ದಕ್ಷಿಣ ಕನ್ನಡ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಸುಳ್ಯ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ನಡೆಯುತ್ತಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬುಧವಾರ ಬೆಳಿಗ್ಗೆ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಶ್ರೀ ದೇವರ ದರ್ಶನ ಪಡೆದು ಬಳಿಕ ಶ್ರೀ ದೇವರ ಬಲಿ ಉತ್ಸವದಲ್ಲಿ ಪಾಲ್ಗೊಂಡರು. ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷ ದೇವಿಪ್ರಸಾದ್  ಕಾನತ್ತೂರ್  ಶಾಸಕರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಸಿಬ್ಬಂದಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

ಕುಕ್ಕೇಡಿ ಪಟಾಕಿ ಗೋಡೌನ್ ಸ್ಪೋಟ ಪ್ರಕರಣ | ನಾಲ್ಕನೇ ಆರೋಪಿ ಬಂಧನ

ಬೆಳ್ತಂಗಡಿ: ಕುಕ್ಕೇಡಿಯಲ್ಲಿ ಪಟಾಕಿ ಗೋಡೌನ್ ನಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ದಿವಾನರ ಪಾಳ್ಯ ನಿವಾಸಿ ಅನಿಲ್ ಎಂ. ಡೇವಿಡ್ (49) ಬಂಧಿತ ವ್ಯಕ್ತಿ. ಈತ ಪಟಾಕಿ ತಯಾರಿಕೆಗೆ ರಾಸಾಯನಿಕಗಳನ್ನು ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ. ಜ.28 ರಂದು ಕುಕ್ಕೇಡಿ ಎಂಬಲ್ಲಿ ಸಂಜೆ ಸುಮಾರು 5.30 ರ ಹೊತ್ತಿಗೆ ಪಟಾಕಿ ಗೋಡೌನ್‍ ನಲ್ಲಿ ಸ್ಪೋಟಗೊಂಡ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಸಂದರ್ಭ ಸ್ಥಳಕ್ಕೇ ಭೇಟಿ ನೀಡಿದ ಪೊಲೀಸರು

ಕುಕ್ಕೇಡಿ ಪಟಾಕಿ ಗೋಡೌನ್ ಸ್ಪೋಟ ಪ್ರಕರಣ | ನಾಲ್ಕನೇ ಆರೋಪಿ ಬಂಧನ Read More »

ಮಹಿಳೆಗೆ ಬಸ್ ಡಿಕ್ಕಿ ಹೊಡೆದು ಮೃತ್ಯು !

ಸುಳ್ಯ: ಮಹಿಳೆಯೊಬ್ಬರಿಗೆ ಕೆಎಸ್‍ ಆರ್‍ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ ಮುಂಭಾಗದಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ರಸ್ತೆ ದಾಟುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತ ದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಅಂದಾಜು 40 ವರ್ಷದ ಮಹಿಳೆಯಾಗಿದ್ದು, ಮಹಿಳೆಯ ಗುರುತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ

ಮಹಿಳೆಗೆ ಬಸ್ ಡಿಕ್ಕಿ ಹೊಡೆದು ಮೃತ್ಯು ! Read More »

ರಸ್ತೆ ಬದಿ ಮಾದಕ ವಸ್ತುಗಳ ಮಾರಾಟ | ಆರೋಪಿಗಳಿಬ್ಬರು ಪೊಲೀಸರ ವಶಕ್ಕೆ

ಮಂಗಳೂರು : ರಸ್ತೆ ಬದಿಯಲ್ಲಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೇಂದ್ರ ಉಪ-ವಿಭಾಗ ಆ್ಯಂಟಿ ಡ್ರಗ್ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಅತ್ತಾವರದ ಆದಿತ್ಯ ಕೆ (29), ಅಡ್ಯಾರ್ ಪದವು ನಿವಾಸಿ ರೋಹನ್‌ ಸಿಕ್ಕೇರಾ (33) ಬಂಧಿತ ಆರೋಪಿಗಳು. ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್ ಅಗ್ರವಾಲ್ ಅವರ ನಿರ್ದೇಶನದಂತೆ, ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಐ.ಪಿ.ಎಸ್, ಉಪ ಪೊಲೀಸ್‌ ಆಯುಕ್ತ ದಿನೇಶ್ ಕುಮಾರ್ ಮಾರ್ಗದರ್ಶನದಲ್ಲಿ, ಕೇಂದ್ರ ಉಪ

ರಸ್ತೆ ಬದಿ ಮಾದಕ ವಸ್ತುಗಳ ಮಾರಾಟ | ಆರೋಪಿಗಳಿಬ್ಬರು ಪೊಲೀಸರ ವಶಕ್ಕೆ Read More »

ಪಣೋಲಿಬೈಲಿನಲ್ಲಿ ಕೋಲದ ಹರಕೆ ತೀರಿಸಿದ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ | ಮುಸ್ಲಿಂ ಮುಖಂಡರೊಬ್ಬರಿಂದ ವಿರೋಧಿಸಿ ಪೋಸ್ಟ್ ಹಂಚಿಕೆ

ಮಂಗಳೂರು: ಇಷ್ಟಾರ್ಥ ಸಿದ್ಧಿಗಾಗಿ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದು, ಇದೀಗ ಮುಸ್ಲಿಂ  ಮುಖಂಡರೋರ್ವರು ವಿರೋಧ ವ್ಯಕ್ತಪಡಿಸಿದ್ದಾರೆ. ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದ ಖಾದ‌ರ್ ಪ್ರದಾಯ ಬದ್ಧವಾಗಿ ಕೋಲ ನೆರವೇರಿಸಿ ಕಲ್ಲುರ್ಟಿ- ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದರು.. ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಎಂಬುವವರು ಯು.ಟಿ. ಖಾದರ್ ಬಗ್ಗೆ ಆಕ್ಷೇಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಕೊರಗಜ್ಜನ ಭಕ್ತ ಯು.ಟಿ ಖಾದರ್ ನನ್ನು ಮುಸ್ಲಿಮರು

ಪಣೋಲಿಬೈಲಿನಲ್ಲಿ ಕೋಲದ ಹರಕೆ ತೀರಿಸಿದ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ | ಮುಸ್ಲಿಂ ಮುಖಂಡರೊಬ್ಬರಿಂದ ವಿರೋಧಿಸಿ ಪೋಸ್ಟ್ ಹಂಚಿಕೆ Read More »

ನೈತಿಕ ಪೊಲೀಸ್‍ ಗಿರಿ ! | ಮೂವರು ಪೊಲೀಸರ ವಶಕ್ಕೆ

ಅನ್ಯಕೋಮಿನ ಯುವಕ ಯುವತಿಗೆ  ಹಿಂದೂ ಸಂಘಟನೆ ಕಾರ್ಯಕರ್ತರು ತಡೆದು ಕಿರಿಕ್ ಮಾಡುವ ಮೂಲಕ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಮಂಗಳೂರಿನ ಪ್ರವಾಸಿ ತಾಣವಾದ ಪಣಂಬೂರು ಬೀಚ್ ನಲ್ಲಿ ನಡೆದಿದೆ. ಕೇರಳದ ಯುವಕ ಹಾಗೂ ಬೆಂಗಳೂರಿನ ಯುವತಿ ಪಣಂಬೂರು ಬೀಚ್ ಗೆ ಬಂದಿದ್ದರು. ಈ ವೇಳೆ ಅಲ್ಲಿಗೆ ಬಂದ  ಹಿಂದೂ ಸಂಘಟನೆ ಕಾರ್ಯಕರ್ತರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ಈ ಸಂದರ್ಭದಲ್ಲಿ  ಸ್ಥಳಕ್ಕೆ ಆಗಮಿಸಿದ ಪೊಲೀಸರು ಅನ್ಯಜೋಡಿ ಹಾಗೂ ಹಿಂದೂ ಕಾರ್ಯಕರ್ತರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ನಂತರ ಈ

ನೈತಿಕ ಪೊಲೀಸ್‍ ಗಿರಿ ! | ಮೂವರು ಪೊಲೀಸರ ವಶಕ್ಕೆ Read More »

ವಿಷ ಜಂತು ಕಡಿದು ವ್ಯಕ್ತಿ ಮೃತ್ಯು !

ಬಂಟ್ವಾಳ: ವ್ಯಕ್ತಿಯೋರ್ವರಿಗೆ ವಿಷ ಜಂತು ಕಡಿದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ನಗ್ರಿಯಲ್ಲಿ ನಡೆದಿದೆ. ನಗ್ರಿ ನಿವಾಸಿ ಅಂದ್ರು ಡಿ’ಸೋಜಾ (60) ಮೃತಪಟ್ಟವರು. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಂದ್ರು ಡಿ’ಸೋಜಾ ಅವರಿಗೆ ವಿಷ ಜಂತು ಕಡಿದಿದೆ. ತಕ್ಷಣ ಹಳ್ಳಿ ಔಷಧಿ ಮಾಡಲಾಗಿತ್ತು. ಗಾಯ ಉಲ್ಷಣವಾಗಿತ್ತು. ಗುಣಮುಖ ಕಾಣದೇ ಇದ್ದಾಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆನ್ನಲಾಗಿದೆ. ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಷ ಜಂತು ಕಡಿದು ವ್ಯಕ್ತಿ ಮೃತ್ಯು ! Read More »

ರೈಲು ಡಿಕ್ಕಿ ಹೊಡೆದು ಕಾರ್ಮಿಕ ಮೃತ್ಯು !

ಬಂಟ್ವಾಳ : ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಬಿ.ಸಿ.ರೋಡು ಸಮೀಪದ ‌ಮಾರ್ನಬೈಲು ಎಂಬಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೂಲತಃ ಮಡಂತ್ಯಾರು ಪಣಕಜೆ ನಿವಾಸಿ, ಪ್ರಸ್ತುತ ಸಜೀಪಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಮಾರ್ನಬೈಲು ದಾಸರಗುಡ್ಡೆಯಲ್ಲಿ ವಾಸವಾಗಿರುವ ಹರಿಶ್ಚಂದ್ರ (37) ಮೃತಪಟ್ಟ ವ್ಯಕ್ತಿ. ಕೂಲಿ ಕಾರ್ಮಿಕರಾಗಿರುವ ಹರಿಶ್ಚಂದ್ರ ಇಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದು, ರೈಲ್ವೆ ಹಳಿಯನ್ನು ದಾಟುವ ಸಂದರ್ಭ ರೈಲು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿರಬೇಕೆಂದು ಸ್ಥಳೀಯರು ತಿಳಿಸಿದ್ದಾರೆ. ರೈಲ್ವೆ ಪೋಲೀಸ್ ಇಲಾಖೆಯ ಎ.ಎಸ್.ಐ.ಜಾನ್ ಕೊರಿಯ ಕೋಸ್ ಸ್ಥಳಕ್ಕೆ

ರೈಲು ಡಿಕ್ಕಿ ಹೊಡೆದು ಕಾರ್ಮಿಕ ಮೃತ್ಯು ! Read More »

ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ | ಕಚೇರಿಗೆ ಬೀಗ ಜಡಿದ ಕಾರ್ಯಕರ್ತರು

ಸುಳ್ಯ: ಸುಳ್ಯ ಬಿಜೆಪಿ ನೂತನ ಮಂಡಲ ಸಮಿತಿ ವಿಚಾರದಲ್ಲಿ ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಕಾರ್ಯಕರ್ತರು ಕಚೇರಿಗೆ ಬೀಗ ಜಡಿದ ಘಟನೆ ಭಾನುವಾರ ನಡೆದಿದೆ. ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ನೇಮಕ ಮಾಡಿರುವ ಹಿನ್ನಲೆಯಲ್ಲಿ ಹಾಲಿ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಅಸಮಾಧಾನ ಭುಗಿಲೆದ್ದಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ಪ್ರಮುಖರು ಹಾಗೂ ಮಹಾಶಕ್ತಿ ಕೇಂದ್ರದವರು ಸಭೆ ನಡೆಸಿದ್ದಾರೆ. ಸಭೆ ಮುಗಿದ ಬಳಿಕ ಮುಖಂಡರು ಹೊರ ಬರುತ್ತಿದ್ದಂತೆ ಕಾರ್ಯಕರ್ತರು ಕಚೇರಿಗೆ ಬೀಗ

ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ | ಕಚೇರಿಗೆ ಬೀಗ ಜಡಿದ ಕಾರ್ಯಕರ್ತರು Read More »

ಬಿಇಎಂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಮಂಗಳೂರು : ಬಿ ಇ ಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಇಂದು  ನಡೆಯಿತು. ಸಮಾರಂಭದಲ್ಲಿ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇ ಗೌಡ ಪಾಲ್ಗೊಂಡು ಶುಭ ಹಾರೈಸಿದರು. ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಪ್ರಾಚಾರ್ಯೆ ಅಪರ್ಣಾ, ತರಗತಿ ಸಲಹೆಗಾರರಾದ ರೋಷನ್ ಕುಮಾರ್, ಸಾಧನಾ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಯಶವಂತ ಮಾಡ, ವನಿತಾ,

ಬಿಇಎಂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ Read More »

error: Content is protected !!
Scroll to Top