ದಕ್ಷಿಣ ಕನ್ನಡ

ನಾಗಬ್ರಹ್ಮ ಕೋಟಿ-ಚೆನ್ನಯ ಆದಿ ಬೈದೇರುಗಳ ಗರಡಿಯಲ್ಲಿ ಎಣ್ಮೂರು ಶಾಲಾ ಮಕ್ಕಳಿಂದ ಶ್ರಮದಾನ

ನಿಂತಿಕಲ್ಲು: ಮಾ. 23 ರಂದು ನಾಗಬ್ರಹ್ಮ ಕೋಟಿ ಚೆನ್ನಯ ಆದಿ ಬೈದೇರುಗಳ ಗರಡಿಯಲ್ಲಿ ನಡೆಯುವ ನೇಮೋತ್ಸವದ ಅಂಗವಾಗಿ ಸರಕಾರಿ ಪ್ರೌಢಶಾಲೆ ಎಣ್ಮೂರು ಶಾಲಾ ಸ್ಕೌಟ್-ಗೈಡ್ ಮಕ್ಕಳಿಂದ ಶ್ರಮದಾನ ನಡೆಯಿತು. ಎಣ್ಮೂರು ಶಾಲಾ ಸ್ಕೌಟ್-ಗೈಡ್ ನ 30 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಗರಡಿಯ ಸುತ್ತ ಮುತ್ತಲ ಪ್ರದೇಶದಲ್ಲಿರುವ ಗಿಡ-ಗಂಟಿಗಳು, ಕಸ ಕಡ್ಡಿಗಳನ್ನು ತೆರವುಗೊಳಿಸಿ ಶ್ರಮದಾನ ಮಾಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಶಿಕ್ಷಕರು, ಅಧ್ಯಾಪಕವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಾಗಬ್ರಹ್ಮ ಕೋಟಿ-ಚೆನ್ನಯ ಆದಿ ಬೈದೇರುಗಳ ಗರಡಿಯಲ್ಲಿ ಎಣ್ಮೂರು ಶಾಲಾ ಮಕ್ಕಳಿಂದ ಶ್ರಮದಾನ Read More »

ಸ್ಕೂಟರ್ ಕಳವು : ಪ್ರಕರಣ ದಾಖಲು

ಬಂಟ್ವಾಳ: ಗ್ಯಾರೇಜ್ ಒಂದರ ಬಳಿ ನಿಲ್ಲಿಸಲಾಗಿದ್ದ ಸ್ಕೂಟರ್ ಕಳವಾದ ಘಟನೆ ಬಂಟ್ವಾಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಮ್ಟಾಡಿ ಗ್ರಾಮದ ಜೈದುರ್ಗ ಗ್ಯಾರೇಜ್ ಬಳಿ ಸುರೇಶ್ ಎಂಬವರು ಆ್ಯಕ್ಸಿಸ್ ಸ್ಕೂಟರ್ ನಿಲ್ಲಿಸಿದ್ದರು. ಮರುದಿನ ಬಂದು ನೋಡಿದಾಗ ಸ್ಕೂಟರ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಕಳವಾದ ಸ್ಕೂಟರ್ ಮೌಲ್ಯ 45 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಕೂಟರ್ ಕಳವು : ಪ್ರಕರಣ ದಾಖಲು Read More »

ದ.ಕ. ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರನ್ನು ಆಶೀರ್ವದಿಸಿದ ಶ್ರೀ ಧರ್ಮಪಾಲನಾಥ ಸ್ವಾಮೀಜಿ

ಮಂಗಳೂರು: ಲೋಕಸಭೆ ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠಕ್ಕೆ ಶುಕ್ರವಾರ ಭೇಟಿ ನೀಡಿದರು. ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಗಳು ಕ್ಯಾ.ಬ್ರಿಜೇಶ್ ಚೌಟರನ್ನು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರನ್ನು ಆಶೀರ್ವದಿಸಿದ ಶ್ರೀ ಧರ್ಮಪಾಲನಾಥ ಸ್ವಾಮೀಜಿ Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ !

ಉಪ್ಪಿನಂಗಡಿ: ಗೋಳಿತೊಟ್ಟು ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಪಲ್ಟಿಯಾಗಿದ್ದು, ಕಾರು ಚಾಲಕ ಸಹಿತ ಮೂರು ಮಂದಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ! Read More »

ದ್ವಿತೀಯ ಪಿಯುಸಿ ಪರೀಕ್ಷೆ ದ.ಕ. ಜಿಲ್ಲೆಯಿಂದ 220 ವಿದ್ಯಾರ್ಥಿಗಳು ಗೈರು | ರಾಜ್ಯದಲ್ಲಿ ಶೇ.96.88 ಹಾಜರಾತಿ

ಮಂಗಳೂರು: ಬುಧವಾರ ನಡೆದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ 220 ವಿದ್ಯಾರ್ಥಿಗಳು ಗೈರಾಗಿದ್ದು, ರಾಜ್ಯದಿಂದ 20 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರಾಗಿದ್ದಾರೆ. ದ.ಕ.ಜಿಲ್ಲೆಯಿಂದ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿದ್ದ 35,753 ವಿದ್ಯಾರ್ಥಿಗಳ ಪೈಕಿ 35,533 ಮಂದಿ ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ರಾಜ್ಯದಿಂದ ಪರೀಕ್ಷೆಗೆ 6,64,395 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 6,43,659 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 20,736 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದು, ಶೇ.96.88ರಷ್ಟು ಹಾಜರಾತಿ ದಾಖಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ದ.ಕ. ಜಿಲ್ಲೆಯಿಂದ 220 ವಿದ್ಯಾರ್ಥಿಗಳು ಗೈರು | ರಾಜ್ಯದಲ್ಲಿ ಶೇ.96.88 ಹಾಜರಾತಿ Read More »

ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿ ನಿವೃತ್ತ ಸೇನಾಧಿಕಾರಿ, ಯುವ ನಾಯಕ ಬ್ರಿಜೇಶ್‍ ಚೌಟ | ರಾಜ್ಯದಿಂದ ಇದೇ ಮೊದಲ ಬಾರಿಗೆ ಸೇನೆಯಲ್ಲಿ ದುಡಿದ ವ್ಯಕ್ತಿಗೆ ಸಂಸತ್ ಸ್ಪರ್ಧೆಗೆ ಟಿಕೇಟ್

ಮಂಗಳೂರು: ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ತಿಗೆ ಆಯ್ದುಕೊಂಡಿದೆ. ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ದೇಶಕ್ಕಾಗಿ ದುಡಿದು ಬಂದ ವ್ಯಕ್ತಿಯೊಬ್ಬರಿಗೆ ಸಂಸತ್ ಸ್ಪರ್ಧೆಯ ಟಿಕೆಟ್ ಕೊಡಲಾಗಿದೆ. ಮಂಗಳೂರಿನ ರಥಬೀದಿಯಲ್ಲಿ

ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿ ನಿವೃತ್ತ ಸೇನಾಧಿಕಾರಿ, ಯುವ ನಾಯಕ ಬ್ರಿಜೇಶ್‍ ಚೌಟ | ರಾಜ್ಯದಿಂದ ಇದೇ ಮೊದಲ ಬಾರಿಗೆ ಸೇನೆಯಲ್ಲಿ ದುಡಿದ ವ್ಯಕ್ತಿಗೆ ಸಂಸತ್ ಸ್ಪರ್ಧೆಗೆ ಟಿಕೇಟ್ Read More »

ಬೈಕ್ ಸವಾರನಿಗೆ ಎದುರಾದ ಕಾಡಾನೆ

ಬೆಳ್ತಂಗಡಿ: ಬೈಕ್ ಸವಾರರೊಬ್ಬರಿಗೆ ಕಾಡಾನೆ ಎದುರಾಗಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ಬುಧವಾರ ನಡೆದಿದೆ. ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬೊಳ್ಳೂರು ಬೈಲು ಎಂಬಲ್ಲಿ ಇಲ್ಲಿನ ಕೃಷಿಕ ಜಾರ್ಜ್ ಕೆ.ಜೆ. ಎಂಬವರು ತನ್ನ ಮಕ್ಕಳನ್ನು ರಾತ್ರಿ 8 ಗಂಟೆ ಸುಮಾರಿಗೆ ಬೆದ್ರಬೆಟ್ಟು ಕಡೆಯಿಂದ ಟ್ಯೂಷನ್ ಮುಗಿಸಿ ಬೈಕ್ ನಲ್ಲಿ ಕರೆದುಕೊಂಡು ಬರುವ ವೇಳೆ ರಸ್ತೆ ಮಧ್ಯದಲ್ಲಿ ಕಾಡಾನೆ ಎದುರಾಗಿದೆ. ರಸ್ತೆಯ ತಿರುವಿನಲ್ಲಿ ಬೈಕ್ ಸವಾರನಿಗೆ ಸುಮಾರು 5 ಅಡಿ ಅಂತರದಲ್ಲಿ ಕಾಡಾನೆ ಕಂಡುಬಂದಿದ್ದು

ಬೈಕ್ ಸವಾರನಿಗೆ ಎದುರಾದ ಕಾಡಾನೆ Read More »

ಲೋಕಸಭಾ ಚುನಾವಣೆ | ಬಿಜೆಪಿಯ ಎರಡಣೆ ಪಟ್ಟಿ ಬಿಡುಗಡೆ | ದ.ಕ.ಜಿಲ್ಲೆಯಿಂದ ಕ್ಯಾ.ಬ್ರಿಜೇಶ್ ಚೌಟರಿಗೆ ಟಿಕೇಟ್

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿದ ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಟಿಕೇಟ್ ನೀಡಲಾಗಿದೆ. ದ.ಕ.ದಿಂದ ನಳಿನ್ ಕುಮಾರ್ ಕಟೀಲ್‍ ಅವರಿಗೆ ಅವಕಾಶ ಕೈತಪ್ಪಿದ್ದು,  ಉಡುಪಿಯಿಂದ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಣಕ್ಕೆ ಇಳಿಯಲಿದ್ದಾರೆ. ಬೆಂಗಳೂರು ಉತ್ತರದಿಂದ ಡಿ.ವಿ.ಸದಾನಂದ ಗೌಡರಿಗೆ ಟಿಕೇಟ್ ಕೈತಪ್ಪಿದ್ದು ಈ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಅವಕಾಶ ನೀಡಲಾಗಿದೆ. ಮೈಸೂರಿನಿಂದ ಯದುವೀರ್ ಅವರಿಗೆ ಅವಕಾಶ ನೀಡಲಾಗಿದ್ದು, ಪ್ರತಾಪ್ ಸಿಂಹ ಅವರಿಗೆ ಟಿಕೇಟ್ ನೀಡಿಲ್ಲ.

ಲೋಕಸಭಾ ಚುನಾವಣೆ | ಬಿಜೆಪಿಯ ಎರಡಣೆ ಪಟ್ಟಿ ಬಿಡುಗಡೆ | ದ.ಕ.ಜಿಲ್ಲೆಯಿಂದ ಕ್ಯಾ.ಬ್ರಿಜೇಶ್ ಚೌಟರಿಗೆ ಟಿಕೇಟ್ Read More »

ಲೋಕಸಭೆ ಚುನಾವಣೆ | ಜಿಲ್ಲಾಧಿಕಾರಿಯಿಂದ ದ.ಕ. ಜಿಲ್ಲಾ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳ ಪರಿಶೀಲನೆ

ಮಂಗಳೂರು : ಲೋಕಸಭೆ ಚುನಾವಣೆ ಇನ್ನೇನು ಹತ್ತಿರ ಬರಲಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್  ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಸುರತ್ಕಲ್ ಎನ್‍.ಐ.ಟಿ.ಕೆ. ಇಂಜಿನಿಯರಿಂಗ್‍ ಕಾಲೇಜಿಗೆ ತೆರಳಿ ದಕ್ಷಿಣ ಕನ್ನಡ ಜಿಲ್ಲೆಯ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಮತ್ತಿತರರು ಉಪಸ್ಥಿತರಿದ್ದರು.

ಲೋಕಸಭೆ ಚುನಾವಣೆ | ಜಿಲ್ಲಾಧಿಕಾರಿಯಿಂದ ದ.ಕ. ಜಿಲ್ಲಾ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳ ಪರಿಶೀಲನೆ Read More »

ಶಿರಾಡಿ ಘಾಟ್‍ ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ | ರಸ್ತೆ ಸಂಚಾರ ಬಂದ್ | ಬದಲಿ ರಸ್ತೆಯಲ್ಲಿ ಚಲಿಸುವಂತೆ ವಾಹನ ಸವಾರರಿಗೆ ಸೂಚನೆ

ಶಿರಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಭಾರೀ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿ ಶಿರಾಡಿ ಘಾಟ್ ಎನ್‍ಎಚ್‍ -75 ರಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಶಿರಾಡಿ ಘಾಟ್‍ ರಸ್ತೆಯ ಡಬಲ್ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬುಧವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ನೂರಾರು ವಾಹನಗಳು ನಿಂತಲ್ಲೇ ನಿಂತಿವೆ. ಘಟನೆಯಿಂದಾಗಿ ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಪೊಲೀಸರು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿದ್ದು, ಮಂಗಳೂರಿನ ಎಂ.ಆರ್‍.ಪಿ.ಎಲ್‍ ನಿಂದ ತಜ್ಞರ ತಂಡ

ಶಿರಾಡಿ ಘಾಟ್‍ ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ | ರಸ್ತೆ ಸಂಚಾರ ಬಂದ್ | ಬದಲಿ ರಸ್ತೆಯಲ್ಲಿ ಚಲಿಸುವಂತೆ ವಾಹನ ಸವಾರರಿಗೆ ಸೂಚನೆ Read More »

error: Content is protected !!
Scroll to Top