ಹಿರಿಯರು ಮಾಡುವ ಒಳ್ಳೆಯ ಕೆಲಸವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸವಾಗಬೇಕು | ಕಡಬ ಸ್ಪಂದನಾ ಸಮುದಾಯ ಸಹಕಾರ ಸಂಘದ ಶುಭಾರಂಭ ಸಮಾರಂಭ ಉದ್ಘಾಟಿಸಿ ಶಾಸಕಿ ಭಾಗೀರಥಿ ಮುರುಳ್ಯ
ಕಡಬ: ಎಲ್ಲಾ ಸಮುದಾಯದ ಜತೆಗೂಡಿ ಒಬ್ಬರಿಗೊಬ್ಬರು ಸಹಕಾರ ನೀಡುವ ನಿಟ್ಟಿನಲ್ಲಿ ರಚನೆಗೊಂಡ ಸ್ಪಂದನಾ ಸಮುದಾಯ ಸಹಕಾರ ಸಂಘ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಸಹಕಾರ ಸಂಘವಾಗಿ ಬೆಳೆಯಲಿ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಭಾನುವಾರ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಕಡಬ ಸ್ಪಂದನಾ ಸಮುದಾಯ ಸಹಕಾರ ಸಂಘದ ಶುಭಾರಂಭ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಒಳ್ಳೆಯ ಕೆಲಸ ಮಾಡಿದಾಗ ಸಮಾಜದಿಂದ ಸನ್ಮಾನ ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಹಿರಿಯರು ಮಾಡುವ ಒಳ್ಳೆಯ […]










