ದಕ್ಷಿಣ ಕನ್ನಡ

ಅಡ್ಯನಡ್ಕದಲ್ಲಿ ಹಲ್ಲೆ ಪ್ರಕರಣ: ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಅಡ್ಯನಡ್ಕದಲ್ಲಿ ಇತ್ತೀಚೆಗೆ ನಡೆದ ಯುವಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಠಾಣೆಯಲ್ಲಿ ಇತ್ತಂಡಗಳ ವಿರುದ್ಧ ದೂರು ದಾಖಲಾಗಿದೆ. ಅಡ್ಯನಡ್ಕ ನಿವಾಸಿ ಮಹಮ್ಮದಾಲಿ ಎ. (36) ಎಂಬವರು ನೀಡಿದ ದೂರಿನಂತೆ ಗಣೇಶ್ ಎಂಬವರು ಮನೆಯ ಬಳಿ ಬಂದು ಹಣದ ವಿಚಾರದಲ್ಲಿ ತಕರಾರು ತೆಗೆದು ಅವ್ಯಾಚವಾಗಿ ನಿಂದಿಸಿ, ಕತ್ತಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದು, ಸ್ಥಳೀಯರು ಬಂದಾಗ ಪರಾರಿಯಾಗಿರುತ್ತಾನೆ ಎಂದು ಪ್ರಕರಣ ದಾಖಲಾಗಿದೆ. ಈ ನಡುವೆ ಗಣೇಶ್ ಅವರು ಮಹಮ್ಮದಾಲಿ ಕತ್ತಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆಂದು […]

ಅಡ್ಯನಡ್ಕದಲ್ಲಿ ಹಲ್ಲೆ ಪ್ರಕರಣ: ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು Read More »

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮತದಾರರ ಜಾಗೃತಿ ಅಭಿಯಾನ

ಕುಂತೂರು: ಚುನಾವಣಾ ಆಯೋಗವು ಸಮಾಜದ ಪ್ರತಿಯೊಂದು ವರ್ಗವು ಮತ ಚಲಾಯಿಸಬೇಕು ಎಂಬ ಗುರಿಯನ್ನು ಹೊಂದಿದೆ. ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳುವಂತಾಗಬೇಕು. ಭಾರತದ ಬೆನ್ನೆಲುಬಾಗಿರುವ ಯುವ ಜನಾಂಗವು ಕಡ್ಡಾಯವಾಗಿ ಮತದಾನ ಮಾಡುವ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನು ನಿರ್ಮಿಸಬೇಕು ಎಂದು ಪುತ್ತೂರು ತಾಲೂಕು ಮಟ್ಟದ ಸ್ವೀಪ್ ಸಮಿತಿ ತರಬೇತುದಾರ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಲಕ್ಷ್ಮೀಕಾಂತ ರೈ ಅನಿಕೂಟೇಲು ಹೇಳಿದರು. ಕಡಬ ತಾಲೂಕಿನ ಕುಂತೂರಿನಲ್ಲಿರುವ

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮತದಾರರ ಜಾಗೃತಿ ಅಭಿಯಾನ Read More »

ಅನಾರೋಗ್ಯದಿಂದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು !

ಸುಳ್ಯ: ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರೊಬ್ಬರು ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದಲ್ಲಿ ನಡೆದಿದೆ. ಐವತ್ತೊಕ್ಲು ಗ್ರಾಮದ ಮೇಲ್ಪಾಡಿಯ ಚಂದ್ರಶೇಖರ ಮೇಲ್ಪಾಡಿ (35) ಮೃತಪಟ್ಟವರು. ಹೊಟ್ಟೆನೋವಿನಿಂದ ಬಳಲಿದ್ದ ಅವರನ್ನು ಕಾಣಿಯೂರು ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮೃತರು ಐವತ್ತೊಕ್ಲು ಗ್ರಾಮದ ಒಂದನೇ ವಾರ್ಡ್‍ ಬೂತ್ ಅಧ್ಯಕ್ಷರಾಗಿ, ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು.

ಅನಾರೋಗ್ಯದಿಂದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು ! Read More »

ಒಡಿಯೂರು ಶ್ರೀಗಳಿಂದ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ದ.ಕ. ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಬಳಿಕ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರಕ್ಕೆ ಭೇಟಿ ನೀಡಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

ಒಡಿಯೂರು ಶ್ರೀಗಳಿಂದ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ Read More »

ಸ್ಪೋಟಕ ಬಳಸಿ ಕಲ್ಲು ಸ್ಪೋಟ | ಮನೆಗೆ ಹಾನಿ : ಠಾಣೆಗೆ ದೂರು

ಕಡಬ: ಸ್ಪೋಟಕ ಬಳಸಿ ಕಲ್ಲು ಒಡೆಯುತ್ತಿರುವ ಪರಿಣಾಮ ಮನೆಗಳಿಗೆ ಹಾನಿಯುಂಟಾಗುವುದರ ಜತೆ ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಸ್ಪೋಟಕ ನಡೆಸುವವರ ವಿರುದ್ಧ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಕುಕ್ಕಿಪ್ಪನ ಮನೆ ನಿವಾಸಿ ಆನಂದ ಗೌಡ ಎಂಬವರು ಈ ಕುರಿತು ಠಾಣೆಗೆ ದೂರು ನೀಡಿದ್ದು, ಸಮೀಪದ ನಿವಾಸಿ ದಯಾನಂದ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಏನೆಕಲ್ಲು ಗ್ರಾಮದ ಅಜಿರುಪೊಲಿ ಎಂಬಲ್ಲಿ ಕಳೆದ ಎರಡು ತಿಂಗಳಿನಿಂದ ಅಕ್ರಮ ಸ್ಪೋಟಕಗಳನ್ನು ಬಳಸಿ ಕಲ್ಲುಗಳನ್ನು ಒಡೆದು ಸೈಜುಕಲ್ಲುಗಳನ್ನಾಗಿ

ಸ್ಪೋಟಕ ಬಳಸಿ ಕಲ್ಲು ಸ್ಪೋಟ | ಮನೆಗೆ ಹಾನಿ : ಠಾಣೆಗೆ ದೂರು Read More »

ಕುಂಜಾರಮ್ಮ ಕುಕ್ಕುಂದೂರು ನಿಧನ

ಸುಳ್ಯ: ಕುಂಜಾರಮ್ಮ ಕುಕ್ಕುಂದೂರು (79) ಇಂದು ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಅವರು ನಿಧನರಾಗಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

ಕುಂಜಾರಮ್ಮ ಕುಕ್ಕುಂದೂರು ನಿಧನ Read More »

ನೇಲ್ಯಡ್ಕ ಶಾಲೆಯಲ್ಲಿ ನಡೆದ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ 2024ನೇ ಸಾಲಿನ ಎನ್‍.ಎಸ್‍.ಎಸ್‍ ವಾರ್ಷಿಕ ಶಿಬಿರ

ಸವಣೂರು: ಸವಣೂರು ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2024ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಭಾನುವಾರ ಕಡಬ ತಾಲೂಕಿನ ನೇಲ್ಯಡ್ಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸುಬ್ರಹ್ಮಣ್ಯ ಕಣ್ಕಲ್ ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ನಿರಂಜನ್ ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕೆ.ರಘುನಾಥ ರೈ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಗ್ರಾಮದಲ್ಲಿ ಬರುವ ಏಳು ಶಾಲೆಗಳ ಪೈಕಿ ಆರು ಶಾಲೆಗಳಲ್ಲಿ ಮಾತ್ರ

ನೇಲ್ಯಡ್ಕ ಶಾಲೆಯಲ್ಲಿ ನಡೆದ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ 2024ನೇ ಸಾಲಿನ ಎನ್‍.ಎಸ್‍.ಎಸ್‍ ವಾರ್ಷಿಕ ಶಿಬಿರ Read More »

ಮನೆಯ ಮಹಡಿಯಿಂದ ಬಿದ್ದು ಬಾಲಕ ಮೃತ್ಯು !

ಬಂಟ್ವಾಳ: ಬಾಲಕನೋರ್ವ ಮನೆಯ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಎಂಬವರ ಪುತ್ರ ಆದಿಶ್ (15) ಮೃತಪಟ್ಟ ಬಾಲಕ. ಆದಿಶ್ ತನ್ನ ಮನೆಯ ಮಹಡಿಯಲ್ಲಿ ಮಲಗಿದ್ದು, ಮುಂಜಾನೆ ಎದ್ದು ಮೊಬೈಲ್‍ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡಿದಾಗ ಮಹಡಿಯಿಂದ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಆತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತಂದಾಗ ಅದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ.ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಯ ಮಹಡಿಯಿಂದ ಬಿದ್ದು ಬಾಲಕ ಮೃತ್ಯು ! Read More »

ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜನೆ | ಚುನಾವಣಾ ಆಯೋಗದಿಂದ ನೋಟೀಸ್

ಮಂಗಳೂರು: ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆಯೋಜಕರಿಗೆ ಚುನಾವಣಾ ಆಯೋಗ ನೋಟೀಸ್ ಜಾರಿ ಮಾಡಿದೆ. ಮಂಗಳೂರಿನ ಮುಡಿಪು ನಲ್ಲಿ ಒಂದು ಬದಿಯ ರಸ್ತೆಯನ್ನು ತಡೆಮಾಡಿ ಚಯರ್‍ ಗಳನ್ನು ಅಳವಡಿಸಿ ಇಫ್ತಾರ್ ಕೂಟ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಹಿಜಾಂವೇ ಆಯೋಜಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಅದರಂತೆ ಇದೀಗ ಚುನಾವಣಾ ಆಯೋಗ ನೋಟೀಸ್ ಜಾರಿ ಮಾಡಿದೆ.

ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜನೆ | ಚುನಾವಣಾ ಆಯೋಗದಿಂದ ನೋಟೀಸ್ Read More »

ಕಾಪು ಮಹಿಳಾ ಪಿಸಿ ಆತ್ಮಹತ್ಯೆ : ಪತಿ ಬಂಧನ

ಕಾಪು: ಪೋಲಿಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಅವರ ಪತಿ ರವಿಕುಮಾರ್ (35) ಅವರನ್ನು  ಕಾಪು ಪೋಲಿಸರು ಬಂಧಿಸಿದ್ದಾರೆ. ಆತ್ಮಹತ್ಯೆಗೈದ ಬಳಿಕ ಜ್ಯೋತಿ ಅವರ ಕೊಠಡಿಯಲ್ಲಿ ಡೈರಿಯೊಂದು ಸಿಕ್ಕಿದ್ದು  ಅದರಲ್ಲಿ ಆಕೆ  ತನ್ನ ಆತ್ಮಹತ್ಯೆಗೆ ನನ್ನ ಗಂಡನ ಸಂಶಯ ಪ್ರವೃತ್ತಿಯೇ ಕಾರಣ ಎಂದು ಬರೆದುಕೊಂಡಿದ್ದಾಗಿ ಆಕೆಯ ತಾಯಿ ದೇವಮ್ಮ ವಿಟ್ಲಾಪುರ ಪೋಲಿಸರಿಗೆ ದೂರು ನೀಡಿದ್ದಾರೆ. ಈ  ಹಿನ್ನಲೆಯಲ್ಲಿ ಪೋಲೀಸರು ಶನಿವಾರ ತಡರಾತ್ರಿ ಆಕೆಯ ಪತಿಯನ್ನು ಬಂಧಿಸಿದ್ದಾರೆ.

ಕಾಪು ಮಹಿಳಾ ಪಿಸಿ ಆತ್ಮಹತ್ಯೆ : ಪತಿ ಬಂಧನ Read More »

error: Content is protected !!
Scroll to Top