ದಕ್ಷಿಣ ಕನ್ನಡ

ಅನ್ಯಕೋಮಿನ ಯುವಕನ ಜೊತೆ ವಿದ್ಯಾರ್ಥಿನಿ ಪರಾರಿ : ಪೋಷಕರಿಂದ ದೂರು

ವಯನಾಡಿಗೆ ಹೋಗಿ ರಿಜಿಸ್ಟ್ರರ್‌ ಮದುವೆಯಾದ ಮಾಹಿತಿ ಮಂಗಳೂರು : ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿಯಾಗಿರುವ ಘಟನೆ ಮಂಗಳೂರಿನ ಸುರತ್ಕಲ್​​ನಲ್ಲಿ ನಡೆದಿದೆ. ಸುರತ್ಕಲ್​ನ ಮುಕ್ಕ ಕಾಲೇಜಿನಲ್ಲಿ ಓದುತ್ತಿದ್ದ ಕಾಸರಗೋಡು ಆರ್.ಡಿ‌.ನಗರದ ಮೀಪುಗುರಿ ನಿವಾಸಿಯಾದ ವೈಶಾಲಿ ಪರಾರಿಯಾಗಿದ್ದು, ಜನವರಿ 31ರಂದು ಮಿದ್ಲಾಜ್ ಜತೆ ರಿಜಿಸ್ಟ್ರರ್​ ಮದುವೆ ಆಗಿರುವ ಮಾಹಿತಿ ತಿಳಿದುಬಂದಿದೆ. ಮಗಳು ಸಂಪರ್ಕಕ್ಕೆ ಸಿಗದಿದ್ದರಿಂದ ಕಂಗಾಲಾಗಿರುವ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮನೆಯವರೆಗೆ ತಿಳಿಸದೆ ಜನವರಿ 31ರಂದು ಕೇರಳದ ವಯನಾಡು ನೋಂದಣಾಧಿಕಾರಿ ಕಚೇರಿಯಲ್ಲಿ ವೈಶಾಲಿ ಹಾಗೂ […]

ಅನ್ಯಕೋಮಿನ ಯುವಕನ ಜೊತೆ ವಿದ್ಯಾರ್ಥಿನಿ ಪರಾರಿ : ಪೋಷಕರಿಂದ ದೂರು Read More »

ಮದುವೆಯಾಗುವುದಾಗಿ ನಂಬಿಸಿ ಯುವತಿಯರಿಂದ ಹಣ ಪಡೆದು ವಂಚನೆ : ನಕಲಿ ಅಳಿಯ-ಮಾವ ಸೆರೆ

ಮಂಗಳೂರು, ಉಡುಪಿ, ಕಾರ್ಕಳದ 9 ಯುವತಿಯರಿಗೆ ವಂಚಿಸಿರುವ ಆರೋಪಿಗಳು ಮಂಗಳೂರು : ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಲ್ಲಿ ಯುವತಿಯರನ್ನು ವಂಚಿಸುತ್ತಿದ್ದ ಆರೋಪಿ ಹಾಗೂ ಅವನಿಗೆ ಸಹಾಯ ಮಾಡುತ್ತಿದ್ದವನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ಲಿ ವರ ಹುಡುಕುತ್ತಿದ್ದ ಯುವತಿಯರನ್ನು ಗುರಿಯಾಗಿಸಿಕೊಂಡು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ ಪ್ರಕರಣ ಇವರಿಬ್ಬರ ಬಂಧನದಿಂದ ಬೆಳಕಿಗೆ ಬಂದಿದೆ. ಬಂಧಿತನನ್ನು ಸುಶಾಂತ್ ಪೂಜಾರಿ ಎಂದು ಗುರುತಿಸಲಾಗಿದ್ದು, ಈತನ ವಂಚನೆಗೆ ಸಾಥ್ ನೀಡಿದ್ದ ಮೂಲ್ಕಿ ನಿವಾಸಿ ಭಾಸ್ಕರ್‌ನನ್ನೂ ಪೊಲೀಸರು ಬಂಧಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಯುವತಿಯರಿಂದ ಹಣ ಪಡೆದು ವಂಚನೆ : ನಕಲಿ ಅಳಿಯ-ಮಾವ ಸೆರೆ Read More »

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ನಿಧನ

ವಿಟ್ಲ: ಅಪಘಾತವೊಂದರಲ್ಲಿ ‌ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪುರುಷೋತ್ತಮ ಆಚಾರ್ಯ ಕೈಂತಿಲ(68) ಎಂದು ಗುರುತಿಸಲಾಗಿದೆ. ಅವರಿಗೆ ಕೆಲ ದಿನಗಳ ಹಿಂದೆ ಮಂಗಿಲಪದವು ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿತ್ತು. ಮೃತರು ಪತ್ನಿ, ನಾಲ್ವರು ಪುತ್ರರನ್ನು ಅಗಲಿದ್ದಾರೆ.ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ನಿಧನ Read More »

ಎಪಿಕೆ ಫೈಲ್‌ ಡೌನ್‌ಲೋಡ್‌ ಮಾಡಿ 10 ಲ. ರೂ. ಕಳೆದುಕೊಂಡ ವ್ಯಕ್ತಿ

ವ್ಯವಹಾರ ಮಾಡದಿದ್ದರೂ ಖಾತೆಯಿಂದ ಹಣ ಲಪಟಾಯಿಸಿದ ವಂಚಕರು ಮಂಗಳೂರು : ಬರೀ ಎಪಿಕೆ ಫೈಲ್‌ ಡೌನ್‌ಲೋಡ್‌ ಮಾಡಿದ ಬಳಿಕ ವ್ಯಕ್ತಿಯೊಬ್ಬರು 10 ಲ.ರೂ. ಕಳೆದುಕೊಂಡ ಕುರಿತು ದೂರು ದಾಖಲಾಗಿದೆ. ಅಪರಿಚಿತರು ಕಳುಹಿಸಿದ ಎಪಿಕೆ ಲಿಂಕ್ ಡೌನ್ಲೋಡ್ ಮಾಡಿದ ವ್ಯಕ್ತಿಯ ಖಾತೆಯಿಂದ 10 ಲ.ರೂ. ಲಪಟಾಯಿಸಿದ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.5ರಂದು ತನಗೆ ಬಂದ ಎಪಿಕೆ ಲಿಂಕ್ ಅನ್ನು ಡೌನ್ಲೋಡ್ ಮಾಡಿದ್ದೆ. ಅದರಲ್ಲಿ ತನ್ನ ಮೊಬೈಲ್ ನಂಬರ್ ನಮೂದಿಸಿದ್ದರು. ನಂತರ ಮತ್ತೊಂದು ಮೊಬೈಲ್ ಸಂಖ್ಯೆಯಿಂದ

ಎಪಿಕೆ ಫೈಲ್‌ ಡೌನ್‌ಲೋಡ್‌ ಮಾಡಿ 10 ಲ. ರೂ. ಕಳೆದುಕೊಂಡ ವ್ಯಕ್ತಿ Read More »

ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನ

ಬೆಳ್ತಂಗಡಿ: ಕಾರಿನಲ್ಲಿ ಬಂದ ಮೂವರು ಅಪರಿಚಿತ ದುಷ್ಟರು ‌ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ಯುವತಿಯನ್ನು ಅಪಹರಿಸಲು ಯತ್ನಿಸಿದ ಘಟನೆ ಸುದೇಮುಗೇರು ಎಂಬಲ್ಲಿ ನಡೆದಿದೆ. ಈ ವೇಳೆ ಯುವತಿ ತೋರಿದ ಪ್ರತಿರೋಧ ಹಾಗೂ ಸಮಯ ಪ್ರಜ್ಞೆಯಿಂದಾಗಿ ಕಿಡ್ನಾಪರ್ಸ್ ಪ್ರಯತ್ನ ವಿಫಲವಾಗಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಿಸುವ ಪ್ರಯತ್ನ ಇದಾಗಿದ್ದು, ಕಾರಿನ ನಂಬರ್ ಪ್ಲೇಟ್ ಕಾಣದಂತೆ ದುಷ್ಟರು ಅದಕ್ಕೆ ಬಟ್ಟೆ ಕಟ್ಟಿದ್ದರು ಎಂದು ತಿಳಿದು ಬಂದಿದೆ. ಕಾರಿನಿಂದ ಇಳಿದ ದುಷ್ಕರ್ಮಿಗಳು ಆಕೆಯನ್ನು ಬಲವಂತವಾಗಿ ಕಾರಿನೊಳಕ್ಕೆ ಹಾಕಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ

ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನ Read More »

ವಿವಾಹವಾಗುವುದಾಗಿ ನಂಬಿಸಿ, ಮಗು ಕೊಟ್ಟು ಕೈಕೊಟ್ಟ ಪ್ರಕರಣ: ಆರೋಪಿ ಕೃಷ್ಣರಾವ್ ತಂದೆಗೆ ಕೊಂಚ ರಿಲೀಫ್

ಬೆಂಗಳೂರು: ಪುತ್ತೂರಿನಲ್ಲಿ ಯುವತಿಗೆ ಮದುವೆಯಾಗದೆ ಮಗು ಕೊಟ್ಟು ಮೋಸ ಮಾಡಿದ ಪುತ್ರನಿಗೆ ಆಶ್ರಯ ನೀಡಿರುವ ಆರೋಪ ಎದುರಿಸುತ್ತಿರುವ ಪಿ. ಜಿ. ಜಗನ್ನಿವಾಸ ರಾವ್ ಅವರಿಗೆ ಹೈಕೋರ್ಟ್ ಕೊಂಚ ರಿಲೀಫ್ ನೀಡಿದೆ. ಜಗನ್ನಿವಾಸ್ ರಾವ್ ವಿರುದ್ಧದ ಕಾನೂನು ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕಳೆದ ಜೂನ್ ತಿಂಗಳಿನಲ್ಲಿ ಪುತ್ತೂರು ಮಹಿಳಾ ಠಾಣೆಯಲ್ಲಿ ಯುವತಿಯೊಬ್ಬಳು ಕೃಷ್ಣ ಜೆ. ರಾವ್ ಎಂಬ ಯುವಕ ಮದುವೆಯಾಗುವುದಾಗಿ ನಂಬಿಸಿ, ಮಗು ಕರುಣಿಸಿ ಬಳಿಕ ಮೋಸ ಮಾಡಿದ್ದಾನೆ ಎಂದು ದೂರು ನೀಡಿದ್ದಳು. ದೂರು ದಾಖಲಾಗುತ್ತಿದ್ದ ಹಾಗೆ

ವಿವಾಹವಾಗುವುದಾಗಿ ನಂಬಿಸಿ, ಮಗು ಕೊಟ್ಟು ಕೈಕೊಟ್ಟ ಪ್ರಕರಣ: ಆರೋಪಿ ಕೃಷ್ಣರಾವ್ ತಂದೆಗೆ ಕೊಂಚ ರಿಲೀಫ್ Read More »

ಹುಲಿಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವ

ಕಡಬ: ಶ್ರೀ ಹುಲಿಚಾಮುಂಡಿ ಮತ್ತು ಪರಿವಾರ ದೈವಗಳ ದೈವಸ್ಥಾನ ಕಾರಣಿಕ ಕ್ಷೇತ್ರ ಬದಿಬಾಗಿಲು, ನೂಜಿಬಾಳ್ತಿಲ, ಕಡಬ ಇಲ್ಲಿಯ ವಾರ್ಷಿಕ ನೇಮೋತ್ಸವ ಫೆ. 14 ರಂದು ನಡೆಯಲಿದೆ. ಬೆಳಿಗ್ಗೆ ನಾಗ ರಕ್ತೇಶ್ವರಿ ಬನದಲ್ಲಿ ತಂಬಿಲ ಸೇವೆ ನಡೆದು, ಕ್ಷೇತ್ರದಲ್ಲಿ ಗಣಪತಿ ಹವನ, ದೈವಗಳಿಗೆ ಕಳಶಾಭಿಷೇಕ, ತಂಬಿಲ ಸೇವೆ ನಡೆಯಲಿದೆ. ಸಂಜೆ ಗಂಟೆ 6 ಕ್ಕೆ ಭಂಡಾರ ಹಿಡಿಯುವುದು, 7.30ರಿಂದ ಅನ್ನಸಂತರ್ಪಣೆ, ರಾತ್ರಿ ಗಂಟೆ 8.30ಕ್ಕೆ ಕಾರಣಿಕ ಕ್ಷೇತ್ರದ ಪ್ರಧಾನ ದೈವ ಹುಲಿ ಚಾಮುಂಡಿ ದೈವದ ನೇಮೋತ್ಸವ, ಬಂಡಿ ಉತ್ಸವ,

ಹುಲಿಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವ Read More »

ಅತ್ಯಾಚಾರ ಎಸಗಿ ಕೊಲೆ : ಅಪರಾಧಿಗಳ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌

ಮಂಗಳೂರಿನ ವಾಮಂಜೂರಿನಲ್ಲಿ 5 ವರ್ಷದ ಹಿಂದೆ ನಡೆದಿದ್ದ ಪೈಶಾಚಿಕ ಕೃತ್ಯ ಬೆಂಗಳೂರು: ಐದು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಹೈಕೋರ್ಟ್‌ ಕಾಯಂಗೊಳಿಸಿದೆ. ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೆ, ಕತ್ತು ಹಿಸುಕಿ ಕೊಲೆ ಮಾಡಿದ ಅಪರಾಧಿಗಳ ಶಿಕ್ಷೆ ಪ್ರಮಾಣ ಕಡಿಮೆ ಮಾಡಿದಲ್ಲಿ ಅಂತಹ ಕೃತ್ಯಗಳನ್ನು ಪ್ರೋತ್ಸಾಹಿಸಿದಂತಾಗಲಿದ್ದು, ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಕಾಯಂಗೊಳಿಸಲು ಕೋರಿ ರಾಜ್ಯ ಸರ್ಕಾರ

ಅತ್ಯಾಚಾರ ಎಸಗಿ ಕೊಲೆ : ಅಪರಾಧಿಗಳ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌ Read More »

ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಪುತ್ತೂರಿನಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ದಾಖಲಾಗಿದ್ದ ಕೇಸ್‌ ಬೆಂಗಳೂರು: ಕೋಮು ದ್ವೇಷದ ಮಾತುಗಳನ್ನಾಡಿದ ಸಂಬಂಧ ಯೂಟ್ಯೂಬ್‌ ಚಾನಲ್‌ನಲ್ಲಿ ಪ್ರಸಾರವಾದ ವಿಡಿಯೋ ಆಧರಿಸಿ ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಪ್ರಭಾಕರ್‌ ಭಟ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಪ್ರಭಾಕರ್‌ ಭಟ್‌ ಭಾಷಣ

ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ Read More »

ಬಾರ್ಯ ಕ್ಷೇತ್ರದಲ್ಲಿ ಜಾಂಬವತಿ ಕಲ್ಯಾಣ ತಾಳಮದ್ದಳೆ

ಉಪ್ಪಿನಂಗಡಿ: ಬಾರ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಅಧ್ಯಕ್ಷ ಡಾ. ಶ್ರೀಪತಿ ಕಲ್ಲುರಾಯ ಅವರ ಪ್ರಾಯೋಜಕತ್ವದಲ್ಲಿ ಜಾಂಬವತಿ ಕಲ್ಯಾಣ ತಾಳಮದ್ದಳೆ ಜರಗಿತು. ಭಾಗವತರಾಗಿ ನಾರಾಯಣ ಶಬರಾಯ ಉಡುಪಿ, ಪದ್ಯಾಣ ಜಯರಾಮ್ ಭಟ್ ಮತ್ತು ಮುರಳಿಧರ ಕಲ್ಲೂರಾಯ , ಬಲರಾಮನಾಗಿ ಡಾ. ಶ್ರೀಪತಿ ಕಲ್ಲೂರಾಯ, ಶ್ರೀ ಕೃಷ್ಣನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಜಾಂಬವಂತನಾಗಿ ಗಣರಾಜ ಕುಂಬಳೆ, ಜಾಂಬವತಿಯಾಗಿ ರಾಜಶ್ರೀ ಶಬರಾಯ ಉಡುಪಿ ಭಾಗವಹಿಸಿದ್ದರು. ದೇವಳದ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ

ಬಾರ್ಯ ಕ್ಷೇತ್ರದಲ್ಲಿ ಜಾಂಬವತಿ ಕಲ್ಯಾಣ ತಾಳಮದ್ದಳೆ Read More »

error: Content is protected !!
Scroll to Top