ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು
ಮಾಣಿ: ಯುವಕನೋರ್ವ ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಮಾಣಿಯಲ್ಲಿ ನಡೆದಿದೆ. ವೀರಕಂಭ ಮಜಿ ಶಾಲಾ ಬಳಿ ನಿವಾಸಿ ವಿಶ್ವನಾಥ (38) ಮೃತಪಟ್ಟವರು. ಬೆಂಗಳೂರು-ಮಂಗಳೂರು ರೈಲು ಡಿಕ್ಕಿ ಹೊಡೆದು ಮೃತಪಟ್ಟಿರಬೇಕೆಂದು ತಿಳಿದು ಬಂದಿದ್ದು, ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆಕಸ್ಮಿಕವೋ, ಆತ್ಮಹತ್ಯಯೋ ಎಂದು ತಿಳಿದು ಬರಬೇಕಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.
ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು Read More »










