ದಕ್ಷಿಣ ಕನ್ನಡ

ಹಿರಿಯರು ಮಾಡುವ ಒಳ್ಳೆಯ ಕೆಲಸವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸವಾಗಬೇಕು | ಕಡಬ ಸ್ಪಂದನಾ ಸಮುದಾಯ ಸಹಕಾರ ಸಂಘದ ಶುಭಾರಂಭ ಸಮಾರಂಭ ಉದ್ಘಾಟಿಸಿ ಶಾಸಕಿ ಭಾಗೀರಥಿ ಮುರುಳ್ಯ

ಕಡಬ: ಎಲ್ಲಾ ಸಮುದಾಯದ ಜತೆಗೂಡಿ ಒಬ್ಬರಿಗೊಬ್ಬರು ಸಹಕಾರ ನೀಡುವ ನಿಟ್ಟಿನಲ್ಲಿ ರಚನೆಗೊಂಡ ಸ್ಪಂದನಾ ಸಮುದಾಯ ಸಹಕಾರ ಸಂಘ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಸಹಕಾರ ಸಂಘವಾಗಿ ಬೆಳೆಯಲಿ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಭಾನುವಾರ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಕಡಬ ಸ್ಪಂದನಾ ಸಮುದಾಯ ಸಹಕಾರ ಸಂಘದ ಶುಭಾರಂಭ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಒಳ್ಳೆಯ ಕೆಲಸ ಮಾಡಿದಾಗ ಸಮಾಜದಿಂದ ಸನ್ಮಾನ ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಹಿರಿಯರು ಮಾಡುವ ಒಳ್ಳೆಯ […]

ಹಿರಿಯರು ಮಾಡುವ ಒಳ್ಳೆಯ ಕೆಲಸವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸವಾಗಬೇಕು | ಕಡಬ ಸ್ಪಂದನಾ ಸಮುದಾಯ ಸಹಕಾರ ಸಂಘದ ಶುಭಾರಂಭ ಸಮಾರಂಭ ಉದ್ಘಾಟಿಸಿ ಶಾಸಕಿ ಭಾಗೀರಥಿ ಮುರುಳ್ಯ Read More »

ಕಡಬ ಸ್ಪಂದನಾ ಸಮುದಾಯ ಸಹಕಾರ ಸಂಘದ ಸಾಮಾನ್ಯ ಮಹಾಸಭೆ

ಕಡಬ: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಪ್ರವರ್ತಿತ ಸ್ಪಂದನಾ ಸಮುದಾಯ ಸಹಕಾರ ಸಂಘದ ಸಾಮಾನ್ಯ ಮಹಾಸಭೆ ಭಾನುವಾರ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಕೇಶವ ಎ. ಕಲಾಯಿಗುತ್ತು ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಹಕಾರ ಸಂಘದಲ್ಲಿ ಈಗಾಗಲೇ 1088 ಸದಸ್ಯರಿದ್ದು, 28.70 ಲಕ್ಷ ಪಾಲು ಬಂಡವಾಳ ಹೊಂದಿದೆ. 106800 ಶೇರು ಶುಲ್ಕ, 53400 ರೂ. ನೋಂದಣಿ ಶುಲ್ಕ ಸಂಗ್ರಹಿಸಲಾಗಿದೆ. ಸದಸ್ಯರಿಂದ ಉಳಿತಾಯ ಖಾತೆ ತೆರೆದು 22 ಖಾತೆಯಲ್ಲಿ

ಕಡಬ ಸ್ಪಂದನಾ ಸಮುದಾಯ ಸಹಕಾರ ಸಂಘದ ಸಾಮಾನ್ಯ ಮಹಾಸಭೆ Read More »

ಗ್ರಾಮೀಣ ಜನತೆಯ ಸಮಸ್ಯೆ ಪರಿಹರಿಸುವಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ ಬರೆದಿದೆ | ಕೊಲ್ಲಮೊಗ್ರದಲ್ಲಿ ನಡೆದ ಪತ್ರಕರ್ತರ ಗ್ರಾಮವಾಸ್ತವ್ಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ: ಸರಕಾರಿ ಕಚೇರಿಯಿಂದ ಕಚೇರಿಗೆ ಅಲೆಯುವ ಕೆಲಸ ಪ್ರಸ್ತುತ ದಿನಗಳಲ್ಲಿ ಕಷ್ಟಸಾಧ್ಯವಾಗುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ಒಂದೇ ವೇದಿಕೆಯಲ್ಲಿ ಎಲ್ಲಾ ಅಧಿಕಾರಿಗಳು ಗ್ರಾಮದ ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ ಬರೆದಿರುವುದು ಶ್ಲಾಘನೀಯ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಶನಿವಾರ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಂಟಿ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೊಲ್ಲಮೊಗ್ರದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ   ಮಾತನಾಡಿದರು. ಕಳೆದ ಬಾರಿ ನೆರೆ ಬಂದು

ಗ್ರಾಮೀಣ ಜನತೆಯ ಸಮಸ್ಯೆ ಪರಿಹರಿಸುವಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ ಬರೆದಿದೆ | ಕೊಲ್ಲಮೊಗ್ರದಲ್ಲಿ ನಡೆದ ಪತ್ರಕರ್ತರ ಗ್ರಾಮವಾಸ್ತವ್ಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ Read More »

ಮಂಗಳೂರಿಗೆ ಸಿಜಿಎಚ್‍ಎಸ್  ವೆಲ್ ನೆಸ್ ಸೆಂಟರ್ ಮಂಜೂರು : ಸಂಸದ ನಳೀನ್ ಕುಮಾರ್ ಮನವಿಗೆ ಸ್ಪಂದಿಸಿದ ಆರೋಗ್ಯ ಸಚಿವರು

ಮಂಗಳೂರು: ಕೇಂದ್ರ ಸರ್ಕಾರದ ನಿವೃತ್ತ ನೌಕರರ ಬಹುದಿನದ ಬೇಡಿಕೆಯಾದ ಸಿಜಿಎಚ್‍ಎಸ್ ವೆಲ್ ನೆಸ್ ಸೆಂಟರ್ ನ್ನು ಮಂಗಳೂರಿನಲ್ಲಿ ತೆರೆಯಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಸಂಸದ ನಳೀನ್ ಕುಮಾರ್ ಅವರ ಪ್ರಯತ್ನದಿಂದ ಬಹುದಿನದ ಬೇಡಿಕೆ ಈಡೇರುತ್ತಿದ್ದು, ಸಂಸದರು ಕಳೆದ ಬಾರಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ಮಂಗಳೂರಿನಲ್ಲಿ ಸಿಜಿಎಚ್‍ಎಸ್ ವೆಲ್ ನೆಸ್ ಸೆಂಟರ್ ನ್ನು ತೆರೆಯುವಂತೆ ಮನವಿ ಮಾಡಿದ್ದರು.  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಮನ್ ಸುಖ್

ಮಂಗಳೂರಿಗೆ ಸಿಜಿಎಚ್‍ಎಸ್  ವೆಲ್ ನೆಸ್ ಸೆಂಟರ್ ಮಂಜೂರು : ಸಂಸದ ನಳೀನ್ ಕುಮಾರ್ ಮನವಿಗೆ ಸ್ಪಂದಿಸಿದ ಆರೋಗ್ಯ ಸಚಿವರು Read More »

ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ | ಹೊರಗಡೆ ಚರ್ಚೆಗೆ ಉತ್ತರ ನೀಡುವ ಸ್ಥಿತಿ ಭಾರತೀಯ ಜನತಾ ಪಾರ್ಟಿಗಿಲ್ಲ | ಪುತ್ತಿಲ ಪರಿವಾರದ ಶ್ರೀಕೃಷ್ಣ ಉಪಾಧ್ಯಾಯ ಸವಾಲಿಗೆ ಪ್ರತಿಕ್ರಿಯೆ ನೀಡಿದ ಸತೀಶ್ ಕುಂಪಲ

ಮಂಗಳೂರು: ಭಾರತೀಯ ಜನತಾ ಪಾರ್ಟಿ ಒಂದು ರಾಷ್ಟ್ರೀಯ ಪಕ್ಷ. ಹೊರಗಡೆ ಆಗಿರುವ ಯಾವುದೇ ಚರ್ಚೆಗೆ ಉತ್ತರ ನೀಡುವ ಸ್ಥಿತಿ ಭಾರತೀಯ ಜನತಾ ಪಾರ್ಟಿಗೆ ಇಲ್ಲಾ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಎಲ್ಲವನ್ನೂ ಗಮನಿಸುವುದು, ಅದಕ್ಕೆ ಏನು ಮಾಡಬೇಕು ಎಂಬುದರ ಕುರಿತು ರಾಜ್ಯದಲ್ಲಿ ತೀರ್ಮಾನ ಮಾಡುತ್ತಾರೆ. ಬಿಜೆಪಿಯಲ್ಲಿ ನನ್ನದು ಏನಿದ್ದರೂ ಭಾರತೀಯ ಜನತಾ ಪಾರ್ಟಿ ದೊಡ್ಡ ಪ್ರಮಾಣದಲ್ಲಿ ಗೆಲ್ಲಬೇಕು, ಅದಕ್ಕೆ ಬೇಕಾದ ಪೂರ್ವಸಿದ್ಧತೆ ಏನು ಮಾಡಬೇಕು ಎಂಬುದಷ್ಟೇ ನನ್ನ ಅಭಿಪ್ರಾಯ

ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ | ಹೊರಗಡೆ ಚರ್ಚೆಗೆ ಉತ್ತರ ನೀಡುವ ಸ್ಥಿತಿ ಭಾರತೀಯ ಜನತಾ ಪಾರ್ಟಿಗಿಲ್ಲ | ಪುತ್ತಿಲ ಪರಿವಾರದ ಶ್ರೀಕೃಷ್ಣ ಉಪಾಧ್ಯಾಯ ಸವಾಲಿಗೆ ಪ್ರತಿಕ್ರಿಯೆ ನೀಡಿದ ಸತೀಶ್ ಕುಂಪಲ Read More »

ಎಂ.ಡಿ.ಎಸ್. ನಲ್ಲಿ ಡಾ.ಸಂದೀಪ್ ಬಿರ್ಮುಕಜೆಯವರಿಗೆ ರಾಜ್ಯಮಟ್ಟದ ಚಿನ್ನದ ಪದಕ

ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ 2023ರಲ್ಲಿ ನಡೆಸಿದ ಎಂ.ಡಿ.ಎಸ್ (Oral and Maxillofacial Surgery)ನಲ್ಲಿ ಡಾ.ಸಂದೀಪ್ ಬಿರ್ಮುಕಜೆಯವರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಮೊದಲ ಸ್ಥಾನ ಪಡೆದು ರಾಜ್ಯ ಮಟ್ಟದ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ದಾವಣಗೆರೆಯ ಬಾಪೂಜಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಎಂ.ಡಿ.ಎಸ್ ಸ್ನಾತಕೋತ್ತರ ಪದವಿ ಪೂರೈಸಿರುವ ಅವರು ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದಲ್ಲಿ ವಾಸ್ತವ್ಯವಿರುವ ಬಿರ್ಮುಕಜೆ ಸುಧಾಕರ ಗೌಡ ಮತ್ತು  ಉದಯಗೌರಿ ದಂಪತಿ ಪುತ್ರ. ಅವರು ಸುಳ್ಯದ ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿ.ಡಿ.ಎಸ್ ಪದವಿ ಪಡೆದಿದ್ದಾರೆ. ಪ್ರಸ್ತುತ

ಎಂ.ಡಿ.ಎಸ್. ನಲ್ಲಿ ಡಾ.ಸಂದೀಪ್ ಬಿರ್ಮುಕಜೆಯವರಿಗೆ ರಾಜ್ಯಮಟ್ಟದ ಚಿನ್ನದ ಪದಕ Read More »

ನೇಣು ಬಿಗಿದು ಯುವತಿ ಆತ್ಮಹತ್ಯೆ !

ಬೆಳ್ತಂಗಡಿ: ಯುವತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಗುರುವಾರ ನಡೆದಿದೆ. ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ (30) ಆತ್ಮಹತ್ಯೆ ಮಾಡಿಕೊಂಡವರು. ಮಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ವನಿತಾ ಅನಾರೋಗ್ಯ ಹಿನ್ನಲೆಯಲ್ಲಿ ಒಂದು ತಿಂಗಳು ಮನೆಯಲ್ಲಿದ್ದರು. ಬುಧವಾರ ಮುಂಜಾನೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಡೆತ್ ನೋಟ್ ದೊರಕಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದೆ. ಧರ್ಮಸ್ಥಳ ಪೊಲೀಸರು

ನೇಣು ಬಿಗಿದು ಯುವತಿ ಆತ್ಮಹತ್ಯೆ ! Read More »

ಫೆ.11 : ಕಡಬ ಸ್ಪಂದನಾ ಸಮುದಾಯ ಸಹಕಾರ ಸಂಘದ ಶುಭಾರಂಭ ಸಮಾರಂಭ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಕೇಶವ ಅಮೈ ಕಲಾಯಿಗುತ್ತು

ಕಡಬ: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಪ್ರವರ್ತಿತ ಸ್ಪಂದನಾ ಸಮುದಾಯ ಸಹಕಾರ ಸಂಘದ ಶುಭಾರಂಭ ಸಮಾರಂಭ ಫೆ.11 ಭಾನುವಾರ ಮಧ್ಯಾಹ್ನ 3.30ಕ್ಕೆ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೇಶವ ಅಮೈ ಕಲಾಯಿಗುತ್ತು ತಿಳಿಸಿದ್ದಾರೆ. ಅವರು ಗುರುವಾರ ಕಡಬ ಸ್ಪಂದನಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಹಸ್ತದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಖಜಾನೆಗೆ ಹಣ ತುಂಬಿಸುವ ಮೂಲಕ

ಫೆ.11 : ಕಡಬ ಸ್ಪಂದನಾ ಸಮುದಾಯ ಸಹಕಾರ ಸಂಘದ ಶುಭಾರಂಭ ಸಮಾರಂಭ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಕೇಶವ ಅಮೈ ಕಲಾಯಿಗುತ್ತು Read More »

ಮಂಗಳೂರು ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಳಿನ್ ಕುಮಾರ್ ಕಟೀಲ್ ಮನವಿ

ಮಂಗಳೂರು: ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವ ಭೋಪೇಂದ್ರ ಯಾದವ್ ರನ್ನು ಇಂದು ನಳಿನ್ ಕುಮಾರ್ ಕಟೀಲ್ ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ,  ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ, ಸಿ.ಟಿ. ಸ್ಕ್ಯಾನಿಂಗ್ ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರು ಹಾಗೂ ಇತರ ಸಿಬ್ಬಂದಿಗಳ ನೇಮಕಾತಿಯೊಂದಿಗೆ ವಿವಿಧ ವಿಶೇಷ ವೈದ್ಯಕೀಯ ಸೇವೆಗಳು ದೊರೆಯುವಂತಾಗಲು ಇಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂದು

ಮಂಗಳೂರು ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಳಿನ್ ಕುಮಾರ್ ಕಟೀಲ್ ಮನವಿ Read More »

ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಸುಳ್ಯ: ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ 1994-97ರ ಬ್ಯಾಚ್‍ನ ಶಿಕ್ಷಕರ ಸ್ನೇಹ ಸಮ್ಮಿಲನ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳು ಎಲ್ಲಾ ಶಿಕ್ಷಕರನ್ನು ಸನ್ಮಾನಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಡಾ,ಪ್ರಭಾಕರ ಶಿಶಿಲ, ಡಾ.ಚಂದ್ರಶೇಖರ ದಾಮ್ಲೆ, ಪ್ರೊ.ಕೆ.ದಾಮೋದರ ಗೌಡ, ಪ್ರೊ.ಹೊನ್ನಮ್ಮ ಮೇಡಮ್, ಪ್ರೊ.ಜಾರೇ ಗೌಡ, ಡಾ.ಯಶೋಧ ಮೇಡಮ್, ಪ್ರೊ.ಸಂಜೀವ ಕುತ್ಪಾಜೆ, ಪ್ರೊ.ಪಿ.ಡಿ.ರಾಧಾಕೃಷ್ಣ ಗೌಡ ಮಣಿಬೆಟ್ಟು, ನಿವೃತ್ತ ಪ್ರೊ.ರತ್ನಾವತಿ, ಲೈಬ್ರೇರಿಯನ್ ಉಮಾವತಿ, ಪ್ರಿನ್ಸಿಪಾಲ್ ಡಾ.ರುದ್ರಕುಮಾರ್ ಎಂ.ಎಂ. , ಕುಲದೀಪ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಹಾಯಕ ಪ್ರೊ.

ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಸ್ನೇಹ ಸಮ್ಮಿಲನ ಕಾರ್ಯಕ್ರಮ Read More »

error: Content is protected !!
Scroll to Top