ದಕ್ಷಿಣ ಕನ್ನಡ

ಕಾರು-ಸ್ಕೂಟರ್ ಡಿಕ್ಕಿ | ವಿದ್ಯಾರ್ಥಿ ಮೃತ್ಯು

ಕಡಬ: ಕಾರು ಮತ್ತು ಸ್ಕೂಟ‌ರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಕಡಬ ತಾಲೂಕಿನ ಕಳಾರದಲ್ಲಿ ನಡೆದಿದೆ. ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಎಂಬವರ ಪುತ್ರ ಸರಸ್ವತಿ ಶಾಲಾ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತಪಟ್ಟ ಬಾಲಕ. ಮೃತ ಬಾಲಕನ ತಂದೆ ಹಾಗೂ ತಂಗಿ ಗಂಭೀರ ಗಾಯಗೊಂಡಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ತಮ್ಮ ನಿವಾಸದಿಂದ ಸುಮಾರು ನೂರು ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದ್ದು, ಸರಸ್ವತಿ ಶಾಲೆಯಲ್ಲಿ ನಡೆದಿದ್ದ ಕ್ರೀಡೋತ್ಸವ […]

ಕಾರು-ಸ್ಕೂಟರ್ ಡಿಕ್ಕಿ | ವಿದ್ಯಾರ್ಥಿ ಮೃತ್ಯು Read More »

ವಾಹನ ಚಾಲನೆ ವೇಳೆ ಎದೆನೋವು ಕಾಣಿಸಿಕೊಂಡು ಚಾಲಕ ಮೃತ್ಯು !

ಸುಳ್ಯ: ಪಿಕಪ್ ವಾಹನ ಚಾಲನೆ ಸಂದರ್ಭ ಚಾಲಕರೊಬ್ಬರಿಗೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟ ಘಟನೆ ಸುಳ್ಯ ಪೈಚಾರಿನಲ್ಲಿ ನಡೆದಿದೆ. ಗದಗ ತಾಲೂಕು ಹೊಸೂರು ಗ್ರಾಮದ ಹುಸೇನಸಾಬ ಹೆಬಸುರ (45) ಮೃತಪಟ್ಟವರು. ಬೆಳ್ತಂಗಡಿಯಲ್ಲಿ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಮಡಿಕೇರಿಯಲ್ಲಿ ಕಾರ್ಯಕ್ರಮವೊಂದಕ್ಕೆ ಅಳವಡಿಸಲಾಗಿದ್ದ ಶಾಮಿಯಾನವನ್ನು ತರಲೆಂದು ಮಡಿಕೇರಿಗೆ ಗುರುವಾರ ರಾತ್ರಿ ಹೊರಟ್ಟಿದ್ದರು. ವಾಹನ ಸುಳ್ಯದ ಪೈಚಾರು ಸಮೀಪ ಬರುತ್ತಿದ್ದಂತೆ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು ಅಲ್ಲೇ ಬದಿಯಲ್ಲಿ ವಾಹನವನ್ನು ನಿಲ್ಲಿಸಿ ಬಳಿಯಲ್ಲಿ ಕುಳಿತಿದ್ದ ವ್ಯಕ್ತಿಗೆ

ವಾಹನ ಚಾಲನೆ ವೇಳೆ ಎದೆನೋವು ಕಾಣಿಸಿಕೊಂಡು ಚಾಲಕ ಮೃತ್ಯು ! Read More »

ತಲೆಮರೆಸಿಕೊಂಡಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಶೋಧ | ಮಾಹಿತಿ ಇದ್ದಲ್ಲಿ ತಿಳಿಸುವಂತೆ ಎನ್‍ಐಎ ಮನವಿ

ಸುಳ್ಯ: ಬೆಳ್ಳಾರೆ ಪ್ರವೀಣ್‍ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಐವರು ಆರೋಪಿಗಳು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಎನ್‍ಐಎ ಮನವಿ ಮಾಡಿದೆ. ಆರೋಪಿಗಳಾದ ಎಂ.ಡಿ.ಮುಸ್ತಫ, ಮಸೂದ್ ಅಗ್ನಾಡಿ, ಮಸೂದ್ ಕೆ.ಎ, ಮೊಹಮ್ಮದ್ ಶರೀಫ್ ಕೊಡಾಜೆ, ಉಮ್ಮರ್ ಆರ್. ಉಮ್ಮರ್ ಫಾರೂಕ್, ಅಬೂಬಕ್ಕರ್ ಸಿದ್ದಿಕ್ ರಾಷ್ಟ್ರೀಯ ತನಿಖಾ ತಂಡದ ವಾಂಟೆಡ್ ಲಿಸ್ಟ್ ಪಟ್ಟಿಯಲ್ಲಿದ್ದಾರೆ. ಆರೋಪಿಗಳು ಕಂಡು ಬಂದಲ್ಲಿ, ಇರುವಿಕೆ ಕುರಿತು ಮಾಹಿತಿ ಇದ್ದಲ್ಲಿ ವಾಟ್ಸಾಪ್ ಸಂಖ್ಯೆ 9497715294 ಸಂಪರ್ಕಿಸುವಂತೆ ಸಾರ್ವಜನಿಕರನ್ನು ಎನ್ಐಎ ವಿನಂತಿಸಿದೆ. ಮಾಹಿತಿ ನೀಡಿದವರಿಗೆ ಸೂಕ್ತ

ತಲೆಮರೆಸಿಕೊಂಡಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಶೋಧ | ಮಾಹಿತಿ ಇದ್ದಲ್ಲಿ ತಿಳಿಸುವಂತೆ ಎನ್‍ಐಎ ಮನವಿ Read More »

ಬಳ್ಪ ಕಾಡಿನಲ್ಲಿ ಮಂಗಗಳ ಮೃತದೇಹ ಪತ್ತೆ!

ಸುಳ್ಯ: ತಾಲೂಕಿನ ಬಳ್ಪ ರಕ್ಷಿತಾರಣ್ಯದ  ಗುತ್ತಿಗಾರು-ಬಳ್ಪ ರಸ್ತೆ ನಡುವೆ ರಸ್ತೆ ಬದಿಯಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ. ಸುಮಾರು 30 ಕ್ಕೂ ಅಧಿಕ ಮಂಗಗಳು ಸತ್ತು ಬಿದ್ದಿರುವ ಸ್ಥಿತಿಯಲ್ಲಿದೆ. ಮಧ್ಯಾಹ್ನದ ವೇಳೆ ಸಾಮಾಜಿಕ ಜಾಲತಾಣದ ಮೂಲಕ ಮಂಗಗಳ ಮೃತದೇಹ ಇರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬಳ್ಪ ಕಾಡಿನಲ್ಲಿ ಮಂಗಗಳ ಮೃತದೇಹ ಪತ್ತೆ! Read More »

ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಸುಬ್ರಹ್ಮಣ್ಯ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಏನೆಕಲ್ಲು ಗ್ರಾಮದಲ್ಲಿ ನಡೆದಿದೆ. ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಕುಕ್ಕಪ್ಪನ ಮನೆ ಮೋಹನ ಕುಮಾರ(51) ಆತ್ಮಹತ್ಯೆ ಮಾಡಿಕೊಂಡವರು. ಇತ್ತೀಚೆಗೆ ಮನೆ ನಿರ್ಮಾಣಕ್ಕಾಗಿ ಕೈ ಸಾಲ ಹಾಗೂ ಕೃಷಿ ಚಟುವಟಿಕೆಗಳಿಗೆ ಬ್ಯಾಂಕು ಸಾಲಗಳನ್ನು ಮಾಡಿಕೊಂಡಿದ್ದರು ಎನ್ನಲಾಗಿದೆ. ಮಾಡಿದ ಸಾಲವನ್ನು ತೀರಿಸಲಾಗದೇ ಬೇಸರದಿಂದ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಮುಂಜಾನೆ ಎಂದಿನಂತೆ ತೋಟಕ್ಕೆ ಹೋದವರು ಎಷ್ಟು ಹೊತ್ತಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ತೋಟದಲ್ಲಿ ಹುಡುಕಾಡಿದಾಗ

ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

ಎಲಿಮಲೆ ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ : ಹತ್ತನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ. ಸುಳ್ಯ ತಾಲೂಕಿನ ಎಲಿಮಲೆ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಮಂತ್ ಆತ್ಮಹತ್ಯೆ ಮಾಡಿಕೊಂಡಾತ. ಮೂಲತಃ ಚೊಕ್ಕಾಡಿಯವರಾಗಿರುವ, ಪ್ರಸ್ತುತ ನೆಲ್ಲೂರು ಕೆಮ್ರಾಜೆ ಗ್ರಾಮದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿ| ವಾಸುದೇವ ಎಂಬವರ ಪುತ್ರ ಶಮಂತ್ ಶುಕ್ರವಾರ ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ಬಂದು ಶಾಲಾ ಆವರಣದ ಶೌಚಾಲಯದ ಹಿಂಬದಿ ಗಿಡವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಎಲಿಮಲೆ ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ತಾಯಿ-ಮಗು ನಾಪತ್ತೆ : ಪೊಲೀಸರಿಗೆ ದೂರು

ಮಂಗಳೂರು: ಪತ್ನಿ ಹಾಗೂ ಮೂರು ವರ್ಷದ ಪುತ್ರ ನಾಪತ್ತೆಯಾಗಿರುವ ಬಗ್ಗೆ ಬಜಪೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ. ಬಜ್ಜೆಯ ಕೆ.ಪಿ. ನಗರದ ಶಾಹಿಸ್ತಾ ಮಂಜೀಲ್‌ನ ಅಹ್ಮದ್ ಮನ್ಸೂದ್ ಅವರ ಪತ್ನಿ ಶರೀನಾ ವೈ. (24) ಹಾಗೂ ಮಗ ಮಹ್ಮದ್ ತೋಹಾರ್ (3) ಎಂದು ಗುರುತಿಸಲಾಗಿದೆ. ಅಹ್ಮದ್ ಮನ್ಸೂದ್ ಅವರು ತಾಯಿ ಮತ್ತು ಪತ್ನಿಯೊಂದಿಗೆ ವಾಸವಾಗಿದ್ದು ಸುಮಾರು 6 ವರ್ಷಗಳ ಹಿಂದೆ ಸುಳ್ಯದ ಶರಿನಾ (24) ಅವರನ್ನು ವಿವಾಹವಾಗಿದ್ದರು. ದಂಪತಿಗಳಿಗೆ 3 ವರ್ಷದ ಗಂಡು ಮಗುವಿದೆ. ಶರೀನಾ  ಗರ್ಭಿಣಿಯಾಗಿದ್ದು

ತಾಯಿ-ಮಗು ನಾಪತ್ತೆ : ಪೊಲೀಸರಿಗೆ ದೂರು Read More »

ಮಾರಕಾಸ್ತ್ರದಿಂದ ಇರಿದು ಯುವಕನ ಹತ್ಯೆ; ಆರೋಪಿಗಳ ಬಂಧನ

ಉಳ್ಳಾಲ : ಯುವಕನೊಬ್ಬನ್ನು ಮಾರಕಾಸ್ತ್ರದಿಂದ ಇರಿದು ಹತ್ಯೆಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿಯ ಶಾಲೆಯೊಂದರ ಬಳಿ ಬುಧವಾರ ರಾತ್ರಿ ನಡೆದಿದೆ. ಹತ್ಯಗೀಡಾದ ಯುವಕನನ್ನು ವರುಣ್‌ ಗಟ್ಟಿ(28) ಎಂದು ಗುರುತಿಸಲಾಗಿದೆ. ಆರೋಪಿಗಳಾದ ಸೂರಜ್‌ ಮತ್ತು ರವಿರಾಜ್‌ ಎಂಬವರನ್ನು ಉಳ್ಳಾಲ ಠಾಣಾ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಬಿಯರ್‌ ಕುಡಿದು ಬಾಟಲಿಯನ್ನು ರಸ್ತೆಗೆ ಎಸೆದಿದ್ದನ್ನು ಪ್ರಶ್ನಿಸಿದಕ್ಕೆ ಕೊಲೆಗೈಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಲೆಯ ಮುಂಭಾಗದ ಕಟ್ಟೆಯೊಂದರಲ್ಲಿ ಕುಳಿತು ಸೂರಜ್‌ ಮತ್ತು ರವಿರಾಜ್‌ ಬಿಯರ್‌ ಕುಡಿದು ಬಾಟಲಿಯನ್ನು ರಸ್ತೆಗೆ

ಮಾರಕಾಸ್ತ್ರದಿಂದ ಇರಿದು ಯುವಕನ ಹತ್ಯೆ; ಆರೋಪಿಗಳ ಬಂಧನ Read More »

ನಾಳೆಯಿಂದ ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು | ಇಲ್ಲಿದೆ ವಿವರ

ಬೆಂಗಳೂರು: ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಡಿ.14 ರಿಂದ ಡಿ.22ರ ವರೆಗೆ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ನೈಋತ್ಯ ರೈಲ್ವೆ, ಮಾರ್ಗ ಮಧ್ಯೆ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ರೈಲುಗಳನ್ನು ರದ್ದುಗೊಳಿಸಲಾಗಿದೆ. ಡಿ.14 ರಿಂದ 18 ರ ಅವಧಿಯಲ್ಲಿ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮತ್ತು ಸಂಜೆ 6 ರಿಂದ ರಾತ್ರಿ 8ರ ವರೆಗೆ ಲೈನ್ ಬ್ಲಾಕ್, ಸಿಗ್ನಲ್ ಮತ್ತು ದೂರ ಸಂಪರ್ಕ ಬ್ಲಾಕ್ ಜಾರಿಯಲ್ಲಿರಲಿದೆ. ಈ

ನಾಳೆಯಿಂದ ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು | ಇಲ್ಲಿದೆ ವಿವರ Read More »

ಮಂಗಳಾದೇವಿ ದೇವಸ್ಥಾನದ ಹೆಸರನ್ನು ಬೋಳಾರ್‌ ಶೇಕ್‌ ಉಮರ್‌ ಸಾಹೇಬ್‌ ಕಾಂಪೌಂಡು ಎಂದು ತಿದ್ದಿದ ಕಿಡಿಗೇಡಿಗಳು!!

ಮಂಗಳೂರು: ಮಂಗಳಾದೇವಿ ನೆಲೆಯಾಗಿರುವ ಕ್ಷೇತ್ರ ಮಂಗಳಾಪುರ. ಈ ಮಂಗಳಾಪುರವೇ ಮುಂದೆ ಮಂಗಳೂರು ಎಂದಾಯಿತು ಎನ್ನುತ್ತವೆ ಇತಿಹಾಸ. ಇಂತಹ ಐತಿಹಾಸಿಕ, ಧಾರ್ಮಿಕ ಕ್ಷೇತ್ರದ ಹೆಸರನ್ನು ಗೂಗಲ್ ಮ್ಯಾಪಿನಲ್ಲಿ ತಿದ್ದಿರುವ ಘಟನೆ ನಡೆದಿದ್ದು, ಆಕ್ರೋಶ ವ್ಯಕ್ತವಾಗಿದೆ. ಬೋಳಾರದ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ಹೆಸರನ್ನು ಗೂಗಲ್‌ ಮ್ಯಾಪ್‌ನಲ್ಲಿ “ಬೋಳಾರ್‌ ಶೇಕ್‌ ಉಮರ್‌ ಸಾಹೇಬ್‌ ಕಾಂಪೌಂಡು’ ಎಂದು ಬರೆದಿರುವುದು ಇದೀಗ ಬೆಳಕಿಗೆ ಬಂದಿದೆ. ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತರುವ ಹಾಗೂ ಹಿಂದೂಗಳ ಧಾರ್ಮಿಕ ಭಾವನೆಗೆ ಘಾಸಿಯನ್ನುಂಟು ಮಾಡುವ ಮತ್ತು ಸಾಮರಸ್ಯವನ್ನು ಭಂಗ

ಮಂಗಳಾದೇವಿ ದೇವಸ್ಥಾನದ ಹೆಸರನ್ನು ಬೋಳಾರ್‌ ಶೇಕ್‌ ಉಮರ್‌ ಸಾಹೇಬ್‌ ಕಾಂಪೌಂಡು ಎಂದು ತಿದ್ದಿದ ಕಿಡಿಗೇಡಿಗಳು!! Read More »

error: Content is protected !!
Scroll to Top