ನಾಗಬ್ರಹ್ಮ ಕೋಟಿ-ಚೆನ್ನಯ ಆದಿ ಬೈದೇರುಗಳ ಗರಡಿಯಲ್ಲಿ ಎಣ್ಮೂರು ಶಾಲಾ ಮಕ್ಕಳಿಂದ ಶ್ರಮದಾನ
ನಿಂತಿಕಲ್ಲು: ಮಾ. 23 ರಂದು ನಾಗಬ್ರಹ್ಮ ಕೋಟಿ ಚೆನ್ನಯ ಆದಿ ಬೈದೇರುಗಳ ಗರಡಿಯಲ್ಲಿ ನಡೆಯುವ ನೇಮೋತ್ಸವದ ಅಂಗವಾಗಿ ಸರಕಾರಿ ಪ್ರೌಢಶಾಲೆ ಎಣ್ಮೂರು ಶಾಲಾ ಸ್ಕೌಟ್-ಗೈಡ್ ಮಕ್ಕಳಿಂದ ಶ್ರಮದಾನ ನಡೆಯಿತು. ಎಣ್ಮೂರು ಶಾಲಾ ಸ್ಕೌಟ್-ಗೈಡ್ ನ 30 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಗರಡಿಯ ಸುತ್ತ ಮುತ್ತಲ ಪ್ರದೇಶದಲ್ಲಿರುವ ಗಿಡ-ಗಂಟಿಗಳು, ಕಸ ಕಡ್ಡಿಗಳನ್ನು ತೆರವುಗೊಳಿಸಿ ಶ್ರಮದಾನ ಮಾಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಶಿಕ್ಷಕರು, ಅಧ್ಯಾಪಕವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಾಗಬ್ರಹ್ಮ ಕೋಟಿ-ಚೆನ್ನಯ ಆದಿ ಬೈದೇರುಗಳ ಗರಡಿಯಲ್ಲಿ ಎಣ್ಮೂರು ಶಾಲಾ ಮಕ್ಕಳಿಂದ ಶ್ರಮದಾನ Read More »










