ದಕ್ಷಿಣ ಕನ್ನಡ

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ  ಪ್ರಶಸ್ತಿ  ಪ್ರದಾನ

ಸುಳ್ಯ: ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ ಪ್ರಶಸ್ತಿಯನ್ನು ಮಾ.29 ರಂದು ಬೆಂಗಳೂರಿನ ಬಾಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ  ನಡೆದ ವಿಶ್ವ ಕನ್ನಡ ರಾಜ್ಯ ಮಟ್ಟದ  ಪ್ರಥಮ ಮಹಿಳಾ ಸಮ್ಮೇಳನದಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷೆ ಕಮಲ ರಾಜೇಶ್, ಸಮಾಜ ಸೇವಕಿ, ಸೂರಜ್ ಫೌಂಡೇಷನ್ ಸಂಸ್ಥಾಪಕಿ ಸುಜಾತ ಎಸ್ ಮುನಿರಾಜು, […]

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ  ಪ್ರಶಸ್ತಿ  ಪ್ರದಾನ Read More »

ಆನೆ ದಾಳಿ | ತೆಂಗು, ಅಡಿಕೆ, ಬಾಳೆಗಿಡಗಳ ನಾಶ

ಸುಳ್ಯ: ತಾಲೂಕಿನ ಪೇರಲ್‍ ಗುತ್ತು ಎಂಬಲ್ಲಿ ಆನೆ ದಾಳಿ ಮಾಡಿ ಕೃಷಿ ನಾಶಗೊಳಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಪೇರಲ್‍ ಗುತ್ತು ದಿ.ಬಾಲಕೃಷ್ಣ ಭಂಡಾರಿ ಅವರ ಮನೆಗೆ ಆನೆ ದಾಳಿ ಮಾಡಿದ್ದು,  10 ರಿಂದ 15 ತೆಂಗಿನ ಮರ, ಅಡಿಕೆ ಮರ, ಬಾಳೆ ಗಿಡ ಸಹಿತ ಇತರ ಕೃಷಿಗಳಿಗೆ ಹಾನಿಯಾಗಿದೆ. ಇಂದು ಮುಂಜಾನೆ ಹಠಾತ್ ಆನೆಯೊಂದು ದಾಳಿ ಮಾಡಿದ್ದು, ಕೃಷಿಗೆ ಹಾನಿ ಮಾಡಿ ಬಳಿಕ ಅಲ್ಲಿಂದ ಕಾಲ್ಕಿತ್ತಿದೆ.

ಆನೆ ದಾಳಿ | ತೆಂಗು, ಅಡಿಕೆ, ಬಾಳೆಗಿಡಗಳ ನಾಶ Read More »

ತಾಯಿ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ

ಪುತ್ತೂರು: ತಾಯಿ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಡ್ಯಾರ್ ಪದವು ನಿವಾಸಿ ಚೈತ್ರ, ಹಾಗೂ ಒಂದು ವರ್ಷದ ಮಗು ದಿಯಾಂಶ್‍ ಎಂಬವರ ಮೃತದೇಹ ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. ಶುಕ್ರವಾರ ಮಧ್ಯಾಹ್ನ ತಾಯಿ-ಮಗು ನಾಪತ್ತೆಯಾಗಿದ್ದ ಹಿನ್ನಲೆಯಲ್ಲಿ ಹುಡುಕಾಟಕ್ಕೆ ಸಂಬಂಧಿಕರು ಮನವಿ ಮಾಡಿದ್ದರು. ಈ ನಡುವೆ ಶುಕ್ರವಾರವೇ ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬವನ್ನು ದೇರಳಕಟ್ಟೆ ಸೇವಾಶ್ರಮದಲ್ಲಿ ಆಚರಿಸಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ.

ತಾಯಿ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ | ಓರ್ವ ಮೃತ್ಯು, ಇಬ್ಬರಿಗೆ ಗಾಯ

ಬೆಳ್ತಂಗಡಿ: ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾದ ಪರಿಣಾಮ ಕಾರು ಪಲ್ಟಿಯಾಗಿ ಓರ್ವರು ಮೃತಪಟ್ಟು,, ಇಬ್ಬರು ಗಾಯಗೊಂಡ  ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ನಡೆದಿದೆ. ಲಾಯಿಲ ಮೋರ್ನಿಂಗ್ ಸ್ಟಾರ್ ನಿವಾಸಿ ವಿವಿ ಮ್ಯಾಥ್ಯೂ ಅವರ ಪುತ್ರ ಕಾರು ಚಾಲಕ ಪ್ರೈಸ್ ಮ್ಯಾಥ್ಯೂ (32) ಮೃತಪಟ್ಟವರು. ಇಬ್ಬರು ಗಾಯಗೊಂಡಿದ್ದಾರೆ. ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ | ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »

ಕೊಕ್ಕೊ ಧಾರಣೆ ಏರಿಕೆ : ರೈತರ ಮುಖದಲ್ಲಿ ಸಂತಸ

ಸುಳ್ಯ: ರೈತರ ಪಾಲಿನ ಆಶಾದಾಯಕ ಬೆಳೆ ಎನಿಸಿರುವ ಕೊಕ್ಕೊ ದರ ಇತಿಹಾಸದಲ್ಲೇ ಕೆ.ಜಿಗೆ ಡಬಲ್ ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದ್ದು, ಸಾರ್ವಕಾಲಿಕ ದಾಖಲೆ ಬರೆದಿದೆ. ಅತೀ ಹೆಚ್ಚು ಕೊಕ್ಕೊ ಬೆಳೆಯುವ ಪ್ರದೇಶಗಳಲ್ಲಿ ಸುಳ್ಯವೂ ಒಂದು. ರೈತರ ಪಾಲಿಗಿಂದು ಆಶಾದಾಯಕ ಬೆಳೆಯಾಗಿ ಆದಾಯ ಒದಗಿಸುತ್ತಿದೆ. ಈ ಮೊದಲು ಅಡಕೆ ದರ ಏರುತ್ತಾ ಹೋದಾಗ ಕೊಕ್ಕೊ ದರ ಕುಂಟುತ್ತಲೇ ಸಾಗಿತ್ತು. ಮಾ.27ರಂದು ಸುಳ್ಯದಲ್ಲಿ ಕೆಜಿಗೆ 215 ರೂ.ಗೆ ಖರೀದಿಸಲಾಗುತ್ತಿದೆ. ಉತ್ತಮ ದರ ಇದ್ದರೂ ಕೊಕ್ಕೊ ಬೆಳೆ ಫಸಲು ಕಡಿಮೆ ಆಗಿರುವ ಕಾರಣ

ಕೊಕ್ಕೊ ಧಾರಣೆ ಏರಿಕೆ : ರೈತರ ಮುಖದಲ್ಲಿ ಸಂತಸ Read More »

ಕಡಬದಲ್ಲಿ ಅಕ್ರಮ ಗೋ ವಧೆ ಮಾಡಿ ಮಾಂಸ ತಯಾರಿಕೆ | ಪೊಲೀಸರಿಂದ ದಾಳಿ

ಕಡಬ : ಅಕ್ರಮವಾಗಿ ಗೋವಧೆ ಮಾಡಿ ಮಾಂಸ ಮಾಡುತ್ತಿದ್ದ ಮನೆಯೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಕೊಯಿಲಾ ಕೆಮ್ಮಾರ ಆಕೀರ ಎಂಬಲ್ಲಿ ನಡೆದಿದೆ. ಕಡಬ ತಾಲೂಕು ಕೊಯಿಲಾ ಗ್ರಾಮದ ಕೆಮ್ಮಾರ ಆಕೀರ ಎಂಬಲ್ಲಿ, ಇಲ್ಯಾಸ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಕುರಿತು ಮಾಹಿತಿ ತಿಳಿಸಿದ ಕಡಬ ಪೊಲೀಸ್ ಠಾಣಾ ಪಿ.ಎಸ್.ಐ ಅಭಿನಂಧನ್ ಎಂ.ಎಸ್ ಹಾಗೂ ಸಿಬ್ಬಂದಿಗಳು ಮಾ.28 ರಂದು ಬೆಳಿಗ್ಗೆ ದಾಳಿ ಮಾಡಿದ್ದು, ಕೊಯಿಲ ಗ್ರಾಮದ ಇಲ್ಯಾಸ್ ಮತ್ತು

ಕಡಬದಲ್ಲಿ ಅಕ್ರಮ ಗೋ ವಧೆ ಮಾಡಿ ಮಾಂಸ ತಯಾರಿಕೆ | ಪೊಲೀಸರಿಂದ ದಾಳಿ Read More »

ದ್ವಿಚಕ್ರ ವಾಹನ ಡಿಕ್ಕಿ : ವ್ಯಕ್ತಿ  ಮೃತ್ಯು

ಬೆಳ್ತಂಗಡಿ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಮೃತ ಪಟ್ಟ ಘಟನೆ ಬೆಳ್ತಂಗಡಿ ಸಂತೆಕಟ್ಟೆ ಬಳಿ ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತೋಟಗಾರಿಕೆ ಇಲಾಖೆ ಸಮೀಪದ ನಿವಾಸಿ, ವಿಜಯ ಬ್ಯಾಂಕ್ ನಿವೃತ್ತ ಉದ್ಯೋಗಿ ಹೇರಾಜೆ ಶೇಖರ‌ ಬಂಗೇರ (66) ಮೃತಪಟ್ಟವರು. ಸ್ಥಳೀಯ ಹೋಟೆಲ್ ಒಂದರಿಂದ ಪಾರ್ಸೆಲ್ ಪಡೆದು ರಸ್ತೆ ದಾಟುತ್ತಿದ್ದ ಸಂದರ್ಭ ದ್ವಿಚಕ್ರ ವಾಹನ ಬಡಿದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ದಾರಿಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ದ್ವಿಚಕ್ರ ಸವಾರರು ಕೂಡಾ  ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ

ದ್ವಿಚಕ್ರ ವಾಹನ ಡಿಕ್ಕಿ : ವ್ಯಕ್ತಿ  ಮೃತ್ಯು Read More »

ನಿನ್ನೆ ಕೂಜಿಮಲೆ ಎಸ್ಟೇಟ್ ನಲ್ಲಿ ಕಾಣಿಸಿಕೊಂಡ ಮಹಿಳೆ ನಕ್ಸಲ್ ಅಲ್ಲ / ಮಹಿಳೆ ಪೊಲೀಸರ ವಶಕ್ಕೆ! ವಿಚಾರಣೆ ವೇಳೆ ರಾಜಸ್ಥಾನ್ ಮೂಲ ಎಂಬುದು ಬಹಿರಂಗ

ಸುಳ್ಯ:  ಸುಳ್ಯ ತಾಲೂಕಿನ ಕೂಜಿಮಲೆಯಲ್ಲಿ ಅಪರಿಚಿತ ಮಹಿಳೆ ನಿನ್ನೆ ಪತ್ತೆಯಾಗಿದ್ದು ಈಕೆ ನಕ್ಸಲ್ ಗುಂಪಿಗೆ ಸೇರಿದವರು ಎಂದು ಸುದ್ದಿಯಾಗಿತ್ತು. ಆದರೆ ಈಕೆ ನಕ್ಸಲ್ ಗುಂಪಿಗೆ ಸೇರಿದವರಲ್ಲ ಬದಲಾಗಿ ಈಕೆ ರಾಜಸ್ಥಾನ್ ಮೂಲದವಳಾಗಿದ್ದು ಆಕೆಯನ್ನು ಪೊಲೀಸರು ವಶಪಡಿಸಿಕೊಂಡು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆಗೊಳಪಡಿಸಿ ಇದೀಗ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ನಂತರ ಆಶ್ರಮಕ್ಕೆ ಸೇರ್ಪಡೆಗೊಳಿಸಲಾಗುವುದೆಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.              ಕೂಜಿಮಲೆ ಎಸ್ಟೇಟ್ ನಲ್ಲಿ ಕಾಣಿಸಿಕೊಂಡ ಮಹಿಳೆ ನಕ್ಸಲ್ ಎಂಬ ಸುದ್ದಿ ತಿಳಿದ ಎ.ಎನ್.ಎಫ್

ನಿನ್ನೆ ಕೂಜಿಮಲೆ ಎಸ್ಟೇಟ್ ನಲ್ಲಿ ಕಾಣಿಸಿಕೊಂಡ ಮಹಿಳೆ ನಕ್ಸಲ್ ಅಲ್ಲ / ಮಹಿಳೆ ಪೊಲೀಸರ ವಶಕ್ಕೆ! ವಿಚಾರಣೆ ವೇಳೆ ರಾಜಸ್ಥಾನ್ ಮೂಲ ಎಂಬುದು ಬಹಿರಂಗ Read More »

ಪಾದ್ರಿಯಿಂದ ಹಲ್ಲೆಗೊಳಗಾದ ದಂಪತಿಗೆ ಸಮುದಾಯದಿಂದ ಬಹಿಷ್ಕಾರ | ಪತ್ರಿಕಾಗೋಷ್ಠಿಯಲ್ಲಿ ಸಂತ್ರಸ್ತ ಗ್ರೆಗೊರಿ ಮೊಂಥೆರೊ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರಿಯಾಲತಡ್ಕ ಗ್ರಾಮದಲ್ಲಿ ಮಾರ್ಚ್ ಮೊದಲ ವಾರದಲ್ಲಿ ನಡೆದ ಚರ್ಚ್‌ನ ಪಾದ್ರಿಯೊಬ್ಬರಿಂದ ಹಲ್ಲೆಗೊಳಗಾದ ವೃದ್ಧ ದಂಪತಿಯನ್ನು ಗ್ರಾಮದ ಕ್ರೈಸ್ತ ಸಮುದಾಯ ಬಹಿಷ್ಕರಿಸಿದೆ ಎಂದು ಆರೋಪಿಸಲಾಗಿದೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಹಲ್ಲೆಗೊಳಗಾದ ಗ್ರೆಗೊರಿ ಮೊಂಥೆರೊ ಹಾಗೂ ಫಿಲೋಮಿನಾ ಕೊಯೆಲೊ ಚರ್ಚ್ ಪಾದ್ರಿ ಫಾದರ್ ನೆಲ್ಸನ್ ಒಲಿವೆರಾ, ಹಲ್ಲೆ ನಡೆಸಿದವರ ವಿರುದ್ಧ ದೂರು ನೀಡಿದ ಕೂಡಲೇ ಕಿರುಕುಳ ಆರಂಭವಾಗಿದೆ. ಮೊದಲಿಗೆ ಚರ್ಚ್‌ಗೆ ಸಂಪರ್ಕ ಹೊಂದಿದ ಎಲ್ಲ ವಾಟ್ಸಾಪ್ ಗುಂಪುಗಳಿಂದ ನಮ್ಮನ್ನು ತೆಗೆದುಹಾಕಲಾಯಿತು. ನಂತರ

ಪಾದ್ರಿಯಿಂದ ಹಲ್ಲೆಗೊಳಗಾದ ದಂಪತಿಗೆ ಸಮುದಾಯದಿಂದ ಬಹಿಷ್ಕಾರ | ಪತ್ರಿಕಾಗೋಷ್ಠಿಯಲ್ಲಿ ಸಂತ್ರಸ್ತ ಗ್ರೆಗೊರಿ ಮೊಂಥೆರೊ Read More »

ಶಾಂತಿಯುತ ಮತದಾನ ಹಿನ್ನಲೆ | ದ.ಕ.ಜಿಲ್ಲೆಯಿಂದ 13 ಮಂದಿ ಗಡಿಪಾರು, ನಾಲ್ವರ ಮೇಲೆ ಗೂಂಡಾ ಕಾಯ್ದೆ

ಮಂಗಳೂರು: ಲೋಕಸಭೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಹಿನ್ನಲೆಯಲ್ಲಿ ಮಂಗಳೂರು ನಗರದಲ್ಲಿ ನಾಲ್ವರು ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದ್ದು, ಮತ್ತೆ 13 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಉಳ್ಳಾಲ ಅಂಬ್ಲಮೊಗರು ನಿವಾಸಿ ಹೇಮಚಂದ್ರ ಅಲಿಯಾಸ್ ಪ್ರಜ್ವಲ್ ಪೂಜಾರಿ (29), ಉಳ್ಳಾಲ ಕೈರಂಗಳ ನಿವಾಸಿ ನವಾಜ್ ಅಲಿಯಾಸ್ (36), ಕುದ್ರೋಳಿ ನಿವಾಸಿ ಅನೀಶ್ ಅಶ್ರಫ್ (26) ಹಾಗೂ ಬೋಳೂರು ನಿವಾಸಿ ಚರಣ್ ಶೇಟ್ ಅಲಿಯಾಸ್ ಚರಣ್ ಪಾಲ್ (39) ಎಂಬವರ ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಈ ನಾಲ್ವರು

ಶಾಂತಿಯುತ ಮತದಾನ ಹಿನ್ನಲೆ | ದ.ಕ.ಜಿಲ್ಲೆಯಿಂದ 13 ಮಂದಿ ಗಡಿಪಾರು, ನಾಲ್ವರ ಮೇಲೆ ಗೂಂಡಾ ಕಾಯ್ದೆ Read More »

error: Content is protected !!
Scroll to Top