರಳಿದ್ದ ಚೈತ್ರಾ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ ಎಂದು ದೂರಲಾಗಿದೆ. ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ಮೂಲದ ವಿದ್ಯಾರ್ಥಿನಿ ಮಾಡೂರಿನ ಪಿಜಿಯಿಂದ ನಾಪತ್ತೆ ! Read More »

ಜೆರೋಸಾ ಶಾಲಾ ಮುಂಭಾಗ ಪ್ರತಿಭಟನೆ | ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿಸಹಿತ ವಿಹಿಂಪ ಮುಖಂಡರಿಗೆ ನಿರೀಕ್ಷಣಾ ಜಾಮೀನು

ಮಂಗಳೂರು: ಜೆರೋಸಾ ಶಾಲಾ ಶಿಕ್ಷಕಿಯೊಬ್ಬರು ಹಿಂದೂಗಳು ಹಾಗೂ ಶ್ರೀರಾಮ ಮಂದಿರದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಹಿನ್ನಲೆಯಲ್ಲಿ ಶಾಲೆ ಮುಂಭಾಗ ನಡೆದ ಪ್ರತಿಭಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್‌ ಶೆಟ್ಟಿ ಮತ್ತು ಇತರರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಜೆರಾಲ್ಡ್‌ ಲೋಬೋ ಎಂಬವರು ನೀಡಿದ್ದ ದೂರಿನಂತೆ ಮಂಗಳೂರಿನಲ್ಲಿ ಶಾಸಕರು ಸಹಿತ  ವಿಶ್ವ ಹಿಂದು ಪರಿಷತ್‌ ಮುಖಂಡ ಶರಣ್‌ ಪಂಪ್‌ವೆಲ್‌ ಕಾರ್ಪೊರೇಟರ್‌ ಗಳಾದ ಸಂದೀಪ್‌ ಹಾಗೂ ಭರತ್

ಜೆರೋಸಾ ಶಾಲಾ ಮುಂಭಾಗ ಪ್ರತಿಭಟನೆ | ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿಸಹಿತ ವಿಹಿಂಪ ಮುಖಂಡರಿಗೆ ನಿರೀಕ್ಷಣಾ ಜಾಮೀನು Read More »

error: Content is protected !!
Scroll to Top