ದಕ್ಷಿಣ ಕನ್ನಡ

ವಕ್ಪ್ ಸಂಸ್ಥೆಯ ಧರ್ಮಗುರುಗಳಿಗೆ ಕಾರ್ಯಾಗಾರ ಆತಂಕದ ವಿಷಯ : ನಳಿನ್ ಕುಮಾರ್ ಕಟೀಲ್

ಮಂಗಳೂರು:  ವಕ್ಪ್ ಸಂಸ್ಥೆಯ ಧರ್ಮಗುರುಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು  ಕಾರ್ಯಾಗಾರ ನಡೆಸುವುದಾಗಿ ರಾಜ್ಯ ಬಜೆಟ್‌ನಲ್ಲಿ ತಿಳಿಸಲಾಗಿದ್ದು, ಇದರ ಉದ್ದೇಶ ಏನು ? ಕಾರ್ಯಾಗಾರ ನಡೆಸುವವರು ಯಾರು ? ಎನ್ನುವ ಆತಂಕ ಸಹಜವಾಗಿಯೇ ಜನರಲ್ಲಿ ಮೂಡಿದೆ ಎಂದು ಸಂಸ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಬಜೆಟ್ ಭಾಷಣದಲ್ಲಿ ಸಾಮಾನ್ಯವಾಗಿ ಅರ್ಥಿಕ ಸಂಪನ್ಮೂಲ ಕ್ರೋಡೀಕರಣ ಮತ್ತು ಅಭಿವೃದ್ದಿ ಯೋಜನೆಗಳಿಗೆ ಹಣ ಹಂಚಿಕೆ ಬಗ್ಗೆ ರಾಜ್ಯದ ಜನತೆಗೆ ಸಮಗ್ರ ಮಾಹಿತಿ ನೀಡಲಾಗುತ್ತದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ದ್ವೇಷದ […]

ವಕ್ಪ್ ಸಂಸ್ಥೆಯ ಧರ್ಮಗುರುಗಳಿಗೆ ಕಾರ್ಯಾಗಾರ ಆತಂಕದ ವಿಷಯ : ನಳಿನ್ ಕುಮಾರ್ ಕಟೀಲ್ Read More »

ಜೆಬಿಎಫ್ ಉದ್ಯೋಗಿಗಳಿಗೆ ಜಿಎಂಪಿಎಲ್ (ಗೇಲ್-ಇಂಡಿಯಾ) ನಲ್ಲಿ ಶೀಘ್ರದಲ್ಲೇ ಖಾಯಂ ಉದ್ಯೋಗ | ಕೇಂದ್ರ ಪೆಟ್ರೋಲಿಯಂ ಸಚಿವರ ಭರವಸೆ

ಮಂಗಳೂರು: ನವದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪೂರಿಯವರನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರವರು ಭೇಟಿಯಾಗಿ ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ ನೇರವಾಗಿ ಖಾಯಂ ಉದ್ಯೋಗ ನೀಡುವಂತೆ ಮನವಿ ಸಲ್ಲಿಸಿದರು. ಜೆಬಿಎಫ್ ಉದ್ಯೋಗಿಗಳ ಬೇಡಿಕೆಯನ್ನು ಸಚಿವರಿಗೆ ವಿವರವಾಗಿ ಮನವರಿಕೆ ಮಾಡಲಾಯಿತು. ಇದಕ್ಕೆ ಸ್ಪಂದಿಸಿದ ಸಚಿವರು ಶೀಘ್ರದಲ್ಲಿಯೇ ಸಕರಾತ್ಮಕ ನಿರ್ಣಯ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಲ್ಕಿ-ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಬಂಟ್ವಾಳ

ಜೆಬಿಎಫ್ ಉದ್ಯೋಗಿಗಳಿಗೆ ಜಿಎಂಪಿಎಲ್ (ಗೇಲ್-ಇಂಡಿಯಾ) ನಲ್ಲಿ ಶೀಘ್ರದಲ್ಲೇ ಖಾಯಂ ಉದ್ಯೋಗ | ಕೇಂದ್ರ ಪೆಟ್ರೋಲಿಯಂ ಸಚಿವರ ಭರವಸೆ Read More »

ದ.ಕ.ಜಿಲ್ಲೆಯ ಲೋಕಸಭಾ ಚುನಾವಣೆಗೆ ಮೂವರ ಹೆಸರು ಪಟ್ಟಿಯಲ್ಲಿ | ಯಾರಿಗೆ ಸೀಟು ಒಲಿಯಲಿದೆ : ಕಾದು ನೋಡಬೇಕಾಗಿದೆ | ದ.ಕ. ವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ನಿಂದ ಶತಪ್ರಯತ್ನ

ಮುಂಬರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡದಿಂದ ಮೂವರು ಹೆಸರು ಈಗಾಗಲೇ ಕೇಳಿ ಬರುತ್ತಿದ್ದು, ಹಿರಿಯ ಮುಖಂಡ ಮಾಜಿ ಸಚಿವ ಬಿ. ರಮಾನಾಥ ರೈ, ಯುವ ಮುಖಂಡ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್, ಯುವ ಕಾಂಗ್ರೆಸ್ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ಕಿರಣ್ ಗೌಡ ಬುಡ್ಲೆಗುತ್ತು. ಈ ಮೂವರಲ್ಲಿ ಒಬ್ಬರನ್ನು ಕಾಂಗ್ರೆಸ್ ಹೈಕಮಾಂಡ್ ಫೈನಲ್ ಗೊಳಿಸುವ ಸಾಧ್ಯತೆ ಕಂಡು ಬರುತ್ತಿದೆ. ಜಿಲ್ಲೆಯ 8 ವಿದಾನಸಭಾ ಕ್ಷೇತ್ರದ ಬ್ಲಾಕ್ ಗಳು ರಮಾನಾಥ ರೈ ಹೆಸರನ್ನು ಶಿಫಾರಸ್ಸು ಮಾಡಿ

ದ.ಕ.ಜಿಲ್ಲೆಯ ಲೋಕಸಭಾ ಚುನಾವಣೆಗೆ ಮೂವರ ಹೆಸರು ಪಟ್ಟಿಯಲ್ಲಿ | ಯಾರಿಗೆ ಸೀಟು ಒಲಿಯಲಿದೆ : ಕಾದು ನೋಡಬೇಕಾಗಿದೆ | ದ.ಕ. ವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ನಿಂದ ಶತಪ್ರಯತ್ನ Read More »

ಫೆ.21-22 : ಕೋಡಿಯಡ್ಕ ತರವಾಡು ಕುಟುಂಬ ದೈವಗಳ ಧರ್ಮ ನಡಾವಳಿ

ಸುಳ್ಯ: ಕೋಡಿಯಡ್ಕ ಕುಟುಂಬದ ದೈವಗಳ ಧರ್ಮ ನಡಾವಳಿಯು ಫೆ.21 ರಿಂದ 22 ರವರೆಗೆ ನಡೆಯಲಿದೆ. ಧರ್ಮ ನಡಾವಳಿಯ ಅಂಗವಾಗಿ ಫೆ.21 ರಂದು ಬೆಳಿಗ್ಗೆ 8 ಕ್ಕೆ ಗಣಹೋಮ, ಮಧ್ಯಾಹ್ನ 11 ಕ್ಕೆ ವೆಂಕಟ್ರಮಣ ದೇವರ ಹರಿಸೇವೆ, ಸಂಜೆ 6.30 ಕ್ಕೆ ಧರ್ಮದೈವ ಮತ್ತು ಪರಿವಾರ ದೈವಗಳ ಭಂಡಾರ ತೆಗೆಯುವುದು, ರಾತ್ರಿ 8 ಕ್ಕೆ ಜಾವತೆ ದೈವದ ನೇಮ, ರಾತ್ರಿ 9 ಕ್ಕೆ ಅನ್ನಸಂತರ್ಪಣೆ, ರಾತ್ರಿ 10 ಕ್ಕೆ ವರ್ಣಾರ ಪಂಜುರ್ಲಿ, ಕಲ್ಲುರ್ಟಿ, ಕುಪ್ಪೆ ಪಂಜುರ್ಲಿ ನೇಮ ನಡೆಯಲಿದೆ.

ಫೆ.21-22 : ಕೋಡಿಯಡ್ಕ ತರವಾಡು ಕುಟುಂಬ ದೈವಗಳ ಧರ್ಮ ನಡಾವಳಿ Read More »

ಬೈಕ್‍ ನಲ್ಲಿ ತೆರಳುತ್ತಿದ್ದ ಯುವಕನ ಇರಿದು ಕೊಲೆಗೆ ಯತ್ನ! ಓರ್ವ ಆರೋಪಿ ಬಂಧನ

ಉಳ್ಳಾಲ: ಯುವಕನೊಬ್ಬ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಇಬ್ಬರು ಬೈಕ್‍ ತಡೆದು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಕ್ಷಿಪ್ರ ಕಾರ್ಯಾಚರಣೆ ಮೂಲಕ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಕುಂಪಲ ನಿವಾಸಿ ಮಹಮ್ಮದ್ ಆರೀಫ್‍ (29) ಇರಿತಕ್ಕೊಳಗಾಗಿದ್ದು, ಆರೋಪಿ ಮುಝಮ್ಮಿಲ್ ಎಂಬಾತನನ್ನು ಬಂಧಿಸಲಾಗಿದೆ. ಕುಂಪಲದಿಂದ-ಕೊಲ್ಯ ಕಡೆಗೆ ಬೈಕ್ ನಲ್ಲಿ ಧಾವಿಸುತ್ತಿದ್ದ ಮುಝಮ್ಮಿಲ್ ಮತ್ತು ನಿಸಾರ್ ಎಂಬ ಇಬ್ಬರು ಆರೀಫ್ ನನ್ನು ಕೊಲ್ಯ ಎಂಬಲ್ಲಿ ತಡೆದಿದ್ದಾರೆ. ಆರೋಪಿಗಳು ಆರೀಫ್ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ್ದಾರೆ.

ಬೈಕ್‍ ನಲ್ಲಿ ತೆರಳುತ್ತಿದ್ದ ಯುವಕನ ಇರಿದು ಕೊಲೆಗೆ ಯತ್ನ! ಓರ್ವ ಆರೋಪಿ ಬಂಧನ Read More »

ಫೆ.16-21: ಮಾಣಿಲಬೀಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬಂಟ್ವಾಳ: ತಾಲೂಕಿನ ವಿಟ್ಲ ಮಾಣಿಲಬೀಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಇಂದಿನಿಂದ ಫೆ.21 ರ ವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಉಳಿತ್ತಾಯ ವಿಷ್ಣು ಅಸ್ರ ಅವರ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಶ್ರೀ ವಿಷ್ಣುಮೂರ್ತಿ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಶ್ರೀ ವಿಷ್ಣುಮೂರ್ತಿ ಕ್ಷೇತ್ರಾಡಳಿತ ಸೇವಾ ಸಮಿತಿ, ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಫೆ.16-21: ಮಾಣಿಲಬೀಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಸೌಜನ್ಯ ಅತ್ಯಾಚಾರ, ಕೊಲೆ | ನ್ಯಾಯೋಚಿತ ತನಿಖೆಗೆ ಆಗ್ರಹಿಸಿ ಫೆ.18 ರಂದು ಬೃಹತ್ ಜನಾಂದೋಲನ

ಉಪ್ಪಿನಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ನ್ಯಾಯೋಚಿತ ತನಿಖೆ ನಡೆಸಬೇಕೆಂದು ಆಗ್ರಹಿಸಿ ಫೆ.18 ರಂದು ಅಪರಾಹ್ನ 3 ಗಂಟೆಗೆ ಉಪ್ಪಿನಂಗಡಿಯ ಎಚ್‌. ಎಂ. ಅಡಿಟೋರಿಯಂನ ವಠಾರದಲ್ಲಿ ಬೃಹತ್ ಜನಾಂದೋಲನ ಸಭೆ ನಡೆಯಲಿದೆ ಎಂದು ಸಾಮಾಜಿಕ ಹೋರಾಟಗಾರ ಅಲಿಮಾರ ಜತೀಂದ್ರ ಶೆಟ್ಟಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸೌಜನ್ಯ ಎಂಬ ಅಮಾಯಕ ವಿದ್ಯಾರ್ಥಿನಿಯ ಬರ್ಬರ ಹತ್ಯೆ, ಅತ್ಯಾಚಾರ ಪ್ರಕರಣದ ಬಗ್ಗೆ ಸರಕಾರ ಮರು ತನಿಖೆಯನ್ನು ನಡೆಸಬೇಕು. ಪ್ರಕರಣದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು.

ಸೌಜನ್ಯ ಅತ್ಯಾಚಾರ, ಕೊಲೆ | ನ್ಯಾಯೋಚಿತ ತನಿಖೆಗೆ ಆಗ್ರಹಿಸಿ ಫೆ.18 ರಂದು ಬೃಹತ್ ಜನಾಂದೋಲನ Read More »

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ನೇಮಕ | ಪಟ್ಟಿ ಬಿಡುಗಡೆ

ಮಂಗಳೂರು: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿಯ ದ.ಕ.ಜಿಲ್ಲೆಯ ಜಿಲ್ಲಾ ವಕ್ತಾರರಾಗಿ ಕೃಷ್ಣಪ್ಪ ಪೂಜಾರಿ, ಹಿಂದುಳಿದ ವರ್ಗ ಮೋರ್ಚಾಕ್ಕೆ ಜಿಲ್ಲಾಧ್ಯಕ್ಷರಾಗಿ ಮಹೇಶ್ ಜೋಗಿ, ಪ್ರಧಾನ ಕಾರ್ಯದರ್ಶಿಗಳಾಗಿ ಮೋನಪ್ಪ ದೇವಸ್ಯ, ಶಶಿಧರ ಕಲ್ಮಂಜ, ಮಹಿಳಾ ಮೋರ್ಚಾಕ್ಕೆ ಪ್ರಧಾನ ಕಾರ್ಯದರ್ಶಿಗಳಾಗಿ ಸಂಧ್ಯಾ ವೆಂಕಟೇಶ್, ಲಿಖಿತಾ ಆರ್‍. ಶೆಟ್ಟಿ, ಯುವ ಮೋರ್ಚಾಕ್ಕೆ ಪ್ರಧಾನ ಕಾರ್ಯದರ್ಶಿಗಳಾಗಿ ಭರತ್ ರಾಜ್ ಕೃಷ್ಣಾಪುರ, ಉಮೇಶ್ ಕುಲಾಲ್, ಎಸ್‍.ಟಿ. ಮೋರ್ಚಾಕ್ಕೆ ಪ್ರಧಾನ ಕಾರ್ಯದರ್ಶಿಗಳಾಗಿ ಜಯರಾಮ ಕಂಟ್ರಕಲ,

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ನೇಮಕ | ಪಟ್ಟಿ ಬಿಡುಗಡೆ Read More »

ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು!

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತ ಪಟ್ಟ ಘಟನೆ 34 ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಡೆದಿದೆ. ಕೆ.ಎ. ಸ್ಟೋರ್ ಮಾಲಕ ದಾವೂದು ಎಂಬವರ ಪುತ್ರಿ ಹಫೀಝ (17) ಮೃತ ಬಾಲಕಿ. ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ಈಕೆ ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದು, ಫೆ.15ರಂದು ಬೆಳಗ್ಗೆ ಎದ್ದೇಳುವಾಗ ಮೃತಪಟ್ಟಿದ್ದಳು. ಮಲಗಿದಲ್ಲೇ ಹೃದಯಾಘಾತಕ್ಕೀಡಾಗಿ ಈಕೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಮೃತಳು ತಂದೆ, ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾಳೆ.

ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು! Read More »

ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ !

ಬಂಟ್ವಾಳ: ಯುವತಿಯೋರ್ವಳು ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ನಡೆದಿದೆ. ತುಮಕೂರು ಮೂಲದ ನಯನ (25) ಆತ್ಮಹತ್ಯೆ ಮಾಡಿಕೊಂಡವರು. ನಯನ ಇಂದು ಮುಂಜಾನೆ 6.30 ವೇಳೆಗೆ ಸಂಚರಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿದ್ದಾಳೆ ಎನ್ನಲಾಗಿದೆ. ಇತರ ಪ್ರಯಾಣಿಕರು ನೀಡಿದ ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಘಟನೆಯನ್ನು ಖಚಿತಪಡಿಸಿಕೊಂಡಿದ್ದಾರೆ. ತಕ್ಷಣ ನದಿಯಲ್ಲಿ ದೋಣಿ ಮೂಲಕ ಕಾರ್ಯಾಚರಣೆ ನಡೆಸಿದ ಗೂಡಿಬಳಿ ನಿವಾಸಿ ಮುಹಮ್ಮದ್ ಹಾಗೂ ಜೀವರಕ್ಷಕ ತಂಡ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ

ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ ! Read More »

error: Content is protected !!
Scroll to Top