ದಕ್ಷಿಣ ಕನ್ನಡ

ಡಾ| ಆದಂ ಉಸ್ಮಾನ್ ನಿಧನ

ಬೆಳ್ತಂಗಡಿ : ತಲಪಾಡಿ ಕೆ.ಸಿ ರೋಡ್ ನಿವಾಸಿ ಡಾ| ಆದಂ ಉಸ್ಮಾನ್ (65) ಅಲ್ಪಕಾಲದ ಅಸೌಖ್ಯದಿಂದ ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಪುತ್ತೂರು, ಕಡಬ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ, ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಸುಮಾರು 14 ವರ್ಷಗಳ ಕಾಲ ಸರಕಾರಿ ಸೇವೆ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದರು. ಮೃತದೇಹ ತಮ್ಮ ಮನೆಯಾದ ಕೆ.ಸಿ.ರೋಡ್ ಮಂಗಳೂರಿನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.

ಡಾ| ಆದಂ ಉಸ್ಮಾನ್ ನಿಧನ Read More »

ಮಾಜಿ ಮೇಯರ್ ಕವಿತಾ ಸನಿಲ್‌ ಬಿಜೆಪಿ ಸೇರ್ಪಡೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯ‌ರ್, ಕಾಂಗ್ರೆಸ್‌ ನಾಯಕಿ ಕವಿತಾ ಸನಿಲ್ ಬಿಜೆಪಿ ಗೆ ಸೇರ್ಪಡೆಗೊಂಡರು. ಶನಿವಾರ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಪಕ್ಷದ ಧ್ವಜ ನೀಡಿ ವಿಜಯೇಂದ್ರ ಕವಿತಾ ಸನಿಲ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಕವಿತಾ ಸನಿಲ್, ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ನಾನು ಪಕ್ಷ ಸೇರ್ಪಡೆಯಾಗಿದ್ದೇನೆ ಎಂದರು.

ಮಾಜಿ ಮೇಯರ್ ಕವಿತಾ ಸನಿಲ್‌ ಬಿಜೆಪಿ ಸೇರ್ಪಡೆ Read More »

ಎರಡು ಕಾರುಗಳ ಮುಖಾಮುಖಿ ಡಿಕ್ಕಿ : ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ಸುಳ್ಯ : ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡ ಘಟನೆ ಸುಳ್ಯ ಶ್ರೀರಾಮ್ ಪೇಟೆ ಬಳಿ ಇಂದು ನಡೆದಿದೆ. ಓಮ್ನಿ ಕಾರು ಹಾಗೂ ಸೆಲಾರಿಯೋ ಕಾರಿನ ನಡುವೆ ಶ್ರೀರಾಮ್ ಪೇಟೆ ಪೋಸ್ಟ್ ಆಫೀಸ್ ಕಚೇರಿಯ ಬಳಿ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ ಎರಡು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಕಾರುಗಳ ಡಿಕ್ಕಿಯಿಂದ ಸುಳ್ಯ ಮುಖ್ಯ ಬೀದಿಯಲ್ಲಿ ಸ್ವಲ್ಪ ಹೊತ್ತು ಸಂಚಾರಕ್ಕೆ ತಡೆ ಉಂಟಾಯಿತು. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

ಎರಡು ಕಾರುಗಳ ಮುಖಾಮುಖಿ ಡಿಕ್ಕಿ : ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ Read More »

ಏ.26 ರಂದು ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ | ಆದೇಶದಲ್ಲಿ ಏನಿದೆ ? | ಇಲ್ಲಿದೆ ಡಿಟೈಲ್ಸ್

ಮಂಗಳೂರು: ಏ.26ರಂದು ನಡೆಯಲಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಚಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.26 ರ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಯಾ ಬೆಂಬಲಿಗರು

ಏ.26 ರಂದು ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ | ಆದೇಶದಲ್ಲಿ ಏನಿದೆ ? | ಇಲ್ಲಿದೆ ಡಿಟೈಲ್ಸ್ Read More »

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವಾರು ಮಂದಿ ಬಿಜೆಪಿ ಸೇರ್ಪಡೆ

ವಿಟ್ಲ: ಅಳಿಕೆ ಗ್ರಾಮದ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವಾರು ಮಂದಿ ಕಾಂಗ್ರೇಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಈ ದೇಶಕ್ಕೆ ಮೋದಿ ಅನಿವಾರ್ಯ ಮತ್ತು ಸ್ಥಳೀಯ ನಾಯಕರ ವರ್ತನೆಗೆ ಬೇಸತ್ತು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ ಅವರ ಸಮ್ಮಖದಲ್ಲಿ ಬಿಜೆಪಿ ಸೇರಿದರು. ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಚುನಾವಣಾ ಉಸ್ತುವಾರಿ ಸುಲೋಚನಾ ಜಿ.ಕೆ.ಭಟ್, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಉಪಾಧ್ಯಕ್ಷ, ಪುಣಚ ಮಹಾಶಕ್ತೀ ಕೇಂದ್ರ ಅಧ್ಯಕ್ಷ

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವಾರು ಮಂದಿ ಬಿಜೆಪಿ ಸೇರ್ಪಡೆ Read More »

ಉಪ್ಪಿನಂಗಡಿ ವಿದ್ಯಾರ್ಥಿ ನಂದನ್ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಏ.19 ರಂದು ಸಂಜೆ ನಡೆದಿದೆ. ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ, ವಿದ್ಯಾರ್ಥಿ ನಂದನ್ (13) ಆತ್ಮಹತ್ಯೆ ಮಾಡಿಕೊಂಡವ. ತನ್ನ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಂಜದ ದಿ.ರೋಹಿತ್ ಗೌಡ ಎಂಬವರ ಪುತ್ರನಾಗಿದ್ದು, ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದು ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ. ಈತ ಏಳನೇ ತರಗತಿ ಉತ್ತೀರ್ಣನಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ 8ನೇ ತರಗತಿಗೆ

ಉಪ್ಪಿನಂಗಡಿ ವಿದ್ಯಾರ್ಥಿ ನಂದನ್ ನೇಣು ಬಿಗಿದು ಆತ್ಮಹತ್ಯೆ Read More »

ಸಿಡಿಲು ಬಡಿದು ಕರು ಮೃತ್ಯು

ಕಲ್ಲಡ್ಕ: ಸಿಡಿಲು ಬಡಿದು ಕರುವೊಂದು ಮೃತಪಟ್ಟ ಘಟನೆ ಬುಧವಾರ ರಾತ್ರಿ ಕಲ್ಲಡ್ಕದಲ್ಲಿ ನಡೆದಿದೆ. ಕಲ್ಲಡ್ಕ ಗ್ರಾಮದ ಮುಚ್ಚಿಲ ಕಜೆ ಅಬ್ಬಾಸ್ ಎಂಬವರ ಹಟ್ಟಿಯಲ್ಲಿದ್ದ ಕರು ಸಿಡಿಲಿನ ಬಡಿತಕ್ಕೆ ಬಲಿಯಾಗಿದ್ದು, ಮನೆಯ ಸಂಪೂರ್ಣ ವಯರಿಂಗ್, ಸ್ವಿಚ್ ಬೋರ್ಡ್ ಗಳು ಹೊತ್ತಿ ಹೋಗಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಸಿಡಿಲಿನ ಬಡಿತದಿಂದಾಗಿ ಅಪಾರ ನಷ್ಟ ಸಂಭವಿಸಿದೆ.

ಸಿಡಿಲು ಬಡಿದು ಕರು ಮೃತ್ಯು Read More »

ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಪತ್ತೆ !

ಕಡಬ: ಮನುಷ್ಯನ ತಲೆಬುರುಡೆಯೊಂದು ಕೊಳೆತ ಸ್ಥಿತಿಯಲ್ಲಿ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ಪತ್ತೆಯಾಗಿದೆ. ಬಿಳಿನೆಲೆ ಗ್ರಾಮ ನಿವಾಸಿ ಚಂದ್ರಶೇಖರ್ ಎಂಬವರು ಏ.19 ರಂದು ಬೆಳಿಗ್ಗೆ ನೆರೆ-ಕೆರೆಯ ನಿವಾಸಿಗಳೊಂದಿಗೆ, ಕಾಡಿನಲ್ಲಿ ಕಟ್ಟಿಗೆ ಯನ್ನು ತರಲು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ತೆರಳುತ್ತಿದ್ದಾಗ, ದಾರಿಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗು ಬ್ಯಾಗ್ ಕಂಡುಬಂದಿದೆ. ಸ್ವಲ್ಪ ದೂರದಲ್ಲಿ ಮರವೊಂದರಲ್ಲಿ

ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಪತ್ತೆ ! Read More »

ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರ ಅಸ್ತವ್ಯಸ್ಥ

ಸುಳ್ಯ: ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ಭಾರೀ ಗಾಳಿಗೆ ಬೃಹದಾಕಾರದ ದೂಪದ ಮರವೊಂದು ಮುಖ್ಯರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದೀಗ ಸ್ಥಳೀಯರು ಸೇರಿ ಮರ ತೆರವು ಕಾರ್ಯದಲ್ಲಿ ತೊಡಗಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ ಎಂದು ತಿಳಿದುಬಂದಿದೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರ ಅಸ್ತವ್ಯಸ್ಥ Read More »

ದೇಶ , ಜಿಲ್ಲೆ ಅಭಿವೃದ್ಧಿಗಾಗಿ ಹಸ್ತ ಚಿಹ್ನೆಗೆ ಮತನೀಡಿ : ಪದ್ಮರಾಜ್

ಸುಳ್ಯ : ದೇಶದ ಭವಿಷ್ಯದ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ, ಕಾರ್ಯಕರ್ತರು, ನಾಯಕರು ಒಟ್ಟಾಗಿದ್ದು ಈ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ಸುಳ್ಯದಲ್ಲಿ ನಡೆದ ಕಾಂಗ್ರೆಸ್‌ ರೋಡ್ ಶೋ ದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ನೀಡಿದ ಗ್ಯಾರಂಟಿಗಳನ್ನು ಸರಕಾರ ಅನುಷ್ಠಾನಗೊಂಡ ನೂರು ದಿನಗಳ ಒಳಗೆ ಜಾರಿಗೊಳಿಸಿದೆ. ಕೇಂದ್ರದಲ್ಲಿಯೂ ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಜಾರಿಗೆ ತರಲಿದೆ. ಈ ಬಾರಿ ಎಲ್ಲರೂ ಕಾಂಗ್ರೆಸ್ ಗೆ ಬೆಂಬಲ ನೀಡಬೇಕು ಎಂದು ಹೇಳಿದರು. ಕಾಂಗ್ರೆಸ್‌ ಅಭ್ಯರ್ಥಿ

ದೇಶ , ಜಿಲ್ಲೆ ಅಭಿವೃದ್ಧಿಗಾಗಿ ಹಸ್ತ ಚಿಹ್ನೆಗೆ ಮತನೀಡಿ : ಪದ್ಮರಾಜ್ Read More »

error: Content is protected !!
Scroll to Top