ದಕ್ಷಿಣ ಕನ್ನಡ

ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ರಾಘವ ಎಚ್.ಗೇರುಕಟ್ಟೆ

ಬೆಳ್ತಂಗಡಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ರಾಘವ ಎಚ್. ಗೇರುಕಟ್ಟೆ ನೇಮಕಗೊಂಡಿದ್ದಾರೆ. ರಾಘವ ಅವರು ನಾಳ ಶ್ರೀ ದುರ್ಗಾಪರಮೇಶ್ವರಿ ಚಿಕ್ಕಮೇಳದ ಸಂಚಾಲಕರಾಗಿ ಮತ್ತು ನಾಳ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ವ್ಯವಸ್ಥಾಪಕರಾಗಿ ಯಕ್ಷಗಾನ ಮತ್ತು ತಾಳಮದ್ದಳೆಯ ಸಂಯೋಜಕರಾಗಿ, ಕಲಾವಿದರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸಂಘ ಮತ್ತು ಉಪ್ಪಿನಂಗಡಿಯ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ್ ಆಚಾರ್ಯ ಗೇರುಕಟ್ಟೆ ಅಭಿನಂದನೆ ಸಲ್ಲಿಸಿದ್ದಾರೆ.

ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ರಾಘವ ಎಚ್.ಗೇರುಕಟ್ಟೆ Read More »

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಸಹಿತ ಮೂರು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗೆ ತಾತ್ಕಾಲಿಕ ತಡೆ | ಧಾರ್ಮಿಕದತ್ತಿ ಇಲಾಖೆ ಆಯುಕ್ತರಿಂದ ಆದೇಶ

ಪುತ್ತೂರು: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚಿಸಿ ಹೊರಡಿಸಲಾದ ಆದೇಶಕ್ಕೆ ಸರಕಾರ ತಾತ್ಕಾಲಿಕ ತಡೆ ನೀಡಿ ಮತ್ತೊಂದು ಆದೇಶ ಹೊರಡಿಸಿದೆ. ಎ ಗ್ರೇಡೆ ದೇವಸ್ಥಾನವಾಗಿರುವ ಪಂಜ ದೇವಸ್ಥಾನಕ್ಕೆ ಡಾ.ದೇವಿಪ್ರಸಾದ್ ಕಾನತ್ತೂರು ಹಾಗೂ ಇತರರನ್ನು ಸದಸ್ಯರಾಗಿ ನೇಮಿಸಿ ಎರಡು ದಿನಗಳ ಹಿಂದೆ ಧಾರ್ಮಿಕದತ್ತಿ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದರು. ಆದೇಶ ಬಂದ ಬೆನ್ನಲ್ಲೇ ವ್ಯವಸ್ತಾಪನಾ ಸಮಿತಿ ಸದಸ್ಯರು ಸಭೆ ಸೇರಿ ದೇವಿಪ್ರಸಾದ್ ಕಾನತ್ತೂರು ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಪದಗ್ರಹಣವೂ ನಡೆದಿತ್ತು. ಇದೀಗ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಸಹಿತ ಮೂರು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗೆ ತಾತ್ಕಾಲಿಕ ತಡೆ | ಧಾರ್ಮಿಕದತ್ತಿ ಇಲಾಖೆ ಆಯುಕ್ತರಿಂದ ಆದೇಶ Read More »

ಮೂರು ವರ್ಷದ ಮಗುವಿಗೆ ಆಟೋ ಡಿಕ್ಕಿ : ಮಗು ಮೃತ್ಯು

ಬೆಳ್ತಂಗಡಿ: ಮೂರು ವರ್ಷ ಮಗುವೊಂದು ಮನೆಯಿಂದ ರಸ್ತೆಗೆ ಬಂದಾಗ ಆಟೋ ರಿಕ್ಷಾ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಸೋಣಂದೂರಿನ ಪಣಕಜೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಣಕಜೆ ಮುಂಡಾಡಿ ನಿವಾಸಿ ಚಂದ್ರಶೇಖರ್ ಹಾಗೂ ಉಷಾ ದಂಪತಿ ಪುತ್ರ ಕೌಶಿಕ್‍ ಮೃತಪಟ್ಟ ಮಗು. ರಸ್ತೆ ಬದಿಯಲ್ಲೇ ಮನೆಯಿದ್ದು, ಯಾರೂ ಇಲ್ಲದ ವೇಳೆ ಮಗು ರಸ್ತೆಗೆ ಓಡಿಬಂದಿದೆ. ಈ ಸಂದರ್ಭ ಬಂದ ಆಟೋ ರಿಕ್ಷಾ ಮಗುವಿಗೆ ಡಿಕ್ಕಿ ಹೊಡದಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗದೆ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಬೆಳ್ತಂಗಡಿ

ಮೂರು ವರ್ಷದ ಮಗುವಿಗೆ ಆಟೋ ಡಿಕ್ಕಿ : ಮಗು ಮೃತ್ಯು Read More »

ಐದು ಗೋಣಿ ಸುಲಿದ ಅಡಿಕೆ ಕಳವು : ಪ್ರಕರಣ ದಾಖಲು

ಬೆಳ್ಳಾರೆ: ಸುಲಿದು ದಾಸ್ತಾನಿಟ್ಟಿದ್ದ ಐದು ಗೋಣಿ ಅಡಿಕೆ ಕಳವಾದ ಘಟನೆ ಸುಳ್ಯ ತಾಲೂಕಿನ ಕುಳ್ಳಂಪಾಡಿಯಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕಳವು ನಡೆದಿದ್ದು, ಕುಳ್ಳಂಪಾಡಿ ನಿವಾಸಿ ಹಿರಿಯಣ್ಣ ಗೌಡರು ಮೂರು ದಿನಗಳ ಹಿಂದೆ ಕುಟುಂಬ ಸಮೇತ ತನ್ನ ಅಕ್ಕನ ಮನೆಗೆ ಹೋದವರು ಮನೆಗೆ ಬಂದು ನೋಡಿದಾಗ ಸುಲಿದಿಟ್ಟಿದ್ದ ಅಡಿಕೆ ಐದು ಗೋಣಿ ಅಡಿಕೆ ಕಳವಾಗಿರುವುದು ಬೆಳಕಿ ಬಂದಿದೆ. ಕಳವಾದ ಅಡಿಕೆ ಮೌಲ್ಯ ಒಂದು ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಬೆಳ್ಳಾರೆ ಠಾಣೆಗೆ ದೂರು

ಐದು ಗೋಣಿ ಸುಲಿದ ಅಡಿಕೆ ಕಳವು : ಪ್ರಕರಣ ದಾಖಲು Read More »

ಅರುಣ್ ಕುಮಾರ್ ಪುತ್ತಿಲ ಮಂಗಳೂರು ಬಿಜೆಪಿ ಕಚೇರಿಗೆ ಭೇಟಿ | ಸ್ವಾಗತಿಸಿದ ಕಾರ್ಯಕರ್ತರು

ಮಂಗಳೂರು: ಅರುಣ್ ಕುಮಾರ್ ಪುತ್ತಿಲ ಇಂದು ಸಂಜೆ ಮಂಗಳೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಅವರನ್ನು ಶಾಲು ಹಾಕಿ ಸ್ವಾಗತಿಸಲಾಯಿತು. ಅರುಣ್ ಕುಮಾರ್ ಪುತ್ತಿಲ ಮಂಗಳೂರಿಗೆ ಭೇಟಿ ನೀಡುವ ಸುದ್ದಿ ತಿಳಿಯುತ್ತಿದ್ದಂತೆ ಹಲವಾರು ಕಾರ್ಯಕರ್ತರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಹಲವಾರು ಮಂದಿ ಬಿಜೆಪಿ ಕಚೇರಿ ಮುಂದೆ ಜಮಾಯಿಸಿದ್ದಾರೆ ಎನ್ನಲಾಗಿದೆ.

ಅರುಣ್ ಕುಮಾರ್ ಪುತ್ತಿಲ ಮಂಗಳೂರು ಬಿಜೆಪಿ ಕಚೇರಿಗೆ ಭೇಟಿ | ಸ್ವಾಗತಿಸಿದ ಕಾರ್ಯಕರ್ತರು Read More »

ನಾಗಬ್ರಹ್ಮ ಕೋಟಿ-ಚೆನ್ನಯ ಆದಿ ಬೈದೇರುಗಳ ಗರಡಿಯಲ್ಲಿ ಎಣ್ಮೂರು ಶಾಲಾ ಮಕ್ಕಳಿಂದ ಶ್ರಮದಾನ

ನಿಂತಿಕಲ್ಲು: ಮಾ. 23 ರಂದು ನಾಗಬ್ರಹ್ಮ ಕೋಟಿ ಚೆನ್ನಯ ಆದಿ ಬೈದೇರುಗಳ ಗರಡಿಯಲ್ಲಿ ನಡೆಯುವ ನೇಮೋತ್ಸವದ ಅಂಗವಾಗಿ ಸರಕಾರಿ ಪ್ರೌಢಶಾಲೆ ಎಣ್ಮೂರು ಶಾಲಾ ಸ್ಕೌಟ್-ಗೈಡ್ ಮಕ್ಕಳಿಂದ ಶ್ರಮದಾನ ನಡೆಯಿತು. ಎಣ್ಮೂರು ಶಾಲಾ ಸ್ಕೌಟ್-ಗೈಡ್ ನ 30 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಗರಡಿಯ ಸುತ್ತ ಮುತ್ತಲ ಪ್ರದೇಶದಲ್ಲಿರುವ ಗಿಡ-ಗಂಟಿಗಳು, ಕಸ ಕಡ್ಡಿಗಳನ್ನು ತೆರವುಗೊಳಿಸಿ ಶ್ರಮದಾನ ಮಾಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಶಿಕ್ಷಕರು, ಅಧ್ಯಾಪಕವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಾಗಬ್ರಹ್ಮ ಕೋಟಿ-ಚೆನ್ನಯ ಆದಿ ಬೈದೇರುಗಳ ಗರಡಿಯಲ್ಲಿ ಎಣ್ಮೂರು ಶಾಲಾ ಮಕ್ಕಳಿಂದ ಶ್ರಮದಾನ Read More »

ಸ್ಕೂಟರ್ ಕಳವು : ಪ್ರಕರಣ ದಾಖಲು

ಬಂಟ್ವಾಳ: ಗ್ಯಾರೇಜ್ ಒಂದರ ಬಳಿ ನಿಲ್ಲಿಸಲಾಗಿದ್ದ ಸ್ಕೂಟರ್ ಕಳವಾದ ಘಟನೆ ಬಂಟ್ವಾಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಮ್ಟಾಡಿ ಗ್ರಾಮದ ಜೈದುರ್ಗ ಗ್ಯಾರೇಜ್ ಬಳಿ ಸುರೇಶ್ ಎಂಬವರು ಆ್ಯಕ್ಸಿಸ್ ಸ್ಕೂಟರ್ ನಿಲ್ಲಿಸಿದ್ದರು. ಮರುದಿನ ಬಂದು ನೋಡಿದಾಗ ಸ್ಕೂಟರ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಕಳವಾದ ಸ್ಕೂಟರ್ ಮೌಲ್ಯ 45 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಕೂಟರ್ ಕಳವು : ಪ್ರಕರಣ ದಾಖಲು Read More »

ದ.ಕ. ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರನ್ನು ಆಶೀರ್ವದಿಸಿದ ಶ್ರೀ ಧರ್ಮಪಾಲನಾಥ ಸ್ವಾಮೀಜಿ

ಮಂಗಳೂರು: ಲೋಕಸಭೆ ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠಕ್ಕೆ ಶುಕ್ರವಾರ ಭೇಟಿ ನೀಡಿದರು. ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಗಳು ಕ್ಯಾ.ಬ್ರಿಜೇಶ್ ಚೌಟರನ್ನು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರನ್ನು ಆಶೀರ್ವದಿಸಿದ ಶ್ರೀ ಧರ್ಮಪಾಲನಾಥ ಸ್ವಾಮೀಜಿ Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ !

ಉಪ್ಪಿನಂಗಡಿ: ಗೋಳಿತೊಟ್ಟು ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಪಲ್ಟಿಯಾಗಿದ್ದು, ಕಾರು ಚಾಲಕ ಸಹಿತ ಮೂರು ಮಂದಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ! Read More »

ದ್ವಿತೀಯ ಪಿಯುಸಿ ಪರೀಕ್ಷೆ ದ.ಕ. ಜಿಲ್ಲೆಯಿಂದ 220 ವಿದ್ಯಾರ್ಥಿಗಳು ಗೈರು | ರಾಜ್ಯದಲ್ಲಿ ಶೇ.96.88 ಹಾಜರಾತಿ

ಮಂಗಳೂರು: ಬುಧವಾರ ನಡೆದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ 220 ವಿದ್ಯಾರ್ಥಿಗಳು ಗೈರಾಗಿದ್ದು, ರಾಜ್ಯದಿಂದ 20 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರಾಗಿದ್ದಾರೆ. ದ.ಕ.ಜಿಲ್ಲೆಯಿಂದ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿದ್ದ 35,753 ವಿದ್ಯಾರ್ಥಿಗಳ ಪೈಕಿ 35,533 ಮಂದಿ ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ರಾಜ್ಯದಿಂದ ಪರೀಕ್ಷೆಗೆ 6,64,395 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 6,43,659 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 20,736 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದು, ಶೇ.96.88ರಷ್ಟು ಹಾಜರಾತಿ ದಾಖಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ದ.ಕ. ಜಿಲ್ಲೆಯಿಂದ 220 ವಿದ್ಯಾರ್ಥಿಗಳು ಗೈರು | ರಾಜ್ಯದಲ್ಲಿ ಶೇ.96.88 ಹಾಜರಾತಿ Read More »

error: Content is protected !!
Scroll to Top