ದಕ್ಷಿಣ ಕನ್ನಡ

ಕೆ.ಎಸ್.ಎಸ್ ಕಾಲೇಜಿನಲ್ಲಿ ವಿಶ್ವ ಮಲೇರಿಯಾ ದಿನ ಆಚರಣೆ

ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಎನ್.ಎಸ್.ಎಸ್ ಘಟಕ ಮತ್ತು ಸುಳ್ಯ ತಾಲೂಕು ಆರೋಗ್ಯ ಅಧಿಕಾರಿ  ಕಛೇರಿ ಜಂಟಿಯಾಗಿ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮವನ್ನು ಏ.25 ಶುಕ್ರವಾರದಂದು  ಹಮ್ಮಿಕೊಳ್ಳಲಾಯಿತು.  ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಯಾದ ಡಾ. ತ್ರಿಮೂರ್ತಿ ಅವರು ಉಪಸ್ಥಿತರಿದ್ದರು. ತಾಲೂಕು ಆರೋಗ್ಯ  ಶಿಕ್ಷಣ ಅಧಿಕಾರಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಲೇರಿಯಾ ರೋಗವನ್ನು ತಡೆಗಟ್ಟುವುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಸುಬ್ರಹ್ಮಣ್ಯ ಆರೋಗ್ಯ ಕೇಂದ್ರದ ಹೆಲ್ತ್ ಇನ್ಸ್‍ಪೆಕ್ಟರ್ ಉಮರ್ ಖಾನ್ ಮತ್ತು […]

ಕೆ.ಎಸ್.ಎಸ್ ಕಾಲೇಜಿನಲ್ಲಿ ವಿಶ್ವ ಮಲೇರಿಯಾ ದಿನ ಆಚರಣೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವಿಟ್ಲ ಯೋಜನಾ  ಕಛೇರಿಗೆ ನೂತನ ಯೋಜನಾಧಿಕಾರಿಯಾಗಿ ಸುರೇಶ್ ಗೌಡ ನೇಮಕ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವಿಟ್ಲ ಯೋಜನಾ  ಕಛೇರಿಯಲ್ಲಿ ಕಳೆದ 1 ವರ್ಷಗಳಿಂದ ಕರ್ತವ್ಯ ಸಲ್ಲಿಸಿರುವ  ಯೋಜನಾಧಿಕಾರಿ ರಮೇಶ್ ರವರು  ಬೆಳ್ತಂಗಡಿ ಸಿ ಆರ್ ಇ ಗೆ ಪ್ರಾಂಶುಪಾಲರಾಗಿ ವರ್ಗಾವಣೆಗೊಂಡಿದ್ದಾರೆ. ಮುಂದಕ್ಕೆ ನೂತನ ಯೋಜನಾಧಿಕಾರಿ ಯಾಗಿ ನೇಮಕಗೊಂಡ ಸುರೇಶ್ ಗೌಡ ರವರಿಗೆ  ವಿಟ್ಲ ಯೋಜನಾ  ಕಚೇರಿಯಲ್ಲಿ  ಅಧಿಕಾರ ಹಸ್ತಾಂತರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವಿಟ್ಲ ಯೋಜನಾ  ಕಛೇರಿಗೆ ನೂತನ ಯೋಜನಾಧಿಕಾರಿಯಾಗಿ ಸುರೇಶ್ ಗೌಡ ನೇಮಕ Read More »

ಕರ್ತಕೋಡಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರ ದೈವಗಳ ಗಗ್ಗರ ಸೇವೆ

ಬಂಟ್ವಾಳ: ತಾಲೂಕಿನ ಬರಿಮಾರು ಕರ್ತಕೋಡಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರ ದೈವಗಳ ಗಗ್ಗರ ಸೇವೆ ಶುಕ್ರವಾರ ರಾತ್ರಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಶುಕ್ರವಾರ ಬೆಳಿಗ್ಗೆ ಗಣಹೋಮ, ನಾಗತಂಬಿಲ, ಮುಡಿಪು ಕಟ್ಟುವುದು, ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ಸಂಜೆ 5 ಗಂಟೆಗೆ ಭಂಡಾರ ಇಳಿದು ರಾತ್ರಿ ಅನ್ನಸಂತರ್ಪಣೆ ಜರಗಿತು. ಬಳಿಕ ಸತ್ಯದೇವತೆ ಕಲ್ಲುರ್ಟಿ ಪಂಜುರ್ಲಿ, ಚಾಮುಂಡಿ-ಗುಳಿಗ ರಾಹು-ಗುಳಿಗ ದೈವಗಳಿಗೆ ಗಗ್ಗರ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರು, ಸ್ಥಳೀಯರು ಉಪಸ್ಥಿತರಿದ್ದರು. ಇಂದು ರಾತ್ರಿ ದೈವಗಳಿಗೆ ವರ್ಷಾವಧಿ ಅಗೇಲು

ಕರ್ತಕೋಡಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರ ದೈವಗಳ ಗಗ್ಗರ ಸೇವೆ Read More »

ಲಾರಿ – ಗೂಡ್ಸ್ ವಾಹನಕ್ಕೆ ಡಿಕ್ಕಿ | ಡಿಕ್ಕಿಹೊಡೆದು ಲಾರಿ ಚಾಲಕ ಪರಾರಿ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ನರ್ಸರಿ ಬಳಿ ಲಾರಿಯೊಂದು ಗೂಡ್ಸ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಎ. 24ರಂದು ಸುಲ್ಕೇರಿ ನರ್ಸರಿ ಬಳಿ ನಡೆದಿದೆ. ಲಾರಿ ಚಾಲಕನ ದುಡುಕುತನದಿಂದ ರಸ್ತೆಯ ಬಲಬದಿಗೆ ಚಲಾಯಿಸಿದ ಪರಿಣಾಮ ನಾರಾವಿ ಕಡೆಯಿಂದ ಬರುತ್ತಿದ್ದ ಕಾಯರ್ತಡ್ಕ ಗ್ರಾಮದ ಕಳಂಜ ಮರಕಡ ನಿವಾಸಿ ಗಣೇಶ್ ಗೌಡ (49ವ)ರವರ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆ ನಂತರ ಲಾರಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾರೆ. ಅಪಘಾತದಿಂದ ಗಣೇಶ್ ಗೌಡರ ವಾಹನ ಜಖಂಗೊಂಡಿದರ ಜೊತೆಗೆ ಗಾಯವಾಗಿದೆ ಎನ್ನಲಾಗಿದೆ. ಉಜಿರೆಯ ಖಾಸಗಿ

ಲಾರಿ – ಗೂಡ್ಸ್ ವಾಹನಕ್ಕೆ ಡಿಕ್ಕಿ | ಡಿಕ್ಕಿಹೊಡೆದು ಲಾರಿ ಚಾಲಕ ಪರಾರಿ Read More »

ಕಾಶ್ಮೀರದ ಪಹಲ್ಗಾಮಾದಲ್ಲಿ ನಡೆದ ಹಿಂದೂಗಳ ಹತ್ಯೆ ಪ್ರಕರಣ ಖಂಡಿಸಿ ಬೆಳ್ಳಾರೆಯಲ್ಲಿ ಬೃಹತ್‍ ಪ್ರತಿಭಟನಾ ಮೆರವಣಿಗೆ | ಬೆಳ್ಳಾರೆ, ನಿಂತಿಕಲ್ಲು ಅಂಗಡಿ ಮಾಲಕರು, ಎಲ್ಲಾ ವಾಹನ ಚಾಲಕರು ಸಹಸ್ರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗಿ

ಬೆಳ್ಳಾರೆ: ದೇಶಭಕ್ತ ನಾಗರಿಕರು ಬೆಳ್ಳಾರೆ ವಲಯದಿಂದ ಕಾಶ್ಮೀರದ ಪಹಲ್ಗಾಮಾದಲ್ಲಿ ಉಗ್ರಗಾಮಿಗಳಿಂದ ಹತರಾದ ಹಿಂದೂ ಬಾಂಧವರಿಗೆ ಶ್ರದ್ಧಾಂಜಲಿ ಸಭೆ ಹಾಗೂ ಘಟನೆಯನ್ನು ಖಂಡಿಸಿ ಬೃಹತ್‍ ಪ್ರತಿಭಟನಾ ಮೆರವಣಿಗೆ ಬೆಳ್ಳಾರೆಯಲ್ಲಿ ಶುಕ್ರವಾರ ಸಂಜೆ ನಡೆಯಿತು. ಬೆಳ್ಳಾರೆ ಕೆಳಗಿನ ಪೇಟೆಯ ಶ್ರೀ ವೆಂಕಟ್ರಮಣ ದೇವಸ್ಥಾನದಿಂದ ಬಸ್‍ ನಿಲ್ದಾಣದ ವರೆಗೆ ನಾಗರಿಕರು ದೀಪ ಹಿಡಿದುಕೊಂಡು ಪ್ರತಿಭಟನಾ ಮೆರವಣಿಗೆ ನಡೆಸಿದರು.   ಸಾಮಾಜಿಕ ಕಾರ್ಯಕತ‍್ ಮೋಹನ್‍ ದಾಸ್‍ ಬಲ್ಕಾಡಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಬೆಳ್ಳಾರೆ ಮತ್ತು ನಿಂತಿಕಲ್ಲಿನ ಎಲ್ಲಾ ಅಂಗಡಿ ಮಾಲಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು

ಕಾಶ್ಮೀರದ ಪಹಲ್ಗಾಮಾದಲ್ಲಿ ನಡೆದ ಹಿಂದೂಗಳ ಹತ್ಯೆ ಪ್ರಕರಣ ಖಂಡಿಸಿ ಬೆಳ್ಳಾರೆಯಲ್ಲಿ ಬೃಹತ್‍ ಪ್ರತಿಭಟನಾ ಮೆರವಣಿಗೆ | ಬೆಳ್ಳಾರೆ, ನಿಂತಿಕಲ್ಲು ಅಂಗಡಿ ಮಾಲಕರು, ಎಲ್ಲಾ ವಾಹನ ಚಾಲಕರು ಸಹಸ್ರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗಿ Read More »

ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಯುವಕರು | ಸ್ಥಳಿಯರ ನೆರವಿನಿಂದ ಯುವಕರು ಪೋಲಿಸರ ಕೈವಶ

ಮಂಗಳೂರು : ಅನೇಕ ಕಡೆಗಳಲ್ಲಿ ಗೋ ಹತ್ಯೆ, ಗೋ ಸಾಗಾಟದ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇದೀಗ ಅಂತಹದ್ದೇ ಗೋ ಸಾಗಾಟ ಮಾಡುತ್ತಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೂಳೂರು ಸೇತುವೆಯ ಬಳಿಯಿಂದ ತಣ್ಣೀರು ಬಾವಿಗೆ ಹೋಗುವ ರಸ್ತೆಯಲ್ಲಿ ಅಕ್ರಮ ದನ ಸಾಗಾಟ ಮಾಡಲು  ಪ್ರಯತ್ನಿಸುತ್ತಿದ್ದ ಯುವಕರು ಪೊಲೀಸರ ವಶವಾದ ಘಟನೆ ನಿನ್ನೆ (ಏ.24) ತಡರಾತ್ರಿ ನಡೆದಿದೆ. ಯುವಕರು ಮೂರು ದನಗಳಿಗೆ ಆಹಾರ ನೀಡುತ್ತಾ ಅದನ್ನು ಹಿಡಿದು ವಾಹನದಲ್ಲಿ ತುಂಬಿಸಿ ಸಾಗಿಸುತ್ತಿದ್ದಾಗ ಸಂಶಯಗೊಂಡ ಸ್ಥಳೀಯರು ತಡೆದು ಪ್ರಶ್ನಿಸಿದ್ದಾರೆ. ಬಳಿಕ

ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಯುವಕರು | ಸ್ಥಳಿಯರ ನೆರವಿನಿಂದ ಯುವಕರು ಪೋಲಿಸರ ಕೈವಶ Read More »

ಹೆಸರಾಂತ ಕಬಡ್ಡಿ ಆಟಗಾರ ಕೋಕಿಲಾನಂದ ನಿಧನ

ಕಡಬ: ಅತ್ಯುತ್ತಮ ಹೆಸರಾಂತ ಕಬಡ್ಡಿ ಆಟಗಾರ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರೋ ಕಬಡ್ಡಿಯಲ್ಲಿ ಗಮನ ಸೆಳೆದಿದ್ದ ಕಡಬದ ಕೋಕಿಲಾನಂದ ಆಸ್ಪತ್ರೆಯಲ್ಲಿ ನಿಧನರಾದರು. ಇತ್ತೀಚೆಗೆ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಕೋಕಿಲಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಅವರ ಚಿಕಿತ್ಸೆಗೆ ಹಲವು ಧಾನಿಗಳು ಆರ್ಥಿಕ ಸಹಾಯವನ್ನು ನೀಡಿದ್ದರು. ಕೋಕಿಲಾನಂದ ಅವರು ಕಡಬ ನಿವಾಸಿಯಾಗಿದ್ದು, ಕೇವಲ ಕಬಡ್ಡಿ ಆಟ ಮಾತ್ರವಲ್ಲದೆ ಊರಿನ ಕೆಲವೊಂದು ಸಮಸ್ಯೆಗೆ ಹೋರಾಟ ಕೂಡಾ ನಡೆಸಿದ್ದರು. ಕಡಬದಲ್ಲಿ ಆನೆ ದಾಳಿಯ ಸಂದರ್ಭದಲ್ಲಿ ಅರಣ್ಯ ಅಧಿಕಾರಿಗಳ

ಹೆಸರಾಂತ ಕಬಡ್ಡಿ ಆಟಗಾರ ಕೋಕಿಲಾನಂದ ನಿಧನ Read More »

ಕೆ ಎಸ್ ಎಸ್ ಕಾಲೇಜಿನಲ್ಲಿ ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಚಾಪ್ಟರ್ ನಿಂದ ದತ್ತಿ ನಿಧಿ ಸ್ಥಾಪನೆ

ಕುಕ್ಕೆ  ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ  ಪೂರ್ವ ವಿದ್ಯಾರ್ಥಿ  ಸಂಘ ಬೆಂಗಳೂರು ಚಾಪ್ಟರ್ ವತಿಯಿಂದ ದತ್ತಿನಿಧಿ ಸ್ಥಾಪನೆ ಕಾರ್ಯಕ್ರಮವನ್ನು ಏ.21ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ .ಟಿ ವಹಿಸಿದರು. ಕಾರ್ಯಕ್ರಮದಲ್ಲಿ, ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಘಟಕವನ್ನು ಹುಟ್ಟು ಹಾಕಿದ ಕೆ ಎಸ್ ಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ ಕೆ ರಂಗಯ್ಯ ಶೆಟ್ಟಿಗಾರ್ ಅವರು ಈ ಘಟಕವು ಸಂಸ್ಥೆಯ ಹಲವಾರು ವಿದ್ಯಾರ್ಥಿಗಳಿಗೆ  ಉದ್ಯೋಗವನ್ನು,

ಕೆ ಎಸ್ ಎಸ್ ಕಾಲೇಜಿನಲ್ಲಿ ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಚಾಪ್ಟರ್ ನಿಂದ ದತ್ತಿ ನಿಧಿ ಸ್ಥಾಪನೆ Read More »

ಫೇಸ್‌ಬುಕ್‌ನಲ್ಲಿ ಪಹಲ್ಗಾಮ್‌ ದಾಳಿ ಸಮರ್ಥಿಸಿ ಪೋಸ್ಟ್‌

ಕೊಣಾಜೆಯ ವ್ಯಕ್ತಿಗಾಗಿ ಪೊಲೀಸರ ಶೋಧ ಮಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್​ ಹಾಕಿದ್ದ ಫೇಸ್‌ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು‌ ನೀಡಿದ ದೂರಿನ ಆಧಾರದ ಮೇಲೆ ಬಿಎನ್​ಎಸ್​ ಸೆಕ್ಷನ್ 192 ಮತ್ತು 353(1)(b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್​ಬುಕ್ ಪೇಜ್​ನ ಡಿಪಿ‌ಯಲ್ಲಿರುವ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ನಿಚ್ಚು ಮಂಗಳೂರು ಎಂಬ‌ ಫೇಸ್​ಬುಕ್​ ಪೇಜ್​ನಲ್ಲಿ, 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್​ನಲ್ಲಿ ಮೂವರು

ಫೇಸ್‌ಬುಕ್‌ನಲ್ಲಿ ಪಹಲ್ಗಾಮ್‌ ದಾಳಿ ಸಮರ್ಥಿಸಿ ಪೋಸ್ಟ್‌ Read More »

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಸುಳ್ಯದ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ **ಮನಸ್ಸು – ಮನುಷ್ಯನ ವ್ಯಕ್ತಿತ್ವದ ತಳಹದಿ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಏ. 25 ಶುಕ್ರವಾರದಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ.  ಇದನ್ನು ಮಂಗಳೂರು ಆಕಾಶವಾಣಿಯ  100.3FM ನಲ್ಲಿ ಆಲಿಸಬಹುದು. ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಇವರ ಭಾಷಣಗಳು,ಕವಿತೆಗಳು, ಅರೆಭಾಷೆ ಹಾಗೂ ತುಳು ಕಾರ್ಯಕ್ರಮಗಳು ಬಿತ್ತರಗೊಂಡುದುದಲ್ಲದೇ ಡಿ ಡಿ ಚಂದನದಲ್ಲೂ ತರಬೇತಿ ನೀಡಿದ ಹೆಗ್ಗಳಿಕೆ

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ Read More »

error: Content is protected !!
Scroll to Top